Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶುಕ್ರವಾರ, 13 ಡಿಸೆಂಬರ್ 2019 (08:25 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ವ್ಯಾಪಾರ ವ್ಯವಹಾರಗಳು ಕೈಗೂಡಲಿವೆ. ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ಸಹಕಾರ ಸಿಗುವುದು. ಆದರೆ ಕೌಟುಂಬಿಕವಾಗಿ ಒಂದಾದ ಮೇಲೊಂದರಂತೆ ಸಮಸ್ಯೆಗಳು ಚಿಂತೆಗೆ ಕಾರಣವಾಗುವುದು. ಖರ್ಚು ವೆಚ್ಚಗಳು ಅಧಿಕವಾಗಲಿವೆ. ತಾಳ್ಮೆ ಅಗತ್ಯ.

ವೃಷಭ: ಉದ್ಯೋಗವಿರಲಿ, ವ್ಯವಹಾರವಿರಲಿ ಪ್ರತಿಕೂಲ ಫಲಿತಾಂಶಗಳೇ ಹೆಚ್ಚು ಕಂಡುಬರಲಿವೆ. ಇದರಿಂದಾಗಿ ಮಾನಸಿಕವಾಗಿ ಕುಗ್ಗುವಿರಿ. ಆದರೆ ಹಿರಿಯರ ಸಮಯೋಚಿತ ಸಲಹೆಗಳಿಗೆ ಕಿವಿಗೊಡಿ. ಮಕ್ಕಳ ವಿಚಾರದಲ್ಲಿ ಸಂತಸದ ವಾರ್ತೆ ಕೇಳಲಿದ್ದೀರಿ.

ಮಿಥುನ: ದೂರ ಪ್ರಯಾಣದಲ್ಲಿ ಅನಾರೋಗ್ಯ ಸಮಸ್ಯೆಗಳು ಕಂಡುಬಂದೀತು. ಸಾಂಸಾರಿಕವಾಗಿ ಹೊಸ ಕೆಲಸಗಳಿಗೆ ಕೈ ಹಾಕುವಿರಿ. ಗೃಹ ನಿರ್ಮಾಣ ಕಾರ್ಯಗಳನ್ನು ಆರಂಭಿಸಿದರೂ ಅಡೆತಡೆಗಳು ಎದುರಾದೀತು. ನೆರೆಹೊರೆಯವರೊಂದಿಗೆ ವ್ಯವಹರಿಸುವಾಗ ಎಚ್ಚರ.

ಕರ್ಕಟಕ: ವ್ಯವಹಾರ ಕ್ಷೇತ್ರದಲ್ಲಿ ಕಾರ್ಯ ಸಾಧನೆಗೆ ಸಣ್ಣ ಪುಟ್ಟ ವಿಘ್ನಗಳು ಎದುರಾದೀತು. ಅದನ್ನೆಲ್ಲಾ ಎದುರಿಸಿ ಮುಂದುವರಿಯಲು ಕಲಿಯಬೇಕು. ಪತಿ-ಪತ್ನಿಯರೊಳಿಗೆ ಸಾಮರಸ್ಯದ ಕೊರತೆಯುಂಟಾದೀತು. ಕಿರು ಸಂಚಾರ ಯೋಗವಿದೆ.

ಸಿಂಹ: ಅವಿವಾಹಿತರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಗೃಹ ನಿರ್ಮಾಣ ವ್ಯವಹಾರಗಳಿಗೆ ಚಾಲನೆ ನೀಡುವಿರಿ. ಕೋರ್ಟು ಕಚೇರಿ ವ್ಯವಹಾರಗಳಿಗೆ ಓಡಾಟ ನಡೆಸಬೇಕಾಗುತ್ತದೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ಸದ್ವಿನಿಯೋಗ ಮಾಡಿಕೊಳ್ಳಿ.

 
ಕನ್ಯಾ: ಅಧೀನ ನೌಕರರಿಂದ ಕಿರಿ ಕಿರಿಯಾಗಬಹುದು. ಸರಕಾರಿ ಕೆಲಸಗಳಲ್ಲಿ ಸತತ ಓಡಾಟ ನಡೆಸಬೇಕಾಗುತ್ತದೆ. ಶತ್ರುಬಾಧೆ ಅಧಿಕವಾಗಲಿದೆ. ಮಾನಸಿಕವಾಗಿ ನೆಮ್ಮದಿಗೆ ಭಂಗವಾದೀತು. ಕುಲದೇವರ ನಂಬಿ ನಡೆಯಿರಿ. ಸಮಯವೇ ಎಲ್ಲದಕ್ಕೂ ಪರಿಹಾರ ನೀಡಲಿದೆ.

ತುಲಾ: ಮನಸ್ಸಿನಲ್ಲಿ ಅಂದುಕೊಂಡ ಕೆಲಸಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸುವಿರಿ. ಸಂಗಾತಿಯ ಸಹಕಾರ ಸಿಗಲಿದೆ. ದೇಹಾರೋಗ್ಯದ ಬಗ್ಗೆ ಎಚ್ಚರಿಕೆ ವಹಿಸಿ. ದೇವತಾ ಕೆಲಸಗಳಿಗೆ ಧನವನಿಯೋಗ ಮಾಡಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಮುನ್ನಡೆ.

ವೃಶ್ಚಿಕ: ಪ್ರತಿಕೂಲ ಸಂದರ್ಭಗಳನ್ನು ಎದುರಿಸಲು ಸಿದ್ಧರಾಗಿ. ಉದ್ಯೋಗ ಕ್ಷೇತ್ರದಲ್ಲಿ ಯಾವುದೇ ಕಾರಣಕ್ಕೂ ಸಂಯಮ ಕಳೆದುಕೊಳ್ಳಬೇಡಿ. ಸಣ್ಣ ಪುಟ್ಟ ವಿಚಾರಗಳಲ್ಲಿ ಭಿನ್ನಾಭಿಪ್ರಾಯಗಳು ಮೂಡಿಬರಲಿವೆ. ಸಾಂಸಾರಿಕವಾಗಿ ಅಭಿವೃದ್ಧಿ ಕಂಡುಬರಲಿದೆ.

ಧನು: ಕಾರ್ಯನಿಮಿತ್ತ ಅಧಿಕ ಓಡಾಟ ನಡೆಸಬೇಕಾಗುತ್ತದೆ. ಶತ್ರುಬಾಧೆ ಕಂಡುಬರಲಿದೆ. ಅಂದುಕೊಂಡ ಕೆಲಸಗಳಿಗೆ ತೊಂದರೆಯಾಗಬಹುದು. ದುಡುಕಿನ ನಿರ್ಧಾರ ತೆಗೆದುಕೊಳ್ಳಬೇಡಿ. ಆರ್ಥಿಕವಾಗಿ ಆದಾಯಕ್ಕೆ ಕೊರತೆಯಿರದು. ಆದರೆ ನೆಮ್ಮದಿಗಾಗಿ ಹುಡುಕಾಡಬೇಕಾದೀತು.

ಮಕರ: ನೀವು ಎಷ್ಟೇ ಪ್ರಯತ್ನಪಟ್ಟರೂ ಎಲ್ಲವೂ ದೈವೇಚ್ಛೆಯಂತೇ ನಡೆಯುವುದು ಎಂಬುದನ್ನು ಅರ್ಥ ಮಾಡಿಕೊ‍ಳ್ಳಿ. ಯಾವುದೇ ಕೆಲಸ ಮಾಡುವ ಮೊದಲು ಮನೆಯವರ ಅಭಿಪ್ರಾಯಕ್ಕೆ ಬೆಲೆಕೊಡಿ. ಮನಸ್ಸಿನಲ್ಲಿ ಎಷ್ಟೇ ಬೇಸರವಿದ್ದರೂ ನಗು ನಗುತ್ತಾ ಕೆಲಸದಲ್ಲಿ ತೊಡಗಿಸಿಕೊಳ್ಳಬೇಕಾಗುತ್ತದೆ.

ಕುಂಭ: ಮಕ್ಕಳ ವಿಚಾರದಲ್ಲಿ ಬೇಸರ, ಚಿಂತೆ ಕಾಡಲಿದೆ. ಸರಕಾರಿ ಕೆಲಸಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ಹಿತಶತ್ರುಗಳಿಂದಾಗಿ ತೊಂದರೆಗೆ ಸಿಲುಕಿಕೊಳ್ಳುವಿರಿ. ನೂತನ ದಂಪತಿಗಳಿಗೆ ಸಂತಾನ ಫಲವಿದೆ. ಅಧಿಕ ಓಡಾಟದಿಂದ ದೇಹಾಯಾಸವಾಗಬಹುದು.

ಮೀನ: ಗೃಹ ಸಂಬಂಧೀ ಕೆಲಸಗಳಿಗೆ ಓಡಾಟ ನಡೆಸಬೇಕಾಗುತ್ತದೆ. ಆರ್ಥಿಕವಾಗಿ ಅಧಿಕ ಖರ್ಚು ವೆಚ್ಚಗಳು ಕಂಡುಬರಲಿವೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ನಿರುತ್ಸಾಹ ಕಂಡುಬರಬಹುದು. ಮಹಿಳಾ ಉದ್ಯೋಗಿಗಳಿಗೆ ಶುಭ ಫಲವಿದೆ. ಚಿಂತಿತ ಕೆಲಸಗಳು ಪೂರ್ತಿಯಾಗಲಿವೆ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮನೆಯ ಆವರಣದಲ್ಲಿ ಶಮಿ ವೃಕ್ಷವಿದ್ದರೆ ಈ ಎಲ್ಲಾ ಫಲ ನಿಮ್ಮದಾಗಲಿದೆ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments