ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಮಂಗಳವಾರ, 28 ಜನವರಿ 2020 (08:53 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಉದ್ಯೋಗ ಕ್ಷೇತ್ರದಲ್ಲಿ ಬರುವ ತೊಂದರೆಗಳಿಂದ ಭವಿಷ್ಯದ ಬಗ್ಗೆ ಚಿಂತೆಯಾಗುವುದು. ಒಂದು ರೀತಿಯಲ್ಲಿ ಮಾನಸಿಕವಾಗಿ ಋಣಾತ್ಮಕ ಯೋಚನೆಗಳು ಬರಲಿವೆ. ದೇಹಾರೋಗ್ಯದಲ್ಲಿ ಏರುಪೇರಾಗಲಿದೆ. ವಿದ್ಯಾರ್ಥಿಗಳಿಗೆ ಮುನ್ನಡೆಯಿರಲಿದೆ.

ವೃಷಭ: ಆರೋಗ್ಯದಲ್ಲಿ ಇದುವರೆಗೆ ಇದ್ದ ಸಮಸ್ಯೆಗಳು ದೂರವಾಗಿ ಸುಧಾರಣೆ ಕಂಡುಬರಲಿದೆ. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳೊಂದಿಗೆ ಹೊಂದಾಣಿಕೆಯಿರಲಿ. ಸಾಮಾಜಿಕವಾಗಿ ಸ್ಥಾನ ಮಾನ ವೃದ್ಧಿಯಾಗಲಿದೆ. ದಾಂಪತ್ಯದಲ್ಲಿ ಸಂತೋಷವಿರುವುದು.

ಮಿಥುನ: ವೃತ್ತಿರಂಗದಲ್ಲಿ ಮತ್ತು ಆರ್ಥಿಕವಾಗಿ ಅಭಿವೃದ್ಧಿ ಕಂಡುಬರಲಿದೆ. ಇದರಿಂದಾಗಿ ಮನದಿಂಗಿತಗಳನ್ನು ನೆರವೇರಿಸಿಕೊಳ್ಳುವಿರಿ. ವಾಹನ ಖರೀದಿಗೆ ಇದು ಸಕಾಲ.  ಮಿತ್ರರೊಂದಿಗೆ ಅನಗತ್ಯ ಸಂಘರ್ಷವಾಗದಂತೆ ಎಚ್ಚರಿಕೆ ವಹಿಸಿ. ಹಿರಿಯರ ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕರ್ಕಟಕ: ವ್ಯಾಪಾರ, ವ್ಯವಹಾರ ಕ್ಷೇತ್ರದಲ್ಲಿರುವವರಿಗೆ ಆರ್ಥಿಕವಾಗಿ ಅಭಿವೃದ್ಧಿ ಕಂಡುಬರಲಿದೆ. ಶೈಕ್ಷಣಿಕ ರಂಗದಲ್ಲಿರುವವರಿಗೆ ಅಧ‍್ಯಯನ ನಿಮಿತ್ತ ದೂರ ಸಂಚಾರ ಮಾಡಬೇಕಾಗಬಹುದು. ನೂತನ ದಂಪತಿಗೆ ಸಂತಾನ ಫಲ ಸೂಚನೆ ದೊರಕಲಿದೆ.

ಸಿಂಹ: ವ್ಯವಹಾರದಲ್ಲಿ ಲಾಭ ಕಂಡುಬರಲಿದ್ದು, ಕೌಟುಂಬಿಕವಾಗಿ ಹೊಸ ವಸ್ತುಗಳ ಖರೀದಿ, ಮನದೆನ್ನೆಯ ಆಸೆ ಪೂರೈಸಲು ಮುಂದಾಗುವಿರಿ. ಮಕ್ಕಳ ವಿಚಾರದಲ್ಲಿ ಸಂತಸವಿರಲಿದೆ. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಜಯ ಸಿಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕನ್ಯಾ: ಮಾಡುತ್ತಿರುವ ಕೆಲಸದಲ್ಲಿ ಏಕತಾನತೆಯಿಂದಾಗಿ ಮನಸ್ಸಿಗೆ ಬೇಸರವಾಗಬಹುದು. ಒಂದು ರೀತಿಯ ಆಲಸ್ಯ ಕಾಡಲಿದೆ. ಹೆಣ್ಣು ಮಕ್ಕಳಿಗೆ ತವರಿನಿಂದ ಉಡುಗೊರೆ ಬರಲಿದೆ. ಬಂಧು ಮಿತ್ರರ ಭೇಟಿಯಾಗುವಿರಿ. ದೇವತಾ ಪ್ರಾರ್ಥನೆ ಮಾಡಿ.

ತುಲಾ: ಸಣ್ಣ ಪುಟ್ಟ ವಿಚಾರಕ್ಕೆ ಕುಟುಂಬದ ಸದಸ್ಯರೊಳಗೇ ಭಿನ್ನಾಭಿಪ್ರಾಯಗಳು ಮೂಡಲಿವೆ. ವ್ಯವಹಾರದಲ್ಲಿ ನಂಬಿಕೆ ದ್ರೋಹಿಗಳ ವಂಚನೆ ಬೆಳಕಿಗೆ ಬರಲಿವೆ. ಉದ್ಯೋಗ ಕ್ಷೇತ್ರದಲ್ಲಿ ಎಷ್ಟೇ ತೊಂದರೆಗಳಿದ್ದರೂ ಅಂತಿಮ ಜಯ ನಿಮ್ಮದಾಗುವುದು.

ವೃಶ್ಚಿಕ: ವ್ಯಾಪಾರ ವ್ಯವಹಾರದಲ್ಲಿ ಲಾಭವಿಲ್ಲದಿದ್ದರೂ ನಷ್ಟವಾಗದು. ನಿಮ್ಮ ಕ್ರಿಯಾಶೀಲತೆಯನ್ನು ಪ್ರಕಟಗೊಳಿಸಲು ಇದು ಸಕಾಲ. ನಿರುದ್ಯೋಗಿಗಳಿಗೆ ಉದ್ಯೋಗ ನಿಮಿತ್ತವಾಗಿ ಪ್ರಯಾಸಪಡಬೇಕಾದೀತು. ಕೌಟುಂಬಿಕವಾಗಿ ನೆಮ್ಮದಿಯಿರಲಿದೆ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

ಧನು: ಕುಟುಂಬ ಸೌಖ್ಯದಿಂದ ಮಾನಸಿಕ ನೆಮ್ಮದಿಗೆ ಕೊರತೆಯಿರದು. ಆದರೆ ಅಂದುಕೊಂಡ ಯೋಜನೆಗಳನ್ನು ಪೂರ್ತಿಗೊಳಿಸಲು ಹಣಕಾಸಿನ ಅಡಚಣೆ ಅಡ್ಡಿಯಾಗುವುದು. ಸಂಗಾತಿಯ ಮಾತಿಗೆ ಕಿವಿಗೊಡಿ. ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ.

ಮಕರ: ದಾಂಪತ್ಯದಲ್ಲಿ ಸಂಗಾತಿಯೊಂದಿಗೆ ಸಾಮರಸ್ಯ ಹೆಚ್ಚಲಿದೆ. ಸಂತಾನಾಪೇಕ್ಷಿತ ದಂಪತಿಗೆ ಶುಭ ಫಲ ದೊರೆಯಲಿದೆ. ಕೆಲವೊಂದು ಆಸೆಗಳಿಗೆ ಕಡಿವಾಣ ಹಾಕುವುದು ಒಳಿತು. ಹಣಕಾಸಿನ ಅಡಚಣೆ ಉಂಟಾಗಬಹುದು. ಕಾರ್ಯನಿಮಿತ್ತ ಕಿರುಸಂಚಾರ ಮಾಡುವಿರಿ.

ಕುಂಭ: ಸಾಮಾಜಿಕ ರಂಗದಲ್ಲಿ ನೀವು ಒಳ್ಳೆಯ ಉದ್ದೇಶದಿಂದ ಕೈ ಹಿಡಿಯುವ ಕೆಲಸಗಳಿಂದ ಅಪವಾದ ಎದುರಿಸಬೇಕಾದೀತು. ಸಂಯಮದಿಂದ ವರ್ತಿಸಿ. ಅವಿವಾಹಿತರ ವಿವಾಹ ಪ್ರಯತ್ನಕ್ಕೆ ಸದ್ಯಕ್ಕೆ ಅಡಚಣೆಯುಂಟಾದೀತು. ಕುಲದೇವರ ಪ್ರಾರ್ಥನೆಯಿಂದ ಶುಭವಾಗಲಿದೆ.

ಮೀನ: ಹಣಕಾಸಿನ ವ್ಯವಹಾರದಲ್ಲಿ ಮಿತ್ರರೊಂದಿಗೆ ಮನಸ್ತಾಪಗಳು ಬರುವ ಸಾಧ್ಯತೆಯಿದೆ. ಕೆಳ ಹಂತದ ನೌಕರರಿಗೆ ಉದ್ಯೋಗದಲ್ಲಿ ಸ್ಥಾನ ಪಲ್ಲಟ ಭೀತಿಯಿದೆ. ಹಿರಿಯರಿಗೆ ಧಾರ್ಮಿಕ ಕ್ಷೇತ್ರಗಳ ಸಂದರ್ಶನ ಯೋಗವಿದೆ. ಕುಟುಂಬದವರ ಶ್ರೀರಕ್ಷೆ ನಿಮ್ಮ ಮೇಲಿರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಈ ಐದು ರಾಶಿಯವರಿಗೆ 2026 ರಲ್ಲಿ ಸ್ವಂತ ಮನೆ ಕನಸು ನನಸಾಗುತ್ತದೆ

ಮಂಗಳವಾರ ದೇವಿಯ ಅನುಗ್ರಹಕ್ಕಾಗಿ ನವರತ್ನ ಮಾಲಿಕಾ ಸ್ತೋತ್ರ

ಶಿವ ಪಂಚಾಕ್ಷರಿ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಈ ಐದು ರಾಶಿಯವರಿಗೆ 2026 ರಲ್ಲಿ ಮದುವೆ ಯೋಗವಿದೆ

ಶನಿವಾರದಂದು ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಲೇ ಬೇಡಿ

ಮುಂದಿನ ಸುದ್ದಿ
Show comments