Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಗುರುವಾರ, 26 ಡಿಸೆಂಬರ್ 2019 (07:48 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಅನವಶ್ಯಕವಾಗಿ ಬೇಡದ ವಿಚಾರಗಳ ಬಗ್ಗೆ ವಾದ ವಿವಾದ ಮಾಡಲು ಹೋದರೆ ಸಂಬಂಧ ಹಾಳಾದೀತು ಎಂಬುದನ್ನು ಮರೆಯಬೇಡಿ. ಮಕ್ಕಳಿಗಾಗಿ ಕೆಲವೊಂದು ತ್ಯಾಗ ಮಾಡಬೇಕಾಗುತ್ತದೆ. ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆಯಿರಲಿದೆ.

ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಅಸಹನೆ ಉಂಟಾಗುವುದು. ವೃತ್ತಿ ಬದಲಾವಣೆಗೂ ಚಿಂತನೆ ನಡೆಸುವಿರಿ. ಆದರೆ ಯಾವುದೇ ಕಾರಣಕ್ಕೂ ತಾಳ್ಮೆ ಕಳೆದುಕೊಳ್ಳಬೇಡಿ. ಅವಿವಾಹಿತರ ವಿವಾಹ ಪ್ರಯತ್ನಗಳಿಗೆ ಮುನ್ನಡೆ ಸಿಗಲಿದೆ. ವಿದ್ಯಾರ್ಥಿಗಳಿಗೆ ಮುನ್ನಡೆಯಿರುವುದು.

ಮಿಥುನ: ವಾತ ಸಂಬಂಧೀ ಆರೋಗ್ಯ ಸಮಸ್ಯೆಗಳು ಉಂಟಾಗಿ ಆಸ್ಪತ್ರೆಗೆ ಅಲೆದಾಡಬೇಕಾದೀತು. ಆಸ್ತಿ ವಿವಾದಗಳು ಬಗೆಹರಿಯಲಿವೆ. ಸರಕಾರಿ ಉದ್ಯೋಗಿಗಳಿಗೆ ಉದ್ಯೋಗದಲ್ಲಿ ಮುಂಬಡ್ತಿ ಯೋಗವಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ.

ಕರ್ಕಟಕ: ಪ್ರೀತಿ ಪಾತ್ರರಿಗಾಗಿ ನಿಮ್ಮ ಕೆಲವೊಂದು ಇಷ್ಟಗಳನ್ನು ತ್ಯಾಗ ಮಾಡಬೇಕಾಗುತ್ತದೆ. ಹಿರಿಯರಿಂದ ಉಡುಗೊರೆ ಸ್ವೀಕರಿಸುವಿರಿ. ಸಂಗಾತಿಯ ಪ್ರೀತಿಗೆ ಪಾತ್ರರಾಗುವಿರಿ. ಧಾರ್ಮಿಕವಾಗಿ ಭಕ್ತಿ ಭಾವ ಹೆಚ್ಚುವುದು. ವ್ಯವಹಾರದಲ್ಲಿ ಮುನ್ನಡೆಯಿರುವುದು.

ಸಿಂಹ: ಕ್ರೀಡಾ ಕ್ಷೇತ್ರದಲ್ಲಿರುವವರಿಗೆ ಕೀರ್ತಿ ಸಂಪಾದಿಸುವ ಯೋಗವಿದೆ. ರಾಜಕೀಯವಾಗಿ ನಿಮ್ಮ ಸ್ಥಾನ ಮಾನ ಹೆಚ್ಚುವುದು. ನೂತನ ದಂಪತಿಗಳಲ್ಲಿ ಹೊಂದಾಣಿಕೆ ಕೊರತೆ ಉಂಟಾಗಬಹುದು. ಸಂಸಾರದಲ್ಲಿ ಮೂರನೆಯವರು ಮೂಗು ತೂರಿಸಲು ಅವಕಾಶ ಕೊಡಬೇಡಿ.

ಕನ್ಯಾ: ಮಕ್ಕಳ ದೇಹಾರೋಗ್ಯದಲ್ಲಿ ಏರುಪೇರಾಗಬಹುದು. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕಾಗಿ ದೂರ ಪ್ರಯಾಣ ಮಾಡಬೇಕಾಗುತ್ತದೆ. ವೃತ್ತಿರಂಗದಲ್ಲಿ ನಿಮ್ಮ ಸಹನೆಯ ಪರೀಕ್ಷೆ ನಡೆಯಲಿದೆ. ಧಾರ್ಮಿಕ ಕಾರ್ಯಗಳಿಗೆ ಧನವಿನಿಯೋಗ ಮಾಡುವಿರಿ.

ತುಲಾ: ಅಧಿಕ ಲಾಭ ತರುವ ಯೋಜನೆಗಳ ಬಗ್ಗೆ ಚಿಂತನೆ ನಡೆಸುವಿರಿ. ತಾತ್ಕಾಲಿಕ ಉದ್ಯೋಗಿಗಳಿಗೆ ಉದ್ಯೋಗ ಕಳೆದುಕೊಳ್ಳುವ ಭೀತಿ ಎದುರಾಗಬಹುದು. ಸಾಂಸಾರಿಕವಾಗಿ ಸಂಗಾತಿಯ ಸಲಹೆಗಳಿಗೆ ಕಿವಿಗೊಡಿ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ.

ವೃಶ್ಚಿಕ: ಅಪರಿಚಿತರನ್ನು ನಂಬಿ ವ್ಯವಹಾರದಲ್ಲಿ ಹೂಡಿಕೆ ಮಾಡಿದರೆ ಕೈ ಸುಟ್ಟುಕೊಳ್ಳಬೇಕಾದ ಪರಿಸ್ಥಿತಿ ಎದುರಾಗಬಹುದು. ಕೃಷಿ ಕ್ಷೇತ್ರದಲ್ಲಿರುವವರಿಗೆ ಲಾಭ-ನಷ್ಟ ಸಮನಾಗಿರುವುದು. ಸಂಗಾತಿಯಿಂದ ಉಡುಗೊರೆ ನಿರೀಕ್ಷಿಸಬಹುದು. ಕುಲದೇವರ ಪ್ರಾರ್ಥನೆ ಮಾಡಿದರೆ ಶುಭ ಫಲ ದೊರೆಯುವುದು.

ಧನು: ಸಾಂಸಾರಿಕವಾಗಿ ನಿಮ್ಮ ಕೆಲವೊಂದು ನಿರ್ಧಾರಗಳು ಇತರ ಸದಸ್ಯರಿಗೆ ಇಷ್ಟವಾಗದೇ ಹೋಗಬಹುದು. ಸಹೋದರರೊಂದಿಗೆ ಆಸ್ತಿ ವಿಚಾರದಲ್ಲಿ ಕಿರಿ ಕಿರಿ ಬರಬಹುದು. ತಾಳ್ಮೆಯಿಂದ ವ್ಯವಹರಿಸಿ. ವಿದ್ಯಾರ್ಥಿಗಳು ಆಲಸ್ಯತನ ಬಿಡಬೇಕು.

ಮಕರ: ಕಾರ್ಯಕ್ಷೇತ್ರದಲ್ಲಿ ಅಡ್ಡಿ ಆತಂಕಗಳು ಎದುರಾಗಿ ಆರಂಭಿಸಿದ ಕೆಲಸಗಳು ಅರ್ಧಕ್ಕೇ ನಿಲ್ಲಲಿವೆ. ಕುಲದೇವರ ಪ್ರಾರ್ಥನೆ ಮಾಡಿದರೆ ಒಳಿತು. ನಿರುದ್ಯೋಗಿಗಳು ಉದ್ಯೋಗ ಸಂದರ್ಶನಕ್ಕಾಗಿ ದೂರ ಪ್ರಯಾಣ ಮಾಡಬೇಕಾಗುತ್ತದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕುಂಭ: ಶೀತ, ಕಫ ಸಂಬಂಧೀ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆ ಕಂಡುಬಂದೀತು. ಆದರೆ ಸಾಂಸಾರಿಕವಾಗಿ ಅತ್ಯಂತ ನೆಮ್ಮದಿಯ ದಿನವಿದು. ಮಕ್ಕಳೊಂದಿಗೆ ಸಂತೋಷದ ಕ್ಷಣ ಕಳೆಯುವಿರಿ. ಉದ್ಯೋಗ ಕ್ಷೇತ್ರದಲ್ಲಿ ವೇತನ ಹೆಚ್ಚಳ ಸಂಭವವಿದೆ.

ಮೀನ: ಉದ್ಯೋಗ ಕ್ಷೇತ್ರದಲ್ಲಿ ಸ್ಥಾನ ಪಲ್ಲಟವಾಗುವ ಸಾಧ‍್ಯತೆಯಿದೆ. ನಿರ್ಧಾರಗಳನ್ನು ಕೈಗೊಳ್ಳುವಾಗ ಎಚ್ಚರಿಕೆಯಿಂದ ಹೆಜ್ಜೆಯಿಡಬೇಕು. ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ನಡೆಸುವಿರಿ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಬೇಕಾಗುತ್ತದೆ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments