Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಗುರುವಾರ, 9 ಜನವರಿ 2020 (09:07 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ವ್ಯಾಪಾರ, ವ್ಯವಹಾರದಲ್ಲಿ ಆದಾಯ ದ್ವಿಗುಣಗೊಳ್ಳಲಿದೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ಆದರೆ ಉದ್ಯೋಗದಲ್ಲಿ ಕಾರ್ಯದೊತ್ತಡ, ಕಿರಿ ಕಿರಿ ತಪ್ಪದು. ಸಾಂಸಾರಿಕವಾಗಿ ಸಂಗಾತಿಯ ಅಸಮಾಧಾನಕ್ಕೆ ಗುರಿಯಾಗಬೇಕಾಗಬಹುದು. ತಾಳ್ಮೆಯಿಂದಿರಿ.

ವೃಷಭ: ಅವಿವಾಹಿತರಿಗೆ ಶೀಘ‍್ರವೇ ಕಲ್ಯಾಣ ಭಾಗ್ಯವಿದೆ. ಪ್ರೇಮಿಗಳಿಗೆ ಮನೆಯವರಿಂದ ವಿರೋಧ ವ್ಯಕ್ತವಾಗಬಹುದು. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ. ಉದ್ಯೋಗ ಕ್ಷೇತ್ರದಲ್ಲಿ ಪರಿಶ್ರಮಕ್ಕೆ ತಕ್ಕ ಫಲ ಪಡೆಯುವಿರಿ. ಸಂಗಾತಿಗೆ ಉಡುಗೊರೆ ನೀಡುವಿರಿ.

ಮಿಥುನ: ಆರ್ಥಿಕವಾಗಿ ಹಣಕಾಸಿನ ಮುಗ್ಗಟ್ಟು ಎದುರಾಗುವುದರಿಂದ ಗೃಹನಿರ್ಮಾಣ ಕಾರ್ಯಕ್ಕೆ ಕೈ ಹಾಕಿದ್ದರೆ ಅರ್ಧಕ್ಕೇ ನಿಲ್ಲುವುದು. ಹಿತಶತ್ರುಗಳಿಂದ ತೊಂದರೆ ಅನುಭವಿಸಬೇಕಾದೀತು. ವಿಘ್ನ ನಿವಾರಕನ ಪ್ರಾರ್ಥನೆ ಮಾಡಿ. ವಿದ್ಯಾರ್ಥಿಗಳಿಗೆ ಮುನ್ನಡೆಯಿರಲಿದೆ.

ಕರ್ಕಟಕ:  ವೃತ್ತಿರಂಗದಲ್ಲಿ ಮಾಡಿದ ತಪ್ಪಿಗೆ ಬೆಲೆ ತೆರಬೇಕಾಗುತ್ತದೆ. ದುಡುಕಿ ಮಾತನಾಡಿದರೆ ಕಾರ್ಯ ಹಾಳು ಎಂಬುದನ್ನು ಮರೆಯಬೇಡಿ. ಇಷ್ಟ ದೇವರ ಪ್ರಾರ್ಥನೆ ಮಾಡಿ. ನೂತನ ದಂಪತಿಗಳಲ್ಲಿ ಹೊಂದಾಣಿಕೆ ಕೊರತೆ ಕಾಣಬಹುದು. ಕಿರು ಸಂಚಾರ ಯೋಗವಿದೆ.

ಸಿಂಹ: ರಾಜಕೀಯವಾಗಿ ನಿಮ್ಮ ಸ್ಥಾನ ಮಾನ ಅಧಿಕಗೊಳ್ಳುವುದು. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಪ್ರಶಂಸೆಗೊಳಗಾಗುವಿರಿ. ಆದರೆ ಆರ್ಥಿಕವಾಗಿ ದುರಾಸೆಯಾಗಬಹುದು. ಸಂಗಾತಿಯ ಸಲಹೆಗೆ ಕಿವಿಗೊಟ್ಟರೆ ಉತ್ತಮ. ವ್ಯವಹಾರದಲ್ಲಿ ಎಚ್ಚರ.

ಕನ್ಯಾ: ಬಂಧು ಮಿತ್ರರ ಭೇಟಿಯಿಂದ ಮನಸ್ಸಿಗೆ ನೆಮ್ಮದಿಯಾಗುವುದು. ಮಕ್ಕಳ ವಿಚಾರದಲ್ಲಿ ಅಭಿವೃದ್ಧಿ ಮುನ್ನಡೆ ಕಂಡು ಸಂತಸವಾಗಲಿದೆ. ದೂರ ಸಂಚಾರ ಮಾಡಬೇಕಾಗುತ್ತದೆ. ಪ್ರಯಾಣದಲ್ಲಿ ಎಚ್ಚರ. ಉದ್ಯೋಗ ರಂಗದಲ್ಲಿ ಹೊಂದಾಣಿಕೆ ಅಗತ್ಯ.

ತುಲಾ: ಕಾರ್ಯನಿಮಿತ್ತ ಓಡಾಟ, ದೂರ ಸಂಚಾರಗಳಿಂದ ದೇಹಾರೋಗ್ಯದಲ್ಲಿ ಏರುಪೇರು ಉಂಟಾಗಬಹುದು. ಆದರೆ ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆ ಕಂಡುಬರಲಿದ್ದು, ಅಂದುಕೊಂಡ ಯೋಜನೆಗಳು ಕೈಗೂಡಲಿವೆ. ದೇವತಾ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿಯಾಗಬಹುದು.

ವೃಶ್ಚಿಕ: ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶಗಳು ಒದಗಿ ಬರಲಿವೆ. ಉದ್ಯೋಗಿಗಳಿಗೆ ಉದ್ಯೋಗ ಕ್ಷೇತ್ರದಲ್ಲಿ ಸ್ಥಾನ ಪಲ್ಲಟ ಭೀತಿ ಎದುರಾಗಲಿದೆ. ಕೌಟುಂಬಿಕವಾಗಿ ದಾಯಾದಿಗಳಿಂದ ಕಿರಿ ಕಿರಿ ಎದುರಾಗಬಹುದು. ಹಿರಿಯರ ಮಧ್ಯಸ್ಥಿಕೆಯಲ್ಲಿ ಬಗೆಹರಿಸಿ.

ಧನು: ನಿಮ್ಮ ಅತಿಯಾದ ಕಾಳಜಿಯೇ ಪ್ರೀತಿ ಪಾತ್ರರಿಗೆ ಉಸಿರುಗಟ್ಟಿಸಿದ ಅನುಭವವಾಗಲಿದೆ. ಮಕ್ಕಳ ವಿಚಾರದಲ್ಲಿ ಅನಗತ್ಯ ಚಿಂತೆಗಳಿಗೆ ಕಡಿವಾಣ ಹಾಕುವುದು ಉತ್ತಮ. ಗೃಹ ಸಂಬಂಧೀ ಕಾರ್ಯದೊತ್ತಡ ಅಧಿಕವಾಗಲಿದೆ. ನಿಮ್ಮ ಪಾಲಿನ ಕರ್ತವ್ಯ ಮುಗಿಸಿದ ನೆಮ್ಮದಿ ಸಿಗಲಿದೆ.

ಮಕರ: ಆರ್ಥಿಕವಾಗಿ ಆದಾಯವಿದ್ದರೂ ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ. ವಿದ್ಯಾರ್ಥಿಗಳು ಕೆಟ್ಟ ಸ್ನೇಹ ಸಂಗದಿಂದ ದೂರವಾದರೆ ಉತ್ತಮ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ಅನಿರೀಕ್ಷಿತ ಯಾತ್ರೆಗೆ ಸಿದ್ಧರಾಗಬೇಕಾಗುತ್ತದೆ.

ಕುಂಭ: ಯೋಗ್ಯ ವಯಸ್ಕರಿಗೆ ಮದುವೆಯ ಚಿಂತೆ ಕಾಡಲಿದೆ. ಒಳ್ಳೆಯ ಸಂಬಂಧಗಳು ಬಂದರೂ ಸ್ವಲ್ಪದರಲ್ಲೇ ಕೈತಪ್ಪಿ ಹೋಗಲಿದೆ. ಇಂಜಿನಿಯರಿಂಗ್ ವೃತ್ತಿಯವರಿಗೆ ಉದ್ಯೋಗದಲ್ಲಿ ಮುನ್ನಡೆಯಿರಲಿದೆ. ಮುಂಗೋಪಕ್ಕೆ ಕಡಿವಾಣ ಹಾಕಿದರೆ ಉತ್ತಮ.

ಮೀನ: ವಿದ್ಯಾರ್ಥಿಗಳಿಗೆ ವಿದ್ಯಾಭ‍್ಯಾಸದಲ್ಲಿ ಒಂದು ರೀತಿಯ ಆಲಸ್ಯತನ ಕಂಡುಬರಲಿದೆ. ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಬದಲಾವಣೆ ಗಮನಕ್ಕೆ ಬರಲಿದೆ. ಆರ್ಥಿಕವಾಗಿ ಅನವಶ್ಯಕ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ. ಆರೋಗ್ಯದಲ್ಲಿ ಕಾಳಜಿಯಿರಲಿ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಗಂಡ-ಹೆಂಡತಿ ಸಂಬಂಧ ಚೆನ್ನಾಗಿರಬೇಕೆಂದರೆ ಬೆಡ್ ರೂಂನಲ್ಲಿ ಈ ಚಿತ್ರ ಹಾಕಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments