Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಭಾನುವಾರ, 1 ಡಿಸೆಂಬರ್ 2019 (08:38 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ವಿವಾದಿತ ವಿಚಾರಗಳನ್ನು ಕೆಣಕಲು ಹೋದರೆ ಮತ್ತಷ್ಟು ಮನಸ್ಸು ಹಾಳಾದೀತು. ಮೌನವಾಗಿದ್ದಷ್ಟೂ ಒಳ್ಳೆಯದು. ಗೃಹ ಸಂಬಂಧೀ ಕೆಲಸಗಳಲ್ಲಿ ತೊಡಗಿಸಿಕೊಳ್ಳಬೇಕಾಗುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಮುನ್ನಡೆಯಿರಲಿದೆ. ಆರೋಗ್ಯದಲ್ಲಿ ಸುಧಾರಣೆಯಿರುವುದು.

ವೃಷಭ: ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ದೊರಕಲಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯಗಳನ್ನು ನಡೆಸಲು ಸಿದ್ಧತೆ ನಡೆಸುವಿರಿ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ಗೃಹ ನಿರ್ಮಾಣ ಕಾರ್ಯಗಳಿಗೆ ಚಾಲನೆ ನೀಡಲು ಇದು ಸಕಾಲ. ವಿದ್ಯಾರ್ಥಿಗಳು ಅಭ್ಯಾಸದ ಕಡೆಗೆ ಗಮನಹರಿಸಬೇಕು.

ಮಿಥುನ: ಕಾರ್ಯನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ನಿರುತ್ಸಾಹ ಕಂಡುಬರಬಹುದು. ಗೃಹಿಣಿಯರ ಮನಸ್ಸಿನ ನೆಮ್ಮದಿಗೆ ಭಂಗವಾಗಬಲ್ಲ ಘಟನೆಗಳು ನಡೆಯಬಹುದು. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.

ಕರ್ಕಟಕ: ನೆರೆಹೊರೆಯವರೊಡನೆ ನೀರಿನ ವಿಚಾರವಾಗಿ ಕಲಹವಾಗಬಹುದು. ಹಿರಿಯರ ಹಠವಾದಿ ಧೋರಣೆ ನಿಮ್ಮನ್ನು ಇಕ್ಕಟ್ಟಿಗೆ ಸಿಲುಕಿಸಲಿದೆ. ಬಂಧು ಮಿತ್ರರಿಂದ ಅನಾಧರಣೆಗೊಳಗಾಗುವ ಅನುಭವವಾಗಲಿದೆ. ಆರ್ಥಿಕವಾಗಿ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕಿ.

ಸಿಂಹ: ಕೌಟುಂಬಿಕವಾಗಿ ಸಣ್ಣ ಪುಟ್ಟ ಭಿನ್ನಾಭಿಪ್ರಾಯಗಳೇ ಮನಸ್ಸಿನ ನೆಮ್ಮದಿ ಹಾಳುಮಾಡಲಿದೆ. ತಾಳ್ಮೆಯಿಂದ ಮುನ್ನಡೆಯಬೇಕು. ಹೊಸ ವ್ಯವಹಾರಗಳಿಗೆ ಕೈ ಹಾಕುವ ಮುನ್ನ ವಿಚಾರ ಮಾಡಿ. ದೇವರ ಅನುಗ್ರಹದಿಂದ ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

 
ಕನ್ಯಾ: ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಏಕಾಗ್ರತೆಗೆ ಭಂಗ ತರುವ ಘಟನೆಗಳು ನಡೆಯಬಹುದು. ಆರ್ಥಿಕವಾಗಿ ಹಣಕಾಸಿನ ಮುಗ್ಗಟ್ಟು ಉಂಟಾಗಬಹುದು. ಕೌಟುಂಬಿಕವಾಗಿ ಹೆಚ್ಚಿನ ಜವಾಬ್ಧಾರಿಗೆ ಸಿದ್ಧರಾಗಬೇಕಿದೆ. ದೇವಾಲಯ ಸಂದರ್ಶನ ಯೋಗವಿದೆ.

ತುಲಾ: ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ಸಿಗಲಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುವಿರಿ. ನಾಲಿಗೆ ಚಪಲದಿಂದಾಗಿ ಉದರ ಸಂಬಂಧೀ ಆರೋಗ್ಯ ಸಮಸ್ಯೆಗಳು ಕಂಡುಬಂದೀತು. ನಿರುದ್ಯೋಗಿಗಳು ಸ್ವ ಉದ್ಯೋಗದ ಕಡೆಗೆ ಮನಸ್ಸು ಮಾಡುವರು.

ವೃಶ್ಚಿಕ: ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರಲಿದೆ. ಪ್ರೇಮಿಗಳ ಗುಟ್ಟು ಮನೆಯವರ ಎದುರು ಬಹಿರಂಗವಾಗಲಿದೆ. ಹೊಸ ಕೆಲಸಗಳನ್ನು ಪ್ರಾರಂಭಿಸುವಾಗ ವಿಘ್ನಗಳು ಎದುರಾದೀತು. ಎಚ್ಚರಿಕೆಯಿಂದ ಹೆಜ್ಜೆಯಿಡಬೇಕು. ಸಂಗಾತಿಯ ಆರೋಗ್ಯದ ಬಗ್ಗೆ ಕಾಳಜಿವಹಿಸಿ.

ಧನು: ವ್ಯಾಪಾರ ವ್ಯವಹಾರಗಳಲ್ಲಿ ನಿರೀಕ್ಷಿತ ಲಾಭ ಬರದೇ ನಿರಾಸೆಯಾಗಬಹುದು. ಅಪರಿಚಿತರನ್ನು ನಂಬಿ ವ್ಯವಹರಿಸಲು ಹೋಗಬೇಡಿ. ಸಂಸಾರದ ಗುಟ್ಟು ಕಾಪಾಡಿಕೊಳ್ಳಬೇಕಾದ ಜವಾಬ್ಧಾರಿ ನಿಮ್ಮ ಮೇಲಿದೆ. ಬಂಧು ಮಿತ್ರರ ಆಗಮನ ಮನೆಯಲ್ಲಿ ಸಂಭ್ರಮದ ವಾತಾವರಣ ಸೃಷ್ಟಿಸುವುದು.

ಮಕರ: ಕಾರ್ಮಿಕ ವರ್ಗದವರಿಗೆ ಬಿಡುವಿಲ್ಲದ ಕೆಲಸ ತಪ್ಪದು. ವಾಹನ ಚಾಲಕರು ಚಾಲನೆಯಲ್ಲಿ ಎಚ್ಚರಿಕೆ ವಹಿಸಬೇಕು. ಅವಿವಾಹಿತರಿಗೆ ವಿವಾಹ ಪ್ರಸ್ತಾಪಗಳು ಬಂದರೂ ಮನಸ್ಸಿಗೆ ಹಿಡಿಸದು. ಹಿತಶತ್ರುಗಳಿಂದ ತೊಂದರೆಯಾಗಬಹುದು. ದೇವತಾ ಪ್ರಾರ್ಥನೆ ಮಾಡಿ.

ಕುಂಭ: ವೃತ್ತಿರಂಗದಲ್ಲಿ ಮುನ್ನಡೆ ತೋರಿಬರಲಿದೆ. ಹೆಚ್ಚಿನ ಧನಾರ್ಜನೆಗೆ ನಾನಾ ಮಾರ್ಗಗಳನ್ನು ಹುಡುಕುವಿರಿ. ಸಂಗಾತಿಯ ಸಹಕಾರದಿಂದ ಕೌಟುಂಬಿಕ ಜವಾಬ್ಧಾರಿಗಳನ್ನು ಸುಗಮವಾಗಿ ನೆರವೇರಿಸುವಿರಿ. ಶುಭ ಮಂಗಲ ಕಾರ್ಯದಲ್ಲಿ ಪಾಲ್ಗೊಳ್ಳುವಿರಿ.

ಮೀನ: ಅನವಶ್ಯಕವಾಗಿ ಖರ್ಚು ವೆಚ್ಚಗಳಾಗಬಹುದು, ಕೊಂಚ ಹಿಡಿತವಿರಲಿ. ವಾಸ ಸ್ಥಳ ಬದಲಾವಣೆಗೆ ಸಿದ್ಧತೆ ನಡೆಸುವಿರಿ. ಮಹಿಳೆಯರಿಗೆ ಮೆಚ್ಚುಗೆ ಮಾತುಗಳು ಕೇಳಿಬರಲಿವೆ. ನಿರುದ್ಯೋಗಿಗಳು ಉದ್ಯೋಗ ಸಂದರ್ಶನಕ್ಕಾಗಿ ಅಲೆದಾಟ ನಡೆಸಬೇಕಾಗುತ್ತದೆ.

Share this Story:

Follow Webdunia kannada

ಮುಂದಿನ ಸುದ್ದಿ

ಈ ಮೂರು ಕಾರಣಗಳಿಂದ ನಿಮ್ಮ ಕೈಯಲ್ಲಿ ಹಣ ಉಳಿಯುವುದಿಲ್ಲವಂತೆ