Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶನಿವಾರ, 25 ಜನವರಿ 2020 (08:42 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ವೃತ್ತಿರಂಗದಲ್ಲಿ ಲಾಭಕ್ಕೆ ಕೊರೆತೆಯಿರದು. ಆದರೆ ನಯವಂಚಕರೂ ಬೆನ್ನಹಿಂದೆಯೇ ಇರುತ್ತಾರೆ. ಎಚ್ಚರಿಕೆಯಿಂದಿರಬೇಕು. ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆಯಿದೆ. ವಿದ್ಯಾರ್ಥಿಗಳಿಗೆ ಪ್ರಯತ್ನಕ್ಕೆ ಫಲ ಸಿಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ವೃಷಭ: ಸಮಾಧಾನ ಚಿತ್ತದಿಂದ ಮುಂದುವರಿದಲ್ಲಿ ಅಂದುಕೊಂಡ ಕೆಲಸಗಳು ಪೂರ್ತಿಯಾಗಲಿವೆ. ಕೊಡು ಕೊಳ್ಳುವಿಕೆ ವ್ಯವಹಾರದಲ್ಲಿ ಲಾಭ ಗಳಿಸುವಿರಿ. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

ಮಿಥುನ: ಅಂದುಕೊಂಡ ಕೆಲಸಗಳನ್ನು ಪೂರ್ತಿ ಮಾಡಿದ ನೆಮ್ಮದಿ ನಿಮ್ಮದಾಗಲಿದೆ. ಗುರು ಹಿರಿಯರ ಸಲಹೆ ಸೂಚನೆಗಳನ್ನು ಪಾಲಿಸಿ. ನಿರುದ್ಯೋಗಿಗಳಿಗೆ ಸರಕಾರಿ ಉದ್ಯೋಗದ ಯೋಗವಿದೆ. ಸಂಚಾರದಲ್ಲಿ ಜಾಗ್ರತೆ ಅಗತ್ಯ. ಸಂಗಾತಿಯ ಮನದಾಸೆ ಪೂರೈಸುವಿರಿ.

ಕರ್ಕಟಕ: ಕಾರ್ಯರಂಗದಲ್ಲಿ ಬರುವ ಸಮಸ್ಯೆಗಳನ್ನು ಮಿತ್ರರ ಸಹಕಾರದಿಂದ ಪರಿಹರಿಸಿಕೊಳ್ಳುವಿರಿ. ಹೊಸ ಪ್ರಯತ್ನಗಳಿಗೆ ಕೈ ಹಾಕುವ ಹುಮ್ಮಸ್ಸು ಮೂಡಿಬರಲಿದೆ. ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರಲಿದೆ. ನೆರೆಹೊರೆಯವರೊಂದಿಗೆ ವ್ಯವಹರಿಸುವಾಗ ಎಚ್ಚರ.

ಸಿಂಹ: ಸಣ್ಣ ಪುಟ್ಟ ವಿಚಾರಗಳ ಬಗ್ಗೆ ತಲೆಕೆಡಿಸಿಕೊಂಡು ಮನಸ್ಸಿನ ನೆಮ್ಮದಿ ಹಾಳುಮಾಡಿಕೊಳ್ಳಬೇಡಿ. ದೈವಾನುಕೂಲದಿಂದ ಆರ್ಥಿಕವಾಗಿ ಸಾಲಗಳು ಸಂದಾಯವಾಗಿ ಪರಿಸ್ಥಿತಿಯಲ್ಲಿ ಚೇತರಿಕೆ ಕಂಡುಬರಲಿದೆ. ವೃತ್ತಿರಂಗದಲ್ಲಿ ಕಾರ್ಯದೊತ್ತಡವಿದ್ದರೂ ನೆಮ್ಮದಿಗೆ ಕೊರತೆಯಿಲ್ಲ.

ಕನ್ಯಾ: ರಾಜಕೀಯ ವರ್ಗದವರಿಗೆ ಹಿನ್ನಡೆಯ ಭೀತಿಯಿದೆ. ಸಾಂಸಾರಿಕವಾಗಿ ಭಿನ್ನಾಭಿಪ್ರಾಯಗಳು ಮೂಡಿಬಂದೀತು. ಶೈಕ್ಷಣಿಕ ರಂಗದಲ್ಲಿರುವವರಿಗೆ ಮುನ್ನಡೆಯ ಲಾಭವಿದೆ. ಆರ್ಥಿಕ ಪರಿಸ್ಥಿತಿಯಲ್ಲಿ ಚೇತರಿಕೆ ಕಂಡುಬರುವುದು. ಮನೆಗೆ ಹೊಸ ವಸ್ತು ಖರೀದಿ ಮಾಡುವಿರಿ.

ತುಲಾ: ವೃತ್ತಿರಂಗದಲ್ಲಿ ವಿನಾಕಾರಣ ಅಪವಾದಕ್ಕೆ ಗುರಿಯಾಗಬೇಕಾದೀತು. ವ್ಯವಹಾರದಲ್ಲಿ ಎಚ್ಚರವಿರಲಿ. ತಾಳ್ಮೆ, ಸಂಯಮವಿದ್ದರೆ ಕಾರ್ಯಸಾಧನೆಯಾಗಬಹುದು. ಬಹುದಿನಗಳಿಂದ ಕಾಡುತ್ತಿದ್ದ ಆರೋಗ್ಯ ಸಮಸ್ಯೆ ದೂರವಾಗಲಿದೆ. ಹೊಸ ಮಿತ್ರರ ಸಂಪಾದಿಸಲಿದ್ದೀರಿ.

ವೃಶ್ಚಿಕ: ಹಂತ ಹಂತವಾಗಿ ಬೆಳವಣಿಗೆ ಅನುಭವಕ್ಕೆ ಬರಲಿದೆ. ಆರ್ಥಿಕವಾಗಿ ಖರ್ಚು ವೆಚ್ಚಗಳಿದ್ದರೂ ಆದಾಯಕ್ಕೆ ಕೊರೆತೆಯಿರದು. ವ್ಯಾಪಾರ, ವ್ಯವಹಾರದಲ್ಲಿ ಎಚ್ಚರಿಕೆಯಿಂದ ಹೂಡಿಕೆ ಮಾಡಿ. ವಾಹನ ಸವಾರರಿಗೆ ಅಪಘಾತದ ಭಯ.ಎಚ್ಚರವಿರಲಿ.

ಧನು: ಕಾರ್ಯರಂಗದಲ್ಲಿ ನಿಮ್ಮ ಕ್ರಿಯಾಶೀಲತೆ ಪ್ರಕಟಿಸಲು ಅವಕಾಶ ಸಿಗಲಿದೆ. ಆದರೆ ಮೈಮರೆಯಬೇಡಿ. ಅತಿಯಾದ ಹೊಗಳಿಕೆ ನೀಡುವವರ ಬಗ್ಗೆ ಎಚ್ಚರ. ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು ಗೋಚರವಾಗಲಿವೆ. ಕುಲದೇವರ ಪ್ರಾರ್ಥನೆ ಮಾಡಿ.

ಮಕರ: ದೈವಾನುಗ್ರಹದಿಂದ ಕಾರ್ಯರಂಗದಲ್ಲಿ ನಿಮ್ಮ ಪ್ರಯತ್ನಗಳಿಗೆ ಯಶಸ್ಸು ಸಿಗಲಿದೆ. ನೂತನ ದಂಪತಿಗಳಿಗೆ ಮಧುಚಂದ್ರ ಭಾಗ್ಯವಿದೆ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗುವಿರಿ. ಆರ್ಥಿಕವಾಗಿ ದುಂದುವೆಚ್ಚಗಳಿಗೆ ಕಡಿವಾಣ ಹಾಕುವುದು ಒಳಿತು.

ಕುಂಭ: ಮೇಲಧಿಕಾರಿಗಳ ಕಿರಿ ಕಿರಿಯಿಂದಾಗಿ ಉದ್ಯೋಗ ಬದಲಾವಣೆಗೆ ಮನಸ್ಸು ಮಾಡುವಿರಿ. ಸಂಗಾತಿಯಿಂದ ಸೂಕ್ತ ಸಮಯದಲ್ಲಿ ಉತ್ತಮ ಸಲಹೆ ಸಿಗುವುದು. ಮಹಿಳೆಯರಿಗೆ ಚಿನ್ನಾಭರಣ ಖರೀದಿಯಿಂದ ಲಾಭವಾಗಲಿದೆ. ವ್ಯಾಪಾರ ವ್ಯವಹಾರದಲ್ಲಿ ಮುನ್ನಡೆ ಸಿಗಲಿದೆ.

ಮೀನ: ನಿಮ್ಮ ಬುದ್ಧಿವಂತಿಕೆ ಪ್ರದರ್ಶಿಸಲು ಇದು ಸಕಾಲ. ಹೊಸ ವ್ಯವಹಾರದಲ್ಲಿ ಹೂಡಿಕೆ ಮಾಡುವಿರಿ. ಸಾಂಸಾರಿಕವಾಗಿ ಬಂಧು ಮಿತ್ರರ ಆಗಮನದಿಂದ ಖರ್ಚು ವೆಚ್ಚಗಳಾಗಬಹುದು. ಹಿರಿಯರಿಗೆ ಧಾರ್ಮಿಕ ಕ್ಷೇತ್ರಗಳ ಸಂದರ್ಶನ ಯೋಗವಿದೆ. ದಿನದಂತ್ಯಕ್ಕೆ ಶುಭ ಸುದ್ದಿ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ