Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶುಕ್ರವಾರ, 10 ಜನವರಿ 2020 (08:40 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಕಷ್ಟದ ಸಮಯದಲ್ಲಿ ಗೆಳೆಯರಿಂದ ಬರುವ ಸೂಕ್ತ ಸಲಹೆಗಳು ನೆರವಿಗೆ ಬರಲಿವೆ. ಮಾನಸಿಕವಾಗಿ ಶಾಂತಿ ಕಂಡುಕೊಳ್ಳಲು ಯತ್ನಿಸುವಿರಿ. ಆರ್ಥಿಕವಾಗಿ ಧನಾರ್ಜನೆಗೆ ಹೊಸ ಯೋಜನೆಗಳಿಗೆ ಕೈ ಹಾಕುವಿರಿ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ.

ವೃಷಭ: ಜೀವನದಲ್ಲಿ ಎದುರಾಗುವ ಏರುಪೇರುಗಳಿಗೆ ಸಿದ್ಧರಾಗಬೇಕಾಗುತ್ತದೆ. ವಾಸಸ್ಥಳ ಬದಲಾವಣೆಗೆ ಚಿಂತನೆ ನಡೆಸುವಿರಿ. ಮುಂದಿನ ದಿನಗಳಲ್ಲಿ ಆರ್ಥಿಕ ಮುಗ್ಗಟ್ಟುಗಳು ಎದುರಾಗಲಿವೆ. ಇದಕ್ಕೆ ಇಂದೇ ಸಿದ್ಧರಾಗಿ. ನೂತನ ದಂಪತಿಗಳಿಗೆ ಶುಭ ದಿನ.

ಮಿಥುನ: ಕೃಷಿಕರಿಗೆ ಯಂತ್ರೋಪಕರಣಗಳ ಖರೀದಿಗಾಗಿ ಧನವ್ಯಯ ಮಾಡಬೇಕಾಗುವುದು. ವ್ಯಾಪಾರದಲ್ಲಿ ಕೊಂಚ ಹಿನ್ನಡೆಯಾದರೂ ನಷ್ಟವಾಗದು. ಉಪಯೋಗವಿಲ್ಲವೆಂದು ಬಿಟ್ಟಿದ್ದ ವಸ್ತುವೇ ಇಂದು ನಿಮ್ಮ ನೆರವಿಗೆ ಬರುವುದು. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

ಕರ್ಕಟಕ:  ಸಾಂಸಾರಿಕವಾಗಿ ಎಲ್ಲರೂ ಇದ್ದರೂ ಏಕಾಂಗಿತನ ಕಾಡಬಹುದು. ಯಾವುದೋ ಮಾನಸಿಕ ಸಮಸ್ಯೆ ನಿಮ್ಮನ್ನು ಕೊರಗುವಂತೆ ಮಾಡಲಿದೆ. ನಿರುದ್ಯೋಗಿಗಳು ಉತ್ತಮ ಅವಕಾಶಗಳನ್ನು ಪಡೆಯುವರು. ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡುವಿರಿ.

ಸಿಂಹ: ದೈವಾನುಕೂಲದಿಂದ ಇಂದು ನೀವು ಕೈಹಿಡಿವ ಕೆಲಸಗಳು ಯಶಸ್ವಿಯಾಗಲಿವೆ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಇದು ಸಕಾಲ. ವೃತ್ತಿ ಸಂಬಂಧವಾಗಿ ಸಂಚಾರ ನಡೆಸಬೇಕಾಗುತ್ತದೆ. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಕಾರ್ಯದೊತ್ತಡವಿರಲಿದೆ.

ಕನ್ಯಾ: ಸಂಸಾರ ಸುಖಕ್ಕೆ ಕೊರತೆಯಿರದು. ದಾಂಪತ್ಯದಲ್ಲಿ ಅನ್ಯೋನ್ಯತೆಯಿರುವುದು. ಮಕ್ಕಳ ದೇಹಾರೋಗ್ಯದ ಬಗ್ಗೆ ಕೊಂಚ ಕಾಳಜಿವಹಿಸುವುದು ಉತ್ತಮ. ಸ್ವ ಉದ್ಯೋಗಿಗಳಿಗೆ ವ್ಯವಹಾರದಲ್ಲಿ ಕೊಂಚ ಹಿನ್ನಡೆಯಾದೀತು. ಆದರೂ ತಾಳ್ಮೆ ಕಳೆದುಕೊಳ್ಳಬೇಡಿ.

ತುಲಾ: ಹೊಸ ಗೆಳೆಯರ ಭೇಟಿಯಾಗುವಿರಿ. ವ್ಯವಹಾರದಲ್ಲಿ ಬರುವ ತೊಂದರೆಗಳ ನಿವಾರಣೆಗೆ ಕ್ರಿಯಾಶೀಲತೆಯಿಂದ ಯೋಚಿಸಬೇಕಾದ ಅಗತ್ಯವಿದೆ. ನಿರುದ್ಯೋಗಿಗಳಿಗೆ ಸರಕಾರಿ ಉದ್ಯೋಗದ ಯೋಗವಿದೆ. ದಾಯಾದಿ ಕಲಹಗಳು ಅಂತ್ಯವಾಗಲಿದೆ.

ವೃಶ್ಚಿಕ: ವೃತ್ತಿರಂಗದಲ್ಲಿ ಇಷ್ಟು ದಿನ ನಿಮ್ಮ ಬೆನ್ನಹಿಂದೆ ನಡೆಯುತ್ತಿದ್ದ ಮೋಸ, ವಂಚನೆ ಬೆಳಕಿಗೆ ಬರಲಿವೆ. ಚಾಡಿ ಮಾತುಗಳಿಗೆ ಕಿವಿಗೊಡಬೇಕಿಲ್ಲ. ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರುವುದು. ಸಂಗಾತಿಯೊಂದಿಗೆ ಹೊಂದಾಣಿಕೆ ಅಗತ್ಯ.

ಧನು: ಗೃಹ ಸಂಬಂಧೀ ಕೆಲಸಗಳಿಗಾಗಿ ಅಧಿಕ ಓಡಾಟ ನಡೆಸಬೇಕಾಗುತ್ತದೆ. ನಿಮ್ಮ ಪ್ರೀತಿಪಾತ್ರ ವಸ್ತುವೊಂದು ಕಳೆದುಕೊಂಡ ದುಃಖ ಅನುಭವಿಸಬೇಕಾಗುತ್ತದೆ. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ವಿದ್ಯಾರ್ಥಿಗಳಿಗೆ ಏಕಾಗ್ರತೆಯ ಕೊರತೆ ಕಾಡಲಿದೆ.

ಮಕರ: ಅನಗತ್ಯ ಚಿಂತೆಗಳಿಂದ ಉದ್ಯೋಗ, ವ್ಯವಹಾರದಲ್ಲಿ ನಿಷ್ಠುರಕ್ಕೆ ಕಾರಣವಾಗುವಿರಿ. ಆಲಸ್ಯತನ ಬಿಡದಿದ್ದರೆ ಕಾರ್ಯ ನಡೆಯದು. ಪರಿಶ್ರಮಕ್ಕೆ ತಕ್ಕ ಫಲ ದೊರೆಯಲಿದೆ. ಕೋರ್ಟು ಕಚೇರಿ ವ್ಯವಹಾರದಲ್ಲಿ ಹಿನ್ನಡೆಯಾದೀತು. ಹಾಗಿದ್ದರೂ ಕಷ್ಟದ ಸಮಯದಲ್ಲಿ ಮಿತ್ರರ ನೆರವು ಸಿಗಲಿದೆ.

ಕುಂಭ: ಅತಿಯಾದ ಆತ್ಮವಿಶ್ವಾಸ ತೋರಿಸಲು ಹೋದರೆ ಕಾರ್ಯಕ್ಷೇತ್ರದಲ್ಲಿ ತೊಂದರೆ ತಪ್ಪಿದ್ದಲ್ಲ. ವಿಶ್ವಾಸಘಾತುಕರ ಬಗ್ಗೆ ಎಚ್ಚರವಾಗಿರಿ. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆ ಬರುವುದು. ದೂರ ಪ್ರಯಾಣದಲ್ಲಿ ಎಚ್ಚರಿಕೆಯಿಂದಿರಿ.

ಮೀನ: ಮಹಿಳೆಯರಿಗೆ ಚಿನ್ನಾಭರಣ ನಷ್ಟವಾಗುವ ಭೀತಿಯಿದೆ. ಅಪರಿಚಿತರೊಂದಿಗೆ ವ್ಯವಹರಿಸುವಾಗ ಎಚ್ಚರವಾಗಿರಿ. ಹೊಸ ಯೋಜನೆಗಳಿಗೆ ಕೈ ಹಾಕಲು ಕೆಲವು ದಿನ ಕಾಯುವುದು ಒಳಿತು. ಮಕ್ಕಳಿಂದ ಸಂತಸ ಸಿಗಲಿದೆ. ದುಂದು ವೆಚ್ಚಗಳಿಗೆ ಕಡಿವಾಣ ಹಾಕಿ.

Share this Story:

Follow Webdunia kannada

ಮುಂದಿನ ಸುದ್ದಿ

ನೀವು ಮಾಂಗಲ್ಯ ಭಾಗ್ಯ ಗಟ್ಟಿಯಾಗಿರಲು ದೇವಿಗೆ ಪ್ರತಿ ಶುಕ್ರವಾರ ಇದನ್ನು ಅರ್ಪಿಸಿ