Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಗುರುವಾರ, 19 ಡಿಸೆಂಬರ್ 2019 (09:21 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ದಾಯಾದಿಗಳಿಂದ ಆಸ್ತಿ ಸಂಬಂಧವಾಗಿ ತೊಂದರೆಗಳು ಎದುರಾಗಬಹುದು. ಹಿರಿಯರ ಮಧ‍್ಯಸ್ಥಿಕೆಗೆ ಬೆಲೆ ಕೊಡಿ. ದೇಹಾರೋಗ್ಯದಲ್ಲಿ ಹೊಸ ಸಮಸ್ಯೆಗಳು ಕಂಡುಬಂದು ಚಿಂತೆಗೆ ಕಾರಣವಾಗಬಹುದು. ಆರ್ಥಿಕವಾಗಿ ಆದಾಯದ ಸದ್ಭಳಕೆ ಮಾಡಿ.

ವೃಷಭ: ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನಗಳು ವೃದ್ಧಿಯಾಗಲಿವೆ. ಮಹಿಳೆಯರಿಂದ ಅಪವಾದದ ಭೀತಿಯಿರಲಿದೆ. ಅಪರಿಚಿತರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ಕುಟುಂಬ ಸದಸ್ಯರ ಆರೋಗ್ಯದ ಬಗ್ಗೆ ಕಾಳಜಿಯಿರಲಿ. ದೇವತಾ ಪ್ರಾರ್ಥನೆ ಮಾಡಿ.

ಮಿಥುನ: ಮಾತಿನ ಮೇಲೆ ನಿಗಾ ಇರಲಿ. ದುಡುಕಿ ಮಾತನಾಡಿ ಪ್ರೀತಿ ಪಾತ್ರ ಮನಸ್ಸು ನೋಯಿಸದಿರಿ. ಆರ್ಥಿಕವಾಗಿ ಹಂತ ಹಂತವಾಗಿ ಸುಧಾರಣೆ ಕಂಡುಕೊಳ್ಳುವಿರಿ. ಋಣ ಸಂದಾಯವಾಗಲಿದೆ. ಅವಿವಾಹಿತರಿಗೆ ವಿವಾಹ ಪ್ರಸ್ತಾಪಗಳು ಬರಲಿವೆ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

ಕರ್ಕಟಕ: ನಿರುದ್ಯೋಗಿಗಳಿಗೆ ಸೂಕ್ತ ಉದ್ಯೋಗ ಸಿಗಲಿದೆ. ಕಷ್ಟದ ಸಮಯದಲ್ಲಿ ಮಿತ್ರರಿಂದ ಸಹಕಾರ ಸಿಗಲಿದೆ. ಮನೆ/ವಾಸಸ್ಥಳ ಬದಲಾವಣೆ ಮಾಡುವಿರಿ. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿವಹಿಸಿ. ವಿದ್ಯಾರ್ಥಿಗಳಿಗೆ ಮುನ್ನಡೆಯಿರಲಿದೆ.

ಸಿಂಹ: ಆದಷ್ಟು ತಾಳ್ಮೆಯಿಂದಿದ್ದಷ್ಟೂ ನಿಮ್ಮ ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆ ಕಾಣಬಹುದು. ಸಂಗಾತಿಯ ಸಹಕಾರ ಸಿಗಲಿದೆ. ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರಲಿದೆ. ಸರಕಾರಿ ಕೆಲಸಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಕನ್ಯಾ: ಕೆಲಸ ಕಾರ್ಯಗಳಲ್ಲಿ ಒಂದು ರೀತಿಯ ನಿರುತ್ಸಾಹ ಕಂಡುಬರಬಹುದು. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮೇಲುಗೈ ಸಾಧಿಸುವಿರಿ. ನಿಮ್ಮ ಪ್ರಯತ್ನ ಬಲವನ್ನು ಕೈ ಬಿಡಬೇಡಿ. ಸಂಗಾತಿಯಿಂದ ಸುಖ ಸಂತೋಷ ಸಿಗಲಿದೆ. ಪ್ರೀತಿ ಪಾತ್ರರ ಕಷ್ಟಕ್ಕೆ ನೆರವಾಗುವಿರಿ.

ತುಲಾ: ಬಂದ ಅವಕಾಶಗಳನ್ನು ಸರಿಯಾದ ರೀತಿಯಲ್ಲಿ ಬಳಸಿಕೊಂಡರೆ ಅಂದುಕೊಂಡಿದ್ದನ್ನು ಸಾಧಿಸುವಿರಿ. ಮೇಲಧಿಕಾರಿಗಳಲ್ಲಿ ಸಂಯಮದಿಂದ ವರ್ತಿಸಿ. ಆರ್ಥಿಕವಾಗಿ ಖರ್ಚು ವೆಚ್ಚಗಳಾಗಲಿದೆ. ಕೌಟುಂಬಿಕ ಜವಾಬ್ಧಾರಿಗಳಿಗೆ ಹೆಗಲುಕೊಡಬೇಕಾಗುತ್ತದೆ.

ವೃಶ್ಚಿಕ: ವ್ಯವಹಾರದಲ್ಲಿ ಯಾವುದೇ ಕಾರಣಕ್ಕೂ ನಿಮ್ಮ ಗಮನ ಕಳೆದುಕೊಳ್ಳಬೇಡಿ. ಉದಾಸೀನ ಮಾಡಿದರೆ ಅಪಾಯ ತಪ್ಪಿದ್ದಲ್ಲ. ಆರೋಗ್ಯ ಸಮಸ್ಯೆಗಳು ಕಂಡುಬಂದೀತು. ಧಾರ್ಮಿಕವಾಗಿ ಭಕ್ತಿ ಭಾವ ಹೆಚ್ಚುವುದು. ಚಿಂತಿತ ಕೆಲಸಗಳು ಅಂದುಕೊಂಡಂತೇ ನಡೆಯುವುದು.

ಧನು: ನಿರುದ್ಯೋಗಿಗಳು ಪಾಲಿಗೆ ಬಂದ ಅವಕಾಶವನ್ನು ಬಳಸಿಕೊಳ್ಳಬೇಕು. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗ ನಿಮಿತ್ತ ವಿದೇಶ ಯಾನದ ಭಾಗ್ಯವಿದೆ. ಮಕ್ಕಳಿಂದ ಸಂತಸದ ವಾರ್ತೆ ನಿರೀಕ್ಷಿಸಬಹುದು. ಸಾಮಾಜಿಕ ಕೆಲಸಗಳಲ್ಲಿ ತೊಡಗಿಸಿಕೊಳ್ಳುವಿರಿ.

ಮಕರ: ವಿವಿಧ ಮೂಲಗಳಿಂದ ಧನ ಪ್ರಾಪ್ತಿ ಯೋಗವಿದೆ. ಆದರೆ ಅದನ್ನು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಬೇಕು. ದಾಂಪತ್ಯ ಜೀವನದಲ್ಲಿ ಸುಖ ಪ್ರಾಪ್ತಿಯಾಗಬಹುದು. ನೂತನ ದಂಪತಿಗಳಿಗೆ ಮಧುಚಂದ್ರ ಭಾಗ್ಯವಿದೆ. ಕೌಟುಂಬಿಕವಾಗಿ ನೆಮ್ಮದಿಯಿರಲಿದೆ.

ಕುಂಭ: ಕೌಟುಂಬಿಕವಾಗಿ ಪತ್ನಿ-ಮಕ್ಕಳೊಂದಿಗೆ ಸಂತಸದ ಕ್ಷಣ ಕಳೆಯುವಿರಿ. ಸರಕಾರಿ ಕೆಲಸದಲ್ಲಿ ಮುನ್ನಡೆ ಸಿಗಲಿದೆ. ಹಿರಿಯರಿಗೆ ಪುಣ್ಯ ಕ್ಷೇತ್ರದ ಸಂದರ್ಶನ ಯೋಗವಿದೆ. ದೇಹಾರೋಗ್ಯದ ಬಗ್ಗೆ ಕಾಳಜಿವಹಿಸಿ. ಮಹಿಳೆಯರಿಗೆ ಸಂತಸದ ದಿನವಾಗಲಿದೆ.

ಮೀನ: ಕೆಲಸ ಕಾರ್ಯಗಳಲ್ಲಿ ನಿರುತ್ಸಾಹ ಕಂಡುಬರಲಿದೆ. ಕೌಟುಂಬಿಕ ವಿಚಾರದಲ್ಲಿ ಕಲಹವಾಗದಂತೆ ಎಚ್ಚರವಹಿಸಿ. ನೆರೆಹೊರೆಯವರ ಮಾತಿಗೆ ಕಿವಿಗೊಡಬೇಕಾಗಿಲ್ಲ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ ಕಂಡುಬರುವುದು. ಆದಾಯಕ್ಕೆ ಹೆಚ್ಚಳಕ್ಕೆ ದಾರಿ ಹುಡುಕುವಿರಿ.

Share this Story:

Follow Webdunia kannada

ಮುಂದಿನ ಸುದ್ದಿ

ನಿಮ್ಮ ಕೋರಿಕೆಗಳು ಬೇಗ ಈಡೇರಬೇಕೆಂದರೆ ಗೋಮಾತೆಯ ವಿಗ್ರಹ ಇಟ್ಟು ಹೀಗೆ ಮಾಡಿ