Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಮಂಗಳವಾರ, 7 ಜನವರಿ 2020 (08:52 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಎಷ್ಟೋ ದಿನಗಳಿಂದ ಕಾಡುತ್ತಿದ್ದ ಸಮಸ್ಯೆಯೊಂದಕ್ಕೆ ಪರಿಹಾರ ಸಿಗಲಿದೆ. ಮನಸ್ಸಿಗೆ ಸಂತೋಷ ಕೊಡುವ ಕೆಲಸ ಮಾಡಲಿದ್ದೀರಿ. ಧಾರ್ಮಿಕ ಕ್ಷೇತ್ರಗಳ ಸಂದರ್ಶನ ಯೋಗವಿದೆ. ಕಾರ್ಮಿಕ ವರ್ಗದವರಿಗೆ ಉತ್ತಮ ಉದ್ಯೋಗಾವಕಾಶಗಳು ಲಭಿಸಲಿವೆ.

ವೃಷಭ: ಮನೆಯಲ್ಲಿ ಶುಭ ಮಂಗಲ ಕಾರ್ಯಗಳ ಸಿದ್ಧತೆಗಾಗಿ ಓಡಾಟವಿರುತ್ತದೆ. ಮಹಿಳೆಯರಿಗೆ ಆರೋಗ್ಯದಲ್ಲಿ ಏರುಪೇರಾಗಬಹುದು. ಕಾಳಜಿ ಅಗತ್ಯ. ಹಿರಿಯರ ಪುಣ್ಯ ಕ್ಷೇತ್ರ ಸಂದರ್ಶನಕ್ಕೆ ಏರ್ಪಾಟು ಮಾಡುವಿರಿ. ವಿದ್ಯಾರ್ಥಿಗಳಿಗೆ ಮುನ್ನಡೆಯಿರಲಿದೆ.

ಮಿಥುನ: ಉದ್ಯೋಗಿಗಳಿಗೆ ಉದ್ಯೋಗದಲ್ಲಿ ಮುನ್ನಡೆಯ ಲಾಭವಾಗಲಿದೆ. ಆರ್ಥಿಕವಾಗಿ ಆದಾಯಕ್ಕೆ ಕೊರತೆಯಿರದು. ಆದರೆ ದುಂದುವೆಚ್ಚಗಳಿಗೆ ಕಡಿವಾಣ ಹಾಕಿ. ಹಿರಿಯರಿಂದ ಬಂದಿದ್ದ ಬಳುವಳಿ ಕೈ ಜಾರುವ ಭೀತಿ ಎದುರಾಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ಕರ್ಕಟಕ: ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ ಸಿಗದೇ ತೊಂದರೆಯಾಗಬಹುದು. ಆರ್ಥಿಕವಾಗಿ ಸಾಲ ಮಾಡುವಾಗ ಎಚ್ಚರವಾಗಿರಿ. ಮಾನಸಿಕ ಚಿಂತೆಗಳನ್ನು ಸಂಗಾತಿಯೊಂದಿಗೆ ಹಂಚಿಕೊಂಡರೆ ಪರಿಹಾರ ಸಿಗಬಹುದು. ಮಕ್ಕಳ ಭವಿಷ್ಯಕ್ಕೆ ಯೋಜನೆ ರೂಪಿಸುವಿರಿ.

ಸಿಂಹ: ಹೊಸ ಕೆಲಸ ಕಾರ್ಯಗಳಿಗೆ ಕೈ ಹಾಕಲು ಇದು ಸಕಾಲ. ಆರ್ಥಿಕವಾಗಿ ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ನಿರುದ್ಯೋಗಿಗಳಿಗೆ ಸರಕಾರಿ ಉದ್ಯೋಗದ ಯೋಗವಿದೆ. ಅವಕಾಶಗಳನ್ನು ಬಳಸಿಕೊಳ್ಳಿ.

ಕನ್ಯಾ: ಆದಾಯಕ್ಕೆ ಕೊರತೆಯಿಲ್ಲದೇ ಇದ್ದರೂ ಮಾನಸಿಕವಾಗಿ ನೆಮ್ಮದಿ ಇಲ್ಲವಾದೀತು. ಸಾಂಸಾರಿಕವಾಗಿ ಭಿನ್ನಾಭಿಪ್ರಾಯಗಳು ಮೂಡಬಹುದು. ತಾಳ್ಮೆಯಿಂದ ನಿಭಾಯಿಸಬೇಕು. ಆರೋಗ್ಯದಲ್ಲಿ ಏರುಪೇರಾಗಬಹುದು, ಕಾಳಜಿವಹಿಸಿ.

ತುಲಾ: ದುರ್ಜನರ ಸಂಗದಿಂದ ಕಾರ್ಯ ಹಾನಿ, ಮಾನ ಹಾನಿಯಾದೀತು. ಎಚ್ಚರವಾಗಿರಿ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿ ಯೋಗವಿದೆ. ಉದ್ಯೋಗ ಕ್ಷೇತ್ರದಲ್ಲಿ ಜವಾಬ್ಧಾರಿಗಳು ಹೆಚ್ಚಲಿವೆ. ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರುವುದು.

ವೃಶ್ಚಿಕ: ಸಾಂಸಾರಿಕವಾಗಿ ಸಂಬಂಧಗಳು ಉತ್ತಮಗೊಳ್ಳಲಿವೆ. ದಾಯಾದಿ ಕಲಹಗಳಿಗೆ ಅಂತ್ಯ ಸಿಗಲಿದೆ. ಆದರೆ ನೆರೆಹೊರೆಯವರೊಂದಿಗೆ ವ್ಯವಹರಿಸುವಾಗ ಎಚ್ಚರವಿರಲಿ. ಶುಭ ಮಂಗಲ ಕಾರ್ಯಗಳಿಗೆ ಅಡೆತಡೆ ಉಂಟಾದೀತು. ತಾಳ್ಮೆಯಿಂದಿರಿ.

ಧನು: ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರಲಿದೆ. ಧಾರ್ಮಿಕ ಕಾರ್ಯಗಳಿಗಾಗಿ ಧನವಿನಿಯೋಗವಾಗಲಿದೆ. ಕೌಟುಂಬಿಕ ಕೆಲಸಗಳಿಗಾಗಿ ಅಧಿಕ ಓಡಾಟ ನಡೆಸಬೇಕಾಗುತ್ತದೆ. ಸ್ತ್ರೀಯರೊಂದಿಗೆ ವ್ಯವಹರಿಸುವಾಗ ಎಚ್ಚರದಿಂದಿರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಕರ: ಮಹಿಳಾ ಉದ್ಯೋಗಿಗಳಿಗೆ ಉದ್ಯೋಗ ಕ್ಷೇತ್ರದಲ್ಲಿ ಚಿಂತೆ ತಪ್ಪದು. ದುಡುಕು ಮಾತಿನಿಂದ ಕಲಹವಾಗದಂತೆ ಎಚ್ಚರವಹಿಸಿ. ಕಷ್ಟದ ಸಂದರ್ಭದಲ್ಲಿ ಬಂಧು ಮಿತ್ರರ ನೆರವು ದೊರೆಯಲಿದೆ. ಹಿತ ಶತ್ರುಗಳ ಬಗ್ಗೆ ಎಚ್ಚರವಾಗಿರಿ. ಕಿರು ಸಂಚಾರ ಮಾಡುವಿರಿ.

ಕುಂಭ: ಅಂದುಕೊಂಡ ಕಾರ್ಯಗಳು ಸುಗಮವಾಗಿ ನೆರವೇರಿ ಮನಸ್ಸಿಗೆ ನೆಮ್ಮದಿಯಾಗುವುದು. ಆದರೆ ಸಂಗಾತಿಯ ಕಿರಿ ಕಿರಿ ಅಸಹನೀಯವೆನಿಸಲಿದೆ. ಮಕ್ಕಳೊಂದಿಗೆ ಸಂತಸದ ಕ್ಷಣ ಕಳೆಯುವಿರಿ. ಧಾರ್ಮಿಕ ಕಾರ್ಯಗಳಿಗೆ ಸಿದ್ಧತೆ ನಡೆಸುವಿರಿ. ದೇವತಾ ಪ್ರಾರ್ಥನೆ ಮಾಡಿ.

ಮೀನ: ಉದ್ಯೋಗ ಕ್ಷೇತ್ರದಲ್ಲಿ ಸ್ಥಾನ ಪಲ್ಲಟವಾಗುವ ಸಾಧ‍್ಯತೆಯಿದೆ. ಹೊಸ ನಿವೇಶನ ಖರೀದಿಗೆ ಇದು ಸಕಾಲ. ಆದರೆ ಲೆಕ್ಕ ಪತ್ರಗಳ ಬಗ್ಗೆ ನಿಗಾ ಇರಲಿ. ಅವಿವಾಹಿತರ ವಿವಾಹ ಪ್ರಯತ್ನಕ್ಕೆ ಹಲವು ಅಡೆತಡೆಗಳು ತೋರಿಬಂದೀತು. ಕುಲದೇವರ ಪ್ರಾರ್ಥನೆ ಮಾಡಿ.

Share this Story:

Follow Webdunia kannada

ಮುಂದಿನ ಸುದ್ದಿ

ಮೇಷರಾಶಿಯವರು ಬೇಗ ಧನವಂತರಾಗಲು ಆಮೆಯ ಮೂರ್ತಿಯನ್ನು ಹೀಗೆ ಮಾಡಿ