Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಬುಧವಾರ, 18 ಡಿಸೆಂಬರ್ 2019 (08:43 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಎಲ್ಲಾ ಇದ್ದೂ ಏನೋ ಕಳೆದುಕೊಂಡ ರೀತಿ ಮಾನಸಿಕವಾಗಿ ಋಣಾತ್ಮಕ ಚಿಂತನೆಗಳು ಕಾಡುವುದು. ಸಂಗಾತಿಯೊಂದಿಗೆ ಹೊಂದಾಣಿಕೆಯಿಂದ ನಡೆದುಕೊಳ್ಳಬೇಕಾಗುತ್ತದೆ. ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಮುನ್ನಡೆಗೆ ಯಾರೂ ಬ್ರೇಕ್ ಹಾಕಲಾಗದು.

ವೃಷಭ: ಖರ್ಚು ಮಾಡಲು ಹಲವು ಕಾರಣಗಳು ಎದುರಾಗಲಿವೆ. ಹಿರಿಯರ ಜವಾಬ್ಧಾರಿ ನಿಮ್ಮ ಹೆಗಲಿಗೇರಲಿವೆ. ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಉದ್ಯೋಗ ಕ್ಷೇತ್ರದಲ್ಲಿ ಕ್ರಿಯಾಶೀಲತೆ ಪ್ರಕಟಿಸಲು ಅವಕಾಶ ದೊರಕಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ.

ಮಿಥುನ: ಯಂತ್ರಗಳ ಕೆಲಸ ಮಾಡುವವರಿಗೆ ಉದ್ಯೋಗದಲ್ಲಿ ಮುನ್ನಡೆ ದೊರೆಯಲಿದೆ. ಕೆಳಹಂತದ ನೌಕರರಿಗೆ ಬಡ್ತಿ ಯೋಗವಿದೆ. ಆದರೆ ಮಾನಸಿಕ ನೆಮ್ಮದಿಗೆ ಭಂಗ ತರುವ ಘಟನೆಗಳು ನಡೆದೀತು. ವ್ಯವಹಾರದಲ್ಲಿ ಅಭಿವೃದ್ಧಿ ಕಂಡುಬರಲಿದೆ.

ಕರ್ಕಟಕ: ಕೋಪದ ಕೈಗೆ ಬುದ್ಧಿ ಕೊಟ್ಟು, ಆತುರದ ನಿರ್ಧಾರ ತೆಗೆದುಕೊಂಡರೆ ನಷ್ಟ ನಿಮಗೇ ಎನ್ನುವುದನ್ನು ಅರಿತುಕೊಳ್ಳಿ. ಉದ್ಯೋಗ ಕ್ಷೇತ್ರದಲ್ಲಿ ಹಿರಿಯ ಅಧಿಕಾರಿಗಳಿಂದ ಮನಸ್ಸಿಗೆ ಕಿರಿ ಕಿರಿಯಾದೀತು. ತಾಳ್ಮೆಯಿಂದ ವರ್ತಿಸಿ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ.

ಸಿಂಹ: ಅವಿವಾಹಿತರಿಗೆ ಯೋಗ್ಯ ವಿವಾಹ ಪ್ರಸ್ತಾಪಗಳು ಬರಲಿವೆ. ನೂತನ ಕಾರ್ಯಗಳಿಗೆ ಕೈ ಹಾಕಲು ಅವಸರ ಬೇಡ. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗ ಸಿಗಲಿದೆ. ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರುವುದು. ಕಿರು ಸಂಚಾರ ಮಾಡಬೇಕಾಗಬಹುದು.

ಕನ್ಯಾ: ಕಷ್ಟದ ಸಮಯದಲ್ಲಿ ಮಿತ್ರರ ಸಹಕಾರ ದೊರೆಯುತ್ತದೆ. ಕೋರ್ಟು ಕಚೇರಿ ಕಲಾಪಗಳಿಗೆ ಸಿದ್ಧತೆ ನಡೆಸುವಿರಿ. ಸಾಂಸಾರಿಕವಾಗಿ ಇದುವರೆಗೆ ಇದ್ದ ಕಷ್ಟಗಳು ನಿಧಾನವಾಗಿ ದೂರವಾಗಲಿದೆ. ಖರ್ಚು ವೆಚ್ಚಗಳು ಅಧಿಕವಾದೀತು. ದೂರ ಪ್ರಯಾಣಕ್ಕೆ ಸಿದ್ಧತೆ ನಡೆಸುವಿರಿ.

ತುಲಾ: ನೀವು ನಿರೀಕ್ಷಿಸಿದ ರೀತಿಯಲ್ಲಿ ಕಾರ್ಯಗಳು ನೆರವೇರಲಿವೆ. ಆದಾಯದಲ್ಲಿ ಹೆಚ್ಚಳವಾಗಲಿದೆ. ಆದರೆ ದುಂದು ವೆಚ್ಚ ಮಾಡಬೇಡಿ. ಕೆಟ್ಟ ಸ್ನೇಹ ಸಂಗದಿಂದ ದೂರವಿರುವುದೇ ಉತ್ತಮ. ಹಿರಿಯರ ತೀರ್ಥ ಯಾತ್ರೆಗೆ ಏರ್ಪಾಟು ಮಾಡುವಿರಿ. ದೇವತಾ ಪ್ರಾರ್ಥನೆ ಮಾಡಿ.

ವೃಶ್ಚಿಕ: ಉದ್ಯೋಗ ಕ್ಷೇತ್ರದಲ್ಲಿ ಎಚ್ಚರಿಕೆಯಿಂದ ಕಾರ್ಯನಿರ್ವಹಿಸದಿದ್ದರೆ ಬೇಡದ ತೊಂದರೆಗಳನ್ನು ಮೈಮೇಲೆಳೆದುಕೊಳ್ಳಬೇಕಾಗಬಹುದು. ದೇವಾಲಯ ಸಂದರ್ಶನ ಯೋಗವಿದೆ. ಹಿತಶತ್ರುಗಳ ಕಾಟವಿರಲಿದೆ. ಎಚ್ಚರಿಕೆಯಿಂದಿರಿ.

ಧನು: ಆರ್ಥಿಕವಾಗಿ ನಾನಾ ರೀತಿಯ ಖರ್ಚುಗಳು ಕಂಡುಬರುವುದು. ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಮುನ್ನಡೆಯಿರಲಿದೆ. ಕೌಟುಂಬಿಕ ಜವಾಬ್ಧಾರಿಗಳು ಹೆಚ್ಚಲಿವೆ. ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ನಡೆಸುವಿರಿ. ದೂರ ಸಂಚಾರ ಮಾಡುವಾಗ ಎಚ್ಚರವಿರಲಿ.

ಮಕರ: ವಿರೋಧಿಗಳನ್ನು ಸಮರ್ಥವಾಗಿ ಎದುರಿಸುವ ಆತ್ಮವಿಶ್ವಾಸ ಬರಲಿದೆ. ಸರಕಾರಿ ಉದ್ಯೋಗಿಗಳಿಗೆ ಉದ್ಯೋಗದಲ್ಲಿ ಬಡ್ತಿ ಯೋಗವಿದೆ. ಮಕ್ಕಳ ಭವಿಷ್ಯದ ಬಗ್ಗೆ ಯೋಚನೆಯಾಗಬಹುದು. ಹೊಸ ವ್ಯಾಪಾರ, ವ್ಯವಹಾರಗಳಿಗೆ ಕೈ ಹಾಕಲು ಇದು ಸುಸಮಯ.

ಕುಂಭ: ವಿದ್ಯಾರ್ಥಿ ವೃಂದದವರು ಶಿಕ್ಷಕರಿಂದ ಪ್ರಶಂಸೆಗೊಳಗಾಗುವರು. ಕಾರ್ಮಿಕ ವರ್ಗದವರಿಗೆ ವೇತನ ಹೆಚ್ಚಳ ಸಾಧ್ಯತೆಯಿದೆ. ಮಹಿಳೆಯರಿಗೆ ಚಿನ್ನಾಭರಣ ಖರೀದಿಗಾಗಿ ಧನವ್ಯಯಮಾಡಬೇಕಾಗುತ್ತದೆ. ಕುಟುಂಬದಲ್ಲಿ ನೆಮ್ಮದಿಯ ವಾತಾವರಣವಿರಲಿದೆ.

ಮೀನ: ಬೆಟ್ಟದಂತೆ ಬಂದ ಕಷ್ಟಗಳು ಮಂಜಿನಂತೆ ಕರಗಿಹೋದ ಅನುಭವವಾಗಲಿದೆ. ಸಂಗಾತಿಯೊಂದಿಗಿನ ಭಿನ್ನಾಭಿಪ್ರಾಯಗಳು ದೂರವಾಗಲಿದೆ. ಅನವಶ್ಯಕ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕಿ. ದೇಹಾರೋಗ್ಯದ ಬಗ್ಗೆ ಕಾಳಜಿವಹಿಸಿ.

Share this Story:

Follow Webdunia kannada

ಮುಂದಿನ ಸುದ್ದಿ

ಸಂಜೆ ದೀಪ ಹಚ್ಚಿದ ಮೇಲೆ ಮಹಿಳೆಯರು ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ