Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶನಿವಾರ, 21 ಡಿಸೆಂಬರ್ 2019 (09:30 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ವೃತ್ತಿರಂಗದಲ್ಲಿ ನಿಮ್ಮ ಆತ್ಮವಿಶ್ವಾಸವೇ ಸಹಾಯಕ್ಕೆ ಬರಲಿದೆ. ಮಕ್ಕಳಿಂದ ಸಂತೋಷ ಸಿಗಲಿದೆ. ಅಲ್ಪ ಕಾಲದ ಸಂತೋಷಕ್ಕೆ ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಪ್ರಯತ್ನಬಲದಿಂದ ಯಶಸ್ಸು ಸಿಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಷಭ: ಕೆಲವೊಮ್ಮೆ ಕಾರ್ಯಕ್ಷೇತ್ರದಲ್ಲಿ ವಿಘ್ನಗಳು ಕಂಡುಬಂದರೂ ಅಂತಿಮ ಜಯ ನಿಮ್ಮದೇ ಆಗಲಿದೆ. ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ. ನಾನಾ ಮೂಲಗಳಿಂದ ಧನಾಗಮನವಾಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ಮಿಥುನ: ಮಕ್ಕಳಿಂದ ಒಳಿತಾಗುವುದು. ಶೈಕ್ಷಣಿಕ ರಂಗದಲ್ಲಿ ಕೆಲಸ ಮಾಡುವವರಿಗೆ ಉನ್ನತಿಯ ಯೋಗವಿದೆ. ಸಾಮಾಜಿಕವಾಗಿ ಸ್ಥಾನ ಮಾನ ಹೆಚ್ಚುವುದು. ಸಂಗಾತಿಯ ಸಹಕಾರದಿಂದ ಮುನ್ನಡೆ ಸಿಗಲಿದೆ. ಕಿರು ಸಂಚಾರ ಮಾಡುವ ಸಾಧ‍್ಯತೆಯಿದೆ.

ಕರ್ಕಟಕ: ಮನಸ್ಸಿನಲ್ಲಿ ಅಂದುಕೊಂಡ ಕೆಲಸಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸುವಿರಿ. ಕೌಟುಂಬಿಕವಾಗಿ ಅಭಿವೃದ್ಧಿ, ನೆಮ್ಮದಿ ಇರುವುದು. ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ನಡೆಸುವಿರಿ. ಗೃಹ ಸಂಬಂಧೀ ಕೆಲಸಗಳಿಗೆ ಓಡಾಟ ನಡೆಸಬೇಕಾಗುತ್ತದೆ.

ಸಿಂಹ: ದುಡುಕು ಮಾತಿನಿಂದ ಇತರರ ಮನಸ್ಸಿಗೆ ನೋವಾಗಬಹುದು. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯುವಿರಿ. ವಿದ್ಯಾರ್ಥಿಗಳಿಗೆ ಮುನ್ನಡೆಯಿರಲಿದೆ.

ಕನ್ಯಾ: ಇದುವರೆಗೆ ಇದ್ದ ಆತಂಕ, ಸಮಸ್ಯೆಗಳಿಗೆ ಒಂದು ರೀತಿಯ ಪರಿಹಾರ ಸಿಕ್ಕಿ ಒಂದು ರೀತಿಯ ನೆಮ್ಮದಿ ಸಿಗಲಿದೆ. ಕೌಟುಂಬಿಕವಾಗಿ ಸಂತೋಷದಿಂದ ಕಾಲ ಕಳೆಯುವಿರಿ. ಆದಾಯ ಹೆಚ್ಚಿ ಕಾರ್ಯಸಾಧನೆಯಾಗುವುದು. ದಿನದಂತ್ಯಕ್ಕೆ ಶುಭವಾಗಲಿದೆ.

ತುಲಾ: ನಿಮ್ಮ ಸಾಮಾಜಿಕ ಕೆಲಸಗಳಿಗೆ ಉತ್ತಮ ಪ್ರಶಂಸೆ ಸಿಗಲಿದೆ. ನೆರೆಹೊರೆಯವರೊಂದಿಗೆ ನೀರಿನ ವಿಚಾರಕ್ಕೆ ಮನಸ್ತಾಪ ಮಾಡಿಕೊಳ್ಳುವ ಸಾಧ‍್ಯತೆಯಿದೆ. ದೀರ್ಘ ಕಾಲದ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವಿರಿ. ವಾಹನ ಖರೀದಿ ಯೋಗವಿದೆ.

ವೃಶ್ಚಿಕ: ದೈವಾನುಗ್ರಹದಿಂದ ಅಂದುಕೊಂಡ ಕೆಲಸಗಳಿಗೆ ಚಾಲನೆ ನೀಡಲು ಇದು ಸಕಾಲ. ಆರ್ಥಿಕವಾಗಿ ಅಭಿವೃದ್ಧಿ ಗೋಚರಕ್ಕೆ ಬರುವುದು. ದೇಹಾರೋಗ್ಯದ ಬಗ್ಗೆ ಗಮನಕೊಡಿ. ವಿವಾಹ ಪ್ರಸ್ತಾಪಗಳಿಗೆ ಮುನ್ನಡೆ ಸಿಗಲಿದೆ. ಮಹಿಳೆಯರಿಗೆ ಉದ್ಯೋಗದಲ್ಲಿ ಬಡ್ತಿ ಯೋಗವಿದೆ.

ಧನು: ಕೌಟುಂಬಿಕವಾಗಿ ಸಂತಸದ ದಿನಗಳಿವು. ಮನೆಗೆ ಅನಿರೀಕ್ಷಿತ ಬಂಧುಮಿತ್ರರ ಆಗಮನವಾಗಲಿದ್ದು, ಖುಷಿಯಾಗುವುದು. ಆದರೆ ನಿಮ್ಮ ದುಡುಕು ಮಾತಿಗೆ ಕಡಿವಾಣ ಹಾಕುವ ಅಗತ್ಯವಿದೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ.

ಮಕರ: ವಿದ್ಯಾರ್ಥಿಗಳು ಕೆಟ್ಟ ಸ್ನೇಹ ಸಂಗದಿಂದ ದೂರವಿದ್ದರೆ ಉತ್ತಮ. ನಿರುದ್ಯೋಗಿಗಳಿಗೆ ಉದ್ಯೋಗ ಅರಸುವಿಕೆಗೆ ದೂರ ಸಂಚಾರ ಮಾಡಬೇಕಾಗುತ್ತದೆ. ಹಿರಿಯರಿಗೆ ಪುಣ್ಯ ಕ್ಷೇತ್ರಗಳ ಭೇಟಿ ಯೋಗವಿದೆ. ಸಂಚಾರದಲ್ಲಿ ಜಾಗ್ರತೆಯಿರಲಿ. ಸ್ಥಾನ ಮಾನ ವೃದ್ಧಿಯಾಗುವುದು.

ಕುಂಭ: ಬಹುದಿನಗಳಿಂದ ಕಾಡುತ್ತಿದ್ದ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವಿರಿ. ಮಕ್ಕಳು ಸಹಾಯಕ್ಕೆ ಬರುವರು. ಸಂಗಾತಿಯ ಮಾತನ್ನು ಅಲಕ್ಷಿಸಬೇಡಿ. ವೃತ್ತಿರಂಗದಲ್ಲಿ ಗೌರವ ಪ್ರಾಪ್ತಿಯಾಗುವುದು. ಆರ್ಥಿಕವಾಗಿ ಖರ್ಚು ವೆಚ್ಚಗಳಾದರೂ ಆದಾಯಕ್ಕೆ ಕೊರತೆಯಿರದು.

ಮೀನ: ವ್ಯಾಪಾರ,ವ್ಯವಹಾರದಲ್ಲಿ ಹೆಚ್ಚಿನ ಧನ ಲಾಭವಾದೀತು. ಆದರೆ ಹಿತಶತ್ರುಗಳ ಬಗ್ಗೆ ಎಚ್ಚರಿಕೆಯಿಂದಿರಿ. ಮಾನಸಿಕವಾಗಿ ಋಣಾತ್ಮಕ ಚಿಂತನೆಗಳಿಗೆ ಅವಕಾಶ ಕೊಡದಿರಿ. ಗೃಹಿಣಿಯರಿಗೆ ಚಿನ್ನಾಭರಣ ಖರೀದಿ ಯೋಗವಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

Share this Story:

Follow Webdunia kannada

ಮುಂದಿನ ಸುದ್ದಿ

ವ್ಯಾಪಾರದಲ್ಲಿ ಪ್ರಗತಿ ಕಾಣಲು ಲಕ್ಷ್ಮೀ ಗಣಪತಿ ಪೋಟೊದ ಮುಂದೆ ಈ ವಸ್ತಗಳನ್ನು ಇಟ್ಟು ಪೂಜೆ ಮಾಡಿ