Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಗುರುವಾರ, 23 ಜನವರಿ 2020 (08:41 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಧಾರ್ಮಿಕ ಕ್ಷೇತ್ರಗ ಸಂದರ್ಶನ ಯೋಗ, ಸಾಧು ಸಂತರ ಭೇಟಿ ಸಾಧ‍್ಯತೆಯಿರುತ್ತದೆ. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಕಿರಿ ಕಿರಿಗೆ ತಕ್ಕ ಪ್ರತ್ಯುತ್ತರ ಕೊಡಲಿದ್ದೀರಿ. ಆದರೆ ದುಡುಕಿನ ವರ್ತನೆಗೆ ಕಡಿವಾಣ ಹಾಕುವುದು ಒಳ್ಳೆಯದು.

ವೃಷಭ: ಕಾರ್ಯಕ್ಷೇತ್ರಗಳಲ್ಲಿ ಹೊಸ ಚಿಂತನೆಗಳನ್ನು ಅಳವಡಿಸಲು ಸದವಕಾಶ ಸಿಗಲಿದೆ. ಹೊಸ ಯೋಜನೆಗಳಿಗೆ ಹೂಡಿಕೆ ಮಾಡುವಿರಿ. ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ನಿರುತ್ಸಾಹ ಕಂಡುಬರಲಿದೆ. ದೇವತಾ ಪ್ರಾರ್ಥನೆ ಮಾಡಿ.

ಮಿಥುನ: ಖಚಿತ ನಿರ್ಧಾರಕ್ಕೆ ಬರಲು ಸಾಧ್ಯವಾಗದೇ ಗೊಂದಲ ಕಾಡಲಿದೆ. ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳೇ ನಿಮ್ಮ ಏಳಿಗೆಗೆ ಅಸೂಯೆ ಪಡುವರು. ವ್ಯಾಪಾರ ವ್ಯವಹಾರಗಳಲ್ಲಿ ನಿರೀಕ್ಷಿತ ಆದಾಯ ಬರದೇ ನಿರಾಸೆಯಾಗಬಹುದು. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

ಕರ್ಕಟಕ: ಕೆಲಸ ಕಾರ್ಯಗಳಿಗಾಗಿ ಸಾಕಷ್ಟು ಧನವ್ಯಯವಾಗಲಿದೆ. ಆದರೆ ಕೌಟುಂಬಿಕವಾಗಿ ಸಂಗಾತಿಯ ಸಹಕಾರ ಸಿಗಲಿದೆ. ಮಕ್ಕಳೊಂದಿಗೆ ಸಂತೋಷದ ಕ್ಷಣ ಕಳೆಯುವಿರಿ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಸಿಂಹ: ಮನೆಯಲ್ಲಿ ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನದಿಂದ ಸಂತಸದ ವಾತಾವರಣವಿರಲಿದೆ. ಮಕ್ಕಳಿಂದ ಸಂತಸದ ವಾರ್ತೆ ನಿರೀಕ್ಷಿಸಬಹುದು. ಪಾಲು ವ್ಯವಹಾರದಲ್ಲಿ ಲಾಭ ಕಂಡುಬರಲಿದೆ. ಸರಕಾರಿ ಅಧಿಕಾರಿಗಳಿಗೆ ಮುಂಬಡ್ತಿ ಯೋಗವಿದೆ.

ಕನ್ಯಾ: ಕಾರ್ಯನಿಮಿತ್ತ ದೂರ ಸಂಚಾರ ಮಾಡುವಾಗ ಕಳ್ಳತನ ಅಥವಾ ಇನ್ನಿತರ ತೊಂದರೆಗಳು ಎದುರಾಗಬಹುದು. ಕೋಪದ ಕೈಗೆ ಬುದ್ಧಿ ಕೊಟ್ಟು ಸಂಬಂಧ ಹಾಳು ಮಾಡಿಕೊಳ್ಳಬೇಡಿ. ಅವಿವಾಹಿತರ ವಿವಾಹ ಪ್ರಯತ್ನಕ್ಕೆ ಮುನ್ನಡೆ ಸಿಗಲಿದೆ.

ತುಲಾ: ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ನಡೆಸಲಿದ್ದೀರಿ. ಕೌಟುಂಬಿಕವಾಗಿ ಹೆಚ್ಚಿನ ಹೊಣೆಗಾರಿಕೆ ಹೆಗಲಿಗೇರಲಿದೆ. ಮನೆ, ಉದ್ಯೋಗ ಬದಲಾವಣೆಗೆ ಚಿಂತನೆ ನಡೆಸುವಿರಿ. ಕೃಷಿ ಕ್ಷೇತ್ರಗಳಲ್ಲಿ ಕೆಲಸ ಮಾಡುವವರಿಗೆ ನಷ್ಟದ ಭೀತಿಯಿರಲಿದೆ. ದೇವತಾ ಪ್ರಾರ್ಥನೆ ಮಾಡಿ.

ವೃಶ್ಚಿಕ: ಅಜಾಗರೂಕತೆಯಿಂದಾಗಿ ಕೂಡಿಟ್ಟ ಹಣ, ಸಂಪತ್ತು ಕಳೆದುಕೊಳ್ಳಲಿದ್ದೀರಿ. ಹಿರಿಯರ ಸಲಹೆಗೆ ಕಿವಿಗೊಡಿ. ಶುಭ ಕಾರ್ಯಗಳಿಗೆ ಖರ್ಚು ವೆಚ್ಚಗಳಾಗಲಿವೆ. ಧಾರ್ಮಿಕ ಕ್ಷೇತ್ರಗಳ ಸಂದರ್ಶನ ಯೋಗವಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.

ಧನು: ಬಾಡಿಗೆ ಮನೆಯಲ್ಲಿರುವವರಿಗೆ ಮನೆ ಮಾಲಿಕರ ಕಿರಿ ಕಿರಿ ಎದುರಿಸಬೇಕಾಗುತ್ತದೆ. ಸಾಂಸಾರಿಕವಾಗಿ ಸಂಗಾತಿಯ ಸಹಕಾರ ದೊರೆಯಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ಮಾಡಲಿದ್ದೀರಿ. ಚಿನ್ನಾಭರಣಗಳ ವಿಚಾರದಲ್ಲಿ ಎಚ್ಚರ ಅಗತ್ಯ.

ಮಕರ: ಶೀಘ್ರವಾಗಿ ಕೆಲಸ ಕಾರ್ಯಗಳನ್ನು ಮುಗಿಸುವ ಅವಸರದಲ್ಲಿ ಎಡವಟ್ಟು ಮಾಡಿಕೊಳ್ಳುತ್ತೀರಿ. ನಿವೇಶನ, ಮನೆ ಖರೀದಿ ನಿಮಿತ್ತ ಕೊಂಚ ಖರ್ಚು ವೆಚ್ಚವಾಗಲಿದೆ. ಕುಟುಂಬದಲ್ಲಿ ಸಮಾಧಾನ, ಶಾಂತಿ ನೆಲೆಸಿರುತ್ತದೆ. ಸಂಗಾತಿಯ ಸಲಹೆಗಳಿಗೆ ಕಿವಿಗೊಡಬೇಕಾಗುತ್ತದೆ.

ಕುಂಭ: ಬಂಧು ಮಿತ್ರರ ಚಾಡಿ ಮಾತುಗಳನ್ನು ಅಲಕ್ಷಿಸುವುದೇ ಉತ್ತಮ. ಇಷ್ಟು ದಿನ ನೀವು ನಂಬಿಕೊಂಡಿದ್ದವರಿಂದಲೇ ನಂಬಿಕೆ ದ್ರೋಹವಾಗಬಹುದು. ಮಾನಸಿಕವಾಗಿ ಆತ್ಮವಿಶ್ವಾಸ ಬೆಳೆಸಿಕೊಳ್ಳಬಹುದು. ವೃತ್ತಿರಂಗದಲ್ಲಿ ಕಲಹಕ್ಕೆ ಎಡೆಮಾಡಿಕೊಡದಿರಿ.

ಮೀನ: ನಿರುದ್ಯೋಗಿಗಳಿಗೆ ಉದ್ಯೋಗ ನಿಮಿತ್ತ ದೂರ ಸಂಚಾರ ಮಾಡಬೇಕಾಗಿ ಬರುತ್ತದೆ. ಉದ್ಯೋಗ ಕ್ಷೇತ್ರದಲ್ಲಿ ಬರುವ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಪ್ರಯತ್ನ ನಡೆಸಿದರೆ ಪರಿಹಾರ ಸಾಧ್ಯ. ಮಹಿಳೆಯರೊಂದಿಗೆ ವ್ಯವಹರಿಸುವಾಗ ಎಚ್ಚರ. ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಭಾನುವಾರ ಹುಟ್ಟಿದವರ ಲಕ್ಷಣಗಳೇನು ಗೊತ್ತಾ?