Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶುಕ್ರವಾರ, 20 ಡಿಸೆಂಬರ್ 2019 (08:24 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳಿಗೆ ಸಿದ್ಧರಾಗುವಿರಿ. ಮುಗಿಯುತು ಎಂದುಕೊಂಡಿದ್ದ ಸಮಸ್ಯೆಗಳು ಮತ್ತೆ ಎದುರಾಗಲಿವೆ. ಹಾಗಿದ್ದರೂ ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸುವಿರಿ. ಆರ್ಥಿಕವಾಗಿ ಗೃಹೋಪಯೋಗಿ ವಸ್ತುಗಳಿಗೆ ಖರ್ಚು ವೆಚ್ಚವಾಗಲಿದೆ.

ವೃಷಭ: ಗೃಹ ಸಂಬಂಧೀ ಕಾರ್ಯಗಳಿಗೆ ಓಡಾಟ ನಡೆಸಬೇಕಾಗುತ್ತದೆ. ಮಕ್ಕಳಿಂದ ಸಂತಸದ ವಾರ್ತೆ ನಿರೀಕ್ಷಿಸಬಹುದು. ಸರಕಾರಿ ಉದ್ಯೋಗಿಗಳಿಗೆ ಸಂಕಷ್ಟ ಎದುರಾಗಲಿದೆ. ವ್ಯಾಪಾರ,ವ್ಯವಹಾರದಲ್ಲಿ ಕೊಂಚ ಹಿನ್ನಡೆಯಾದೀತು. ಆದರೂ ತಾಳ್ಮೆ ಕಳೆದುಕೊಳ್ಳಬೇಡಿ.

ಮಿಥುನ: ಪತ್ನಿಯ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ಅಲೆದಾಡಬೇಕಾಗಬಹುದು. ಅಧಿಕ ಖರ್ಚು ವೆಚ್ಚಗಳು ಎದುರಾಗಲಿವೆ. ಆದರೆ ಸಕಾಲದಲ್ಲಿ ಮಿತ್ರರ ಸಹಕಾರ ದೊರೆಯಲಿದೆ. ಕಾರ್ಯನಿಮಿತ್ತ ದೂರ ಸಂಚಾರ ಮಾಡಬೇಕಾಗಬಹುದು.

ಕರ್ಕಟಕ: ಆಕಸ್ಮಿಕವಾಗಿ ಧನಲಾಭವಾಗಲಿದ್ದು, ಅಂದುಕೊಂಡ ಕೆಲಸ ಕಾರ್ಯಗಳನ್ನು ನೆರವೇರಿಸುವಿರಿ. ಹಿರಿಯರಿಂದ ಬಳವಳಿ ನಿರೀಕ್ಷಿಸಬಹುದು. ರಾಜಕೀಯ ರಂಗದಲ್ಲಿರುವವರಿಗೆ ಮುನ್ನಡೆಯಿರಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ.

ಸಿಂಹ: ಗೃಹ ನಿರ್ಮಾಣ, ಭೂಮಿ ಖರೀದಿ ಮುಂತಾದ ಕೆಲಸಗಳಿಗೆ ತೊಡಗಿಸಿಕೊಳ್ಳಲು ಇದು ಸಕಾಲ. ಧನಾಗಮನಕ್ಕೆ ಕೊರತೆಯಿರದು. ಆದರೆ ನಯವಂಚಕರ ಬಗ್ಗೆ ಎಚ್ಚರವಾಗಿರಿ. ಪುಣ್ಯ ಕ್ಷೇತ್ರಗಳಿಗೆ ಭೇಟಿ ನೀಡುವಿರಿ. ಆಸ್ತಿ ವಿವಾದಗಳು ಬಗೆಹರಿಯಲಿವೆ.

ಕನ್ಯಾ: ಹಲವು ಆತಂಕಗಳ ನಡುವೆಯೂ ಅಂದುಕೊಂಡ ಕೆಲಸಗಳು ಪೂರ್ತಿಯಾದ ನೆಮ್ಮದಿ ಇರುವುದು. ನೆಂಟರಿಷ್ಟರಿಂದ ಚಾಡಿ ಮಾತು ಕೇಳಿಬಂದೀತು. ಆರ್ಥಿಕವಾಗಿ ಅಧಿಕ ಖರ್ಚು ವೆಚ್ಚವಾಗಬಹುದು. ಕುಲದೇವರ ಪ್ರಾರ್ಥನೆ ನಡೆಸುವುದು ಅಗತ್ಯ.

ತುಲಾ: ಹೊಸ ವ್ಯಾಪಾರ, ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳಲು ಇದು ಸಕಾಲ. ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ಇರುವುದು. ಸಂಗಾತಿಯೊಂದಿಗೆ ಸಂತಸದ ಕ್ಷಣ ಕಳೆಯುವಿರಿ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ವಿದ್ಯಾರ್ಥಿಗಳಿಗೆ ಮುನ್ನಡೆಯಿರಲಿದೆ.

ವೃಶ್ಚಿಕ: ಆರಂಭದಲ್ಲಿ ವಿಘ್ನಗಳು ಎದುರಾದರೂ ಅಂತಿಮವಾಗಿ ನೀವು ಅಂದುಕೊಂಡ ಕಾರ್ಯ ನೆರವೇರಿಸುವಿರಿ. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಪ್ರಶಂಸೆಗೊಳಗಾಗುವಿರಿ. ಹಿರಿಯರಿಂದ ಸಕಾಲದಲ್ಲಿ ಬರುವ ಸಲಹೆಗಳನ್ನು ಸ್ವೀಕರಿಸಿ. ದಿನದಂತ್ಯಕ್ಕೆ ಶುಭವಾಗಲಿದೆ.

ಧನು: ನಾನಾ ರೀತಿಯಲ್ಲಿ ಖರ್ಚು ವೆಚ್ಚಗಳಾಗಲಿವೆ. ಆದರೆ ಧನಾಗಮನಕ್ಕೆ ಕೊರತೆಯಿರದು. ಮಹಿಳೆಯರ ಪ್ರೇಮ ಪ್ರಕರಣಕ್ಕೆ ಸುಖಾಂತ್ಯ ಸಿಗುವುದು. ನಿರುದ್ಯೋಗಿಗಳಿಗೆ ಸೂಕ್ತ ಉದ್ಯೋಗ ಸಿಗಲಿದೆ. ಬಂಧು ಮಿತ್ರರ ಸಹಕಾರ ಸಿಗುವುದು. ಆರೋಗ್ಯದಲ್ಲಿ ಸುಧಾರಣೆಯಿರಲಿದೆ.

ಮಕರ: ಕಾರ್ಯ ಸಾಧನೆಗಾಗಿ ಹೊಸ ಊರಿನ, ಸ್ಥಳದ ಕಡೆಗೆ ಯಾತ್ರೆ ಕೈಗೊಳ್ಳಬೇಕಾಗುತ್ತದೆ. ಮಾನಸಿಕವಾಗಿ ದೃಢ ಸಂಕಲ್ಪ ಮಾಡುವುದು ಅಗತ್ಯ. ಆರ್ಥಿಕವಾಗಿ ಹಣಕಾಸಿನ ಮುಗ್ಗಟ್ಟುಗಳು ತೋರಿಬಂದೀತು. ಅನಿರೀಕ್ಷಿತವಾಗಿ ಭೇಟಿಯಾಗುವ ಹಳೆಯ ಮಿತ್ರನಿಂದ ಸಮಸ್ಯೆಗೆ ಪರಿಹಾರ ಸಿಗುವುದು.

ಕುಂಭ: ಮಕ್ಕಳಿಂದ ಮನಸ್ಸಿಗೆ ನೆಮ್ಮದಿಯಿದ್ದರೂ ಸಂಗಾತಿಯ ಕಿರಿ ಕಿರಿ ತಪ್ಪದು. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ಅರ್ಧಕ್ಕೇ ನಿಂತ ಕೆಲಸಗಳಿಗೆ ಚಾಲನೆ ನೀಡುವಿರಿ. ನಾಲಿಗೆ ಚಪಲದಿಂದ ಆರೋಗ್ಯ ಸಮಸ್ಯೆಯಾದೀತು. ಎಚ್ಚರವಿರಲಿ.

ಮೀನ: ಅಧಿಕಾರಿ ವರ್ಗದವರಿಗೆ ಆದಾಯ ಪತ್ರಗಳ ಏರುಪೇರಿನಿಂದ ಸಂಕಷ್ಟ ಎದುರಿಸಬೇಕಾಗಬಹುದು. ಇಷ್ಟು ದಿನ ಬಚ್ಚಿಟ್ಟಿದ್ದ ರಹಸ್ಯ ಬಹಿರಂಗವಾಗಲಿದೆ. ವಿದ್ಯಾರ್ಥಿಗಳಿಗೆ ಏಕಾಗ್ರತೆಗೆ ತೊಂದರೆಯಾಗುವುದು. ದೇಹಾರೋಗ್ಯದ ಬಗ್ಗೆ ಕಾಳಜಿವಹಿಸಿ.

Share this Story:

Follow Webdunia kannada

ಮುಂದಿನ ಸುದ್ದಿ

ಲಕ್ಷ್ಮೀದೇವಿಯ ಈ ವಿಗ್ರಹವನ್ನು ಪೂಜಿಸಿದರೆ ನಿಮಗೆ ಆರ್ಥಿಕ ಸಮಸ್ಯೆ ಎಂದೂ ಕಾಡುವುದಿಲ್ಲ