Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಭಾನುವಾರ, 19 ಜನವರಿ 2020 (09:28 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.
 


ಮೇಷ: ವ್ಯಾಪಾರ ವ್ಯವಹಾರಗಳಲ್ಲಿ ಅಧಿಕ ಧನಲಾಭವಾಗಲಿದೆ. ಆದರೆ ಅದೇ ರೀತಿ ನಾನಾ ರೀತಿಯ ಖರ್ಚುಗಳೂ ತೋರಿಬರಲಿವೆ. ಹಿರಿಯರಿಂದ ಬಂದ ಆಸ್ತಿ ಕಳೆದುಕೊಳ್ಳುವ ಭೀತಿಯಿದೆ. ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ. ಮಾತಿನ ಮೇಲೆ ನಿಗಾ ಇರಲಿ.

ವೃಷಭ: ಮಕ್ಕಳ ವಿಚಾರದಲ್ಲಿ ಸಂಗಾತಿಯೊಂದಿಗೆ ಮನಸ್ತಾಪ ಮಾಡಿಕೊಳ್ಳುವಿರಿ. ಗೃಹ ಬಳಕೆ ವಸ್ತುಗಳ ಖರೀದಿಗೆ ಹೆಚ್ಚಿನ ಧನವ್ಯಯವಾಗಲಿದೆ. ಅನಿರೀಕ್ಷಿತವಾಗಿ ಬಂಧು ಮಿತ್ರರ ಭೇಟಿಯಾಗುವಿರಿ. ನಿರುದ್ಯೋಗಿಗಳಿಗೆ ದೈವಬಲದಿಂದ ಬಯಸಿದ ಉದ್ಯೋಗ ಸಿಗಲಿದೆ.

ಮಿಥುನ: ರಾಜಕೀಯ ರಂಗದಲ್ಲಿರುವವರಿಗೆ ಹೊಸ ಶತ್ರುಗಳ ಹುಟ್ಟಿಕೊಳ್ಳಲಿದ್ದಾರೆ. ಅಪರಿಚಿತರೊಂದಿಗೆ ವ್ಯವಹರಿಸುವಾಗ ಎಚ್ಚರ. ದೇಹಾರೋಗ್ಯದಲ್ಲಿ ಏರುಪೇರಾಗಬಹುದು. ಆದಾಯ ಸಾಕಷ್ಟಿದ್ದರೂ ಖರ್ಚಿನ ಚಿಂತೆ ಕಾಡಲಿದೆ. ದೇವಾಲಯ ಸಂದರ್ಶನ ಯೋಗವಿದೆ.

ಕರ್ಕಟಕ: ಕೈಗೆ ಸಿಗದ ದ್ರಾಕ್ಷಿ ಹುಳಿ ಎನ್ನುವಂತೆ ನಿಮ್ಮ ಕೈಗೆ ಸಿಗದ ಯಶಸ್ಸಿನ ಬಗ್ಗೆ ಹಳಿದುಕೊಳ್ಳುವಂತಹ ಪರಿಸ್ಥಿತಿ ಎದುರಾಗಲಿದೆ. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ದೊರೆಯಲಿದೆ. ಉದ್ಯೋಗ ವರ್ಗದವರಿಗೆ ಮೇಲಧಿಕಾರಿಗಳಿಂದ ಕಿರಿ ಕಿರಿ ಇರಬಹುದು.

ಸಿಂಹ: ಇದುವರೆಗೆ ಯೋಜನೆ ಮಾಡಿಕೊಂಡಿದ್ದ ಕಾರ್ಯಗಳನ್ನು ಕಾರ್ಯರೂಪಕ್ಕೆ ತಂದು ಯಶಸ್ಸು ಪಡೆಯುವಿರಿ. ನೂತನ ದಂಪತಿಗಳಿಗೆ ಮಧುಚಂದ್ರದ ಭಾಗ್ಯವಿದೆ. ಮಕ್ಕಳಿಂದ ಸಂತಸದ ವಾರ್ತೆ ನಿರೀಕ್ಷಿಸಬಹುದು. ವ್ಯಾಪಾರಿ ವರ್ಗದವರಿಗೆ ಅಭಿವೃದ್ಧಿ ಉಂಟಾಗಲಿದೆ.

ಕನ್ಯಾ: ವೃತ್ತಿರಂಗದಲ್ಲಿ ನಿಮ್ಮ ಹಾದಿಗೆ ಅಡ್ಡಲಾಗಿ ನಿಂತವರನ್ನು ನಿಭಾಯಿಸುವುದರ ಬಗ್ಗೆ ಚಿಂತೆಯಾಗಬಹುದು. ಬೇರೆಯವರ ಪ್ರಚೋದನೆಗೆ ಒಳಗಾಗಿ ತೊಂದರೆಗೆ ಸಿಲುಕಿಕೊಳ್ಳಬೇಕಾಗಬಹುದು. ವಿದ್ಯಾರ್ಥಿಗಳಿಗೆ ಏಕಾಗ್ರತೆಯ ಕೊರತೆಯುಂಟಾಗಬಹುದು. ದೇವತಾ ಪ್ರಾರ್ಥನೆ ಮಾಡಿ.

ತುಲಾ: ಹಣಕಾಸಿನ ಅಡಚಣೆಯಿಂದಾಗಿ ನೀವು ಅಂದುಕೊಂಡಿದ್ದ ಕೆಲಸ ಅರ್ಧಕ್ಕೇ ಸ್ಥಗಿತಗೊಳ್ಳಬಹುದು. ವಿಲಾಸೀ ಮನೋಭಾವಕ್ಕೆ ಕಡಿವಾಣ ಹಾಕಬೇಕಿದೆ. ಪ್ರಾಮಾಣಿಕ ಪ್ರಯತ್ನಕ್ಕೆ ಯಶಸ್ಸು ಸಿಗಲಿದೆ. ಶೀತ ಸಂಬಂಧೀ ಆರೋಗ್ಯ ಸಮಸ್ಯೆ ಎದುರಾಗಬಹುದು.

ವೃಶ್ಚಿಕ: ಕೌಟುಂಬಿಕವಾಗಿ ಸಂಯಮದಿಂದ ಇರುವುದು ಮುಖ್ಯ. ದುಡುಕಿನ ನಿರ್ಧಾರಗಳಿಂದ ಪ್ರೀತಿ ಪಾತ್ರರಿಗೆ ಅಸಮಾಧಾನವಾಗಬಹುದು. ಸಂಗಾತಿಗೆ ಅನಾರೋಗ್ಯ ಭೀತಿಯಿದೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮದ ಅಗತ್ಯವಿದೆ. ದಿನದಂತ್ಯಕ್ಕೆ ಶುಭವಾಗಲಿದೆ.

ಧನು: ಅಧಿಕಾರದ ದಾಹ ನಿಮ್ಮ ಮನಸ್ಸು, ಕಣ್ಣು ಕುರುಡಾಗಿಸಬಹುದು. ಕಿರಿಯರೊಂದಿಗೆ ಪ್ರೀತಿಯ ವರ್ತನೆ ತೋರಿ. ಮಹಿಳೆಯರಿಗೆ ಉದ್ಯೋಗದಲ್ಲಿ ಮುನ್ನಡೆ ಸಿಗಲಿದೆ. ನಾಲಿಗೆ ಚಪಲದಿಂದ ದೇಹಾರೋಗ್ಯ ಹದಗೆಡಬಹುದು. ಖರೀದಿ ವ್ಯವಹಾರದಲ್ಲಿ ನಷ್ಟವಾಗದಂತೆ ಎಚ್ಚರವಹಿಸಿ.

ಮಕರ: ಹಿರಿಯರಿಗೆ ತೀರ್ಥಯಾತ್ರೆ ಕೈಗೊಳ್ಳುವ ಯೋಗವಿದೆ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ವಿದೇಶ ಯಾನ, ದೂರ ಪ್ರಯಾಣ ಮಾಡಬೇಕಾಗಬಹುದು. ಕೃಷಿಕರಿಗೆ ಸಾಲಗಾರರ ಕಾಟವಿರಲಿದೆ. ವಾಹನ, ಭೂಮಿ ಖರೀದಿಗೆ ಕೆಲವು ಸಮಯ ಕಾಯುವುದು ಉತ್ತಮ.

ಕುಂಭ: ಮಾನಸಿಕವಾಗಿ ಕಾಡುವ ಚಿಂತೆಗಳ ಪರಿಹಾರಕ್ಕೆ ದೇವರ ಮೊರೆ ಹೋಗುವಿರಿ. ಧಾರ್ಮಿಕ ಕಾರ್ಯಗಳಿಗೆ ಧನವಿನಿಯೋಗ ಮಾಡಲಿದ್ದೀರಿ. ಪತ್ನಿಯ ಮನದಾಸೆ ಪೂರೈಸಬೇಕಾಗುತ್ತದೆ. ವಾಹನ ಖರೀದಿ ಯೋಗವಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮೀನ: ಅವಿವಾಹಿತರ ವಿವಾಹ ಪ್ರಯತ್ನಕ್ಕೆ ಮುನ್ನಡೆ ದೊರಕಲಿದೆ. ನೂತನ ದಂಪತಿಗಳಲ್ಲಿ ಹೊಂದಾಣಿಕೆಯ ಕೊರತೆ ಕಂಡುಬರಬಹುದು. ನೆರೆಹೊರೆಯವರ ವಿಚಾರಕ್ಕೆ ತಲೆಹಾಕದಿದ್ದರೇ ಉತ್ತಮ. ದುಂದು ವೆಚ್ಚಗಳಿಗೆ ಕಡಿವಾಣ ಹಾಕಿ. ದೇವರ ಪ್ರಾರ್ಥನೆ ಮಾಡಿ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಗಂಡ-ಹೆಂಡತಿ ಸಂಬಂಧ ಚೆನ್ನಾಗಿರಬೇಕೆಂದರೆ ಬೆಡ್ ರೂಂನಲ್ಲಿ ಈ ಚಿತ್ರ ಹಾಕಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments