Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಸೋಮವಾರ, 13 ಜನವರಿ 2020 (08:44 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಉದ್ಯೋಗ ಕ್ಷೇತ್ರದಲ್ಲಿ ಬರುವಂತಹ ಸಮಸ್ಯೆಗಳನ್ನು ಸುಲಭವಾಗಿ ನಿಭಾಯಿಸುವಿರಿ. ಆದರೆ ಸಾಂಸಾರಿಕವಾಗಿ ಭಿನ್ನಾಭಿಪ್ರಾಯಗಳಿಂದಾಗಿ ಮನಸ್ಸು ಹೈರಾಣಾಗುವುದು. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮದ ಅಗತ್ಯವಿದೆ. ದೇವತಾ ಪ್ರಾರ್ಥನೆಯಿಂದ ನೆಮ್ಮದಿ.

ವೃಷಭ: ಅವಿವಾಹಿತರ ವಿವಾಹ ಪ್ರಯತ್ನಕ್ಕೆ ಮುನ್ನಡೆಯಿದ್ದರೂ ಸ್ವಲ್ಪದರಲ್ಲೇ ಸಂಬಂಧಗಳು ಕೈ ತಪ್ಪಿ ಹೋಗಿ ಮನಸ್ಸಿಗೆ ಬೇಸರವಾಗಬಹುದು. ನಿರುದ್ಯೋಗಿಗಳಿಗೆ ಅನಿರೀಕ್ಷಿತ ಅವಕಾಶಗಳು ಒದಗಿಬರಲಿವೆ. ಜಾಣತನದಿಂದ ಬಳಸಿಕೊಳ್ಳಬೇಕು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಿಥುನ: ಮಾನಸಿಕವಾಗಿ ಋಣಾತ್ಮಕ ಚಿಂತೆಗಳು ಕಾಡಲಿವೆ. ಅತಿಯಾದ ಕೆಲಸದಿಂದ ದೇಹ ಹೈರಾಣಾಗಬಹುದು. ನಿಮ್ಮ ಆರೋಗ್ಯದ ಬಗ್ಗೆ ಕಾಳಜಿವಹಿಸಿ. ಮಿತ್ರರೊಂದಿಗೆ ಉತ್ತಮ ಸಮಯ ಕಳೆಯುವಿರಿ. ಸಂಗಾತಿಯ ಸಲಹೆ ಉಪಯೋಗಕ್ಕೆ ಬರುವುದು.

ಕರ್ಕಟಕ: ನಿಮ್ಮ ಜೀವನದ ಶಾಂತಿ ಸಮಾಧಾನ ನೀವು ಕೈಗೊಳ್ಳುವ ನಿರ್ಧಾರದ ಮೇಲೆ ಅವಲಂಬಿತವಾಗಿದೆ. ಅತಿಯಾಗಿ ಇನ್ನೊಬ್ಬರ ಮೇಲೆ ಅವಲಂಬಿಸುವುದು, ನಂಬಿಕೆ ಇಟ್ಟುಕೊಳ್ಳುವುದರಿಂದ ಪಶ್ಚಾತ್ತಾಪ ಪಡಬೇಕಾದೀತು. ಹಿರಿಯರ ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕಾಗುತ್ತದೆ.

ಸಿಂಹ: ಹೆಣ್ಣು ಮಕ್ಕಳಿಗೆ ತವರಿನ ಕಡೆಯಿಂದ ಉಡುಗೊರೆ ಸಿಗಲಿದೆ. ಸಾಮಾಜಿಕವಾಗಿ ಉನ್ನತ ಸ್ಥಾನ ಮಾನ ಲಭ್ಯವಾಗಲಿದೆ. ಆದರೆ ಅಪವಾದಗಳು ಬಾರದಂತೆ ಎಚ್ಚರವಹಿಸಬೇಕು. ಕೌಟುಂಬಿಕವಾಗಿ ಉತ್ತಮ ಸಮಯ ಕಳೆಯುವಿರಿ. ವಿದ್ಯಾರ್ಥಿಗಳಿಗೆ ಮುನ್ನಡೆಯಿರಲಿದೆ.

ಕನ್ಯಾ: ಉದ್ಯೋಗ ಕ್ಷೇತ್ರದಲ್ಲಿ ಯಥಾವತ್ತು ಕಾರ್ಯದೊತ್ತಡ ಅಧಿಕವೆನಿಸಲಿದೆ. ಇಷ್ಟಮಿತ್ರರೊಂದಿಗೆ ಭೋಜನ, ಉತ್ತಮ ಸಮಯ ಕಳೆಯುವಿರಿ. ಅಧಿಕ ಲಾಭ ತರುವ ಯೋಜನೆಗಳಿಗೆ ಕೈ ಹಾಕುವ ಮುನ್ನ ಸಾಕಷ್ಟು ಯೋಚಿಸಿ ಮುಂದೆ ಹೆಜ್ಜೆಯಿಡಿ. ದೇವರ ಮೇಲೆ ಭಕ್ತಿ ಹೆಚ್ಚಲಿದೆ.

ತುಲಾ: ವೃತ್ತಿರಂಗದಲ್ಲಿ ನಿಮ್ಮ ಅತಿಯಾದ ಆತ್ಮವಿಶ್ವಾಸವೇ ನಿಮಗೆ ಮುಳುವಾಗಬಹುದು. ಅಪರಿಚಿತರೊಂದಿಗೆ ವ್ಯವಹರಿಸುವಾಗ ಎಚ್ಚರವಿರಲಿ. ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ಇರುವುದು. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.

ವೃಶ್ಚಿಕ: ವಿದ್ಯಾರ್ಥಿಗಳಿಗೆ ಶಿಕ್ಷಕ ವೃಂದದವರಿಂದ ಮೆಚ್ಚುಗೆ ಸಿಗಲಿದೆ. ಕ್ರಿಯಾಶೀಲತೆಯಿಂದ ಕೆಲಸ ಮಾಡಿದಲ್ಲಿ ವೃತ್ತಿರಂಗದಲ್ಲಿ ಯಶಸ್ಸು ಸಿಗಲಿದೆ. ಆರ್ಥಿಕವಾಗಿ ಹಣಕಾಸಿಗೆ ತೊಂದರೆಯಿರದು. ಸಂಗಾತಿಯ ಆರೋಗ್ಯದಲ್ಲಿ ಏರುಪೇರಾಗಬಹುದು. ಎಚ್ಚರ ಅಗತ್ಯ.

ಧನು: ಕಷ್ಟದ ಸಂದರ್ಭದಲ್ಲಿ ಮಿತ್ರರಿಂದ ಸಕಾಲದಲ್ಲಿ ನೆರವು ಸಿಗಲಿದೆ. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆ ಗಳಿಸುವಿರಿ. ಅನಿರೀಕ್ಷಿತವಾಗಿ ಬಂಧು ಮಿತ್ರರ ಭೇಟಿಯಾಗುವಿರಿ. ಶುಭ ಮಂಗಲ ಕಾರ್ಯಗಳಲ್ಲಿ ಭಾಗಿಯಾಗುವಿರಿ. ಸಾಂಸಾರಿಕವಾಗಿ ಸಂತೋಷವಿರಲಿದೆ.

ಮಕರ: ಅತಿಯಾಗಿ ಮಿತ್ರರ ಮೇಲೆ ಅವಲಂಬಿಸುವ ಬುದ್ಧಿ ಬಿಟ್ಟರೆ ಉತ್ತಮ. ಕೆಲವೊಮ್ಮೆ ನಂಬಿದವರಿಂದಲೇ ದ್ರೋಹವಾಗುತ್ತದೆ ಎಂಬುದನ್ನು ಮರೆಯಬೇಡಿ. ನೂತನ ದಂಪತಿಗಳಿಗೆ ಮಧುಚಂದ್ರ ಭಾಗ್ಯವಿದೆ. ವೃತ್ತಿ ರಂಗದಲ್ಲಿ ಲಾಭವಿಲ್ಲದಿದ್ದರೂ ನಷ್ಟವಾಗದು.

ಕುಂಭ: ಮಕ್ಕಳ ವಿಚಾರವಾಗಿ ಚಿಂತೆಯಾಗುವುದು. ಹಣಕಾಸಿನ ಲೆಕ್ಕಪತ್ರಗಳ ಬಗ್ಗೆ ಎಚ್ಚರ ಅಗತ್ಯ. ಸರಕಾರಿ ಕೆಲಸಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ನಿರುದ್ಯೋಗಿಗಳು ಸ್ವ ಉದ್ಯೋಗದ ಕಡೆಗೆ ಮನಸ್ಸು ಮಾಡುವರು. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿಯಿದೆ.

ಮೀನ: ಮಹಿಳಾ ಉದ್ಯೋಗಿಗಳಿಗೆ ಉದ್ಯೋಗದಲ್ಲಿ ಬಡ್ತಿ, ವೇತನ ಹೆಚ್ಚಳ ಸಾಧ‍್ಯತೆಯಿದೆ. ಮನೆ, ಭೂಮಿ ಖರೀದಿಗೆ ಇದು ಸಕಾಲ. ಆರ್ಥಿಕವಾಗಿ ಅಭಿವೃದ್ಧಿ ಇರಲಿದೆ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ಕಡಿದು ಹೋಗಿದ್ದ ಸಂಬಂಧಗಳು ಮತ್ತೆ ಬೆಸೆಯಲಿವೆ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments