Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಮಂಗಳವಾರ, 14 ಜನವರಿ 2020 (08:52 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.
 

ಮೇಷ: ಸಣ್ಣಪುಟ್ಟ ವಿಚಾರಗಳಿಗೆ ತಲೆಕೆಡಿಸಿಕೊಳ್ಳುವುದನ್ನು ಬಿಟ್ಟು ಭವಿಷ್ಯದ ಬಗ್ಗೆ ಯೋಚನೆ ಮಾಡುವುದು ಒಳ್ಳೆಯದು. ಸಂಗಾತಿಯ ಜತೆಗಿನ ಮನಸ್ತಾಪಗಳಿಗೆ ಪರಿಹಾರ ಕಂಡುಕೊಳ್ಳುವಿರಿ. ಹೊಸ ನಿರ್ಧಾರಗಳನ್ನು ಕೈಗೊಳ್ಳುವಿರಿ. ಆತ್ಮವಿಶ್ವಾಸ ಹೆಚ್ಚಲಿದೆ.

ವೃಷಭ: ಅರ್ಧಕ್ಕೇ ನಿಂತ ಕೆಲಸಗಳಿಗೆ ಚಾಲನೆ ಸಿಗಲಿದೆ. ಆಪ್ತರೊಂದಿಗೆ ಅತ್ಯುತ್ತಮ ಸಮಯ ಕಳೆಯುವಿರಿ. ವೃತ್ತಿರಂಗದಲ್ಲಿ ಸಮಾಧಾನಕರ ವಾತಾವರಣವಿರಲಿದೆ. ಆದರೆ ಆರ್ಥಿಕವಾಗಿ ಅಧಿಕ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕಬೇಕಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಿಥುನ: ಮಾನಸಿಕವಾಗಿ ಒತ್ತಡಗಳಿಂದಾಗಿ ಕೆಲಸದ ಮೇಲೆ ನಿಗಾ ವಹಿಸಲು ಕಷ್ಟವಾಗಬಹುದು. ಮಿತ್ರರಿಂದ ಕಷ್ಟದ ಸಮಯದಲ್ಲಿ ಸಹಾಯ ಸಿಗಲಿದೆ. ಕಾರ್ಯಕ್ಷೇತ್ರದಲ್ಲಿ ಕ್ರಿಯಾಶೀಲತೆ ಪ್ರಕಟಗೊಳ್ಳಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.

ಕರ್ಕಟಕ: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳಿಂದ ಪ್ರಶಂಸೆಗೊಳಗಾಗಲಿದ್ದೀರಿ. ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು ಒದಗಿ ಬರಲಿದೆ. ಸಾಂಸಾರಿಕವಾಗಿ ಭಿನ್ನಾಭಿಪ್ರಾಯಗಳು ಕಂಡುಬರಬಹುದು. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಸಿಂಹ: ಇಂದು ಅನಿರೀಕ್ಷಿತವಾಗಿ ನಿಮ್ಮ ಬದುಕಿಗೆ ತಿರುವು ಸಿಗುವಂತಹ ಘಟನೆಗಳು ನಡೆಯಲಿವೆ. ಹೊಸ ಮಿತ್ರರ ಭೇಟಿ ಮಾಡಲಿದ್ದೀರಿ. ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ವೃತ್ತಿರಂಗದಲ್ಲಿ ಸಹೋದ್ಯೋಗಿಗಳ ಸಹಕಾರ ದೊರೆಯಲಿದೆ. ದೇವತಾ ಪ್ರಾರ್ಥನೆ ಮರೆಯದಿರಿ.

ಕನ್ಯಾ: ಕೆಲವು ವಿಚಾರಗಳಲ್ಲಿ ನಿರ್ಧಾರ ತೆಗೆದುಕೊಳ್ಳುವಾಗ ಗೊಂದಲ ಕಾಡಬಹುದು. ಉದ್ಯೋಗಾಕಾಂಕ್ಷಿಗಳಿಗೆ ಶುಭ ಸುದ್ದಿ. ಸರಕಾರಿ ಕೆಲಸಗಳಲ್ಲಿ ಜಯ ಸಿಗಲಿದೆ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ಪ್ರೇಮಿಗಳಿಗೆ ಹಿರಿಯರ ಒಪ್ಪಿಗೆ ಸಿಗಲಿದೆ.

ತುಲಾ: ಸಂತಾನಾಪೇಕ್ಷಿತ ದಂಪತಿಗಳು ದೇವರ ಮೊರೆ ಹೋಗುವರು. ಸಾಂಸಾರಿಕವಾಗಿ ಹೊಸ ಜವಾಬ್ಧಾರಿಗಳಿಗೆ ಸಿದ್ಧರಾಗಬೇಕಾಗುತ್ತದೆ. ಹಿರಿಯರ ತೀರ್ಥ ಯಾತ್ರೆಗೆ ಸಿದ್ಧತೆ ನಡೆಸುವಿರಿ. ಕೋರ್ಟು ಕಚೇರಿ ವ್ಯವಹಾರಗಳು ಕೈಗೂಡಲಿವೆ. ದಿನದಂತ್ಯಕ್ಕೆ ಶುಭ ಸುದ್ದಿ.

ವೃಶ್ಚಿಕ: ನಿಮ್ಮ ದುಡುಕು ಮಾತು, ವರ್ತನೆ ಇತರರಿಗೆ ಹಿಡಿಸದೇ ಹೋಗಬಹುದು. ನೆರೆಹೊರೆಯವರೊಂದಿಗೆ ವ್ಯವಹರಿಸುವಾಗ ಎಚ್ಚರವಾಗಿರಿ. ಹಣಕಾಸಿನ ಮುಗ್ಗಟ್ಟು ಎದುರಿಸಬೇಕಾಗಬಹುದು. ಹೊಸ ಯೋಜನೆಗೆ ಕೈ ಹಾಕಲು ಕೆಲವು ದಿನ ಕಾಯುವುದು ಒಳಿತು.

ಧನು: ಪ್ರೇಮಿಗಳ ಪಾಲಿಗೆ ಇಂದು ಮಹತ್ವದ ದಿನ. ಅವಿವಾಹಿತರ ವಿವಾಹ ಪ್ರಯತ್ನಕ್ಕೆ ಮುನ್ನಡೆ ದೊರಕಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ. ಹಿತಶತ್ರುಗಳಿಂದ ವಂಚನೆಗೊಳಗಾಗಬೇಕಾದೀತು, ಎಚ್ಚರ. ಸಂಗಾತಿಯ ಸಲಹೆಗೆ ಕಿವಿಗೊಡಿ.

ಮಕರ: ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಏಕಾಗ್ರತೆಗೆ ಭಂಗವಾಗಲಿದೆ. ದೂರ ಪ್ರಯಾಣ ಸಂದರ್ಭದಲ್ಲಿ ಕಳ್ಳತನದ ಭೀತಿಯಿದೆ, ಎಚ್ಚರ. ವಾಹನ, ಭೂಮಿ ಖರೀದಿಗೆ ವೆಚ್ಚವಾಗಲಿದೆ. ವೃತ್ತಿರಂಗದಲ್ಲಿ ಸಾಮರ್ಥ್ಯ ಮೀರಿದ ಕೆಲಸ ನಿಮ್ಮದಾಗಲಿದೆ. ದೇಹಾರೋಗ್ಯದ ಬಗ್ಗೆ ಕಾಳಜಿವಹಿಸಿ.

ಕುಂಭ: ವೃತ್ತಿರಂಗದಲ್ಲಿ ನಿಮ್ಮ ಮೇಲೆ ವಿನಾಕಾರಣ ಅಪವಾದಗಳು ಕೇಳಿಬಂದೀತು. ಮಹಿಳೆಯರೊಂದಿಗೆ ವ್ಯವಹರಿಸುವಾಗ ಎಚ್ಚರ. ಸಾಂಸಾರಿಕವಾಗಿ ಸಮಾಧಾನಕರ ದಿನಗಳಿವು. ಮಕ್ಕಳ ವಿಚಾರದಲ್ಲಿ ಸಂತಸದ ವಾರ್ತೆ ಕೇಳಲಿದ್ದೀರಿ. ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ.

ಮೀನ: ನಿಮ್ಮ ನೆರೆಹೊರೆಯವರೊಂದಿಗೆ ನೀರಿನ ವಿಚಾರಕ್ಕೆ ಕಿರಿ ಕಿರಿಯಾಗಬಹುದು. ವಾಹನ ಸವಾರರಿಗೆ ಅಪಘಾತದ ಭೀತಿಯಿದೆ. ಗೃಹ ಸಂಬಂಧೀ ಕೆಲಸಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ಖರ್ಚು ವೆಚ್ಚಗಳಿದ್ದರೂ ಆದಾಯಕ್ಕೆ ಕೊರತೆಯಿರದು.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments