Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶನಿವಾರ, 30 ನವೆಂಬರ್ 2019 (08:45 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಹೊಸ ಚಿಂತನೆಗಳನ್ನು ಕಾರ್ಯಗತಗೊಳಿಸಲು ಇದು ಸಕಾಲ. ಮಕ್ಕಳ ವಿವಾಹ ಪ್ರಯತ್ನಗಳಿಗೆ ಮುನ್ನಡೆ ಸಿಗಲಿದೆ. ಉದರ ಸಂಬಂಧೀ ಆರೋಗ್ಯ ಸಮಸ್ಯೆಗಳು ಕಂಡುಬರಬಹುದು. ಉದ್ಯೋಗ ಕ್ಷೇತ್ರದಲ್ಲಿ ಸಮಾಧಾನಕರ ವಾತಾವರಣವಿರಲಿದೆ.

ವೃಷಭ: ಪ್ರೇಮಿಗಳ ಪ್ರೇಮ ಸಂಬಂಧಕ್ಕೆ ಭ್ರಮನಿರಸವಾಗಲಿದೆ. ಆರ್ಥಿಕವಾಗಿ ಆದಾಯಕ್ಕೆ ಕೊರತೆಯಿರದು, ಆದರೆ ಖರ್ಚು ವೆಚ್ಚಗಳ ಬಗ್ಗೆ ಕಡಿವಾಣ ಹಾಕುವುದು ಒಳ್ಳೆಯದು. ವೃತ್ತಿರಂಗದಲ್ಲಿ ನಿಮ್ಮ ಮೇಲೆ ಜವಾಬ್ಧಾರಿ ಹೆಚ್ಚಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.

ಮಿಥುನ: ಹಿತ ಶತ್ರುಗಳ ಬಗ್ಗೆ ವ್ಯವಹಾರ ಮಾಡುವಾಗ ಎಚ್ಚರಿಕೆಯಿರಲಿ. ವ್ಯಾಪಾರ ವ್ಯವಹಾರದಲ್ಲಿ ಕೊಂಚ ನಷ್ಟವಾಗಬಹುದು, ಆದರೆ ಹಿಂಜರಿಕೆ ಬೇಡ. ವಾಹನ ಚಾಲನೆಯಲ್ಲಿ ಎಚ್ಚರಿಕೆಯಿಂದಿರಬೇಕು. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಕರ್ಕಟಕ: ಸಾಂಸಾರಿಕವಾಗಿ ಇದುವರೆಗೆ ಇದ್ದ ಭಿನ್ನಾಭಿಪ್ರಾಯಗಳು ದೂರವಾಗಿ ನೆಮ್ಮದಿ ನೆಲೆಸುವುದು. ಮಕ್ಕಳ ಭವಿಷ್ಯಕ್ಕೆ ಹಣ ಕೂಡಿಡುವ ಯೋಚನೆಗಳು ಬರವುದು. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಮುನ್ನಡೆ ಕಂಡುಬರುವುದು. ದೇವಾಲಯ ಸಂದರ್ಶಿಸುವಿರಿ.

ಸಿಂಹ: ವೃತ್ತಿರಂಗದಲ್ಲಿ ಪ್ರತಿಷ್ಠಿತ ವ್ಯಕ್ತಿಗಳ ಸ್ನೇಹ ಸಂಪಾದಿಸುವಿರಿ. ಜತೆಗೆ ಹೆಚ್ಚಿನ ಜವಾಬ್ಧಾರಿಗಳು ಹೆಗೆಲಿಗೇರಲಿವೆ. ಖರ್ಚು ವೆಚ್ಚಗಳು ಅಧಿಕವಾಗಬಹುದು. ಅವಿವಾಹಿತರಿಗೆ ಶೀಘ್ರದಲ್ಲೇ ವಿವಾಹ ಭಾಗ್ಯ ಒದಗಿಬರಲಿದೆ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಬೇಕಾಗುತ್ತದೆ.

 
ಕನ್ಯಾ: ಸಾಂಸಾರಿಕವಾಗಿ ಹಲವು ನಿರ್ಧಾರಗಳನ್ನು ಕೈಗೊಳ್ಳಬೇಕಾದ ದಿನಗಳಿವು. ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ನಡೆಸುವಿರಿ. ನಿಮ್ಮ ಕ್ರಿಯಾಶೀಲ ಯೋಚನೆಗೆ ಬೆಲೆ ಸಿಗಲಿದೆ. ಸಾಮಾಜಿಕವಾಗಿ ಜನಮನ್ನಣೆ ಗಳಿಸುವಿರಿ. ದೇವತಾ ಪ್ರಾರ್ಥನೆ ಮಾಡಿ.

ತುಲಾ: ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗಾವಕಾಶಗಳು ದೊರೆಯಲಿವೆ. ನೂತನ ದಂಪತಿಗಳು ಸಂತೋಷದ ಕ್ಷಣಗಳನ್ನು ಕಳೆಯುವಿರಿ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಏಕಾಗ್ರತೆಗೆ ಭಂಗವಾಗಬಹುದು. ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನ ಸಂತಸವಾಗಲಿದೆ.

ವೃಶ್ಚಿಕ: ದೈಹಿಕವಾಗಿ ದೇಹಾರೋಗ್ಯದಲ್ಲಿ ಏರುಪೇರಾಗಬಹುದು. ನಿರ್ಧಾರ ತೆಗೆದುಕೊಳ್ಳುವಾಗ ಗೊಂದಲ ಕಾಡಬಹುದು. ವ್ಯಾಪಾರಿಗಳಿಗೆ ವ್ಯವಹಾರದಲ್ಲಿ ಮುನ್ನಡೆ ಸಿಗಲಿದೆ. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಜಯ ಸಿಗುವುದು. ದಿನದಂತ್ಯಕ್ಕೆ ಶುಭ ಸುದ್ದಿ.

ಧನು: ಸಂಗಾತಿಯ ಸಹಕಾರದಿಂದ ಅಂದುಕೊಂಡ ಕೆಲಸಗಳನ್ನು ಪೂರ್ತಿ ಮಾಡುವಿರಿ. ನೆರೆಹೊರೆಯವರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ಕಾರ್ಯನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಕರ: ಸಾರ್ವಜನಿಕವಾಗಿ ನಿಮ್ಮ ಕೆಲಸಗಳಿಗೆ ಮೆಚ್ಚುಗೆ ಸಿಗಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ. ಹಣಕಾಸಿನ ಹರಿವಿಗೆ ತೊಂದರೆಯಿರದು. ವ್ಯವಹಾರದಲ್ಲಿ ಎಚ್ಚರವಿರಲಿ.

ಕುಂಭ: ಸಮಾಧಾನ, ತಾಳ್ಮೆ ಇಂದು ನಿಮ್ಮ ಉಪಯೋಗಕ್ಕೆ ಬರುವುದು. ಸಂಗಾತಿಯ ಅಸಮಾಧಾನಗಳಿಗೆ ಗುರಿಯಾಗಬೇಕಾಗುವುದು. ಮನಸ್ಸಿಗೆ ಸಂತೋಷ ನೀಡುವ ಕೆಲಸ ಮಾಡಿ. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿವಹಿಸಬೇಕು.

ಮೀನ: ಗೃಹಿಣಿಯರಿಗೆ ಚಿನ್ನಾಭರಣ ಖರೀದಿ ಯೋಗವಿದೆ. ಆದರೆ ನಿಮ್ಮ ದುಡುಕು ಮಾತುಗಳಿಂದ ಪ್ರೀತಿ ಪಾತ್ರರ ಮನ ನೋಯದಂತೆ ಎಚ್ಚರಿಕೆ ವಹಿಸಬೇಕು. ಆರ್ಥಿಕವಾಗಿ ಖರ್ಚು ವೆಚ್ಚಗಳ ಬಗ್ಗೆ ನಿಗಾ ಇರಲಿ. ಮಹಿಳಾ ಉದ್ಯೋಗಿಗಳಿಗೆ ಬಡ್ತಿ ಯೋಗವಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಆಗಸ್ಟ್ ನಲ್ಲಿ ಹುಟ್ಟಿದವರ ಸ್ವಭಾವ ಹೀಗಿರುತ್ತದೆ