Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಗುರುವಾರ, 5 ಡಿಸೆಂಬರ್ 2019 (08:41 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಹಿರಿಯರ ಆರೋಗ್ಯದಲ್ಲಿ ಏರುಪೇರಾಗಬಹುದು. ಗೃಹೋಪಯೋಗಿ ವಸ್ತುಗಳಿಗಾಗಿ ಹೆಚ್ಚಿನ ಧನವ್ಯಯವಾಗಲಿದೆ. ವೃತ್ತಿ ಬದಲಾವಣೆಗೆ ಮನಸ್ಸು ಮಾಡುವಿರಿ. ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗೆ ಖರೀದಿ ನಡೆಸುವಿರಿ. ದೇವತಾ ಪ್ರಾರ್ಥನೆ ಮಾಡಿ.

ವೃಷಭ: ಆದಾಯ ವೃದ್ಧಿಗೆ ನಾನಾ ಮೂಲಗಳನ್ನು ಹುಡುಕುವಿರಿ. ಆದಾಯವಿದ್ದಷ್ಟೇ ಖರ್ಚೂ ಇರಲಿದೆ. ಹೀಗಾಗಿ ಒಂದು ರೀತಿಯ ನಿರಾಶೆಯ ಭಾವ ಕಾಡಲಿದೆ. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳಿಗೆ ಕೆಳ ಹಂತದ ನೌಕರರ ಅಸಹಕಾರ ಕಂಡುಬರಲಿದೆ.

ಮಿಥುನ: ಗೃಹಿಣಿಯರಿಗೆ ಚಿನ್ನಾಭರಣ ಖರೀದಿ ಯೋಗವಿದೆ. ಪತ್ನಿಗೆ ತವರು ಮನೆಯಿಂದ ಉಡುಗೊರೆ ಲಭ್ಯವಾಗುವುದು. ವೈದ್ಯಕೀಯ ವೃತ್ತಿಯವರಿಗೆ ಮುನ್ನಡೆಯ ಲಾಭವಾಗಲಿದೆ. ಕಾರ್ಯನಿಮಿತ್ತ ದೂರ ಸಂಚಾರ ಮಾಡಬೇಕಿದೆ. ದಿನದಂತ್ಯಕ್ಕೆ ಶುಭ ಸುದ್ದಿ.

ಕರ್ಕಟಕ: ದಾಂಪತ್ಯದಲ್ಲಿ ವಿರಸ, ವಿರಹ ಕಂಡುಬರಲಿದೆ.ಕೌಟುಂಬಿಕ ಮನಸ್ತಾಪಗಳನ್ನು ನಿಭಾಯಿಸಲು ಹಿರಿಯರ ಸಲಹೆ ಪಡೆಯಿರಿ. ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ನೆರವು ಸಿಗಲಿದೆ. ಕ್ರೀಡಾ ಪಟುಗಳಿಗೆ ಯಶಸ್ಸು. ವಿದ್ಯಾರ್ಥಿಗಳಿಗೆ ಮುನ್ನಡೆ ಸಿಗಲಿದೆ.

ಸಿಂಹ: ಸರಕಾರಿ ಉದ್ಯೋಗಿಗಳಿಗೆ ಉದ್ಯೋಗದಲ್ಲಿ ಮುನ್ನಡೆಯ ಲಾಭವಾಗಲಿದೆ. ಹಣಕಾಸಿನ ಖರ್ಚುವೆಚ್ಚದ ಬಗ್ಗೆ ಎಚ್ಚರಿಕೆ ವಹಿಸಿ. ಸಾಲಗಾರರಿಂದ ಮುಕ್ತಿ ಸಿಗಲಿದೆ. ಹಿರಿಯರ ದೇಹಾರೋಗ್ಯದ ಬಗ್ಗೆ ಗಮನಕೊಡಬೇಕಾಗುತ್ತದೆ. ಅತೀ ಸಲುಗೆ ಒಳ್ಳೆಯದಲ್ಲ.

 
ಕನ್ಯಾ: ಮಕ್ಕಳ ಭವಿಷ್ಯ ಚಿಂತೆಗೆ ಕಾರಣವಾಗಲಿದೆ. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆ ಬರುವುದು. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ಪಾಲು ಬಂಡವಾಳ ವ್ಯವಹಾರದಲ್ಲಿ ಭಿನ್ನಾಭಿಪ್ರಾಯ ಮೂಡಬಹುದು.

ತುಲಾ: ಕಲೆ, ಸಾಹಿತ್ಯ ಕ್ಷೇತ್ರದಲ್ಲಿರುವವರ ಕ್ರಿಯಾತ್ಮಕತೆಗೆ ಬೆಲೆ ಬರಲಿದೆ. ಸಾಮಾಜಿಕವಾಗಿ ಉನ್ನತ ಸ್ಥಾನ ಮಾನ ಸಿಗಲಿದೆ. ಬಡ್ಡಿ ವ್ಯವಹಾರದಲ್ಲಿ ಆದಾಯ ಗಳಿಸುವಿರಿ. ನಿವೇಶನ ಖರೀದಿಗೆ ಮನಸ್ಸು ಮಾಡುವಿರಿ. ಅಹಿತಕರ ವಾರ್ತೆ ಕೇಳಿಬಂದೀತು.

ವೃಶ್ಚಿಕ: ಆದಾಯ ವೃದ್ಧಿಯಾದರೂ ಕೈಗೆಟುಕದ ಸ್ಥಿತಿ. ಹಣ ಬಂದ ಹಾಗೇ ಖರ್ಚುಗಳಿಗೂ ದಾರಿಯಾಗುತ್ತದೆ. ಕಾರ್ಯಕ್ಷೇತ್ರದಲ್ಲಿ ನಿಮ್ಮ ಕ್ರಿಯಾತ್ಮಕತೆಗೆ ಬೆಲೆ ಸಿಗಲಿದೆ. ದಾಂಪತ್ಯದಲ್ಲಿ ಸಣ್ಣ ಪುಟ್ಟ ಭಿನ್ನಾಭಿಪ್ರಾಯಗಳೇ ದೊಡ್ಡದಾಗಬಹುದು. ಎಚ್ಚರಿಕೆಯಿಂದಿರಿ.

ಧನು: ಗೃಹ ಕಲಹಗಳು ತಿಳಿಯಾಗಿ ನೆಮ್ಮದಿಯ ವಾತಾವರಣವಿರಲಿದೆ. ವಿನಾಕಾರಣ ಇಲ್ಲದ ಅನುಮಾನ ತಲೆಯಲ್ಲಿ ತುಂಬಿಕೊಂಡು ಚಿಂತೆ ಮಾಡಬೇಡಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ. ದಿನದಂತ್ಯಕ್ಕೆ ಶುಭ ಸುದ್ದಿ.

ಮಕರ: ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಉನ್ನತಿ ಕಂಡುಬರಲಿದೆ. ಶಿಕ್ಷಕರಿಂದ ಪ್ರಶಂಸೆಗೊಳಗಾಗುವರು. ಉದ್ಯೋಗ ಕ್ಷೇತ್ರದಲ್ಲಿ ಮಹಿಳೆಯರಿಂದ ಅಪವಾದದ ಭೀತಿಯಿದೆ. ಸಂಚಾರದಿಂದ ಆರೋಗ್ಯ ಹಾನಿಯಾದೀತು. ಎಚ್ಚರಿಕೆ ಅಗತ್ಯ.

ಕುಂಭ: ಕಟ್ಟಡ ಕಾಮಗಾರಿ ಉದ್ಯೋಗಿಗಳಿಗೆ ಉದ್ಯೋಗದಲ್ಲಿ ಮುನ್ನಡೆಯಿರಲಿದೆ. ಆದಾಯ ಹೆಚ್ಚುವುದು. ಅಂದುಕೊಂಡ ಕೆಲಸ ಕಾರ್ಯಗಳನ್ನು ನೆರವೇರಿಸುವಿರಿ. ಆದರೆ ಅಪರಿಚಿತರನ್ನು ನಂಬಿ ಹೂಡಿಕೆ ಮಾಡಲು ಹೋಗಬೇಡಿ. ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ಮಾಡುವಿರಿ.

ಮೀನ: ಆತುರದ ಬುದ್ಧಿ ಯಾರಿಗೂ ಒಳ್ಳೆಯದಲ್ಲ. ದುಡುಕಿ ನಿರ್ಧಾರ ತೆಗೆದುಕೊಳ್ಳಲು ಹೋದರೆ ಕೈಸುಟ್ಟುಕೊಳ್ಳಬೇಡಿ. ರಾಜಕೀಯ ರಂಗದವರಿಗೆ ಹಿನ್ನಡೆಯಾದೀತು. ಪ್ರಯತ್ನ ಬಲಕ್ಕೆ ಫಲ ಸಿಗದೇ ನಿರಾಶೆ ಕಾಡಬಹುದು. ಆದರೆ ಮಿತ್ರರ ಸಹಕಾರ ದೊರಕಲಿದೆ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments