Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಮಂಗಳವಾರ, 21 ಜನವರಿ 2020 (08:57 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಸಾಂಸಾರಿಕವಾಗಿ ವಾತಾವರಣ ಸಮಾಧಾನಕರವಾಗಿರಲಿದೆ. ಆದರೆ ವಿನಾಕಾರಣ ಚಿಂತೆ ಮಾಡುವುದು ಬಿಡಿ. ಉದ್ಯೋಗ ಕ್ಷೇತ್ರದಲ್ಲಿ ಉದ್ಯೋಗ ನಷ್ಟವಾಗುವ ಭೀತಿ ಎದುರಾಗಬಹುದು. ಆರ್ಥಿಕವಾಗಿ ಹಣಕಾಸಿನ ವಿಚಾರದಲ್ಲಿ ಕಟ್ಟುನಿಟ್ಟು ಅಗತ್ಯ.

ವೃಷಭ: ಆತ್ಮವಿಶ್ವಾಸದಿಂದ ಹೊಸ ಕೆಲಸಗಳಲ್ಲಿ ತೊಡಗಿಸಿಕೊಂಡರೆ ಶುಭ ಫಲಗಳು ಪ್ರಾಪ್ತಿಯಾಗಲಿವೆ. ಜೀವನದಲ್ಲಿ ಆಶಾವಾದಿಗಳಾಗಿರಬೇಕು. ವೃತ್ತಿರಂಗದಲ್ಲಿ ಸ್ಥಾನ ಮಾನ ವೃದ್ಧಿಸಲಿದೆ. ಅವಿವಾಹಿತರಿಗೆ ವಿವಾಹ ಭಾಗ್ಯವಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಿಥುನ: ನ್ಯಾಯಾಲಯದ ಕಲಾಪಗಳಲ್ಲಿ ತೀರ್ಪು ನಿಮ್ಮ ಪರವಾಗಿ ಬರಲಿದೆ. ದಾಯಾದಿ ಕಲಹಗಳು ಅಂತ್ಯವಾಗಲಿದೆ. ಸರಕಾರಿ ಕೆಲಸದಲ್ಲಿರುವವರಿಗೆ ಕಾರ್ಯಸಿದ್ಧಿಯಾಗುವುದು. ಖರ್ಚು ವೆಚ್ಚಗಳು ಇದ್ದರೂ ಆದಾಯಕ್ಕೆ ಕೊರೆತೆಯಾಗದು. ದೇವತಾ ಪ್ರಾರ್ಥನೆ ಮಾಡಿ.

ಕರ್ಕಟಕ: ಕಷ್ಟದ ಸಮಯದಲ್ಲಿ ಮಿತ್ರರ ಸಹಕಾರ ದೊರೆಯುವುದರಿಂದ ನೆಮ್ಮದಿ ಸಿಗಲಿದೆ. ವ್ಯವಹಾರದಲ್ಲಿ ನಿರೀಕ್ಷಿತ ಆದಾಯ ಸಿಗದೇ ನಿರಾಶೆಯಾಗಬಹುದು. ಶತ್ರುಭಯ ಕಾಡಬಹುದು. ಮಾನಸಿಕವಾಗಿ ಋಣಾತ್ಮಕ ಚಿಂತೆಗಳಿಗೆ ಕಡಿವಾಣ ಹಾಕಿ. ತಾಳ್ಮೆ ಅಗತ್ಯ.

ಸಿಂಹ: ಕಳೆದು ಹೋದ ವಸ್ತು ಮರಳಿ ನಿಮ್ಮ ಬಳಿಗೆ ಬರಲಿದೆ. ನೌಕರ ವರ್ಗದವರಿಗೆ ಉದ್ಯೋಗದಲ್ಲಿ ಬಡ್ತಿ ಯೋಗವಿದೆ. ದೂರ ಸಂಚಾರದಿಂದ ಕಾರ್ಯಸಿದ್ಧಿ. ಅವಿವಾಹಿತರಿಗೆ ಶೀಘ‍್ರ ಕಂಕಣ ಬಲ ಕೂಡಿಬರಲಿದೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮದ ಅಗತ್ಯವಿದೆ.

ಕನ್ಯಾ: ಕೆಲಸ ಕಾರ್ಯದಲ್ಲಿ ಜಡತ್ವ ಕಂಡುಬರಲಿದೆ. ಮಾನಸಿಕವಾಗಿ ಋಣಾತ್ಮಕ ಚಿಂತನೆಗಳು ತೋರಿಬಂದೀತು. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಕಿರಿ ಕಿರಿ ತಪ್ಪದು. ಆದರೆ ಕೌಟುಂಬಿಕವಾಗಿ ಸಂಗಾತಿಯಿಂದ ಸಕಾಲದಲ್ಲಿ ಉತ್ತಮ ಸಲಹೆಗಳನ್ನು ಪಡೆಯುವಿರಿ.

ತುಲಾ: ಅಭಿವೃದ್ಧಿಗೆ ನಾನಾ ರೀತಿಯ ವಿಘ‍್ನಗಳು ತೋರಿಬರಲಿವೆ. ಹಿರಿಯರೊಡನೆ ಅನಗತ್ಯ ವಾದ ವಿವಾದಗಳಿಗೆ ಎಡೆಮಾಡಿಕೊಡದಿರಿ. ಕೋರ್ಟು ಕಚೇರಿ ವ್ಯವಹಾರಗಳಿಗೆ ಓಡಾಟ ನಡೆಸಬೇಕಾಗುತ್ತದೆ. ಕಾರ್ಯನಿಮಿತ್ತ ಕಿರುಸಂಚಾರ ಮಾಡಬೇಕಾಗುತ್ತದೆ.

ವೃಶ್ಚಿಕ: ಆದಾಯ ಕಡಿಮೆಯಾಗಿ ಖರ್ಚು ಹೆಚ್ಚಾಗುವುದು. ಇದರಿಂದ ಅಂದುಕೊಂಡ ಕೆಲಸಗಳನ್ನು ಪೂರ್ತಿ ಮಾಡಲಾಗದೇ ಚಿಂತೆಯಾಗಬಹುದು. ಮನೆ ಕಟ್ಟುವ ಕೆಲಸ ಆರಂಭಿಸಿದ್ದಲ್ಲಿ ಕೆಲಸ ಕಾರ್ಯಗಳು ವಿಳಂಬಗತಿಯಲ್ಲಿ ಸಾಗಲಿವೆ. ಕುಲದೇವರ ಪ್ರಾರ್ಥನೆ ಮಾಡಿ.

ಧನು: ಅವಿವಾಹಿತರ ವಿವಾಹ ಮಾತುಕತೆಗಳನ್ನು ಅರ್ಧಕ್ಕೇ ನಿಲ್ಲಲಿವೆ. ನೂತನ ವೃತ್ತಿ ಆರಂಭಿಸಲು ಕೆಲವು ದಿನ ಕಾಯುವುದು ಒಳಿತು. ನಿರುದ್ಯೋಗಿಗಳು ಸ್ವ ಉದ್ಯೋಗದ ಕಡೆ ಮನಸ್ಸು ಮಾಡುವರು. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ಸಿಗಬಹುದು.

ಮಕರ: ನಾಲಿಗೆ ಚಪಲದಿಂದಾಗಿ ಉದರ ಸಂಬಂಧೀ ಆರೋಗ್ಯ ಸಮಸ್ಯೆ ಮೈಮೇಲೆಳೆದುಕೊಳ್ಳುತ್ತೀರಿ. ಪ್ರೀತಿ ಪಾತ್ರರ ಭೇಟಿಯಾಗಿ ಮನಸ್ಸಿಗೆ ಖುಷಿಯಾಗುವುದು. ಹಿರಿಯರಿಗೆ ತೀರ್ಥಯಾತ್ರೆ ಯೋಗವಿದೆ. ನೂತನ ದಂಪತಿಗಳಲ್ಲಿ ಹೊಂದಾಣಿಕೆ ಕೊರತೆ ಕಂಡುಬರಬಹುದು.

ಕುಂಭ: ದೈಹಿಕ ಆರೋಗ್ಯದಿಂದಾಗಿ ಮಾನಸಿಕ ನೆಮ್ಮದಿ ಇಲ್ಲದಂತಾಗುವುದು. ಮಕ್ಕಳ ವಿಚಾರದಲ್ಲಿ ಚಿಂತೆಯಾಗಬಹುದು. ಗೃಹೋಪಯೋಗಿ ವಸ್ತುಗಳ ಖರೀದಿಗೆ ಹೆಚ್ಚಿನ ಧನವ್ಯಯವಾಗಲಿದೆ. ಮಹಿಳೆಯರಿಗೆ ಸಂಗಾತಿಯಿಂದ ಕಿರಿ ಕಿರಿ. ದೇವತಾ ಪ್ರಾರ್ಥನೆ ಮಾಡಿ.

ಮೀನ: ವೃತ್ತಿರಂಗದಲ್ಲಿ ವಿನಾಕಾರಣ ಮಾಡದ ತಪ್ಪಿಗೆ ಅಪವಾದ ಕೇಳಿಬಂದೀತು. ಎಚ್ಚರಿಕೆಯಿಂದ ವ್ಯವಹರಿಸಿ. ಉದ್ಯೋಗ ಬದಲಾವಣೆಗೆ ಚಿಂತನೆ ನಡೆಸಲಿದ್ದೀರಿ. ಮನೆಯಲ್ಲಿ ಶುಭ ಮಂಗಲ ಕಾರ್ಯಗಳು ನೆರವೇರಲಿವೆ. ಧಾರ್ಮಿಕ ಕಾರ್ಯಗಳಿಗೆ ಧನವಿನಿಯೋಗ ಮಾಡುವಿರಿ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments