Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಸೋಮವಾರ, 27 ಜನವರಿ 2020 (08:44 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಉದ್ಯೋಗ ಕಳೆದುಕೊಳ್ಳುವ ಭೀತಿ ಎದುರಾಗಲಿದೆ. ಹೊಸ ಭವಿಷ್ಯ ರೂಪಿಸುವ ವಿಚಾರದಲ್ಲಿ ನಿಮ್ಮ ನಿರಾಸಕ್ತಿ ಸಂಗಾತಿಯ ಅಸಮಾಧಾನಕ್ಕೆ ಗುರಿಯಾಗಲಿದೆ. ಮಾನಸಿಕವಾಗಿ ಋಣಾತ್ಮಕ ಚಿಂತನೆಗಳಿಗೆ ಅವಕಾಶ ಕೊಡಬೇಡಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಷಭ: ಅಧಿಕ ಧನಲಾಭ ತರುವ ಯೋಜನೆಗಳಿಗೆ ಮರುಳಾಗಿ ಹಣ ಕಳೆದುಕೊಳ್ಳುವ ಪರಿಸ್ಥಿತಿ ಎದುರಾಗಬಹುದು. ಎಚ್ಚರಿಕೆಯಿಂದ ವ್ಯವಹರಿಸಿ. ಗೃಹ ನಿರ್ಮಾಣ ಕಾರ್ಯಗಳಿಗೆ ಚಾಲನೆ ನೀಡಬಹುದು. ಸಂಗಾತಿಯ ಆರೋಗ್ಯದಲ್ಲಿ ಏರುಪೇರಾಗುವ ಸಾಧ‍್ಯತೆ.

ಮಿಥುನ: ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಜಯ ನಿಮ್ಮದಾಗಲಿದೆ. ದಾಯಾದಿಗಳೊಂದಿಗಿನ ಮನಸ್ತಾಪ ಅಂತ್ಯವಾಗಲಿದೆ. ಕೌಟುಂಬಿಕವಾಗಿ ನೆಮ್ಮದಿ ಸಿಗಲಿದೆ. ಆದರೆ ಸ್ವ ವೃತ್ತಿಯವರಿಗೆ ನಷ್ಟದ ಭೀತಿಯಿದೆ. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗ ಸಿಗದೇ ನಿರಾಸೆಯಾಗಬಹುದು.

ಕರ್ಕಟಕ: ಅರ್ಧಕ್ಕೇ ನಿಂತ ಕೆಲಸಗಳಿಗೆ ಚಾಲನೆ ನೀಡುವಿರಿ. ಬಂಧು ಮಿತ್ರರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯುವಿರಿ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ವಿದ್ಯಾರ್ಥಿಗಳಿಗೆ ಮುನ್ನಡೆಯಿರಲಿದೆ.

ಸಿಂಹ: ಸಾಮಾಜಿಕವಾಗಿ ನಿಮ್ಮ ಘನತೆ, ಗೌರವ ಹೆಚ್ಚಲಿದೆ. ರಾಜಕೀಯ ರಂಗದಲ್ಲಿರುವವರಿಗೆ ಮುನ್ನಡೆಯ ಲಾಭವಾಗಲಿದೆ. ಮಹಿಳಾ ಉದ್ಯೋಗಿಗಳಿಗೆ ಉದ್ಯೋಗದಲ್ಲಿ ಬಡ್ತಿ ಸಾಧ‍್ಯತೆ. ಆದರೆ ಆರ್ಥಿಕವಾಗಿ ಹಣಕಾಸಿನ ಖರ್ಚುವೆಚ್ಚಗಳಿಗೆ ಕಡಿವಾಣವಿರಲಿ.

ಕನ್ಯಾ: ಉದ್ಯೋಗ ಕ್ಷೇತ್ರದಲ್ಲಿ ಬಿಡುವಿಲ್ಲದ ದುಡಿತದಿಂದ ದೇಹ ಹೈರಾಣಾಗಬಹುದು. ಮೇಲಧಿಕಾರಿಗಳ ಕಿರಿ ಕಿರಿಯಿಂದ ಮನಸ್ಸಿಗೆ ಬೇಸರವಾಗಲಿದೆ. ಆದರೆ ಸಂಗಾತಿಯ ಪ್ರೀತಿಯ ಮಾತುಗಳು ಸಾಂತ್ವನ ನೀಡಲಿವೆ. ಮಕ್ಕಳಿಂದ ಸಂತಸ ಸಿಗಲಿದೆ.

ತುಲಾ: ನಿರುದ್ಯೋಗಿಗಳಿಗೆ ಉದ್ಯೋಗ ಸಂಬಂಧವಾಗಿ ದೂರ ಸಂಚಾರ ಮಾಡಬೇಕಾಗುತ್ತದೆ. ಹಿರಿಯರಿಂದ ಬಂದ ಬಳವಳಿಗಳನ್ನು ಜೋಪಾನ ಮಾಡಿಕೊಳ್ಳಿ. ನೂತನ ದಂಪತಿಗಳಲ್ಲಿ ಹೊಂದಾಣಿಕೆ ಕೊರತೆ ಕಾಣಬಹುದು. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ.

ವೃಶ್ಚಿಕ: ಉದ್ಯೋಗ ಕ್ಷೇತ್ರದಲ್ಲಿ ಬರುವ ಸಮಸ್ಯೆಗಳಿಗೆ ಸಹೋದ್ಯೋಗಿಗಳ ನೆರವಿನಿಂದ ಪರಿಹಾರ ಕಂಡುಕೊಳ್ಳುವಿರಿ. ಕೌಟುಂಬಿಕವಾಗಿ ಹೆಚ್ಚಿನ ಜವಾಬ್ಧಾರಿಗಳಿಗೆ ಸಿದ್ದರಾಗಬೇಕಾಗುತ್ತದೆ. ಧಾರ್ಮಿಕ ಕಾರ್ಯಗಳಿಗೆ ಧನವಿನಿಯೋಗ ಮಾಡಬೇಕಾಗುತ್ತದೆ.

ಧನು: ನಿಮ್ಮ ದುಡುಕು ಮಾತಿನಿಂದ ಸಂಗಾತಿಯ ಮನಸ್ಸಿಗೆ ಬೇಸರವಾಗಬಹುದು. ಅನಗತ್ಯ ವಿಚಾರಗಳಿಗೆ ಮೂಗು ತೂರಿಸುವುದನ್ನು ಬಿಡಿ. ವಿದ್ಯಾರ್ಥಿಗಳಿಗೆ ಶೈಕ್ಷಣಿಕ ರಂಗದಲ್ಲಿ ಪ್ರಗತಿ ಕಂಡುಬರಲಿದೆ. ಪ್ರೀಥಿ ಪಾತ್ರರೊಂದಿಗೆ ಇಷ್ಟಭೋಜನ ಕೈಗೊಳ್ಳುವ ಯೋಗವಿದೆ.

ಮಕರ: ಅನಗತ್ಯ ವಿಚಾರಗಳಿಗೆ ತಲೆಕೆಡಿಸಿಕೊಳ್ಳಬೇಡಿ. ಕಾರ್ಯಕ್ಷೇತ್ರದಲ್ಲಿ ಒಂದು ನಿರಾಸಕ್ತಿ ಕಾಡಬಹುದು. ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕು. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿವೆ. ನಿರುದ್ಯೋಗಿಗಳಿಗೆ ಸರಕ಻ರಿ ಉದ್ಯೋಗದ ಯೋಗವಿದೆ.

ಕುಂಭ: ಮಕ್ಕಳು ಹೇಳುವ ವಿಚಾರಗಳು ನಿಮ್ಮ ಚಿಂತೆ ಹೆಚ್ಚಿಸಲಿವೆ. ಸಂಗಾತಿಯೊಂದಿಗೆ ಮನಸ್ತಾಪವಾಗದಂತೆ ಎಚ್ಚರವಹಿಸಿ. ವಾತ ಸಂಬಂಧೀ ಆರೋಗ್ಯ ಸಮಸ್ಯೆಗಳು ಕಂಡುಬಂದೀತು. ಸಹೋದರಿಯರ ವಿವಾಹ ಪ್ರಸ್ತಾಪಗಳಿಗೆ ಮುನ್ನಡೆ ದೊರೆಯಲಿದೆ.

ಮೀನ: ಕೆಳ ಹಂತದ ನೌಕರರಿಗೆ ಉದ್ಯೋಗದಲ್ಲಿ ಮುನ್ನಡೆ ಸಿಗಲಿದೆ. ವೃತ್ತಿ ರಂಗದಲ್ಲಿ ನಯವಂಚಕರಿಂದ ವಂಚನೆಗೊಳಗಾದಂತೆ ಎಚ್ಚರವಹಿಸಿ. ಸರಕಾರಿ ಉದ್ಯೋಗಿಗಳಿಗೆ ಕಾರ್ಯದೊತ್ತಡವಿರಲಿದೆ. ಕೌಟುಂಬಿಕವಾಗಿ ನೆಮ್ಮದಿ ಸಿಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬುಧವಾರ ಹುಟ್ಟಿದವರ ಲಕ್ಷಣಗಳೇನು ಗೊತ್ತಾ?