Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶುಕ್ರವಾರ, 29 ನವೆಂಬರ್ 2019 (08:42 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಬೇರೆಯವರ ಮಾತುಗಳಿಗೆ ಹೆಚ್ಚು ಬೆಲೆ ಕೊಟ್ಟು ನಿಮ್ಮ ಆಪ್ತರ ಮನಸ್ಸಿಗೆ ನೋವುಂಟು ಮಾಡುವುದನ್ನು ಬಿಡಿ. ಚಾಡಿ ಮಾತುಗಳಿಗೆ ಕಿವೊಗಡಬೇಕಿಲ್ಲ. ಆದರೂ ಸಾಂಸಾರಿಕವಾಗಿ ನೆಮ್ಮದಿಗೆ ಭಂಗವಾಗಲಿದೆ. ಆರ್ಥಿಕವಾಗಿ ಆದಾಯಕ್ಕೆ ಕೊರತೆಯಿರದು.

ವೃಷಭ: ಹಣಕಾಸಿನ ಹರಿವಿಗೆ ತೊಂದರೆಯಾಗದು. ಆದರೆ ಸರಿಯಾದ ರೀತಿಯಲ್ಲಿ ಅದನ್ನು ಬಳಸಲು ತಿಳಿಯದೇ ಗೊಂದಲಕ್ಕೊಳಗಾಗುವಿರಿ. ವ್ಯವಹಾರದಲ್ಲಿ ಲಾಭವಾಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆ ತೋರಿಬರಲಿದೆ. ಆರೋಗ್ಯದ ಬಗ್ಗೆ ನಿಗಾ ಇರಲಿ.

ಮಿಥುನ: ಅವಿವಾಹಿತರಿಗೆ ವಿವಾಹ ಭಾಗ್ಯವಿದೆ. ನೂತನ ದಂಪತಿಗಳ ಮಧ್ಯೆ ಹೊಂದಾಣಿಕೆ ಸಮಸ್ಯೆ ಕಂಡುಬರಬಹುದು. ಸಂಸಾರದಲ್ಲಿ ಮೂರನೆಯವರು ಮೂಗು ತೂರಿಸಲು ಅವಕಾಶ ಮಾಡಿಕೊಡಬೇಡಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ.

ಕರ್ಕಟಕ: ಕಫ, ಶೀತ ಸಂಬಂಧೀ ಆರೋಗ್ಯ ಸಮಸ್ಯೆಗಳು ಕಂಡುಬರಲಿವೆ. ಆದಾಯ ಹೆಚ್ಚಳಕ್ಕೆ ನಾನಾ ಮಾರ್ಗ ಹುಡುಕುವಿರಿ. ಕಷ್ಟದ ಸಮಯದಲ್ಲಿ ಮಿತ್ರರ ಸಹಕಾರ ದೊರಕಲಿದೆ. ಮಕ್ಕಳ ವಿದ್ಯಾಭ‍್ಯಾಸದಲ್ಲಿ ಹಿನ್ನಡೆ ತೋರಿಬರಲಿದ್ದು, ಚಿಂತೆಯಾಗಬಹುದು. ತಾಳ್ಮೆಯಿಂದಿರಿ.

ಸಿಂಹ: ವ್ಯಾಪಾರ ವ್ಯವಹಾರದಲ್ಲಿ ಕಷ್ಟ ನಷ್ಟಗಳು ಸಾಮಾನ್ಯ. ಆತ್ಮಸ್ಥೈರ್ಯದಿಂದ ಮುನ್ನಡೆಯಬೇಕಾದ ಸಮಯವಿದು. ಹಿರಿಯರ ಬುದ್ಧಿಮಾತುಗಳು ಅಪಥ್ಯವಾದೀತು. ನಿಮ್ಮ ಹಠಮಾರಿತನ ಧೋರಣೆಯಿಂದ ಸಂಗಾತಿಯ ಅಸಮಾಧಾನಕ್ಕೆ ಕಾರಣವಾಗುವಿರಿ.

 
ಕನ್ಯಾ: ಹೊಸ ಕೆಲಸಗಳಿಗೆ ಕೈ ಹಾಕಲು ಇದುವೇ ಸಕಾಲ. ಉದ್ಯೋಗ ವಿಚಾರವಾಗಿ ಕಿರಿ ಕಿರಿ ತಪ್ಪದು. ಹೊಸ ಬದಲಾವಣೆಗೆ ಮನಸ್ಸು ಬಯಸುವುದು. ದೇಹಾರೋಗ್ಯದಲ್ಲಿ ಏರುಪೇರಾಗಲಿದೆ. ಸಾಂಸಾರಿಕವಾಗಿ ಸಂಗಾತಿಯ ಮನದಾಸೆ ಪೂರೈಸಬೇಕಾಗುತ್ತದೆ.

ತುಲಾ: ಇಷ್ಟು ದಿನ ನಿಮ್ಮ ಬೆನ್ನ ಹಿಂದೆ ಮೋಸ ಮಾಡುತ್ತಿದ್ದ ವಂಚಕರ ಬಣ್ಣ ಬಯಲಾಗಲಿದೆ. ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ. ಚಿಂತೆ ಬೇಡ. ಅನಿರೀಕ್ಷಿತವಾಗಿ ನೆಂಟರ ಆಗಮನದಿಂದ ಮನೆಯಲ್ಲಿ ಸಂತಸದ ವಾತಾವರಣವಿರುವುದು. ನಾಲಿಗೆ ಚಪಲಕ್ಕೆ ಕಡಿವಾಣವಿರಲಿ.

ವೃಶ್ಚಿಕ: ಇಂದು ಯಾರಿಗಾದರೂ ಸಾಲ ನೀಡಿದಲ್ಲಿ ಮನಸ್ತಾಪವಾಗಬಹುದು. ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆ ಅಗತ್ಯ. ಉದ್ಯೋಗ ಕ್ಷೇತ್ರದಲ್ಲಿ ಜವಾಬ್ಧಾರಿ ಹೆಚ್ಚಲಿದೆ. ಕೌಟುಂಬಿಕವಾಗಿ ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ.

ಧನು: ಹಿರಿಯರಿಗೆ ತೀರ್ಥ ಯಾತ್ರೆ ಭಾಗ್ಯವಿದೆ. ಪುಣ್ಯ ಕ್ಷೇತ್ರಗಳ ಸಂದರ್ಶನ ಯೋಗವಿದೆ. ಆದರೆ ನಿಮ್ಮ ಮಾತು, ವರ್ತನೆ ಇತರರ ಅಸಮಾಧಾನಕ್ಕೆ ಗುರಿಯಾಗಬಹುದು. ಆರ್ಥಿಕವಾಗಿ ಹಣಕಾಸಿಗೆ ತೊಂದರೆಯಿರದು. ಅಂದುಕೊಂಡ ಕಾರ್ಯಗಳನ್ನು ನೆರವೇರಿಸುವಿರಿ.

ಮಕರ: ಹೊಸ ಉದ್ಯಮಕ್ಕೆ ಹಣ ಹೂಡಿಕೆ ಮಾಡಲು ಇದು ಉತ್ತಮ ಸಮಯ. ಯಾವುದೇ ಕೆಲಸಕ್ಕೆ ಮೊದಲು ಕುಟುಂಬದವರ ಅಭಿಪ್ರಾಯಕ್ಕೆ ಮನ್ನಣೆ ನೀಡಿ. ಧಾರ್ಮಿಕ ಕಾರ್ಯಗಳನ್ನು ನೆರವೇರಿಸುವಿರಿ. ವಾತ ಸಂಬಂಧೀ ಆರೋಗ್ಯ ಸಮಸ್ಯೆ ಕಾಡೀತು. ಎಚ್ಚರ.

ಕುಂಭ: ಮನಸ್ಸಿನ ಸಂತೋಷಕ್ಕೆ ಕೊರತೆಯಿರದು. ನಿರುದ್ಯೋಗಿಗಳಿಗೆ ಸರಕಾರಿ ಉದ್ಯೋಗಕ್ಕೆ ಕರೆಬರಲಿದೆ. ಇಷ್ಟ ಮಿತ್ರರ ಭೇಟಿ ಮನಸ್ಸಿನ ಸಂತಸ ಇಮ್ಮಡಿಗೊಳಿಸಲಿದೆ. ಕೌಟುಂಬಿಕವಾಗಿ ಹೆಚ್ಚಿನ ಹೊಣೆಗಾರಿಕೆ ಬೀಳಲಿದೆ. ದೇಹಾರೋಗ್ಯದ ಕಡೆಗೆ ಎಚ್ಚರವಾಗಿರಿ.

ಮೀನ: ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಿಗಲಿದೆ. ನಿರುದ್ಯೋಗಿಗಳು ಉದ್ಯೋಗ ಬೇಟೆಗೆ ದೂರ ಸಂಚಾರ ಮಾಡಬೇಕಾಗುತ್ತದೆ. ಸಂಗಾತಿಯೊಂದಿಗೆ ಹೊಂದಾಣಿಕೆಯಿಂದ ನಡೆದುಕೊಳ್ಳಬೇಕು. ಅರೆಕಾಲಿಕ ವೃತ್ತಿಯವರಿಗೆ ಬಡ್ತಿ ಸಿಗಬಹುದು.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಗಂಡ-ಹೆಂಡತಿ ಸಂಬಂಧ ಚೆನ್ನಾಗಿರಬೇಕೆಂದರೆ ಬೆಡ್ ರೂಂನಲ್ಲಿ ಈ ಚಿತ್ರ ಹಾಕಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments