Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಬುಧವಾರ, 22 ಜನವರಿ 2020 (08:43 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಉದ್ಯೋಗ ಕ್ಷೇತ್ರದಲ್ಲಿ ಹಲವು ಹೊಸ ಜವಾಬ್ಧಾರಿಗಳು ಹೆಗಲಿಗೇರಲಿವೆ. ಮಾನಸಿಕವಾಗಿ ಒಂದು ರೀತಿಯ ಗೊಂದಲ ಕಾಡಬಹುದು. ಆದರೆ ಆರ್ಥಿಕವಾಗಿ ಆದಾಯಕ್ಕೆ ಕೊರತೆಯಿರದು. ಸಂಗಾತಿಯ ಸಲಹೆಯನ್ನು ಪಾಲಿಸಬೇಕಾಗುತ್ತದೆ. ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು.

ವೃಷಭ: ಅವಸರವೇ ಅಪಘಾತಕ್ಕೆ ಕಾರಣವಾಗುತ್ತದೆ ಎನ್ನುವುದನ್ನು ಮರೆಯದಿರಿ. ವೃತ್ತಿರಂಗದಲ್ಲಿ ಯೋಚಿಸಿ ಮುಂದಿನ ನಿರ್ಧಾರ ಕೈಗೊಳ್ಳುವುದು ಉತ್ತಮ. ದಾಂಪತ್ಯದಲ್ಲಿ ಕಲಹಗಳಾದಂತೆ ಎಚ್ಚರವಹಿಸಿ. ಆರ್ಥಿಕ ಅಡಚಣೆಗಳಿದ್ದರೂ ಕಾರ್ಯಸಾಧನೆಗೆ ತೊಂದರೆಯಾಗದು.

ಮಿಥುನ: ಸಾಂಸಾರಿಕವಾಗಿ ಹಿತಶತ್ರುಗಳಿಂದ ತೊಂದರೆ ಉಂಟಾದೀತು. ಲೆಕ್ಕ ಪತ್ರಗಳ ಬಗ್ಗೆ ಸರಿಯಾದ ಲೆಕ್ಕವಿಟ್ಟುಕೊಂಡಿರಬೇಕು. ದೇವತಾ ಕಾರ್ಯನಿಮಿತ್ತ ಧನವ್ಯಯವಾಗಲಿದೆ. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿವಹಿಸಿ.

ಕರ್ಕಟಕ: ಕಾರ್ಯನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ. ಸಂಗಾತಿ, ಪ್ರೀತಿ ಪಾತ್ರರ ಅನುಪಸ್ಥಿತಿ ಮನಸ್ಸಿಗೆ ಬೇಸರವುಂಟುಮಾಡಬಹುದು. ವೃತ್ತಿರಂಗದಲ್ಲಿ ನಿಮ್ಮ ಪ್ರತಿಭೆ, ಪರಿಶ್ರಮಕ್ಕೆ ಬೆಲೆ ಸಿಗಲಿದೆ. ವಿದ್ಯಾರ್ಥಿಗಳಿಗೆ ಮುನ್ನಡೆಯ ಯೋಗವಿದೆ.

ಸಿಂಹ: ಹಂತ ಹಂತವಾಗಿ ನೀವು ಅಂದುಕೊಂಡ ಅಭಿವೃದ್ಧಿ ಯೋಜನೆಗಳು ಕೈಗೂಡಲಿವೆ. ಅನಗತ್ಯ ವಿಚಾರಗಳಿಗೆ ಚಿಂತೆ ಬೇಡ. ದೂರ ಪ್ರಯಾಣದಲ್ಲಿ ಎಚ್ಚರವಾಗಿರಿ. ವಾಹನ ಖರೀದಿ ಯೋಗವಿದೆ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ.

ಕನ್ಯಾ: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಪ್ರಶ್ನೆಗಳಿಂದ ಬೇಸತ್ತುಹೋಗುವಿರಿ. ಕಾರ್ಯದೊತ್ತಡದಿಂದ ದೇಹಾಯಾಸವಾಗದಂತೆ ಎಚ್ಚರವಹಿಸಿ. ಮಕ್ಕಳಿಂದ ಸಂತಸ ಸಿಗಲಿದೆ. ಹಣಕಾಸಿನ ವಿಚಾರದಲ್ಲಿ ಸಮಸ್ಯೆಗಳು ಬರಬಹುದು. ಎಚ್ಚರವಾಗಿರಿ.

ತುಲಾ: ಕಾರ್ಯಕ್ಷೇತ್ರದಲ್ಲಿ ತುರ್ತು ಸನ್ನಿವೇಶಗಳಿಗೆ ಸಿದ್ಧರಾಗಬೇಕಾಗುತ್ತದೆ. ಕಷ್ಟದ ಸಮಯದಲ್ಲಿ ಮಿತ್ರರ ನೆರವು ಪಡೆಯುತ್ತೀರಿ. ಗೃಹೋಪಯೋಗಿ ವಸ್ತುಗಳಿಗೆ ಧನವ್ಯಯವಾಗಲಿದೆ. ಹಿರಿಯರಿಗೆ ಧಾರ್ಮಿಕ ಕ್ಷೇತ್ರ ಸಂದರ್ಶನ ಯೋಗವಿದೆ.

ವೃಶ್ಚಿಕ: ಧಾರ್ಮಿಕವಾಗಿ ಭಕ್ತಿ, ಭಾವ ಹೆಚ್ಚುವುದು. ಎಷ್ಟೋ ದಿನದಿಂದ ಬಾಕಿಯಿದ್ದ ಹರಕೆ ತೀರಿಸುವಿರಿ. ವಾಹನ, ಭೂಮಿ ಖರೀದಿಗೆ ಇದು ಸಕಾಲ. ಆರ್ಥಿಕವಾಗಿ ಆದಾಯಕ್ಕೆ ಕೊರತೆಯಿರದು. ನಿರುದ್ಯೋಗಿಗಳಿಗೆ ಸರಕಾರಿ ಉದ್ಯೋಗದ ಯೋಗವಿದೆ.

ಧನು: ಮನದಲ್ಲಿ ಅಂದುಕೊಂಡಿದ್ದ ಯೋಜನೆಗಳನ್ನು ಕಾರ್ಯಗತಗೊಳಿಸಲು ಇದು ಸಕಾಲ. ಉದ್ಯೋಗ ಬದಲಾವಣೆಗೆ ಯತ್ನಿಸುತ್ತಿದ್ದವರಿಗೆ ಯಶಸ್ಸು ಸಿಗಲಿದೆ. ಆದರೆ ಹಣಕಾಸಿನ ವಿಚಾರದಲ್ಲಿ ದುಂದುವೆಚ್ಚಗಳಿಗೆ ಕಡಿವಾಣ ಹಾಕಿ. ತಾಳ್ಮೆಯಿಂದ ವ್ಯವಹರಿಸುವುದು ಮುಖ್ಯ.

ಮಕರ: ಖರೀದಿ ವ್ಯವಹಾರದಲ್ಲಿ ಲಾಭವಾಗಲಿದೆ. ನಿರುದ್ಯೋಗಿಗಳು ಉದ್ಯೋಗ ಸಂದರ್ಶನ ಕರೆ ನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ. ಶೈಕ್ಷಣಿಕ ರಂಗದಲ್ಲಿರುವವರಿಗೆ ಪ್ರಗತಿ ಕಂಡುಬರುವುದು. ಕೆಳಹಂತದ ನೌಕರರಿಗೆ ಬಡ್ತಿ ಯೋಗವಿದೆ. ದೇವತಾ ಪ್ರಾರ್ಥನೆ ಮಾಡಿ.

ಕುಂಭ: ವೃತ್ತಿರಂಗದಲ್ಲಿ ನೀವು ಅಂದುಕೊಂಡಂತೆಯೇ ಬೆಳವಣಿಗೆ ನಡೆಯಲಿದ್ದು, ಸಮಾಧಾನಕರ ದಿನವಾಗಿರಲಿದೆ. ಆದರೆ ಮಹಿಳೆಯರೊಂದಿಗೆ ವ್ಯವಹರಿಸುವಾಗ ಎಚ್ಚರ. ಪ್ರಯತ್ನಬಲವಿದ್ದರೆ ಕಾರ್ಯಸಾಧನೆಗೆ ತೊಂದರೆಯಾಗದು. ಪತ್ನಿಯ ಸಹಕಾರ ಸಿಗಲಿದೆ.

ಮೀನ: ಪ್ರತಿಷ್ಠಿತರ ಸಹಕಾರದಿಂದ ನೀವು ಅಂದುಕೊಂಡ ಕೆಲಸಗಳನ್ನು ಸುಲಭವಾಗಿ ನೆರವೇರಿಸುವಿರಿ. ಪಾಲು ಬಂಡವಾಳ ಹೂಡಿಕೆ ಮಾಡುವಾಗ ಎಚ್ಚರ. ಸಾಧು ಸಂತರ ಭೇಟಿ ಮನಸ್ಸಿಗೆ ನೆಮ್ಮದಿ ಕೊಡುವುದು. ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ನಡೆಸುವಿರಿ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments