Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶನಿವಾರ, 18 ಜನವರಿ 2020 (09:07 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಮನದಾಳದ ದುಃಖಗಳನ್ನು ಆಪ್ತರೊಂದಿಗೆ ಹಂಚಿಕೊಂಡು ಹಗುರವಾಗುವಿರಿ. ದೈಹಿಕ ಆರೋಗ್ಯದಲ್ಲೂ ಏರುಪೇರಾಗಿ ಆತಂಕ ಕಾಡಬಹುದು. ಆದರೆ ಉದ್ಯೋಗ ಕ್ಷೇತ್ರದಲ್ಲಿ ಚುರುಕಾಗಿ ನಿಮ್ಮ ಕೆಲಸಗಳನ್ನು ಪೂರ್ತಿ ಮಾಡುವಿರಿ. ದೇವತಾ ಪ್ರಾರ್ಥನೆ ಮಾಡಿದರೆ ನೆಮ್ಮದಿ.

ವೃಷಭ: ಮಾತಿನ ಮೇಲೆ ನಿಗಾ ಇಡಬೇಕಾದ ಅಗತ್ಯವಿದೆ. ದುಡುಕಿ ಮಾತನಾಡಿ ಪ್ರೀತಿ ಪಾತ್ರರ ಮನಸ್ಸಿಗೆ ನೋವುಂಟು ಮಾಡಬೇಡಿ. ಸಾಂಸಾರಿಕವಾಗಿ ದಾಯಾದಿಗಳಿಂದ ಕೆಟ್ಟ ಮಾತು ಕೇಳಿಬಂದೀತು. ವೃತ್ತಿರಂಗದಲ್ಲಿ ಅಭಿವೃದ್ಧಿ ಕಂಡುಬರಲಿದೆ. ವಿದ್ಯಾರ್ಥಿಗಳಿಗೆ ಮುನ್ನಡೆ.

ಮಿಥುನ: ಮನೆಯಲ್ಲಿ ಶುಭ ಮಂಗಲ ಕಾರ್ಯಗಳನ್ನು ನಡೆಸಲು ನೂರೆಂಟು ವಿಘ್ನಗಳು ಎದುರಾದೀತು. ವ್ಯಾಪಾರಿಗಳಿಗೆ ವ್ಯವಹಾರದಲ್ಲಿ ಲಾಭ ಕಂಡು ಬಂದರೂ ಅಪರಿಚಿತರಿಂದ ವಂಚನೆಗೊಳಗಾಗುವ ಭೀತಿಯೂ ಇದೆ. ಕಾರ್ಯನಿಮಿತ್ತ ಕಿರು ಸಂಚಾರ ಮಾಡುವಿರಿ.

ಕರ್ಕಟಕ: ಕಾರ್ಯನಿಮಿತ್ತ ದೂರ ಸಂಚಾರ ಮಾಡಲು ಸಿದ್ಧತೆ ನಡೆಸುವಿರಿ. ವಿದ್ಯಾರ್ಥಿಗಳು, ಶೈಕ್ಷಣಿಕ ರಂಗದಲ್ಲಿರುವವರಿಗೆ ಉನ್ನತಿ ಲಭ್ಯವಾಗುವುದು. ನಿರುದ್ಯೋಗಿಗಳಿಗೆ ಉತ್ತಮ ಉದ್ಯೋಗಾವಕಾಶಗಳು ಲಭಿಸಲಿವೆ. ಪಾಲಿಗೆ ಬಂದ ಅವಕಾಶಗಳನ್ನು ಸದುಪಯೋಗಪಡಿಸಿ.

ಸಿಂಹ: ಹಣಕಾಸಿನ ಅಡಚಣೆಗಳು ದೂರವಾಗಿ ನಿಧಾನವಾಗಿ ಅಭಿವೃದ್ಧಿ ಗೋಚರಕ್ಕೆ ಬರಲಿದೆ. ಅಂದುಕೊಂಡ ಕೆಲಸಗಳನ್ನು ಪೂರ್ತಿ ಮಾಡುವಿರಿ. ಉದ್ಯೋಗಿಗಳಿಗೆ ಮುಂಬಡ್ತಿ ಯೋಗವಿದೆ. ಸಾಂಸಾರಿಕವಾಗಿ ಸಂಗಾತಿಯೊಂದಿಗೆ ಹೊಂದಾಣಿಕೆಯಿಂದ ನಡೆದುಕೊಳ್ಳಬೇಕಾಗುತ್ತದೆ.

ಕನ್ಯಾ: ಉದ್ಯೋಗ ಕ್ಷೇತ್ರದಲ್ಲಿ ಮಾನಸಿಕವಾಗಿ ಆವೇಶಗೊಳ್ಳುವಂತಹ ಪರಿಸ್ಥಿತಿ ಎದುರಾಗಬಹುದು. ಶಾಂತ ಚಿತ್ತದಿಂದ ಸಮಸ್ಯೆ ನಿಭಾಯಿಸಿ. ಗೃಹೋಪಯೋಗಿ ವಸ್ತುಗಳಿಗೆ ಖರ್ಚು ವೆಚ್ಚಗಳಾಗಲಿವೆ. ವಿದ್ಯಾರ್ಥಿಗಳಿಗೆ ನಿರಾಸೆಯಾಗಬಹುದು. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

ತುಲಾ: ದೇವತಾ ದರ್ಶನದಿಂದ ನೀವು  ಇಂದು ಕೈ ಹಿಡಿಯುವ ಕೆಲಸದಲ್ಲಿ ಯಶಸ್ಸು ಸಾಧಿಸಲಿದ್ದೀರಿ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ವ್ಯಾಪಾರ, ವ್ಯವಹಾರಗಳಲ್ಲಿ ಹಾಕಿದ ಬಂಡವಾಳಕ್ಕೆ ಮೋಸವಾಗದು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಶ್ಚಿಕ: ಅವಿವಾಹಿತರಿಗೆ ನೂತನ ವಿವಾಹ ಪ್ರಸ್ತಾಪಗಳು ಬರಲಿವೆ. ದಾಂಪತ್ಯ ಜೀವನದಲ್ಲಿ ಹೊಂದಾಣಿಕೆ ಅಗತ್ಯ. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗಲಿದೆ. ಮಕ್ಕಳಿಂದ ಸಂತಸದ ವಾರ್ತೆ ನಿರೀಕ್ಷಿಸಬಹುದು. ಮನೆ ಬದಲಾವಣೆಗೆ ಚಿಂತನೆ ನಡೆಸಲಿದ್ದೀರಿ.

ಧನು: ಯಾವುದೇ ಕಾರಣಕ್ಕೂ ಕೋಪದ ಕೈಗೆ ಬುದ್ಧಿ ಕೊಟ್ಟು ನಿರ್ಧಾರ ತೆಗೆದುಕೊಳ್ಳಬೇಡಿ. ಉದ್ಯೋಗ ಕ್ಷೇತ್ರದಲ್ಲಿ ಸಂಯಮ ಕಾಪಾಡಿಕೊಳ‍್ಳುವುದು ಮುಖ್ಯ. ಆರ್ಥಿಕವಾಗಿ ಅಡಚಣೆಗಳು ತೋರಿಬರಲಿವೆ. ಹಿರಿಯರಿಗೆ ಧಾರ್ಮಿಕ ಕ್ಷೇತ್ರಗಳ ಸಂದರ್ಶನ ಯೋಗ.

ಮಕರ: ನಿಮ್ಮ ಪ್ರಯತ್ನಬಲದಿಂದ ನಿರೀಕ್ಷಿತ ಕಾರ್ಯ ಸಾಧನೆ ಮಾಡಲಿದ್ದೀರಿ. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳಿಂದ ಪ್ರಶಂಸೆಗೊಳಗಾಗುವಿರಿ. ಆರ್ಥಿಕವಾಗಿ ಖರ್ಚು ವೆಚ್ಚಗಳ ಮೇಲೆ ಹಿಡಿತವಿರಲಿ. ಇಷ್ಟ ಮಿತ್ರರ ಭೇಟಿ ಮನಸ್ಸಿಗೆ ಸಂತಸ ನೀಡಲಿದೆ.

ಕುಂಭ: ಆರ್ಥಿಕವಾಗಿ ನಾನಾ ಮೂಲಗಳಿಂದ ಧನಾಗಮನವಾಗಲಿದೆ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿ ಯೋಗವಿದೆ. ಮಕ್ಕಳಿಂದ ಶುಭ ವಾರ್ತೆ ನಿರೀಕ್ಷಿಸಬಹುದು. ಸಾಂಸಾರಿಕವಾಗಿ ಸಂತಸವಿರಲಿದೆ. ಸಂಚಾರದಲ್ಲಿ ಹೆಚ್ಚಿನ ಕಾಳಜಿವಹಿಸಬೇಕು.

ಮೀನ: ಯಾವುದೇ ಯೋಜನೆಗೆ ಕೈ ಹಾಕಿದರೂ ವಿಘ್ನಗಳು ಎದುರಾಗಿ ಮನಸ್ಸಿಗೆ ಬೇಸರವಾಗಬಹುದು. ಕುಲದೇವರ ಪ್ರಾರ್ಥನೆ ಮಾಡಿ. ನಿರುದ್ಯೋಗಿಗಳಿಗೆ ಸತತ ಪ್ರಯತ್ನದಿಂದ ಫಲ ಸಿಗಲಿದೆ. ಕಾರ್ಯನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ.

Share this Story:

Follow Webdunia kannada

ಮುಂದಿನ ಸುದ್ದಿ

ಐಶ್ವರ್ಯ ದೇವತೆ ಅನುಗ್ರಹ ಪಡೆಯಲು ಇದರಿಂದ ಈ ದೀಪ ಹಚ್ಚಿ