Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಮಂಗಳವಾರ, 24 ಡಿಸೆಂಬರ್ 2019 (08:38 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಸಾಮಾಜಿಕವಾಗಿ ಜನಮನ್ನಣೆ ಗಳಿಸುವಿರಿ. ಆದರೆ ಮನೆಯಲ್ಲಿ ಸಂಗಾತಿಯ ಅಸಮಾಧಾನಕ್ಕೆ ಗುರಿಯಾಗುವಿರಿ. ಉದ್ಯೋಗ ಕ್ಷೇತ್ರದಲ್ಲಿ ಸಮಧಾನಕರ ದಿನ. ಆರ್ಥಿಕವಾಗಿ ಧನವ್ಯಯವಾಗುವುದು. ದೂರ ಪ್ರಯಾಣಕ್ಕೆ ಸಿದ್ದತೆ ನಡೆಸುವಿರಿ. ಮಕ್ಕಳಿಗೆ ಸಂತಸ ನೀಡುವ ಕೆಲಸ ಮಾಡಬೇಕಾಗುತ್ತದೆ.

ವೃಷಭ: ಅನಿರೀಕ್ಷಿತವಾಗಿ ಧನ ಲಾಭವಾಗಲಿದ್ದು ಅಂದುಕೊಂಡ ಕಾರ್ಯಗಳನ್ನು ಸುಗಮವಾಗಿ ನೆರವೇರಿಸುವಿರಿ. ಹೊಸ ವ್ಯವಹಾರಗಳಿಗೆ ಕೈ ಹಾಕಲು ಇದು ಉತ್ತಮ ಸಮಯ. ಸಂಗಾತಿಯೊಂದಿಗೆ ಸಂಯಮದಿಂದ ವರ್ತಿಸಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಿಥುನ: ವೃತ್ತಿರಂಗದಲ್ಲಿ ನಿಮಗೆ ಪ್ರತಿಕೂಲ ವಾತಾವರಣವಿದ್ದರೂ ನಿಮ್ಮ ಪ್ರಯತ್ನ ಬಲದಿಂದ ಯಶಸ್ಸು ಗಳಿಸಬಹುದು. ದಾಂಪತ್ಯ ಜೀವನದಲ್ಲಿ ಅನ್ಯೋನ್ಯತೆ ಕಂಡುಬರಲಿದೆ. ಮಕ್ಕಳ ಭವಿಷ್ಯಕ್ಕಾಗಿ ಯೋಜನೆ ರೂಪಿಸುವಿರಿ. ವಿದ್ಯಾರ್ಥಿಗಳಿಗೆ ಮುನ್ನಡೆಯಿರಲಿದೆ.

ಕರ್ಕಟಕ: ದೇಹಾರೋಗ್ಯದ ಕಡೆಗೆ ಗಮನಹರಿಸಬೇಕಾಗುತ್ತದೆ. ನಾಲಿಗೆ ಚಪಲದ ಮೇಲೆ ಕಡಿವಾಣವಿರಲಿ. ಸಿವಿಲ್ ಇಂಜಿನಿಯರಿಂಗ್ ವೃತ್ತಿಯವರಿಗೆ ಮುನ್ನಡೆಯಿರಲಿದೆ. ನಿರುದ್ಯೋಗಿಗಳು ಬಂದ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು.  

ಸಿಂಹ: ಅನಿರೀಕ್ಷಿತ ರೀತಿಯಲ್ಲಿ ಕಾರ್ಯಸಾಧನೆಯಾಗಲಿದೆ. ಹಾಗಿದ್ದರೂ ಮಾನಸಿಕವಾಗಿ ಹಲವಾರು ಚಿಂತೆಗಳು ಕಾಡಲಿವೆ. ಸಾಂಸಾರಿಕವಾಗಿ ಸಂಗಾತಿಯೊಂದಿಗೆ ಅಭಿಪ್ರಾಯ ಬೇಧ ಕಂಡುಬಂದೀತು. ತಾಳ್ಮೆಯಿಂದ ಮುನ್ನಡೆಯಬೇಕು. ದೇವತಾ ಪ್ರಾರ್ಥನೆ ಮಾಡಿ.

ಕನ್ಯಾ: ವಾಹನ ಸವಾರರು ಚಾಲನೆಯಲ್ಲಿ ಎಚ್ಚರಿಕೆ ವಹಿಸುವುದು ಅಗತ್ಯ. ಅಪರಿಚಿತರಿಂದ ತೊಂದರೆಗಳು ಎದುರಾಗಬಹುದು. ಕೌಟುಂಬಿಕವಾಗಿ ಜವಾಬ್ಧಾರಿಗಳು ಹೆಚ್ಚುವುದು. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಮುನ್ನಡೆಯಿರಲಿದೆ. ಆರೋಗ್ಯದಲ್ಲಿ ಸುಧಾರಣೆಯಾಗುವುದು.

ತುಲಾ: ಪಾಲು ಬಂಡವಾಳ ಹೂಡಿಕೆಯಲ್ಲಿ ಎಚ್ಚರಿಕೆ ವಹಿಸಿ. ಹಿತಶತ್ರುಗಳಿಂದ ವಂಚನೆಗೊಳಗಾಗುವ ಭೀತಿಯಿದೆ. ಸಾಮಾಜಿಕ ಕ್ಷೇತ್ರದಲ್ಲಿ ಹೆಸರು ಗಳಿಸಲಿದ್ದೀರಿ. ವೈಯಕ್ತಿಕ ಆರೋಗ್ಯದ ಬಗ್ಗೆ ಕಾಳಜಿವಹಿಸಿ. ಆರ್ಥಿಕ ಪರಿಸ್ಥಿತಿಯಲ್ಲಿ ಏರುಪೇರಾಗಬಹುದು.

ವೃಶ್ಚಿಕ: ಆದಷ್ಟು ದುಂದು ವೆಚ್ಚಗಳಿಗೆ ಕಡಿವಾಣ ಹಾಕುವುದು ಒಳಿತು. ಗೃಹ ಸಂಬಂಧೀ ಕೆಲಸಗಳಿಗಾಗಿ ಓಡಾಟ ನಡೆಸಿ ದೇಹಾಯಾಸವಾಗಬಹುದು. ಮನೆಯಲ್ಲಿ ಶುಭ ಮಂಗಲ ಕಾರ್ಯಗಳು ನಡೆಯಲಿವೆ. ಹಿರಿಯರ ಸಲಹೆಗಳಿಗೆ ಸ್ಪಂದಿಸಿ. ದಿನದಂತ್ಯಕ್ಕೆ ಶುಭ ಸುದ್ದಿ.

ಧನು: ಇಂದು ನಿಮಗೆ ಒಂದು ರೀತಿಯಲ್ಲಿ ಮಿಶ್ರ ಫಲವಿದೆ. ಹೊಸ ವಸ್ತು ಖರೀದಿಗೆ ಹೊರಟರೆ ನಷ್ಟವಾಗಬಹುದು. ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮೊದಲು ಯೋಚಿಸುವುದು ಉತ್ತಮ. ಸಂಗಾತಿಯ ಸಹಕಾರ ಸಿಗಲಿದೆ. ಸಾಂಸಾರಿಕವಾಗಿ ನೆಮ್ಮದಿ ಇರುವುದು.

ಮಕರ: ವೃತ್ತಿರಂಗದಲ್ಲಿ ಮುನ್ನಡೆಯಿರಲಿದೆ. ದೇಹಾರೋಗ್ಯದಲ್ಲಿ ಏರುಪೇರಾಗಬಹುದು. ಮಾನಸಿಕವಾಗಿ ಗಟ್ಟಿಯಾಗಬೇಕಾದ ಸಮಯವಿದು. ಕಾರ್ಯಗಳು ವಿಳಂಬ ಗತಿಯಲ್ಲಿ ಸಾಗಿ ಮನಸ್ಸಿಗೆ ಬೇಸರವಾಗಬಹುದು. ಧಾರ್ಮಿಕ ಕ್ಷೇತ್ರಗಳ ಸಂದರ್ಶನ ಮಾಡುವಿರಿ.

ಕುಂಭ: ಇಂದು ನೀವು ಸಹನೆಯಿಂದಿದ್ದಷ್ಟು ಉತ್ತಮ. ಮಕ್ಕಳ ವಿಚಾರದಲ್ಲಿ ಸಂತಸ ಅನುಭವಿಸಲಿದ್ದೀರಿ. ಸಂಗಾತಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ದೊರೆಯುವುದು. ಆರ್ಥಿಕವಾಗಿ ಆದಾಯಕ್ಕೆ ಕೊರತೆಯಿರದು.

ಮೀನ: ವಿದ್ಯಾರ್ಥಿಗಳಿಗೆ ಪ್ರಯತ್ನಬಲವಿದ್ದರೆ ಮಾತ್ರ ಯಶಸ್ಸು ಸಾಧ‍್ಯ. ವೃತ್ತಿರಂಗದಲ್ಲಿ ಮೇಲಧಿಕಾರಿಗಳ ಕಿರಿ ಕಿರಿ ಇದ್ದರೂ ನಿಮ್ಮ ಯಶಸ್ಸಿನ ಓಟವನ್ನು ತಡೆಯಲಾಗದು. ಆರ್ಥಿಕವಾಗಿ ಹಣಕಾಸಿನ ಮುಗ್ಗಟ್ಟು ಎದುರಾಗಬಹುದು. ಹಾಗಿದ್ದರೂ ತಾಳ್ಮೆಯೇ ಎಲ್ಲದಕ್ಕೂ ಮದ್ದು.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ