Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಮಂಗಳವಾರ, 31 ಡಿಸೆಂಬರ್ 2019 (08:54 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಸಾಂಸಾರಿಕವಾಗಿ ಸಂಗಾತಿಯೊಂದಿಗೆ ಹೊಂದಾಣಿಕೆ ನಡೆಸುವಿರಿ. ಪಾಲಿಗೆ ಬಂದಿದ್ದು ಪಂಚಾಮೃತ ಎಂದು ತಿಳಿದುಕೊಳ್ಳಬೇಕು. ಭವಿಷ್ಯದ ಯೋಜನೆಗಳಿಗೆ ಧನ ವ್ಯಯ ಮಾಡುವಿರಿ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಪಡುವ ಅಗತ್ಯವಿದೆ.

ವೃಷಭ: ಕೃಷಿ ವ್ಯವಹಾರ ಮಾಡುವವರಿಗೆ ವ್ಯವಹಾರದಲ್ಲಿ ಅಧಿಕ ಲಾಭ ಸಿಗಲಿದೆ. ಸಣ್ಣ ವ್ಯಾಪಾರಿಗಳಿಗೆ ಸಣ್ಣ ಮಟ್ಟಿನ ಲಾಭವಾಗಲಿದೆ. ದೇಹಾರೋಗ್ಯದಲ್ಲಿ ಏರುಪೇರಾಗಬಹುದು, ಕಾಳಜಿ ಅಗತ್ಯ. ಅಪರಿಚಿತರ ಬಗ್ಗೆ ಎಚ್ಚರವಾಗಿರಿ. ದೇವತಾ ಪ್ರಾರ್ಥನೆ ಮಾಡಿ.

ಮಿಥುನ: ಹಿರಿಯರ ದೇಹಾರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ಓಡಾಡಬೇಕಾದೀತು. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ನಿರುದ್ಯೋಗಿಗಳು ಪಾಲಿಗೆ ಬಂದ ಅವಕಾಶ ಬಳಸಿಕೊಳ್ಳಬೇಕು. ಮಹಿಳೆಯರಿಗೆ ಚಿನ್ನಾಭರಣ ಖರೀದಿ ಯೋಗವಿದೆ.

ಕರ್ಕಟಕ: ಇಂಜಿನಿಯರಿಂಗ್ ವೃತ್ತಿಯವರಿಗೆ ಉದ್ಯೋಗದಲ್ಲಿ ಮುನ್ನಡೆ ಸಿಗಲಿದೆ. ವಾಹನ ರಿಪೇರಿಗಾಗಿ ಧನವ್ಯಯವಾದೀತು. ಹೊಸ ವ್ಯವಹಾರಗಳಿಗೆ ಕೈ ಹಾಕಲು ಕೆಲವು ದಿನ ಕಾಯುವುದು ಒಳಿತು. ದಾಂಪತ್ಯದಲ್ಲಿ ವಿರಸ ಮೂಡೀತು. ತಾಳ್ಮೆ ಅಗತ್ಯ.

ಸಿಂಹ: ಸಂಗಾತಿಯ ಸಮಯೋಚಿತ ಸಲಹೆಗಳನ್ನು ಅಲಕ್ಷಿಸಿ ಮುನ್ನಡೆದರೆ ವ್ಯವಹಾರದಲ್ಲಿ ನಷ್ಟ ಅನುಭವಿಸಬೇಕಾದೀತು. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ನಾನಾ ರೀತಿಯಲ್ಲಿ ಧನ ವ್ಯಯವಾಗಬಹುದು. ಕಾರ್ಯನಿಮಿತ್ತ ಕಿರು ಸಂಚಾರ ಮಾಡಬೇಕಾಗಬಹುದು.

ಕನ್ಯಾ: ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ನಿರುತ್ಸಾಹ ಕಂಡುಬಂದೀತು. ವೈಯಕ್ತಿಕ ಆರೋಗ್ಯದ ಬಗ್ಗೆ ನಿರ್ಲ್ಯಕ್ಷ ಬೇಡ. ವೃತ್ತಿರಂಗದಲ್ಲಿ ನಿರೀಕ್ಷಿತ ಅಭಿವೃದ್ಧಿ ಕಂಡುಬರಲಿದೆ. ಅನಿರೀಕ್ಷಿತವಾಗಿ ನೆಂಟರಿಷ್ಟರ ಆಗಮನವಾಗಬಹುದು. ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡುವಿರಿ.

ತುಲಾ: ಆಸ್ತಿ ವಿಚಾರವಾಗಿ ದಾಯಾದಿಗಳೊಂದಿಗೆ ಮನಸ್ತಾಪವಾಗಬಹುದು. ಕೋರ್ಟು ಕಚೇರಿ ವ್ಯವಹಾರಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ವಾಹನ ಸವಾರರು ಅಪಘಾತದ ಬಗ್ಗೆ ಎಚ್ಚರವಾಗಿರಬೇಕು. ಸಕಾರಾತ್ಮಕ ಯೋಚನೆಗಳಿಂದ ಸಮಸ್ಯೆಗಳ ಪರಿಹಾರಕ್ಕೆ ಹೊಸ ದಾರಿ ಸಿಗಬಹುದು.

ವೃಶ್ಚಿಕ: ನಿರುದ್ಯೋಗಿಗಳು ಸ್ವಂತ ವೃತ್ತಿ, ವ್ಯವಹಾರಗಳನ್ನು ನಡೆಸುವ ನಿರ್ಧಾರ ಮಾಡಲಿದ್ದಾರೆ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಮೂಡಲಿದೆ. ಕಷ್ಟದ ಸಮಯದಲ್ಲಿ ಮಿತ್ರರ ಸಹಕಾರ ದೊರೆಯಲಿದೆ. ಆರ್ಥಿಕವಾಗಿ ಆದಾಯದಲ್ಲಿ ವೃದ್ಧಿಯಾಗಬಹುದು. ಆದರೆ ದುಂದು ವೆಚ್ಚಗಳಿಗೆ ಕಡಿವಾಣವಿರಲಿ.

ಧನು: ಆಕಸ್ಮಿಕವಾಗಿ ಹಳೆಯ ಮಿತ್ರರ ಭೇಟಿಯಾಗುವಿರಿ. ವೃತ್ತಿರಂಗದಲ್ಲಿ ನಿಮ್ಮ ಕ್ರಿಯಾಶೀಲತೆಗೆ ತಕ್ಕ ಫಲ ಸಿಗುವುದು. ಮೇಲಧಿಕಾರಿಗಳಿಂದ ಪ್ರಶಂಸೆಗೊಳಗಾಗುವಿರಿ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಏಕಾಗ್ರತೆ ಕೊರತೆ ಕಂಡುಬರಬಹುದು. ತಾಳ್ಮೆ ಅಗತ್ಯ.

ಮಕರ: ಹೊಸ ಕೆಲಸಗಳಿಗೆ ಕೈ ಹಾಕುವಾಗ ವಿಘ‍್ನಗಳು ಎದುರಾಗಲಿವೆ. ಕೃಷಿ ಚಟುವಟಿಕೆಗಳಿಗೆ ಅಡೆತಡೆಗಳುಂಟಾಗಬಹುದು. ವೈದ್ಯಕೀಯ ವೃತ್ತಿಯವರಿಗೆ ಮುನ್ನಡೆ ಸಿಗಲಿದೆ. ನಿರುದ್ಯೋಗಿಗಳು ತಾತ್ಕಾಲಿಕ ಉದ್ಯೋಗ ಸಿಗಲಿದೆ.

ಕುಂಭ: ಮೇಲ್ವರ್ಗದ ಅಧಿಕಾರಿಗಳಿಗೆ ಕಾರ್ಯದೊತ್ತಡ ಹೆಚ್ಚಾಗಲಿದೆ. ನಿರೀಕ್ಷಿತ ಕೆಲಸ ಕಾರ್ಯಗಳು ಅಂದುಕೊಂಡಂತೇ ನಡೆಯಲಿದೆ. ಅವಿವಾಹಿತರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಪ್ರಯಾಣದಲ್ಲಿ ವಂಚನೆಯ ಭೀತಿಯಿರಲಿದೆ. ದಿನದಂತ್ಯಕ್ಕೆ ಶುಭ ಸುದ್ದಿ.

ಮೀನ: ಮನೆಯಲ್ಲಿ ಸಾಂಸಾರಿಕವಾಗಿ ಭಿನ್ನಾಭಿಪ್ರಾಯಗಳು ಕಂಡುಬರಲಿವೆ. ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ನೆರೆಹೊರೆಯವರೊಂದಿಗೆ ನೀರಿನ ವಿಚಾರಕ್ಕೆ ಭಿನ್ನಾಭಿಪ್ರಾಯ ಕಂಡುಬರಬಹುದು. ದುಡುಕಿನ ವರ್ತನೆ ತೋರದಿರಿ. ದೇವತಾ ಪ್ರಾರ್ಥನೆ ಮಾಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Durga mantra: ದುರ್ಗಾ ದೇವಿಯ ಈ ಸ್ತೋತ್ರ ಓದಿದರೆ ಸೋಲಿನ ಭಯವಿರಲ್ಲ

Shiva Mantra: ಶಿವನ ಅನುಗ್ರಹಕ್ಕಾಗಿ ಇಂದು ಈ ಮಂತ್ರವನ್ನು ಓದಿದರೆ ಶುಭ

Hanuman Chalisa: ಹನುಮಾನ್ ಚಾಲೀಸಾ ಕನ್ನಡದಲ್ಲಿ: ಇಂದು ತಪ್ಪದೇ ಓದಿ

Lakshmi Mantra: ಶುಕ್ರವಾರದಂದು ತಪ್ಪದೇ ಲಕ್ಷ್ಮೀ ದೇವಿಯ ಈ ಮಂತ್ರವನ್ನು ಜಪಿಸಿ

Mahavishnu Mantra: ಗುರುವಾರ ಮಹಾವಿಷ್ಣುವಿನ ಈ ಸ್ತೋತ್ರವನ್ನು ತಪ್ಪದೇ ಓದಿ

ಮುಂದಿನ ಸುದ್ದಿ
Show comments