Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಸೋಮವಾರ, 16 ಡಿಸೆಂಬರ್ 2019 (09:17 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಕೌಟುಂಬಿಕ ಭಿನ್ನಾಭಿಪ್ರಾಯಗಳನ್ನು ದೂರ ಮಾಡಲು ಮೌನವಾಗಿರುವುದೇ ಲೇಸು. ಅನಗತ್ಯ ವಿಚಾರಗಳ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ. ಮಕ್ಕಳ ವಿಚಾರದಲ್ಲಿ ಹೆಚ್ಚಿನ ಗಮನಹರಿಸಬೇಕು. ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆಯಿರಲಿದೆ. ಚಿಂತೆ ಬೇಡ.

ವೃಷಭ: ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ಹಿರಿಯರ ಆರೋಗ್ಯದಲ್ಲಿ ಚೇತರಿಕೆ ಕಂಡುಬರುವುದು. ಹಿತಶತ್ರುಗಳ ಉದ್ದೇಶ ಈಡೇರದು. ವ್ಯವಹಾರದಲ್ಲಿ ಲಾಭ ಗಳಿಸುವಿರಿ. ಇಂಜಿನಿಯರಿಂಗ್ ವೃತ್ತಿಯವರಿಗೆ ಉದ್ಯೋಗದಲ್ಲಿ ಮುನ್ನಡೆ ಸಿಗಲಿದೆ.

ಮಿಥುನ: ಪಾಲು ಬಂಡವಾಳ ಹೂಡಿಕೆ ವ್ಯವಹಾರದಲ್ಲಿ ಲಾಭ ಗಳಿಸುವಿರಿ. ಇಷ್ಟಮಿತ್ರರ ಭೇಟಿ, ಭೋಜನ ಮನಸ್ಸಿಗೆ ಖುಷಿಕೊಡುವುದು. ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ನಡೆಸುವಿರಿ. ಆರ್ಥಿಕವಾಗಿ ಖರ್ಚು ವೆಚ್ಚದ ಬಗ್ಗೆ ನಿಗಾ ಇರಲಿ.

ಕರ್ಕಟಕ: ಸಂಸಾರದಲ್ಲಿ ಮೂರನೇ ವ್ಯಕ್ತಿ ಮೂಗು ತೂರಿಸಲು ಅವಕಾಶ ಕೊಡಬೇಡಿ. ಸಂಗಾತಿಯೊಂದಿಗೆ ಹೊಂದಾಣಿಕೆಯಿಂದ ನಡೆದುಕೊಳ್ಳಬೇಕಾಗುತ್ತದೆ. ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಕ್ರಿಯಾಶೀಲತೆ ಪ್ರಕಟಿಸಲು ಅವಕಾಶ ದೊರೆಯಲಿದೆ.

ಸಿಂಹ: ಸಾಮಾಜಿಕವಾಗಿ ಉತ್ತಮ ಸ್ಥಾನ ಮಾನ ಕಂಡುಕೊಳ್ಳುವಿರಿ. ನಿಮ್ಮ ಕೆಲಸಗಳು ಜನಮನ್ನಣೆಗೆ ಪಾತ್ರವಾಗಲಿದೆ. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆ ಬರುವುದು. ಮಾನಸಿಕವಾಗಿ ಸಂತಸ ಅನುಭವಿಸುವಿರಿ. ದೇವತಾ ಪ್ರಾರ್ಥನೆ ಮರೆಯದಿರಿ.

ಕನ್ಯಾ: ಕೋರ್ಟು ಕಚೇರಿ ವ್ಯವಹಾರಗಳಿಗೆ ಓಡಾಟ ನಡೆಸಬೇಕಾಗುತ್ತದೆ. ದೈಹಿಕ ಆರೋಗ್ಯದ ಬಗ್ಗೆ ಕಾಳಜಿವಹಿಸಿ. ಸಂಗಾತಿಯ ಮನದಾಸೆ ಪೂರೈಸಬೇಕಾಗುತ್ತದೆ. ಧಾರ್ಮಿಕವಾಗಿ ಭಕ್ತಿ ಭಾವ ಹೆಚ್ಚುವುದು. ವಿದ್ಯಾರ್ಥಿಗಳಿಗೆ ಮುನ್ನಡೆಯಿರಲಿದೆ.

ತುಲಾ: ವಾಹನ, ಭೂಮಿ ಖರೀದಿ ಯೋಗವಿದೆ. ಉದ್ಯೋಗ ಕ್ಷೇತ್ರದಲ್ಲಿ ಬರುವ ಸಮಸ್ಯೆಗಳಿಂದಾಗಿ ಉದ್ಯೋಗ ಬದಲಾವಣೆಗೆ ಚಿಂತನೆ ಮಾಡುವಿರಿ. ಸಂಗಾತಿಯ ಸಲಹೆಗೆ ಕಿವಿಗೊಡಿ. ಉದರ ಸಂಬಂಧೀ ಆರೋಗ್ಯ ಸಮಸ್ಯೆ ಬಗ್ಗೆ ಕಾಳಜಿವಹಿಸಿ.

ವೃಶ್ಚಿಕ: ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕಾಗಿ ದೂರ ಪ್ರಯಾಣ ಮಾಡಬೇಕಾಗಬಹುದು. ಹೊಸ ಮಿತ್ರರ ಭೇಟಿಯಾಗುವಿರಿ. ಹಿರಿಯರಿಗೆ ಧಾರ್ಮಿಕ ಕ್ಷೇತ್ರಗಳ ಸಂದರ್ಶನ ಯೋಗವಿದೆ. ಗೃಹೋಪಯೋಗಿ ವಸ್ತುಗಳಿಗೆ ಧನವ್ಯಯ ಮಾಡುವಿರಿ.

ಧನು: ಸಹೋದರರಿಂದ ಕಿರಿ ಕಿರಿ ಅನುಭವಿಸಬೇಕಾದೀತು. ಆಸ್ತಿ ವಿಚಾರದಲ್ಲಿ ವಾಗ್ವಾದಗಳಾಗದಂತೆ ಎಚ್ಚರವಹಿಸಿ. ಸರಕಾರಿ ಉದ್ಯೋಗಿಗಳಿಗೆ ಉದ್ಯೋಗದಲ್ಲಿ ಮುನ್ನಡೆಯ ಲಾಭವಾಗಲಿದೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ. ತಾಳ್ಮೆಯಿಂದಿರಿ.

ಮಕರ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಕೆಲಸಗಳಿಗೆ ಮೇಲಧಿಕಾರಿಗಳಿಂದ ಪ್ರಶಂಸೆ ವ್ಯಕ್ತವಾಗಲಿದೆ. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯುವಿರಿ. ಪ್ರೇಮಿಗಳ ಗುಟ್ಟು ಬಹಿರಂಗವಾಗಲಿದೆ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು.

ಕುಂಭ: ಮಾನಸಿಕವಾಗಿ ಇಷ್ಟು ದಿನ ಕಾಡುತ್ತಿದ್ದ ಚಿಂತೆಗೆ ಒಂದು ರೀತಿಯಲ್ಲಿ ಪರಿಹಾರ ಕಂಡುಕೊಳ್ಳುವಿರಿ. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ದೊರಕುವುದು. ಆದರೆ ಆರ್ಥಿಕವಾಗಿ ಅಧಿಕ ಹಣಕಾಸಿನ ಖರ್ಚು ವೆಚ್ಚವಾಗಲಿದೆ. ಕುಲದೇವರ ನಂಬಿ ನಡೆಯಿರಿ.

ಮೀನ: ಕೌಟುಂಬಿಕ ವಿಚಾರಗಳಲ್ಲಿ ನಿರ್ಧಾರ ತೆಗೆದುಕೊಳ್ಳುವ ಮೊದಲು ಸಂಗಾತಿಯ ಅಭಿಪ್ರಾಯಕ್ಕೆ ಬೆಲೆ ಕೊಡಿ. ಮಹಿಳೆಯರಿಗೆ ಚಿನ್ನಾಭರಣ ಖರೀದಿಯಿಂದ ಲಾಭವಾಗಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ. ಕಿರು ಸಂಚಾರ ಕೈಗೊ‍ಳ್ಳುವಿರಿ.

Share this Story:

Follow Webdunia kannada

ಮುಂದಿನ ಸುದ್ದಿ

ಮಾಟಮಂತ್ರ ಪ್ರಯೋಗ ನಿಮ್ಮ ಮೇಲೆ ಪ್ರಭಾವ ಬೀರಬಾರದಂತಿದ್ದರೆ ಇದನ್ನು ಧರಿಸಿ