Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಭಾನುವಾರ, 22 ಡಿಸೆಂಬರ್ 2019 (09:00 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಕುಟುಂಬ ವರ್ಗದವರೊಡನೆ ಅನಗತ್ಯವಾಗಿ ವಾದ ವಿವಾದಕ್ಕಿಳಿದು ಮಾನಸಿಕ ನೆಮ್ಮದಿ ಹಾಳುಮಾಡಿಕೊಳ್ಳುತ್ತೀರಿ. ಉದ್ಯೋಗಸ್ಥರಿಗೆ ವರ್ಗಾವಣೆಯ ಭೀತಿಯಿದೆ. ವ್ಯವಹಾರದಲ್ಲಿ ಮುನ್ನಡೆಯಿರಲಿದೆ. ಆರ್ಥಿಕವಾಗಿ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕಿ.

ವೃಷಭ: ಪ್ರೀತಿ ಪಾತ್ರರಿಂದ ದೂರವಾಗುವ ನೋವು ಕಾಡಲಿದೆ. ದೂರ ಪ್ರಯಾಣಕ್ಕೆ ಸಿದ್ಧತೆ ನಡೆಸುವಿರಿ. ವ್ಯವಹಾರದಲ್ಲಿ ದುಡುಕಿನ ನಿರ್ಧಾರ ತೆಗೆದುಕೊಳ್ಳಬೇಡಿ. ಆರ್ಥಿಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಿರಿ. ಬಂಧು ಮಿತ್ರರ ಆಗಮನವಾಗಲಿದೆ.

ಮಿಥುನ: ಕಾರ್ಯಕ್ಷೇತ್ರದಲ್ಲಿ ಆಗಾಗ ಅಡೆತಡೆಗಳು ತೋರಿಬಂದರೂ ಅಂತಿಮವಾಗಿ ಜಯ ಸಾಧಿಸುವಿರಿ. ಕೋರ್ಟು ಕಚೇರಿ ವ್ಯವಹಾರದಲ್ಲಿ ಮುನ್ನಡೆ ಸಿಗಲಿದೆ. ವ್ಯಾಪಾರಿ ವರ್ಗದವರಿಗೆ ಮಂದಗತಿಯಲ್ಲಿ ಪ್ರಗತಿ ಕಂಡುಬರುವುದು. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.

ಕರ್ಕಟಕ: ವೃತ್ತಿರಂಗದಲ್ಲಿ ಉತ್ಸಾಹದಾಯಕ ವಾತಾವರಣವಿರುವುದು. ಹಣಕಾಸಿನ ಹರಿವಿಗೆ ತೊಂದರೆಯಿರದು. ಸೂಕ್ತ ವ್ಯವಹಾರದಲ್ಲಿ ತೊಡಗಿಸಿಕೊಳ್ಳುವಿರಿ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ವಾಹನ ಖರೀದಿಗೆ ಮುಂದಾಗುವಿರಿ. ದಿನದಂತ್ಯದಲ್ಲಿ ಅಚ್ಚರಿಯ ಸುದ್ದಿ.

ಸಿಂಹ: ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆ ಕಂಡುಬರಲಿದೆ. ಯೋಜಿತ ಕೆಲಸಗಳಿಗೆ ಚಾಲನೆ ನೀಡುವಿರಿ. ಸಂಗಾತಿಯೊಂದಿಗೆ ಹೊಂದಾಣಿಕೆಯಿಂದ ನಡೆದುಕೊಳ್ಳಬೇಕಾಗುತ್ತದೆ. ಉದ್ಯೋಗ ಕ್ಷೇತ್ರದಲ್ಲಿ ಮುಂಬಡ್ತಿ ಯೋಗವಿದೆ. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.

ಕನ್ಯಾ: ದೂರ ಪ್ರಯಾಣ ಮಾಡುವಾಗ ಕಳ್ಳತನವಾಗದಂತೆ ಎಚ್ಚರಿಕೆ ವಹಿಸಿ. ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕಾಗುತ್ತದೆ. ವ್ಯಾಪಾರ ವ್ಯವಹಾರದಲ್ಲಿ ತಕ್ಕಮಟ್ಟಿಗೆ ಲಾಭ ಕಂಡುಕೊಳ್ಳುವಿರಿ. ವಿದ್ಯಾರ್ಥಿಗಳಿಗೆ ಮುನ್ನಡೆಯಿರಲಿದೆ.

ತುಲಾ: ಮನಸ್ಸಿನಲ್ಲಿ ಅಂದುಕೊಂಡ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಇದು ಸಕಾಲ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕಾಗಿ ದೂರ ಪ್ರಯಾಣ ಮಾಡಬೇಕಾಗುತ್ತದೆ. ಹಿರಿಯರು ಕೊಡುವ ಸಲಹೆಗಳಿಗೆ ಕಿವಿಗೊಡಿ. ಸಂಗಾತಿಯ ಮನದಿಚ್ಛೆ ಪೂರೈಸುವಿರಿ.

ವೃಶ್ಚಿಕ: ಕಾರ್ಮಿಕ ವರ್ಗದವರಿಗೆ ಉದ್ಯೋಗದಲ್ಲಿ ಇದುವರೆಗೆ ಇದ್ದ ಕಷ್ಟಗಳು ನಿವಾರಣೆಯಾಗಲಿವೆ. ಆರೋಗ್ಯ ಸ್ಥಿತಿಯಲ್ಲಿ ಚೇತರಿಕೆ ಕಂಡುಬರುವುದು. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ. ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ಇರುವುದು.

ಧನು: ಪ್ರೀತಿ ಪಾತ್ರರ ಅಗಲುವಿಕೆಯ ನೋವು ಕಾಡಲಿದೆ. ಗೃಹ ಸಂಬಂಧೀ ಕೆಲಸಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ಜವಾಬ್ಧಾರಿಗಳು ಹೆಚ್ಚಾಗಲಿವೆ. ನಿರುದ್ಯೋಗಿಗಳಿಗೆ ಉದ್ಯೋಗಾವಕಾಶಗಳು ಒದಗಿ ಬರಲಿವೆ. ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ.

ಮಕರ: ವೃತ್ತಿರಂಗದಲ್ಲಿ ಸಹೋದ್ಯೋಗಿಗಳ ಸಹಕಾರದಿಂದ ಮುನ್ನಡೆ ಸಾಧಿಸುವಿರಿ. ಕಾರ್ಯಸಾಧನೆಗೆ ಹಠದ ಮನೋಭಾವ ತಳೆಯಬೇಕಾಗುತ್ತದೆ. ಮನೆಗೆ ನೆಂಟರಿಷ್ಟರ ಆಗಮನವಾಗಲಿದೆ. ಅವಿವಾಹಿತರ ವಿವಾಹ ಪ್ರಯತ್ನಕ್ಕೆ ಮುನ್ನಡೆ ಸಿಗಲಿದೆ. ನೂತನ ದಂಪತಿಗಳಿಗೆ ಸಂತಸದ ದಿನ.

ಕುಂಭ: ಅದೃಷ್ಟದ ಸಹಾಯದಿಂದ ಇಂದು ನೀವು ಕೈಗೊಂಡ ಕೆಲಸಗಳು ಸುಸ್ರೂತ್ರವಾಗಿ ನೆರವೇರಲಿದೆ. ನಿಮಗೆ ಕೆಟ್ಟದ್ದು ಬಯಸಿದವರಿಗೆ ಕಾಲವೇ ಉತ್ತರ ಕೊಡಲಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ನಡೆಸುವಿರಿ. ದೂರ ಸಂಚಾರ ಮಾಡಬೇಕಾಗುತ್ತದೆ.

ಮೀನ: ಕೌಟುಂಬಿಕ ವಿಚಾರದಲ್ಲಿ ನೆಮ್ಮದಿ ಇರದು. ಸಂಗಾತಿಯೊಂದಿಗೆ ಮನಸ್ತಾಪವಾಗಬಹುದು. ಮಕ್ಕಳ ಭವಿಷ್ಯದ ಬಗ್ಗೆ ಚಿಂತಯಾಗಬಹುದು. ಆದರೆ ವ್ಯವಹಾರದಲ್ಲಿ ಹೆಚ್ಚಿನ ಆದಾಯ ನಿರೀಕ್ಷಿಸಬಹುದು. ಹೊಸ ಮಿತ್ರರ ಭೇಟಿ ಸಂಭವ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

Share this Story:

Follow Webdunia kannada

ಮುಂದಿನ ಸುದ್ದಿ

ಧನಪ್ರಾಪ್ತಿಯಾಗಲು 10 ನಿಮಿಷ ಕುಬೇರ ಮುದ್ರೆಯನ್ನ ಸ್ಮರಣೆ ಮಾಡಿ