Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಬುಧವಾರ, 15 ಜನವರಿ 2020 (08:47 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ವ್ಯಾಪಾರಿಗಳಿಗೆ ಕ್ರಯ ವಿಕ್ರಯಗಳಲ್ಲಿ ಸಾಕಷ್ಟು ಲಾಭ ಸಿಗಲಿದೆ. ಹಿರಿಯರಿಗೆ ತೀರ್ಥ ಯಾತ್ರೆ, ದೇವಾಲಯಗಳ ಸಂದರ್ಶನ ಯೋಗವಿದೆ. ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕು. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ಸಾಂಸಾರಿಕ ನೆಮ್ಮದಿ ಕಂಡುಕೊಳ್ಳುವಿರಿ.

ವೃಷಭ: ಉದ್ಯೋಗ ಕ್ಷೇತ್ರದಲ್ಲಿ ವಂಚನೆ ಬೆಳಕಿಗೆ ಬರಲಿದೆ. ವಿನಾಕಾರಣ ಅಪವಾದಗಳು ಬರಬಹುದು. ಎಚ್ಚರಿಕೆಯಿಂದಿರಬೇಕು. ಮಕ್ಕಳ ಶಿಕ್ಷಣಕ್ಕೆ ಸಂಬಂಧಿಸಿದರೆ ಸಂತಸದ ವಾರ್ತೆ ಕೇಳಿಬರಲಿದೆ. ರಾಜಕೀಯ ರಂಗದಲ್ಲಿ ಹಿತಶತ್ರುಬಾಧೆ ಕಂಡುಬರಬಹುದು.

ಮಿಥುನ: ವೃತ್ತಿರಂಗದಲ್ಲಿ ನಿಮ್ಮ ಕಣ್ತಪ್ಪಿನಿಂದಾಗುವ ಪ್ರಮಾದಗಳಿಗೆ ಮೇಲಧಿಕಾರಿಗಳಿಂದ ಬೈಸಿಕೊಳ್ಳಬೇಕಾಗಬಹುದು. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಅಡೆತಡೆಗಳು ತೋರಿಬಂದೀತು. ಹಿರಿಯರ ಸಲಹೆಗೆ ಕಿವಿಗೊಡಿ. ಕಿರು ಸಂಚಾರ ಯೋಗವಿದೆ.

ಕರ್ಕಟಕ: ನ್ಯಾಯಾಲಯದ ಕಲಾಪಗಳಲ್ಲಿ ನಿಮ್ಮ ಪರವಾಗಿ ತೀರ್ಪು ಬರಲಿದೆ. ಸಹೋದರರೊಂದಿಗಿನ ವೈಮನಸ್ಯಗಳು ದೂರವಾಗಲಿದ್ದು ಸಾಂಸಾರಿಕ ನೆಮ್ಮದಿ ಗಳಿಸುವಿರಿ. ಸಾಮಾಜಿಕ ರಂಗದಲ್ಲಿ ಅಪವಾದಗಳು ಬರದಂತೆ ಎಚ್ಚರವಹಿಸಿ. ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ.

ಸಿಂಹ: ಮಾನಸಿಕವಾಗಿ ಇದುವರೆಗೆ ಇದ್ದ ಚಿಂತೆ, ಬೇಸರಗಳು ದೂರವಾಗಿ ನೆಮ್ಮದಿ ದೊರಕಲಿದೆ. ನಿಮ್ಮ ನಿರ್ಧಾರಗಳಿಗೆ ಸಂಗಾತಿಯ ಸಹಮತ ಸಿಗಲಿದೆ. ವಿದ್ಯಾರ್ಥಿಗಳಿಗೆ ಪ್ರಯತ್ನಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಕ್ರಿಯಾಶೀಲತೆಗೆ ಪ್ರಶಂಸೆ ವ್ಯಕ್ತವಾಗಲಿದೆ.

ಕನ್ಯಾ: ಉದ್ಯೋಗ ಕ್ಷೇತ್ರದಲ್ಲಿ ಸ್ಥಾನ ಪಲ್ಲಟವಾಗುವ ಭೀತಿಯಿದೆ. ಮನೆ ಬದಲಾವಣೆಗೆ ಚಿಂತನೆ ನಡೆಸುವಿರಿ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಉದಾಸೀನತೆ ಕಂಡುಬಂದೀತು. ಬಂಧು ಮಿತ್ರರ ಆಗಮನವಾಗಲಿದ್ದು, ಮನೆಯಲ್ಲಿ ಸಂತಸವಿರಲಿದೆ.

ತುಲಾ: ನಿಮ್ಮ ಕೆಲವೊಂದು ನಿರ್ಧಾರದಿಂದ ಬಂಧು ಮಿತ್ರರ ನಿಷ್ಠುರಕ್ಕೆ ಕಾರಣರಾಗುವಿರಿ. ವೃತ್ತಿರಂಗದಲ್ಲಿ ಮುನ್ನಡೆಗೆ ತೊಂದರೆಯಾಗದು. ಸಹೋದ್ಯೋಗಿಗಳ ಸಹಕಾರ ದೊರೆಯಲಿದೆ. ಚಾಡಿ ಮಾತುಗಳಿಂದ ದೂರಿವಿರಿ. ದೇವತಾ ಪ್ರಾರ್ಥನೆ ಮಾಡಿ.

ವೃಶ್ಚಿಕ: ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ಅಲೆದಾಡಬೇಕಾದೀತು. ವೃತ್ತಿರಂಗದಲ್ಲಿ ಸಹೋದ್ಯೋಗಿಗಳ ನೆರವಿನಿಂದ ಬರುವಂತಹ ಸಮಸ್ಯೆಗಳನ್ನು ಯಶಸ್ವಿಯಾಗಿ ನಿಭಾಯಿಸುವಿರಿ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ನೂತನ ದಂಪತಿಗಳಿಗೆ ಶುಭದಿನ.

ಧನು: ಉದ್ಯೋಗ ಕ್ಷೇತ್ರದಲ್ಲಿ ನಿರೀಕ್ಷಿತ ಬಡ್ತಿ ಸಿಗಲಿದೆ. ವೃತ್ತಿರಂಗದಲ್ಲಿ ಮುನ್ನಡೆಗೆ ಅವಕಾಶಗಳಿವೆ. ನಿರುದ್ಯೋಗಿಗಳು ಪಾಲಿಗೆ ಬಂದ ಅವಕಾಶ ಬಳಸಿಕೊಳ್ಳಬೇಕು. ಸಂಚಾರದಲ್ಲಿ ಹೆಚ್ಚಿನ ಜಾಗ್ರತೆ ವಹಿಸಬೇಕು. ವಿದ್ಯಾರ್ಥಿಗಳಿಗೆ ಶುಭ ವಾರ್ತೆಯಿದೆ.

ಮಕರ: ನಿರುದ್ಯೋಗಿಗಳಿಗೆ ಉದ್ಯೋಗ ಸಂದರ್ಶನ ನಿಮಿತ್ತ ದೂರ ಸಂಚಾರ ಮಾಡಬೇಕಾಗಬಹುದು. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಪಡುವ ಅನಿವಾರ್ಯತೆಯಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗೆ ಸಿದ್ದತೆ ನಡೆಯಲಿದೆ. ಸಾಂಸಾರಿಕ ಸುಖ ಸಿಗಲಿದೆ.

ಕುಂಭ: ಇನ್ನೊಬ್ಬರಿಗೆ ಹಣಕಾಸಿನ ಸಹಾಯ ಮಾಡಲು ಹೋಗುವ ಮುನ್ನ ನೂರು ಬಾರಿ ಯೋಚಿಸಿ. ಸಂಗಾತಿಯ ಸಲಹೆಗಳಿಗೆ ಕಿವಿಗೊಡಿ. ಸರಕಾರಿ ಉದ್ಯೋಗಿಗಳಿಗೆ ಕಾರ್ಯದೊತ್ತಡ ಅಧಿಕವಾಗಲಿದೆ. ಆರ್ಥಿಕವಾಗಿ ಖರ್ಚು ವೆಚ್ಚಗಳಿಗೆ ಕಡಿವಾಣವಿರಲಿ.

ಮೀನ: ವ್ಯಾಪಾರಿಗಳಿಗೆ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗದೇ ನಿರಾಸೆಯಾಗಬಹುದು. ಗೃಹಿಣಿಯರಿಗೆ ಕೌಟುಂಬಿಕ ಜವಾಬ್ಧಾರಿಯನ್ನು ಯಶಸ್ವಿಯಾಗಿ ನಿಭಾಯಿಸಿದ ತೃಪ್ತಿ ಸಿಗಲಿದೆ. ಕಾರ್ಯರಂಗದಲ್ಲಿ ಕಿರಿ ಕಿರಿ ತಪ್ಪದು. ದಿನದಂತ್ಯಕ್ಕೆ ಶುಭವಾಗಲಿದೆ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮನೆಯ ಆವರಣದಲ್ಲಿ ಶಮಿ ವೃಕ್ಷವಿದ್ದರೆ ಈ ಎಲ್ಲಾ ಫಲ ನಿಮ್ಮದಾಗಲಿದೆ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments