Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಸೋಮವಾರ, 20 ಜನವರಿ 2020 (09:01 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಉದ್ಯೋಗ ಕ್ಷೇತ್ರದಲ್ಲಿ ಬರುವ ಸಮಸ್ಯೆಗಳಿಂದ ಹೈರಾಣಾಗುವಿರಿ. ಸಹೋದ್ಯೋಗಿಗಳ ಸಹಕಾರ ಸಿಗಲಿದೆ. ಸಾಂಸಾರಿಕವಾಗಿ ಇದುವರೆಗೆ ಇದ್ದ ಭಿನ್ನಾಭಿಪ್ರಾಯಗಳಿಗೆ ಮಾತುಕತೆಯ ಮೂಲಕ ಪರಿಹಾರ ಕಂಡುಕೊಳ್ಳುವಿರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಷಭ: ವೃತ್ತಿರಂಗದಲ್ಲಿ ಆರ್ಥಿಕವಾಗಿ ಲಾಭವಿದ್ದರೂ ಹಿತಶತ್ರುಗಳಿಂದ ವಂಚನೆ ಭೀತಿಯಿದೆ. ಎಚ್ಚರಿಕೆಯಿಂದ ವ್ಯವಹರಿಸಬೇಕು. ಸಂಗಾತಿಯ ಬಹುದಿನಗಳ ಮನದಾಸೆ ಪೂರೈಸುವಿರಿ. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯುವಿರಿ.

ಮಿಥುನ: ನೀವು ಅಂದುಕೊಂಡ ಕೆಲಸಗಳಿಗೆ ಚಾಲನೆ ನೀಡುವಿರಿ. ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಸಲಿದೆ. ಶತ್ರುಬಾಧೆ ನಾಶವಾಗುವುದು. ನೆರೆಹೊರೆಯವರ ಪ್ರೀತಿಗೆ ಪಾತ್ರರಾಗುವಿರಿ. ವಾತ ಸಂಬಂಧೀ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಗಳು ಕಂಡುಬರಬಹುದು.

ಕರ್ಕಟಕ: ಇಷ್ಟ ಮಿತ್ರರೊಂದಿಗೆ ಉತ್ತಮ ಸಮಯ, ಭೋಜನ ಮಾಡುವಿರಿ. ಹಿರಿಯರ ತೀರ್ಥ ಯಾತ್ರೆಗೆ ಏರ್ಪಾಟು ಮಾಡಲಿದ್ದೀರಿ. ಸಂತಾನಾಪೇಕ್ಷಿತ ದಂಪತಿಗಳು ದೇವರ ಮೊರೆ ಹೋಗುವರು. ಬಹುದಿನಗಳ ಕನಸು ನನಸು ಮಾಡಿಕೊಳ್ಳುವಿರಿ.

ಸಿಂಹ: ಹೊಸ ಮಿತ್ರರ ಭೇಟಿಯಿಂದ ಹೊಸ ಯೋಜನೆಗಳು, ದಾರಿಗಳು ಹೊಳೆಯಲಿವೆ. ವ್ಯಾವಹಾರಿಕ ಕ್ಷೇತ್ರದಲ್ಲಿ ಪ್ರಗತಿ ಸಾಧಿಸುವಿರಿ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ಸಂಗಾತಿಯ ಸಲಹೆಗೆ ಕಿವಿಗೊಡಿ. ಕಿರು ಸಂಚಾರ ಮಾಡಬೇಕಾಗಬಹುದು.

ಕನ್ಯಾ: ಉದ್ಯೋಗ ಕ್ಷೇತ್ರದಲ್ಲಿ ಮಹಿಳೆಯರಿಗೆ ಬಡ್ತಿ, ಉನ್ನತ ಸ್ಥಾನ ಮಾನ ಯೋಗವಿದೆ. ದುಡುಕು ಮಾತು, ವರ್ತನೆಗೆ ಕಡಿವಾಣ ಹಾಕುವುದು ಅಗತ್ಯ. ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ಕೊಡುವಿರಿ. ಆರ್ಥಿಕವಾಗಿ ದುಂದು ವೆಚ್ಚಗಳಿಗೆ ಕಡಿವಣಾಣ ಹಾಕಿ.

ತುಲಾ: ಮನಸ್ಸಿನಲ್ಲಿ ಅಂದುಕೊಂಡಿದ್ದ ಯೋಜನೆಗಳಿಗೆ ಚಾಲನೆ ನೀಡಲು ಇದು ಸಕಾಲ. ಪಾಲು ಬಂಡವಾಳ ಹೂಡಿಕೆ ವ್ಯವಹಾರದಲ್ಲಿ ಲಾಭ ಗಳಿಸುವಿರಿ. ಸಂಗಾತಿಯೊಂದಿಗೆ ಮನಸ್ತಾಪವಾಗದಂತೆ ಎಚ್ಚರಿಕೆ ವಹಿಸಿ. ಮಕ್ಕಳ ಭವಿಷ್ಯಕ್ಕೆ ಯೋಜನೆ ರೂಪಿಸುವಿರಿ.

ವೃಶ್ಚಿಕ: ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗ ಪಡೆಯಲು ಕಠಿಣ ಸವಾಲುಗಳು ಎದುರಾಗಲಿವೆ. ಅಡೆತಡೆಗಳನ್ನು ಆತ್ಮವಿಶ್ವಾಸದಿಂದ ಎದುರಿಸಿ. ಹಳೆಯ ಮಿತ್ರನ ಭೇಟಿ ಮನಸ್ಸಿಗೆ ಮುದ ನೀಡಲಿದೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮದ ಅಗತ್ಯವಿದೆ.

ಧನು: ಮಕ್ಕಳ ವಿಚಾರದಲ್ಲಿ ಅನಗತ್ಯ ಚಿಂತೆಗಳಿಗೆ ಕಡಿವಾಣ ಹಾಕಿ. ಬೇಡದ ಯೋಚನೆಗಳಿಂದ ನಿಮ್ಮ ನೆಮ್ಮದಿ ನೀವೇ ಹಾಳು ಮಾಡಿಕೊಳ್ಳಬೇಡಿ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ.

ಮಕರ: ಅಧಿಕ ಲಾಭ ತರುವ ಯೋಜನೆಗಳಿಗೆ ಕೈ ಹಾಕುವ ಮುನ್ನ ನಾಲ್ಕು ಬಾರಿ ಯೋಚಿಸುವುದು ಉತ್ತಮ. ಮನೆಯಲ್ಲಿ ಕಳ್ಳತನದ ಭೀತಿಯಿದೆ, ಅಪರಿಚಿತರೊಂದಿಗೆ ವ್ಯವಹರಿಸುವಾಗ ಎಚ್ಚರ. ಕೃಷಿಕರು ನಿವ್ವಳ ಲಾಭ ಗಳಿಸುವರು. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಕುಂಭ: ನಿಮ್ಮ ಮೃದು ನಡೆ ನುಡಿಯಿಂದಲೇ ಎಲ್ಲರ ಮನಸ್ಸು ಗೆಲ್ಲುವಿರಿ. ಮಕ್ಕಳ ಆರೋಗ್ಯದ ವಿಚಾರದಲ್ಲಿ ಚಿಂತೆಯಾದರೂ ಸಂಗಾತಿಯಿಂದ ಸಹಕಾರ ಸಿಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಪರಿಶ್ರಮಕ್ಕೆ ಬೆಲೆ ಸಿಕ್ಕೇ ಸಿಗುತ್ತದೆ. ಆರ್ಥಿಕವಾಗಿ ಖರ್ಚು ವೆಚ್ಚದ ಬಗ್ಗೆ ನಿಗಾ ಇರಲಿ.

ಮೀನ: ಆರ್ಥಿಕವಾಗಿ ಆದಾಯ ಹೆಚ್ಚಳಕ್ಕೆ ನಾನಾ ಮಾರ್ಗ ಹುಡುಕುವಿರಿ. ಅವಿವಾಹಿತರ ವಿವಾಹ ಪ್ರಯತ್ನ ಸಫಲವಾಗಲಿದೆ. ಮನೆಗೆ ಅನಿರೀಕ್ಷಿತ ನೆಂಟರಿಷ್ಟರ ಆಗಮನವಾಗಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ. ಹಿರಿಯರಿಂದ ಉಡುಗೊರೆ ನಿರೀಕ್ಷಿಸಬಹುದು.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments