Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಬುಧವಾರ, 4 ಡಿಸೆಂಬರ್ 2019 (08:49 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ವಿವಾಹ ಪ್ರಸ್ತಾಪಗಳು ಬರಲಿವೆ. ಆರ್ಥಿಕವಾಗಿ ನಾನಾ ರೂಪದಲ್ಲಿ ಧನಾಗಮನವಾಗಲಿದೆ. ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ಏಕಾಗ್ರತೆ ಕೊರತೆ ಉಂಟಾಗಬಹುದು. ಭೂಮಿ, ವಾಹನ ಖರೀದಿಗೆ ಸಕಾಲ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಷಭ: ಅವಿವಾಹಿತ ಕನ್ಯೆಯರಿಗೆ ವೈವಾಹಿಕ ಪ್ರಸ್ತಾಪಗಳು ಬರಲಿವೆ. ಆರೋಗ್ಯದ ಬಗ್ಗೆ ಉದಾಸೀನ ಮಾಡಬೇಡಿ. ಅನಿರೀಕ್ಷಿತವಾಗಿ ನೆಂಟರಿಷ್ಟರ ಆಗಮನವಾಗಲಿದೆ. ನೂತನ ದಂಪತಿಗಳಿಗೆ ಸಂತಾನ ಫಲ ಸೂಚನೆ ಸಿಗುವುದು. ದಿನದಂತ್ಯಕ್ಕೆ ಶುಭ ಸುದ್ದಿ.

ಮಿಥುನ: ಮಕ್ಕಳಲ್ಲಿ ಪ್ರಗತಿ ಕಂಡುಬಂದು ಮನಸ್ಸಿಗೆ ಸಂತಸವಾಗುವುದು. ಆದಾಯಕ್ಕೆ ಕೊರತೆಯಿರದು. ಆದರೆ ಖರ್ಚು ವೆಚ್ಚಗಳ ಬಗ್ಗೆ ಮಿತಿಯಿರಲಿ. ವ್ಯಾಪಾರ ವ್ಯವಹಾರದಲ್ಲಿ ಹಿನ್ನಡೆ ಅನುಭಿಸಬೇಕಾಗಬಹುದು. ಉದ್ಯೋಗ ಕ್ಷೇತ್ರದಲ್ಲಿ ಎಚ್ಚರಿಕೆಯಿಂದ ವ್ಯವಹರಿಸಿ.

ಕರ್ಕಟಕ: ಮನೆಯಲ್ಲಿ ಗೃಹಿಣಿಯರಿಗೆ ಆರೋಗ್ಯದ ಸಮಸ್ಯೆ ಕಂಡುಬರಬಹುದು. ಕಾರ್ಯದೊತ್ತಡ ಅಧಿಕವಾಗಲಿದ್ದು, ದೇಹಾಯಾಸವಾಗಲಿದೆ. ಕೆಳಹಂತದ ನೌಕರರಿಗೆ ಉದ್ಯೋಗದಲ್ಲಿ ಬಡ್ತಿ ಸಿಗಲಿದೆ. ಹಿರಿಯರ ತೀರ್ಥ ಯಾತ್ರೆಗೆ ಏರ್ಪಾಟು ಮಾಡುವಿರಿ.

ಸಿಂಹ: ಕಷ್ಟದ ಸಮಯದಲ್ಲಿ ಮಿತ್ರರ ಸಹಕಾರ ದೊರೆಯಲಿದೆ. ವಾಹನ ಸವಾರರಿಗೆ ಅಪಘಾತದ ಭೀತಿಯಿದೆ. ಶುಭ ಮಂಗಲ ಕಾರ್ಯದ ಸಿದ್ಧತೆಗೆ ಓಡಾಟ ನಡೆಸಬೇಕಾಗುತ್ತದೆ. ಆರ್ಥಿಕವಾಗಿ ಆದಾಯ ವೃದ್ಧಿಯಾಗಲಿದೆ. ಕಾರ್ಯನಿಮಿತ್ತ ಕಿರು ಸಂಚಾರ ಯೋಗವಿದೆ.

 
ಕನ್ಯಾ: ನೂತನ ಕೆಲಸ ಕಾರ್ಯಗಳಿಗೆ ಕೈ ಹಾಕಿದರೂ ವಿಘ್ನಗಳು ಎದುರಾದೀತು. ದೇಹಾರೋಗ್ಯದಲ್ಲಿ ಏರುಪೇರಾಗಬಹುದು, ಆಸ್ಪತ್ರೆಗೆ ಅಲೆದಾಡಬೇಕಾದೀತು. ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಪ್ರಾಮಾಣಿಕತೆಗೆ ತಕ್ಕ ಫಲ ಸಿಗುವುದು. ವಿದ್ಯಾರ್ಥಿಗಳಿಗೆ ಮುನ್ನಡೆ ಸಿಗಲಿದೆ.

ತುಲಾ: ಹಿರಿಯರ ಮಾತುಗಳಿಗೆ ಕಿವಿಗೊಡಬೇಕಾಗುತ್ತದೆ. ಗೃಹೋಪಯೋಗಿ ವಸ್ತುಗಳಿಗೆ ಹೆಚ್ಚಿನ ಖರ್ಚು ವೆಚ್ಚ ಮಾಡಬೇಕಾಗುತ್ತದೆ. ಧಾರ್ಮಿಕ ಕಾರ್ಯಗಳಿಗೆ ಧನವಿನಿಯೋಗ ಮಾಡಬೇಕಾಗುತ್ತದೆ. ನೌಕರ ವರ್ಗದವರಿಗೆ ವರ್ಗಾವಣೆಯ ಭೀತಿಯಿದೆ.

ವೃಶ್ಚಿಕ: ನಿಮ್ಮ ಶತ್ರುಗಳಿಂದಲೂ ಹೊಗಳಿಕೆ ಗಳಿಸುವಿರಿ. ಕಾರ್ಯರಂಗದಲ್ಲಿ ಉನ್ನತ ಸಾಧನೆ ಮಾಡುವಿರಿ. ಆರ್ಥಿಕವಾಗಿಯೂ ಹಣಕಾಸಿನ ಮುಗ್ಗಟ್ಟುಗಳು ದೂರವಾಗಲಿದ್ದು, ಹೊಸ ಯೋಜನೆಗೆ ಕೈ ಹಾಕುವ ಉತ್ಸಾಹ ಕಂಡುಬರಲಿದೆ. ಎಚ್ಚರಿಕೆಯಿಂದ ಹೆಜ್ಜೆಯಿಡಿ.

ಧನು: ಕೆಟ್ಟ ಸ್ನೇಹಿತರ ಸಂಗದಿಂದ ನಿಮ್ಮ ಭವಿಷ್ಯಕ್ಕೆ ತೊಂದರೆ ಎನ್ನುವುದನ್ನು ಮರೆಯಬೇಡಿ. ಪೋಷಕರ ಸಲಹೆ ಇಷ್ಟವಾಗದು. ಕುಟುಂಬದೊಳಗೆ ಭಿನ್ನಾಭಿಪ್ರಾಯಗಳನ್ನು ಸರಿದೂಗಿಸಿಕೊಂಡು ಹೋಗಬೇಕಾಗುತ್ತದೆ. ದಿನದಂತ್ಯದಲ್ಲಿ ಶುಭ ಸುದ್ದಿಯಿದೆ.

ಮಕರ: ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಭಂಗ ತರುವ ಘಟನೆಗಳು ನಡೆಯಬಹುದು. ತಾಳ್ಮೆಯಿಂದಿದ್ದಷ್ಟೂ ಉತ್ತಮ. ನೌಕರ ವರ್ಗದವರಿಗೆ ಅನಿರೀಕ್ಷಿತ ವರ್ಗಾವಣೆ ಸಾಧ್ಯತೆಯಿದೆ. ಆದಾಯ ವೃದ್ಧಿಯಿಂದ ನೀವು ಅಂದುಕೊಂಡ ಕೆಲಸ ಪೂರ್ತಿ ಮಾಡುವಿರಿ.

ಕುಂಭ: ವಾಹನ, ಆಸ್ತಿ ಖರೀದಿಗೆ ಖರ್ಚು ವೆಚ್ಚ ಮಾಡುವಿರಿ. ಆದರೆ ಹಿತ ಶತ್ರುಗಳು ಬೆನ್ನ ಹಿಂದೆಯೇ ಇರುತ್ತಾರೆ. ಎಚ್ಚರಿಕೆಯಿಂದ ಹೆಜ್ಜೆಯಿಡಬೇಕು. ಅಧಿಕಾರಿ ವರ್ಗದವರಿಗೆ ಮುಂಬಡ್ತಿ ಯೋಗವಿದೆ. ಧಾರ್ಮಿಕ ಕ್ಷೇತ್ರಗಳ ಸಂದರ್ಶನ ಯೋಗವಿದೆ.

ಮೀನ: ಸನ್ಮಿತ್ರರಿಂದ ಉತ್ತಮ ವಾರ್ತೆಯನ್ನೇ ಕೇಳುವಿರಿ. ಗೃಹಿಣಿಯರಿಗೆ ಮನೆ ನಡೆಸುವ ಚಿಂತೆ ಕಾಡಲಿದೆ. ಕೌಟುಂಬಿಕವಾಗಿ ಸಂಗಾತಿಯ ಸಲಹೆ ಪಡೆದು ಮುನ್ನಡೆಯಬೇಕಾಗುತ್ತದೆ. ನೆರೆಹೊರೆಯವರೊಂದಿಗೆ ಎಚ್ಚರಿಕೆಯಿಂದ ವರ್ತಿಸಿ.

Share this Story:

Follow Webdunia kannada

ಮುಂದಿನ ಸುದ್ದಿ

ಶುಕ್ರನ ಅನುಗ್ರಹ ನಿಮ್ಮ ಮೇಲಾಗಬೇಕೆಂದರೆ ಹೀಗೆ ಮಾಡಿ