Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಬುಧವಾರ, 8 ಜನವರಿ 2020 (09:20 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಸಾಂಸಾರಿಕವಾಗಿ ಅನಗತ್ಯವಾಗಿ ಭಿನ್ನಾಭಿಪ್ರಾಯಗಳನ್ನು ಮೈಮೇಲೆಳೆದುಕೊಳ್ಳಬೇಡಿ. ಸಂಗಾತಿಯೊಂದಿಗೆ ಹೊಂದಾಣಿಕೆಯಿಂದ ನಡೆದುಕೊಳ್ಳಿರಿ. ಉದ್ಯೋಗ ನಷ್ಟವಾಗುವ ಭೀತಿ ಎದುರಾಗಲಿದೆ. ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯಿಂದ ನಿಭಾಯಿಸಿ.

ವೃಷಭ: ಕೌಟುಂಬಿಕ ವಿಚಾರದಲ್ಲಿ ನಿರ್ಧಾರ ಕೈಗೊಳ್ಳುವಾಗ ಅನಿಶ್ಚಿತತೆ ಕಾಡಬಹುದು. ಪ್ರೇಮಿಗಳ ಪಾಲಿಗೆ ಶುಭ ದಿನ. ಸಂಗಾತಿಯ ಮನದಾಸೆ ಪೂರೈಸುವಿರಿ. ವೃತ್ತಿರಂಗದಲ್ಲಿ ಮುನ್ನಡೆ ತೋರಿಬರಲಿದೆ. ಆದರೆ ಹಿತ ಶತ್ರುಗಳ ಬಗ್ಗೆ ಎಚ್ಚರವಹಿಸಿ.

ಮಿಥುನ: ಆರೋಗ್ಯ ಸ್ಥಿತಿಯಲ್ಲಿ ಇದುವರೆಗೆ ಎದುರಾಗಿದ್ದ ಸಮಸ್ಯೆಗಳು ನಿವಾರಣೆಯಾಗಲಿದ್ದು, ಸುಖ ಸಂತೋಷ ಗಳಿಸುವಿರಿ. ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ನಿರುದ್ಯೋಗಿಗಳಿಗೆ ಸ್ವ ಉದ್ಯೋಗ ಮಾಡುವುದು ಲಾಭ ತಂದುಕೊಡಲಿದೆ. ವಿದ್ಯಾರ್ಥಿಗಳಿಗೆ ಮುನ್ನಡೆಯಿರಲಿದೆ.

ಕರ್ಕಟಕ: ನಿಮ್ಮ ಸಮಯೋಚಿತ ನಿರ್ಧಾರದಿಂದ ಎದುರಾಗುವ ಸಮಸ್ಯೆಗಳನ್ನು ಪರಿಹರಿಸುವಿರಿ. ವಾತ ಸಂಬಂಧೀ ಆರೋಗ್ಯ ಸಮಸ್ಯೆ ಕಂಡುಬಂದೀತು, ಕಾಳಜಿವಹಿಸಿ. ಹಣಕಾಸಿನ ಮುಗ್ಗಟ್ಟುಗಳು ಎದುರಾದೀತು. ಮಾನಸಿಕವಾಗಿ ದೃಢವಾಗಬೇಕಾಗಿದೆ.

ಸಿಂಹ: ನಿರ್ಧಾರ ಕೈಗೊಳ್ಳುವಾಗ ಚಿತ್ತ ಚಾಂಚಲ್ಯ ಕಾಡಲಿದೆ. ಉದ್ಯೋಗ, ವ್ಯವಹಾರ ಕ್ಷೇತ್ರದಲ್ಲಿ ಹೆಚ್ಚು ಲಾಭ ಕಂಡುಕೊಳ್ಳುವಿರಿ. ಸಾಂಸಾರಿಕವಾಗಿ ಭಿನ್ನಾಭಿಪ್ರಾಯಗಳು ದೂರವಾಗಲಿವೆ. ಮಕ್ಕಳ ಭವಿಷ್ಯಕ್ಕೆ ಯೋಜನೆ ರೂಪಿಸುವಿರಿ.  ದೇವತಾ ಪ್ರಾರ್ಥನೆ ಮಾಡಿ.

ಕನ್ಯಾ: ಮನೆಯಲ್ಲಿ ಶುಭ ಮಂಗಲ ಕಾರ್ಯಗಳನ್ನು ನೆರವೇರಿಸುವಿರಿ. ಬಂಧು ಮಿತ್ರರ ಸಮಾಗಮದಿಂದ ಮನಸ್ಸಿಗೆ ಖುಷಿಯಾಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ಕಾರ್ಯದೊತ್ತಡವಿರಲಿದೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ. ಕಿರು ಸಂಚಾರ ಮಾಡುವಿರಿ.

ತುಲಾ: ಕೌಟುಂಬಿಕವಾಗಿ ಮನಸ್ಸಿಗೆ ನೋವಾಗುವಂತಹ ಘಟನೆಗಳು ನಡೆದೀತು. ಪ್ರೀತಿ ಪಾತ್ರರ ಬಗ್ಗೆ ಹೆಚ್ಚಿನ ಕಾಳವಹಿಸಿ. ವೃತ್ತಿರಂಗದಲ್ಲಿ ಸಂಯಮದಿಂದ ನಡೆದುಕೊಳ್ಳಬೇಕು. ಆರ್ಥಿಕವಾಗಿ ಆದಾಯಕ್ಕೆ ನಾನಾ ಮಾರ್ಗ ಹುಡುಕುವಿರಿ. ಕರ್ತವ್ಯದಲ್ಲಿ ನಿರಾಸಕ್ತಿ ಮೂಡಬಹುದು.

ವೃಶ್ಚಿಕ: ಸಹೋದರರೊಂದಿಗಿನ ಸಂಬಂಧದಲ್ಲಿ ಸಣ್ಣ ಪುಟ್ಟ ವಿಚಾರಕ್ಕೆ ಭಿನ್ನಾಭಿಪ್ರಾಯಗಳು ಮೂಡಬಹುದು. ಹಿರಿಯರ ಸಲಹೆಗೆ ಕಿವಿಗೊಡಿ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆ ಲಭಿಸಬಹುದು.

ಧನು: ಪ್ರೀತಿ ಪಾತ್ರರ ಭೇಟಿ ಮನಸ್ಸಿಗೆ ಸಂತಸ ಕೊಡಲಿದೆ. ಆದರೆ ಮಕ್ಕಳ ವಿಚಾರದಲ್ಲಿ ಚಿಂತೆ, ಬೇಸರದ ಸುದ್ದಿ ಕೇಳಿಬರಬಹುದು. ಮಹಿಳೆಯರಿಗೆ ಕೌಟುಂಬಿಕ ಜವಾಬ್ಧಾರಿ ಹೆಚ್ಚುವುದು. ನಿರುದ್ಯೋಗಿಗಳು ಪಾಲಿಗೆ ಬಂದ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು.

ಮಕರ: ಆಕಸ್ಮಿಕವಾಗಿ ಬರುವ ಹಣ, ಅವಕಾಶಗಳನ್ನು ವ್ಯರ್ಥ ಮಾಡಬೇಡಿ. ದೈವಾನುಕೂಲದಿಂದ ಇಂದು ನೀವು ಕೈ ಹಿಡಿಯುವ ಕೆಲಸಗಳು ಯಶಸ್ವಿಯಾಗಲಿವೆ.  ಹೊಸ ಸವಾಲುಗಳಿಗೆ ಸಿದ್ಧರಾಗಬೇಕಾಗುತ್ತದೆ. ಮಹಿಳೆಯರಿಗೆ ಚಿನ್ನಾಭರಣ ಖರೀದಿ ಯೋಗವಿದೆ.

ಕುಂಭ: ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ದೊರೆಯಲಿದೆ. ತಾಳ್ಮೆ, ಸಮಾಧಾನದಿಂದ ಮುಂದುವರಿದರೆ ಅಂದುಕೊಂಡ ಗುರಿ ಸಾಧಿಸುವಿರಿ. ದೇಹಾರೋಗ್ಯದ ಮೇಲೆ ಕಾಳಜಿವಹಿಸಿ. ಧಾರ್ಮಿಕ ಕ್ಷೇತ್ರಗಳ ಸಂದರ್ಶನ ಯೋಗವಿದೆ. ಅಪರಿಚಿತರೊಂದಿಗೆ ವ್ಯವಹರಿಸುವಾಗ ಎಚ್ಚರ.

ಮೀನ: ಸಂಗಾತಿಯು ಮಾಡುವ ಎಡವಟ್ಟಿನಿಂದ ತೊಂದರೆಗೆ ಸಿಲುಕಿಕೊಳ್ಳುತ್ತೀರಿ. ಹಿರಿಯರಿಂದ ಬರುವ ಹಿತವಚನಗಳಿಗೆ ಕಿವಿಗೊಟ್ಟರೆ ಉತ್ತಮ. ಉದ್ಯೋಗ ಕ್ಷೇತ್ರದಲ್ಲಿ ಬದಲಾವಣೆ ಸಾಧ‍್ಯತೆಯಿದೆ. ಆರ್ಥಿಕವಾಗಿ ದುಂದುವೆಚ್ಚಗಳಿಗೆ ಕಡಿವಾಣ ಹಾಕಿದರೆ ಒಳಿತು.

Share this Story:

Follow Webdunia kannada

ಮುಂದಿನ ಸುದ್ದಿ

ಗಣಪತಿಯ ದೇವಸ್ಥಾನಕ್ಕೆ ಹೋದಾಗ ಹೀಗೆ ಮಾಡಿದರೆ ನಿಮ್ಮ ಕೋರಿಕೆಗಳು ಈಡೇರುತ್ತದೆಯಂತೆ