Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶನಿವಾರ, 18 ಜನವರಿ 2020 (09:07 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಮನದಾಳದ ದುಃಖಗಳನ್ನು ಆಪ್ತರೊಂದಿಗೆ ಹಂಚಿಕೊಂಡು ಹಗುರವಾಗುವಿರಿ. ದೈಹಿಕ ಆರೋಗ್ಯದಲ್ಲೂ ಏರುಪೇರಾಗಿ ಆತಂಕ ಕಾಡಬಹುದು. ಆದರೆ ಉದ್ಯೋಗ ಕ್ಷೇತ್ರದಲ್ಲಿ ಚುರುಕಾಗಿ ನಿಮ್ಮ ಕೆಲಸಗಳನ್ನು ಪೂರ್ತಿ ಮಾಡುವಿರಿ. ದೇವತಾ ಪ್ರಾರ್ಥನೆ ಮಾಡಿದರೆ ನೆಮ್ಮದಿ.

ವೃಷಭ: ಮಾತಿನ ಮೇಲೆ ನಿಗಾ ಇಡಬೇಕಾದ ಅಗತ್ಯವಿದೆ. ದುಡುಕಿ ಮಾತನಾಡಿ ಪ್ರೀತಿ ಪಾತ್ರರ ಮನಸ್ಸಿಗೆ ನೋವುಂಟು ಮಾಡಬೇಡಿ. ಸಾಂಸಾರಿಕವಾಗಿ ದಾಯಾದಿಗಳಿಂದ ಕೆಟ್ಟ ಮಾತು ಕೇಳಿಬಂದೀತು. ವೃತ್ತಿರಂಗದಲ್ಲಿ ಅಭಿವೃದ್ಧಿ ಕಂಡುಬರಲಿದೆ. ವಿದ್ಯಾರ್ಥಿಗಳಿಗೆ ಮುನ್ನಡೆ.

ಮಿಥುನ: ಮನೆಯಲ್ಲಿ ಶುಭ ಮಂಗಲ ಕಾರ್ಯಗಳನ್ನು ನಡೆಸಲು ನೂರೆಂಟು ವಿಘ್ನಗಳು ಎದುರಾದೀತು. ವ್ಯಾಪಾರಿಗಳಿಗೆ ವ್ಯವಹಾರದಲ್ಲಿ ಲಾಭ ಕಂಡು ಬಂದರೂ ಅಪರಿಚಿತರಿಂದ ವಂಚನೆಗೊಳಗಾಗುವ ಭೀತಿಯೂ ಇದೆ. ಕಾರ್ಯನಿಮಿತ್ತ ಕಿರು ಸಂಚಾರ ಮಾಡುವಿರಿ.

ಕರ್ಕಟಕ: ಕಾರ್ಯನಿಮಿತ್ತ ದೂರ ಸಂಚಾರ ಮಾಡಲು ಸಿದ್ಧತೆ ನಡೆಸುವಿರಿ. ವಿದ್ಯಾರ್ಥಿಗಳು, ಶೈಕ್ಷಣಿಕ ರಂಗದಲ್ಲಿರುವವರಿಗೆ ಉನ್ನತಿ ಲಭ್ಯವಾಗುವುದು. ನಿರುದ್ಯೋಗಿಗಳಿಗೆ ಉತ್ತಮ ಉದ್ಯೋಗಾವಕಾಶಗಳು ಲಭಿಸಲಿವೆ. ಪಾಲಿಗೆ ಬಂದ ಅವಕಾಶಗಳನ್ನು ಸದುಪಯೋಗಪಡಿಸಿ.

ಸಿಂಹ: ಹಣಕಾಸಿನ ಅಡಚಣೆಗಳು ದೂರವಾಗಿ ನಿಧಾನವಾಗಿ ಅಭಿವೃದ್ಧಿ ಗೋಚರಕ್ಕೆ ಬರಲಿದೆ. ಅಂದುಕೊಂಡ ಕೆಲಸಗಳನ್ನು ಪೂರ್ತಿ ಮಾಡುವಿರಿ. ಉದ್ಯೋಗಿಗಳಿಗೆ ಮುಂಬಡ್ತಿ ಯೋಗವಿದೆ. ಸಾಂಸಾರಿಕವಾಗಿ ಸಂಗಾತಿಯೊಂದಿಗೆ ಹೊಂದಾಣಿಕೆಯಿಂದ ನಡೆದುಕೊಳ್ಳಬೇಕಾಗುತ್ತದೆ.

ಕನ್ಯಾ: ಉದ್ಯೋಗ ಕ್ಷೇತ್ರದಲ್ಲಿ ಮಾನಸಿಕವಾಗಿ ಆವೇಶಗೊಳ್ಳುವಂತಹ ಪರಿಸ್ಥಿತಿ ಎದುರಾಗಬಹುದು. ಶಾಂತ ಚಿತ್ತದಿಂದ ಸಮಸ್ಯೆ ನಿಭಾಯಿಸಿ. ಗೃಹೋಪಯೋಗಿ ವಸ್ತುಗಳಿಗೆ ಖರ್ಚು ವೆಚ್ಚಗಳಾಗಲಿವೆ. ವಿದ್ಯಾರ್ಥಿಗಳಿಗೆ ನಿರಾಸೆಯಾಗಬಹುದು. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

ತುಲಾ: ದೇವತಾ ದರ್ಶನದಿಂದ ನೀವು  ಇಂದು ಕೈ ಹಿಡಿಯುವ ಕೆಲಸದಲ್ಲಿ ಯಶಸ್ಸು ಸಾಧಿಸಲಿದ್ದೀರಿ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ವ್ಯಾಪಾರ, ವ್ಯವಹಾರಗಳಲ್ಲಿ ಹಾಕಿದ ಬಂಡವಾಳಕ್ಕೆ ಮೋಸವಾಗದು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಶ್ಚಿಕ: ಅವಿವಾಹಿತರಿಗೆ ನೂತನ ವಿವಾಹ ಪ್ರಸ್ತಾಪಗಳು ಬರಲಿವೆ. ದಾಂಪತ್ಯ ಜೀವನದಲ್ಲಿ ಹೊಂದಾಣಿಕೆ ಅಗತ್ಯ. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗಲಿದೆ. ಮಕ್ಕಳಿಂದ ಸಂತಸದ ವಾರ್ತೆ ನಿರೀಕ್ಷಿಸಬಹುದು. ಮನೆ ಬದಲಾವಣೆಗೆ ಚಿಂತನೆ ನಡೆಸಲಿದ್ದೀರಿ.

ಧನು: ಯಾವುದೇ ಕಾರಣಕ್ಕೂ ಕೋಪದ ಕೈಗೆ ಬುದ್ಧಿ ಕೊಟ್ಟು ನಿರ್ಧಾರ ತೆಗೆದುಕೊಳ್ಳಬೇಡಿ. ಉದ್ಯೋಗ ಕ್ಷೇತ್ರದಲ್ಲಿ ಸಂಯಮ ಕಾಪಾಡಿಕೊಳ‍್ಳುವುದು ಮುಖ್ಯ. ಆರ್ಥಿಕವಾಗಿ ಅಡಚಣೆಗಳು ತೋರಿಬರಲಿವೆ. ಹಿರಿಯರಿಗೆ ಧಾರ್ಮಿಕ ಕ್ಷೇತ್ರಗಳ ಸಂದರ್ಶನ ಯೋಗ.

ಮಕರ: ನಿಮ್ಮ ಪ್ರಯತ್ನಬಲದಿಂದ ನಿರೀಕ್ಷಿತ ಕಾರ್ಯ ಸಾಧನೆ ಮಾಡಲಿದ್ದೀರಿ. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳಿಂದ ಪ್ರಶಂಸೆಗೊಳಗಾಗುವಿರಿ. ಆರ್ಥಿಕವಾಗಿ ಖರ್ಚು ವೆಚ್ಚಗಳ ಮೇಲೆ ಹಿಡಿತವಿರಲಿ. ಇಷ್ಟ ಮಿತ್ರರ ಭೇಟಿ ಮನಸ್ಸಿಗೆ ಸಂತಸ ನೀಡಲಿದೆ.

ಕುಂಭ: ಆರ್ಥಿಕವಾಗಿ ನಾನಾ ಮೂಲಗಳಿಂದ ಧನಾಗಮನವಾಗಲಿದೆ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿ ಯೋಗವಿದೆ. ಮಕ್ಕಳಿಂದ ಶುಭ ವಾರ್ತೆ ನಿರೀಕ್ಷಿಸಬಹುದು. ಸಾಂಸಾರಿಕವಾಗಿ ಸಂತಸವಿರಲಿದೆ. ಸಂಚಾರದಲ್ಲಿ ಹೆಚ್ಚಿನ ಕಾಳಜಿವಹಿಸಬೇಕು.

ಮೀನ: ಯಾವುದೇ ಯೋಜನೆಗೆ ಕೈ ಹಾಕಿದರೂ ವಿಘ್ನಗಳು ಎದುರಾಗಿ ಮನಸ್ಸಿಗೆ ಬೇಸರವಾಗಬಹುದು. ಕುಲದೇವರ ಪ್ರಾರ್ಥನೆ ಮಾಡಿ. ನಿರುದ್ಯೋಗಿಗಳಿಗೆ ಸತತ ಪ್ರಯತ್ನದಿಂದ ಫಲ ಸಿಗಲಿದೆ. ಕಾರ್ಯನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Karnataka Rains: ಇಂದಿನ ಹವಾಮಾನ ವರದಿಯಂತೆ ಈ ಜಿಲ್ಲೆಯವರಿಗೆ ಎಚ್ಚರಿಕೆ ಅಗತ್ಯ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

Durga mantra: ದುರ್ಗಾ ದೇವಿಯ ಈ ಸ್ತೋತ್ರ ಓದಿದರೆ ಸೋಲಿನ ಭಯವಿರಲ್ಲ

ಮುಂದಿನ ಸುದ್ದಿ
Show comments