Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶನಿವಾರ, 11 ಜನವರಿ 2020 (08:50 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಆಗಾಗ ಸಂಗಾತಿಯ ಜತೆಗೆ ಮನಸ್ತಾಪವಾಗಿ ಮಾನಸಿಕವಾಗಿ ಚಿಂತೆಯಾಗಬಹುದು. ಯಾವುದೇ ಸಮಸ್ಯೆಗಳನ್ನು ಆತ್ಮವಿಶ್ವಾಸದಿಂದಲೇ ಎದುರಿಸಬೇಕು. ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಕೆಲಸ ಕಾರ್ಯಗಳಿಗೆ ಮೆಚ್ಚುಗೆ ಪಡೆಯಲಿದ್ದೀರಿ. ಬಂಧು ಮಿತ್ರರ ಸಹಕಾರ ದೊರೆಯಲಿದೆ.

ವೃಷಭ: ಆರೋಗ್ಯದಲ್ಲಿ ಇದುವರೆಗೆ ಇದ್ದ ಸಮಸ್ಯೆಗಳು ನಿವಾರಣೆಯಾಗಲಿದೆ. ಆರ್ಥಿಕವಾಗಿ ಹಣಕಾಸಿಗೆ ತೊಂದರೆಯಿರದು. ಇದರಿಂದಾಗಿ ನೀವು ಅಂದುಕೊಂಡ ಕೆಲಸ ಕಾರ್ಯಗಳನ್ನು ನೆರವೇರಿಸುವಿರಿ. ಹೊಸ ವಾಹನ ಖರೀದಿ ಯೋಗವಿದೆ. ದಿನದಂತ್ಯಕ್ಕೆ ಶುಭ ಸುದ್ದಿ.

ಮಿಥುನ: ಸಿಟ್ಟಿನ ಭರದಲ್ಲಿ ಆತುರದ ನಿರ್ಧಾರ ಕೈಗೊಳ್ಳಬೇಡಿ. ಉದ್ಯೋಗ ಕ್ಷೇತ್ರದಲ್ಲಿ ಸಂಯಮ ಕಾಪಾಡಿಕೊಳ್ಳಿ. ವ್ಯಾಪಾರ ವ್ಯವಹರಾದಲ್ಲಿ ಮುನ್ನಡೆಯಿರಲಿದೆ. ಹೊಸ ವಸ್ತ್ರಾಭರಣ ಖರೀದಿ ಯೋಗವಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.

ಕರ್ಕಟಕ: ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ನಡೆಸಲಿದ್ದೀರಿ. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡಲು ಖರ್ಚು ವೆಚ್ಚ ಮಾಡಬೇಕಾಗುತ್ತದೆ. ಹಿರಿಯರ ಪುಣ್ಯ ಕ್ಷೇತ್ರಗಳ ಸಂದರ್ಶನ ಯೋಗವಿದೆ. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆಯಿರಲಿದೆ.

ಸಿಂಹ: ಹಿಂದೆ ಮಾಡಿದ ಪಾಪ ಕಾರ್ಯಗಳಿಗೆ ಪ್ರಾಯಶ್ಚಿತ ಅನುಭವಿಸಲಿದ್ದೀರಿ. ಅನಿರೀಕ್ಷಿತ ರೂಪದಲ್ಲಿ ಧನ ಲಾಭವಾಗಲಿದೆ. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳಿಗೆ ಸಿದ್ಧರಾಗಬೇಕಾಗುತ್ತದೆ. ವಾಹನ ಖರೀದಿಯಿಂದ ನಷ್ಟವಾಗಬಹುದು. ಆರೋಗ್ಯದಲ್ಲಿ ಕಾಳಜಿಯಿರಲಿ.

ಕನ್ಯಾ: ಮಾಡದ ತಪ್ಪಿಗೆ ಅನುಭವಿಸುವ ಪರಿಸ್ಥಿತಿ ನಿಮ್ಮದಾಗುತ್ತದೆ. ವೃತ್ತಿರಂಗದಲ್ಲಿ ಅಪರಿಚಿತರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ಸರಕಾರಿ ಉದ್ಯೋಗಿಗಳಿಗೆ ಉದ್ಯೋಗದಲ್ಲಿ ಬಡ್ತಿ ಯೋಗವಿದೆ. ವಿದ್ಯಾರ್ಥಿಗಳು ಪಾಲಿಗೆ ಬಂದ ಅವಕಾಶಗಳನ್ನು ಬಳಸಿಕೊಳ್ಳಬೇಕು.

ತುಲಾ: ಕಾರ್ಯಕ್ಷೇತ್ರದಲ್ಲಿ ನಿಮ್ಮ ಕ್ರಿಯಾತ್ಮಕತೆಯನ್ನು ಪ್ರಕಟಿಸಲಿದ್ದೀರಿ. ದೈವಾನುಕೂಲದಿಂದ ಯಶಸ್ಸು ನಿಮ್ಮ ಕೈಹಿಡಿಯಲಿದೆ. ಸಾಂಸಾರಿಕವಾಗಿ ಸಂಗಾತಿಯ ಸಹಕಾರ ದೊರೆಯಲಿದೆ. ಮಕ್ಕಳ ಭವಿಷ್ಯಕ್ಕೆ ಯೋಜನೆ ರೂಪಿಸುವಿರಿ. ದೇವತಾ ಪ್ರಾರ್ಥನೆ ಮಾಡಿ.

ವೃಶ್ಚಿಕ: ನಿಮ್ಮ ಬೆನ್ನ ಹಿಂದೆ ಇರುವ ನಯವಂಚಕರ ವಂಚನೆ ಬೆಳಕಿಗೆ ಬರಲಿದೆ. ಲೆಕ್ಕ ಪತ್ರಗಳ ಬಗ್ಗೆ ಸರಿಯಾದ ಮಾಹಿತಿಯಿಟ್ಟುಕೊಳ್ಳಿ. ಸಾಂಸಾರಿಕವಾಗಿ ಇಷ್ಟಾರ್ಥ ಸಿದ್ಧಿಗೆ ದೇವರ ಮೊರೆ ಹೋಗುವಿರಿ. ಆರ್ಥಿಕವಾಗಿ ದುಂದು ವೆಚ್ಚಗಳಿಗೆ ಕಡಿವಾಣ ಹಾಕಿ.

ಧನು: ಅನಿರೀಕ್ಷಿತವಾಗಿ ಬರುವ ಖರ್ಚು ವೆಚ್ಚಗಳಿಗೆ ಸಿದ್ಧರಾಗಬೇಕಾಗುತ್ತದೆ. ಬಂಧು ಮಿತ್ರರ ಚಾಡಿ ಮಾತುಗಳಿಗೆ ಮನಸ್ಸಿಗೆ ನೋವಾಗಬಹುದು. ಆಸ್ತಿ ವಿವಾದಗಳಿಗೆ ಹಿರಿಯರ ಮಧ್ಯಸ್ಥಿಕೆ ಪಡೆಯಿರಿ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಬೇಕಾಗುತ್ತದೆ.

ಮಕರ: ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕಾಗಿ ವಿದೇಶ ಯಾನ ಮಾಡುವ ಯೋಗವಿದೆ. ವೃತ್ತಿರಂಗದಲ್ಲಿ ಸ್ಥಾನ ಮಾನ ವೃದ್ಧಿಯಾಗಲಿದೆ. ಆರ್ಥಿಕವಾಗಿ ಉತ್ತಮ ವರಮಾನ ಪಡೆಯುವಿರಿ. ಸಂಗಾತಿಗೆ ಉಡುಗೊರೆ ನೀಡುವಿರಿ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಕುಂಭ: ವಾಹನ ಚಾಲನೆ ವೃತ್ತಿಯಲ್ಲಿರುವವರಿಗೆ ಅನಿರೀಕ್ಷಿತವಾಗಿ ಭೇಟಿಯಾಗುವ ವ್ಯಕ್ತಿಯಿಂದ ಭವಿಷ್ಯಕ್ಕೆ ಹೊಸ ದಾರಿ ಸಿಗಲಿದೆ. ವಿದ್ಯಾರ್ಥಿಗಳು ಶಿಕ್ಷಕ ವೃಂದದವರ ಪ್ರಶಂಸೆಗೊಳಗಾಗಲಿದ್ದಾರೆ. ಆರ್ಥಿಕವಾಗಿ ಅಭಿವೃದ್ಧಿಯಿದ್ದರೂ ಹೊಸ ಯೋಜನೆಗೆ ಕೈ ಹಾಕಲು ಕೆಲವು ದಿನ ಕಾಯುವುದು ಒಳಿತು.

ಮೀನ: ಸಾಂಸಾರಿಕವಾಗಿ ಇರುವ ಹಲವು ಸಮಸ್ಯೆಗಳನ್ನು ಪರಿಹರಿಸಲು ಹಿರಿಯರ ಸಲಹೆ ಪಡೆಯಿರಿ. ನಿರುದ್ಯೋಗಿಗಳಿಗೆ ನಿರಾಶೆಯಾಗಬುದು. ಸ್ವ ಉದ್ಯೋಗಿಗಳಿಗೆ ಮುನ್ನಡೆಯಿರಲಿದೆ. ಅವಿವಾಹಿತರ ವಿವಾಹ ಪ್ರಯತ್ನಕ್ಕೆ ಫಲ ಸಿಗಲಿದೆ. ನೂತನ ದಂಪತಿಗೆ ಸಂತಸದ ದಿನ.

Share this Story:

Follow Webdunia kannada

ಮುಂದಿನ ಸುದ್ದಿ

ನಿಮ್ಮ ಕಾರ್ಯಕ್ಕೆ ತಕ್ಕ ಪ್ರತಿಫಲ ಸಿಗಬೇಕೆಂದರೆ ಈ ನಿಯಮ ಪಾಲಿಸಿ