Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶುಕ್ರವಾರ, 6 ಡಿಸೆಂಬರ್ 2019 (09:26 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ನೀವು ಕಠಿಣ ಪರಿಶ್ರಮದಿಂದ ದುಡಿದರೆ ಅದಕ್ಕೆ ತಕ್ಕ ಫಲ ಸಿಕ್ಕೇ ಸಿಗುತ್ತದೆ. ಧಾರ್ಮಿಕ ಕಾರ್ಯಗಳಿಗೆ ಧನವಿನಿಯೋಗ ಮಾಡುವಿರಿ. ಶುಭಮಂಗಲ ಕಾರ್ಯಗಳಿಗೆ ಓಡಾಟ ನಡೆಸುವಿರಿ. ವಿದ್ಯಾರ್ಥಿಗಳಿಗೆ ಪ್ರಯತ್ನ ಬಲವಿದ್ದರೆ ಮಾತ್ರ ಯಶಸ್ಸು.

ವೃಷಭ: ವೃತ್ತಿರಂಗದಲ್ಲಿ ನಿಮ್ಮ ಮುನ್ನಡೆಗೆ ಪೂರಕವಾದ ವಾತಾವರಣವಿರುತ್ತದೆ. ಖರ್ಚು ವೆಚ್ಚಗಳನ್ನು ನಿಭಾಯಿಸಲು ಹೆಣಗಾಡಬೇಕಾಗುತ್ತದೆ. ರಾಜಕೀಯ ವರ್ಗದವರಿಗೆ ಶಕ್ತಿ ಪ್ರದರ್ಶನ ಮಾಡಲು ವೇದಿಕೆ ಸಿಗಲಿದೆ. ನಿರುದ್ಯೋಗಿಗಳಿಗೆ ಸೂಕ್ತ ಉದ್ಯೋಗ ಸಿಗದೇ ನಿರಾಸೆಯಾಗಬಹುದು. ತಾಳ್ಮೆ ಅಗತ್ಯ.

ಮಿಥುನ: ಸಾಂಸಾರಿಕವಾಗಿ ಭಿನ್ನಾಭಿಪ್ರಾಯಗಳನ್ನು ಪರಿಹರಿಸಲು ಹೆಣಗಾಡಬೇಕಾಗುತ್ತದೆ. ವ್ಯಾಪಾರ,ವ್ಯವಹಾರದಲ್ಲಿ ತೊಡಗಿಸಿಕೊಳ್ಳುವಾಗ ಅಡೆತಡೆಗಳು ತೋರಿಬಂದೀತು. ಎಚ್ಚರಿಕೆಯಿಂದ ನಿಭಾಯಿಸಬೇಕು. ಹಿರಿಯರ ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕರ್ಕಟಕ: ವ್ಯಾಪಾರ ವ್ಯವಹಾರದಲ್ಲಿ ಹೊಸ ಒಪ್ಪಂದಗಳಿಗೆ ಕೈಹಾಕುವಿರಿ. ಸರಿಯಾಗಿ ಪರಾಮರ್ಶಿಸಿ ಮುಂದುವರಿಯಿರಿ. ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ನೆರವು ಸಿಗಲಿದೆ. ಧಾರ್ಮಿಕವಾಗಿ ಭಕ್ತಿ ಭಾವ ಹೆಚ್ಚುವುದು. ಕಾರ್ಯನಿಮಿತ್ತ ಕಿರು ಸಂಚಾರ ಮಾಡುವಿರಿ.

ಸಿಂಹ: ಉತ್ತಮ ಸ್ನೇಹಿತರಿಂದ ನಿಮ್ಮ ಕೆಲಸದಲ್ಲಿ ಪ್ರಗತಿ ಸಾಧಿಸಲು ನೆರವು ಸಿಗಲಿದೆ. ವ್ಯಾಪಾರ, ವ್ಯವಹಾರದಲ್ಲಿ ಮುನ್ನಡೆ ಸಾಧಿಸುವಿರಿ. ಆದರೆ ಯಾರಿಗೂ ಸಾಲ ಕೊಡಲು ಹೋಗಬೇಡಿ. ಆರ್ಥಿಕವಾಗಿ ಖರ್ಚು ವೆಚ್ಚದ ಬಗ್ಗೆ ನಿಗಾ ಇರಲಿ. ಆರೋಗ್ಯದಲ್ಲಿ ಕಾಳಜಿಯಿರಲಿ.

 
ಕನ್ಯಾ: ಮಾನಸಿಕವಾಗಿ ಋಣಾತ್ಮಕ ಚಿಂತನೆಗಳು ಕಾಡಲಿವೆ. ಕೌಟುಂಬಿಕವಾಗಿ ಸಂಗಾತಿಯೊಂದಿಗೆ ಹೊಂದಾಣಿಕೆಯಿಂದ ನಡೆದುಕೊಳ್ಳಬೇಕಾಗುತ್ತದೆ. ಭವಿಷ್ಯದ ಬಗ್ಗೆ ಯೋಚನೆಗಳು ಬರಲಿವೆ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ ಕಂಡು ಸಂತಸವಾಗುವುದು.

ತುಲಾ: ದೈವಾನುಗ್ರಹದಿಂದ ಹಂತ ಹಂತವಾಗಿ ಅಭಿವೃದ್ಧಿ ಸಾಧಿಸುವಿರಿ. ಅಂದುಕೊಂಡ ಕೆಲಸ ನೆರವೇರಿಸುವಿರಿ. ಹಣಕಾಸಿಗೆ ಯಾವುದೇ ತೊಂದರೆಯಾಗದು. ಸಾಂಸಾರಿಕವಾಗಿ ಸಂಗಾತಿಯೊಂದಿಗೆ ಸುಮಧುರ ಕ್ಷಣ ಕಳೆಯುವಿರಿ. ದಿನದಂತ್ಯಕ್ಕೆ ಶುಭ ಸುದ್ದಿ.

ವೃಶ್ಚಿಕ: ಸಾಂಸಾರಿಕವಾಗಿ ಸುಂದರ ದಿನಗಳಿವು. ನೂತನ ದಂಪತಿಗಳಿಗೆ ಮಧುಚಂದ್ರ ಭಾಗ್ಯವಿದೆ. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡುವಿರಿ. ಶೈಕ್ಷಣಿಕ ಕ್ಷೇತ್ರದಲ್ಲಿ ಪ್ರಗತಿ ಕಂಡುಬರಲಿದೆ. ಸಾಮಾಜಿಕವಾಗಿ ನಿಮ್ಮ ಕೆಲಸಗಳಿಗೆ ಜನಮನ್ನಣೆ ಗಳಿಸುವಿರಿ.

ಧನು: ವೃತ್ತಿರಂಗದಲ್ಲಿ ನಿಮ್ಮ ಮುನ್ನಡೆಗೆ ಸಹೋದ್ಯೋಗಿಗಳೇ ಅಸೂಯೆ ಪಡುವರು. ದೇಹಾರೋಗ್ಯದಲ್ಲಿ ಏರುಪೇರಾಗಬಹುದು, ಎಚ್ಚರವಿರಲಿ. ಶೈಕ್ಷಣಿಕ ಕ್ಷೇತ್ರದಲ್ಲಿ ಪ್ರಗತಿ ಸಾಧಿಸುವಿರಿ. ಸರಕಾರಿ ಕೆಲಸಗಳಲ್ಲಿ ಮುನ್ನಡೆ ಸಿಗಲಿದೆ. ದಿನದಂತ್ಯಕ್ಕೆ ಶುಭ ಸುದ್ದಿ.

ಮಕರ: ರಾಜಕೀಯದವರಿಗೆ ಅಪವಾದದ ಭೀತಿಯಿದೆ. ಮಹಿಳೆಯರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ನೆರೆಹೊರೆಯವರ ಚಾಡಿ ಮಾತುಗಳಿಗೆ ಕಿವಿಗೊಡಬೇಡಿ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ಕ್ರಿಯಾಶೀಲತೆಗೆ ಬೆಲೆ ಸಿಗಲಿದೆ.

ಕುಂಭ: ವ್ಯರ್ಥವಾಗಿ ಒಣ ಜಂಬದ ಮಾತುಗಳಿಂದ ನಿಮ್ಮ ಬೆಲೆಯನ್ನು ನೀವೇ ಕಳೆದುಕೊಳ್ಳಬೇಡಿ. ವೃತ್ತಿರಂಗದಲ್ಲಿ ಹೆಚ್ಚಿನ ಜವಾಬ್ಧಾರಿ ಹೊತ್ತುಕೊಳ್ಳಬೇಕಾಗುತ್ತದೆ. ಹಣಕಾಸಿನ ವ್ಯವಹಾರದಲ್ಲಿ ಕೊಂಚ ನಷ್ಟವಾಗಬಹುದು. ಸಂಗಾತಿಯ ಮಾತಿಗೆ ಕಿವಿಗೊಡಬೇಕಾಗುತ್ತದೆ.

ಮೀನ: ಉದ್ಯೋಗ ಕ್ಷೇತ್ರದಲ್ಲಿ ಬರುವ ಸಮಸ್ಯೆಗಳನ್ನು ಎದುರಿಸುವಾಗ ಏಕಾಂಗಿ ಅನಿಸಬಹುದು. ಉತ್ಸಾಹದಿಂದ ಕೆಲಸ ನಿಭಾಯಿಸಬೇಕಾಗುತ್ತದೆ. ಮಹಿಳೆಯರಿಗೆ ಚಿನ್ನಾಭರಣ ಖರೀದಿ ಯೋಗವಿದೆ. ಆರ್ಥಿಕ ಸಮಸ್ಯೆಗಳು ಎದುರಾದರೂ ಆತ್ಮಸ್ಥೈರ್ಯದಿಂದಲೇ ನಿಭಾಯಿಸಬೇಕಾಗುತ್ತದೆ.

Share this Story:

Follow Webdunia kannada

ಮುಂದಿನ ಸುದ್ದಿ

ಪುರಾಣದ ಪ್ರಕಾರ ಮಹಿಳೆಯರು ಈ ಕೆಲಸವನ್ನು ಮಾಡಲೇಬಾರದು!