Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಗುರುವಾರ, 12 ಡಿಸೆಂಬರ್ 2019 (08:39 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಕೌಟುಂಬಿಕವಾಗಿ ಮಕ್ಕಳ ವಿಚಾರದಲ್ಲಿ ಸಂತಸವಿರಲಿದೆ. ಆದರೆ ಸಂಗಾತಿಯೊಡನೆ ಮನಸ್ತಾಪವಾಗಬಹುದು. ಮಾತಿನ ಮೇಲೆ ನಿಗಾ ಇರಲಿ. ವಾತ ಸಂಬಂಧೀ ಆರೋಗ್ಯ ಸಮಸ್ಯೆಗಳು ಕಾಡಬಹುದು. ಹಿರಿಯರ ಮಾತಿಗೆ ಕಿವಿಗೊಡುವುದು ಉತ್ತಮ.

ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳಿಂದ ಹೆಚ್ಚಿನ ಜವಾಬ್ಧಾರಿ ಸಿಗಲಿದೆ. ನಿರೀಕ್ಷಿತ ರೀತಿಯಲ್ಲಿ ಕೆಲಸ ಸಾಗಿ ಸಂತಸವಾಗುವುದು. ಇಂಜಿನಿಯರಿಂಗ್ ವೃತ್ತಿಯವರಿಗೆ ಕಾರ್ಯದೊತ್ತಡ ಅಧಿಕವಾಗಲಿದೆ. ಕೌಟುಂಬಿಕವಾಗಿ ನೆಮ್ಮದಿಯಿರುವುದು.

ಮಿಥುನ: ಹಿರಿಯರಿಂದ ಉಡುಗೊರೆ ಸ್ವೀಕರಿಸುವಿರಿ. ಮಕ್ಕಳ ಭವಿಷ್ಯದ ಬಗ್ಗೆ ಯೋಜನೆ ರೂಪಿಸುವಿರಿ. ಹಣಕಾಸಿನ ಹರಿವಿಗೆ ತೊಂದರೆಯಿರದು. ಸಾಲಗಾರರಿಂದ ಬಾಕಿ ಹಣ ಪಾವತಿಯಾಗುವುದು. ಸಂಗಾತಿಯ ಮನದಾಸೆ ಪೂರೈಸುವಿರಿ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿಯಿದೆ.

ಕರ್ಕಟಕ: ಕೃಷಿ ಕ್ಷೇತ್ರದಲ್ಲಿರುವವರಿಗೆ ವ್ಯವಹಾರದಲ್ಲಿ ನಿವ್ವಳ ಲಾಭ ಸಿಗಲಿದೆ. ವ್ಯಾಪಾರಿಗಳಿಗೆ ಆರ್ಥಿಕವಾಗಿ ಬಾಕಿ ಹಣಗಳು ಪಾವತಿಯಾಗಲಿವೆ. ಹೊಸ ಯೋಜನೆಗಳಿಗೆ ಕೈ ಹಾಕಲು ಇದು ಸಕಾಲ. ವಾಹನ ಸವಾರರು ಚಾಲನೆಯಲ್ಲಿ ಎಚ್ಚರಿಕೆ ವಹಿಸಬೇಕಾಗುತ್ತದೆ.

ಸಿಂಹ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಕ್ರಿಯಾಶೀಲತೆಗೆ ಬೆಲೆ ಸಿಗಲಿದೆ. ಪರಿಶ್ರಮಕ್ಕೆ ತಕ್ಕ ಫಲ ಪಡೆಯುವಿರಿ. ಸಾಮಾಜಿಕವಾಗಿ ಉನ್ನತ ಸ್ಥಾನ ಮಾನ ಸಿಗುವುದು. ಇಷ್ಟಮಿತ್ರರ ಭೇಟಿ, ಭೋಜನ ಸಂತಸ ಹೆಚ್ಚು ಮಾಡುವುದು. ವಿನೋದ ಯಾತ್ರೆ ಕೈಗೊಳ್ಳುವಿರಿ.

 
ಕನ್ಯಾ: ಅವಿವಾಹಿತರಿಗೆ ಶೀಘ್ರದಲ್ಲೇ ಮನಸ್ಸಿಗೆ ಹಿಡಿಸುವ ಸಂಬಂಧ ಕೂಡಿಬರಲಿದೆ. ಕೌಟುಂಬಿಕವಾಗಿ ಜವಾಬ್ಧಾರಿ ಹೆಚ್ಚುವುದು. ಶುಭ ಮಂಗಲ ಕಾರ್ಯಗಳಿಗೆ ವಿಘ್ನ ಎದುರಾಗಬಹುದು. ನೂತನ ದಂಪತಿಗಳಲ್ಲಿ ಹೊಂದಾಣಿಕೆ ಕೊರತೆಯುಂಟಾಗಬಹುದು. ತಾಳ್ಮೆ ಅಗತ್ಯ.

ತುಲಾ: ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕಾಗಿ ವಿದೇಶ ಪ್ರಯಾಣ ಸಾಧ‍್ಯತೆ. ನಿರುದ್ಯೋಗಿಗಳು ತಾತ್ಕಾಲಿಕ ಉದ್ಯೋಗ ಕಂಡುಕೊಳ್ಳುವರು. ಅಧಿಕ ಲಾಭ ತರುವ ಉದ್ಯೋಗದತ್ತ ಮನಸ್ಸು ವಾಲುವುದು. ನೆರೆಹೊರೆಯವರ ಚಾಡಿ ಮಾತುಗಳನ್ನು ಅಲಕ್ಷಿಸುವುದೇ ಉತ್ತಮ.

ವೃಶ್ಚಿಕ: ಮೇಲೇರಲು ಯತ್ನಿಸಿದಂತೇ ಕಾಲೆಳೆಯುವವರೂ ಇದ್ದಾರೆ ಎಂಬುದನ್ನು ಮರೆಯಬೇಡಿ. ಶಾಂತವಾಗಿ ವರ್ತಿಸಿ. ದುಡುಕಿನ ನಿರ್ಧಾರ ತೆಗೆದುಕೊಳ್ಳುಬೇಡಿ. ಸಂಗಾತಿಯ ಸಲಹೆಗಳಿಗೆ ಕಿವಿಗೊಡಿ. ವಾಹನ ಖರೀದಿ ಯೋಗವಿದೆ. ಆದರೆ ದುಂದು ವೆಚ್ಚಕ್ಕೆ ಕಡಿವಾಣ ಹಾಕಿ.

ಧನು: ಸಾಂಸಾರಿಕವಾಗಿ ಇಕ್ಕಟ್ಟಿನ ಪರಿಸ್ಥಿತಿ ಎದುರಿಸಬೇಕಾಗುತ್ತದೆ. ಸಂಗಾತಿಯ ಕೆಲಸಗಳಿಗೆ ಸಹಕಾರ ನೀಡಬೇಕಾಗುತ್ತದೆ. ಮಕ್ಕಳ ಭವಿಷ್ಯಕ್ಕೆ ಯೋಜನೆ ರೂಪಿಸಬೇಕಾಗುತ್ತದೆ. ಬಂಧು ಮಿತ್ರರ ಆಗಮನದಿಂದ ಮನಸ್ಸಿಗೆ ಸಂತಸವಾಗಲಿದೆ.

ಮಕರ: ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ಸಹಕಾರ ದೊರೆಯುವುದು. ಆದರೆ ಸಣ್ಣ ತಪ್ಪಿನಿಂದ ಮೇಲಧಿಕಾರಿಗಳಿಂದ ಬೈಸಿಕೊಳ್ಳಬೇಕಾಗಬಹುದು. ಸಂಯಮ ಪಾಲಿಸುವುದು ಉತ್ತಮ. ಗೃಹ ಬಳಕೆ ವಸ್ತುಗಳ ಖರೀದಿಗಾಗಿ ಹೆಚ್ಚಿನ ಖರ್ಚು ವೆಚ್ಚವಾಗಲಿದೆ.

ಕುಂಭ: ಅನಗತ್ಯ ಆತಂಕ, ಬೇಡದ ವಿಚಾರಗಳ ಯೋಚನೆಗಳಿಂದ ಮಾನಸಿಕವಾಗಿ ಬೇಸರದಲ್ಲಿರುವಿರಿ. ಸಂಗಾತಿಯ ಆಸರೆ ಸಿಗಲಿದೆ. ದಾಯಾದಿಗಳೊಂದಿಗಿನ ಮನಸ್ತಾಪಗಳಿಗೆ ತೆರೆ ಬೀಳುವುದು. ಸಣ್ಣ ವ್ಯಾಪಾರಿಗಳಿಗೆ ವ್ಯವಹಾರದಲ್ಲಿ ಮುನ್ನಡೆ ಸಿಗುವುದು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮೀನ: ಗೃಹ ನಿರ್ಮಾಣ ಕೆಲಸಗಳಿಗೆ ಕೈ ಹಾಕಲು ಇದು ಸಕಾಲ. ಆರ್ಥಿಕವಾಗಿ ಲೆಕ್ಕ ಪತ್ರಗಳ ಬಗ್ಗೆ ನಿಖರವಾದ ಮಾಹಿತಿಯಿಟ್ಟುಕೊಂಡಿರಿ. ಸರಕಾರಿ ಉದ್ಯೋಗಿಗಳಿಗೆ ಉದ್ಯೋಗದಲ್ಲಿ ಮುನ್ನಡೆ ಸಿಗಲಿದೆ. ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರುವುದು.
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಕೌಟುಂಬಿಕವಾಗಿ ಮಕ್ಕಳ ವಿಚಾರದಲ್ಲಿ ಸಂತಸವಿರಲಿದೆ. ಆದರೆ ಸಂಗಾತಿಯೊಡನೆ ಮನಸ್ತಾಪವಾಗಬಹುದು. ಮಾತಿನ ಮೇಲೆ ನಿಗಾ ಇರಲಿ. ವಾತ ಸಂಬಂಧೀ ಆರೋಗ್ಯ ಸಮಸ್ಯೆಗಳು ಕಾಡಬಹುದು. ಹಿರಿಯರ ಮಾತಿಗೆ ಕಿವಿಗೊಡುವುದು ಉತ್ತಮ.

ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳಿಂದ ಹೆಚ್ಚಿನ ಜವಾಬ್ಧಾರಿ ಸಿಗಲಿದೆ. ನಿರೀಕ್ಷಿತ ರೀತಿಯಲ್ಲಿ ಕೆಲಸ ಸಾಗಿ ಸಂತಸವಾಗುವುದು. ಇಂಜಿನಿಯರಿಂಗ್ ವೃತ್ತಿಯವರಿಗೆ ಕಾರ್ಯದೊತ್ತಡ ಅಧಿಕವಾಗಲಿದೆ. ಕೌಟುಂಬಿಕವಾಗಿ ನೆಮ್ಮದಿಯಿರುವುದು.

ಮಿಥುನ: ಹಿರಿಯರಿಂದ ಉಡುಗೊರೆ ಸ್ವೀಕರಿಸುವಿರಿ. ಮಕ್ಕಳ ಭವಿಷ್ಯದ ಬಗ್ಗೆ ಯೋಜನೆ ರೂಪಿಸುವಿರಿ. ಹಣಕಾಸಿನ ಹರಿವಿಗೆ ತೊಂದರೆಯಿರದು. ಸಾಲಗಾರರಿಂದ ಬಾಕಿ ಹಣ ಪಾವತಿಯಾಗುವುದು. ಸಂಗಾತಿಯ ಮನದಾಸೆ ಪೂರೈಸುವಿರಿ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿಯಿದೆ.

ಕರ್ಕಟಕ: ಕೃಷಿ ಕ್ಷೇತ್ರದಲ್ಲಿರುವವರಿಗೆ ವ್ಯವಹಾರದಲ್ಲಿ ನಿವ್ವಳ ಲಾಭ ಸಿಗಲಿದೆ. ವ್ಯಾಪಾರಿಗಳಿಗೆ ಆರ್ಥಿಕವಾಗಿ ಬಾಕಿ ಹಣಗಳು ಪಾವತಿಯಾಗಲಿವೆ. ಹೊಸ ಯೋಜನೆಗಳಿಗೆ ಕೈ ಹಾಕಲು ಇದು ಸಕಾಲ. ವಾಹನ ಸವಾರರು ಚಾಲನೆಯಲ್ಲಿ ಎಚ್ಚರಿಕೆ ವಹಿಸಬೇಕಾಗುತ್ತದೆ.

ಸಿಂಹ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಕ್ರಿಯಾಶೀಲತೆಗೆ ಬೆಲೆ ಸಿಗಲಿದೆ. ಪರಿಶ್ರಮಕ್ಕೆ ತಕ್ಕ ಫಲ ಪಡೆಯುವಿರಿ. ಸಾಮಾಜಿಕವಾಗಿ ಉನ್ನತ ಸ್ಥಾನ ಮಾನ ಸಿಗುವುದು. ಇಷ್ಟಮಿತ್ರರ ಭೇಟಿ, ಭೋಜನ ಸಂತಸ ಹೆಚ್ಚು ಮಾಡುವುದು. ವಿನೋದ ಯಾತ್ರೆ ಕೈಗೊಳ್ಳುವಿರಿ.

 
ಕನ್ಯಾ: ಅವಿವಾಹಿತರಿಗೆ ಶೀಘ್ರದಲ್ಲೇ ಮನಸ್ಸಿಗೆ ಹಿಡಿಸುವ ಸಂಬಂಧ ಕೂಡಿಬರಲಿದೆ. ಕೌಟುಂಬಿಕವಾಗಿ ಜವಾಬ್ಧಾರಿ ಹೆಚ್ಚುವುದು. ಶುಭ ಮಂಗಲ ಕಾರ್ಯಗಳಿಗೆ ವಿಘ್ನ ಎದುರಾಗಬಹುದು. ನೂತನ ದಂಪತಿಗಳಲ್ಲಿ ಹೊಂದಾಣಿಕೆ ಕೊರತೆಯುಂಟಾಗಬಹುದು. ತಾಳ್ಮೆ ಅಗತ್ಯ.

ತುಲಾ: ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕಾಗಿ ವಿದೇಶ ಪ್ರಯಾಣ ಸಾಧ‍್ಯತೆ. ನಿರುದ್ಯೋಗಿಗಳು ತಾತ್ಕಾಲಿಕ ಉದ್ಯೋಗ ಕಂಡುಕೊಳ್ಳುವರು. ಅಧಿಕ ಲಾಭ ತರುವ ಉದ್ಯೋಗದತ್ತ ಮನಸ್ಸು ವಾಲುವುದು. ನೆರೆಹೊರೆಯವರ ಚಾಡಿ ಮಾತುಗಳನ್ನು ಅಲಕ್ಷಿಸುವುದೇ ಉತ್ತಮ.

ವೃಶ್ಚಿಕ: ಮೇಲೇರಲು ಯತ್ನಿಸಿದಂತೇ ಕಾಲೆಳೆಯುವವರೂ ಇದ್ದಾರೆ ಎಂಬುದನ್ನು ಮರೆಯಬೇಡಿ. ಶಾಂತವಾಗಿ ವರ್ತಿಸಿ. ದುಡುಕಿನ ನಿರ್ಧಾರ ತೆಗೆದುಕೊಳ್ಳುಬೇಡಿ. ಸಂಗಾತಿಯ ಸಲಹೆಗಳಿಗೆ ಕಿವಿಗೊಡಿ. ವಾಹನ ಖರೀದಿ ಯೋಗವಿದೆ. ಆದರೆ ದುಂದು ವೆಚ್ಚಕ್ಕೆ ಕಡಿವಾಣ ಹಾಕಿ.

ಧನು: ಸಾಂಸಾರಿಕವಾಗಿ ಇಕ್ಕಟ್ಟಿನ ಪರಿಸ್ಥಿತಿ ಎದುರಿಸಬೇಕಾಗುತ್ತದೆ. ಸಂಗಾತಿಯ ಕೆಲಸಗಳಿಗೆ ಸಹಕಾರ ನೀಡಬೇಕಾಗುತ್ತದೆ. ಮಕ್ಕಳ ಭವಿಷ್ಯಕ್ಕೆ ಯೋಜನೆ ರೂಪಿಸಬೇಕಾಗುತ್ತದೆ. ಬಂಧು ಮಿತ್ರರ ಆಗಮನದಿಂದ ಮನಸ್ಸಿಗೆ ಸಂತಸವಾಗಲಿದೆ.

ಮಕರ: ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ಸಹಕಾರ ದೊರೆಯುವುದು. ಆದರೆ ಸಣ್ಣ ತಪ್ಪಿನಿಂದ ಮೇಲಧಿಕಾರಿಗಳಿಂದ ಬೈಸಿಕೊಳ್ಳಬೇಕಾಗಬಹುದು. ಸಂಯಮ ಪಾಲಿಸುವುದು ಉತ್ತಮ. ಗೃಹ ಬಳಕೆ ವಸ್ತುಗಳ ಖರೀದಿಗಾಗಿ ಹೆಚ್ಚಿನ ಖರ್ಚು ವೆಚ್ಚವಾಗಲಿದೆ.

ಕುಂಭ: ಅನಗತ್ಯ ಆತಂಕ, ಬೇಡದ ವಿಚಾರಗಳ ಯೋಚನೆಗಳಿಂದ ಮಾನಸಿಕವಾಗಿ ಬೇಸರದಲ್ಲಿರುವಿರಿ. ಸಂಗಾತಿಯ ಆಸರೆ ಸಿಗಲಿದೆ. ದಾಯಾದಿಗಳೊಂದಿಗಿನ ಮನಸ್ತಾಪಗಳಿಗೆ ತೆರೆ ಬೀಳುವುದು. ಸಣ್ಣ ವ್ಯಾಪಾರಿಗಳಿಗೆ ವ್ಯವಹಾರದಲ್ಲಿ ಮುನ್ನಡೆ ಸಿಗುವುದು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮೀನ: ಗೃಹ ನಿರ್ಮಾಣ ಕೆಲಸಗಳಿಗೆ ಕೈ ಹಾಕಲು ಇದು ಸಕಾಲ. ಆರ್ಥಿಕವಾಗಿ ಲೆಕ್ಕ ಪತ್ರಗಳ ಬಗ್ಗೆ ನಿಖರವಾದ ಮಾಹಿತಿಯಿಟ್ಟುಕೊಂಡಿರಿ. ಸರಕಾರಿ ಉದ್ಯೋಗಿಗಳಿಗೆ ಉದ್ಯೋಗದಲ್ಲಿ ಮುನ್ನಡೆ ಸಿಗಲಿದೆ. ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರುವುದು.

Share this Story:

Follow Webdunia kannada

ಮುಂದಿನ ಸುದ್ದಿ

ಅಪಮೃತ್ಯು ದೋಷ ನಿವಾರಣೆಗೆ ಮನೆಯಲ್ಲಿ ಈ ದೀಪ ಹಚ್ಚಿ