Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶುಕ್ರವಾರ, 31 ಜನವರಿ 2020 (08:47 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಉದ್ಯೋಗ ಕ್ಷೇತ್ರದಲ್ಲಿ ಬರುವ ಸಮಸ್ಯೆಗಳ ಪರಿಹಾರಕ್ಕೆ ಹೊಸ ಸೂತ್ರ ಕಂಡುಕೊಳ್ಳುವಿರಿ. ಉದರ ಸಂಬಂಧೀ ಆರೋಗ್ಯ ಸಮಸ್ಯೆಗಳು ಕಂಡುಬರಲಿವೆ. ಆರ್ಥಿಕವಾಗಿ ಖರ್ಚು ವೆಚ್ಚಗಳಿದ್ದರೂ ಆದಾಯಕ್ಕೆ ಕೊರತೆಯಿರದು. ನೂತನ ದಂಪತಿಗಳಿಗೆ ಶುಭ ದಿನ.

ವೃಷಭ: ವಿವೇಚನೆಯಿಂದ ಕಾರ್ಯದಲ್ಲಿ ತೊಡಗಿಸಿಕೊಳ್ಳಿ. ಅಪರಿಚಿತರನ್ನು ನಂಬಿ ವ್ಯವಹಾರದಲ್ಲಿ ನಷ್ಟ ಮಾಡಿಕೊಳ್ಳಬೇಡಿ. ನಿರುದ್ಯೋಗಿಗಳಿಗೆ ಉದ್ಯೋಗ ಲಾಭವಾಗಲಿದೆ. ಬ್ಯಾಂಕಿಂಗ್ ವ್ಯವಹಾರಗಳು ಸುಗಮವಾಗಿ ನೆರವೇರುವುದು. ಸಹೋದರರ ಜತೆಗೆ ಪ್ರೀತಿ ವಿಶ್ವಾಸದಿಂದ ನಡೆದುಕೊಳ್ಳಿ.

ಮಿಥುನ: ಆತ್ಮೀಯರೊಂದಿಗೆ ದುಡುಕಿನ ಮಾತನಾಡಿ ಸಂಬಂಧ ಹಾಳು ಮಾಡಿಕೊಳ್ಳಬೇಡಿ. ಭೂ ಸಂಬಂಧೀ ವ್ಯವಹಾರಗಳಿಂದ ಲಾಭವಾಗಲಿದೆ. ಉದ್ಯೋಗದ ವಿಚಾರದಲ್ಲಿ ಅಸ್ಥಿರತೆ, ಸಮಸ್ಯೆಗಳು ಎದುರಾಗಬಹುದು. ಎಚ್ಚರಿಕೆಯಿಂದಿರುವುದು ಅಗತ್ಯ.

ಕರ್ಕಟಕ: ಸರಿಯಾದ ಯೋಜನೆಯೊಂದಿಗೆ ಕೆಲಸ ಆರಂಭಿಸಿದರೆ ಯಶಸ್ವಿಯಾಗಿ ಪೂರ್ತಿ ಮಾಡುವಿರಿ. ಸಂಗಾತಿಯ ಸಲಹೆಗಳು ಉಪಯೋಗಕ್ಕೆ ಬರುವುದು. ಬಡ್ಡಿ ವ್ಯವಹಾರಗಳಿಂದ ದೂರವಿರುವುದು ಉತ್ತಮ. ಪ್ರೀತಿ ಪಾತ್ರರೊಂದಿಗೆ ಕಿರು ಪ್ರವಾಸ ಮಾಡುವಿರಿ.

ಸಿಂಹ: ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗುತ್ತಿದ್ದ ಹಾಗೇ ಶತ್ರುಗಳೂ ಹುಟ್ಟಿಕೊಳ್ಳಲಿದ್ದಾರೆ. ರಾಜಕೀಯ ಕ್ಷೇತ್ರದಲ್ಲಿರುವವರಿಗೆ ಈ ದಿನ ಎಚ್ಚರಿಕೆಯಿಂದ ಹೆಜ್ಜೆಯಿಡಬೇಕು. ವೈಯಕ್ತಿಕ ಗುಟ್ಟುಗಳನ್ನು ಬಹಿರಂಗಪಡಿಸಬೇಡಿ. ದೇವರ ಪ್ರಾರ್ಥನೆ ಮಾಡಿ.

ಕನ್ಯಾ: ನಿಮ್ಮ ಕೆಲಸ ಕಾರ್ಯಗಳಲ್ಲಿ ಮರೆವಿನಿಂದ ಅಚಾತುರ್ಯಗಳು ಸಂಭವಿಸುವ ಅಪಾಯವಿದೆ. ಆದಷ್ಟು ಎಚ್ಚರಿಕೆಯಿಂದಿರಿ. ಕುಟುಂಬ ಸದಸ್ಯರ ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕಾಗುತ್ತದೆ. ವ್ಯಾಪಾರಿಗಳಿಗೆ ಲಾಭ ಮಾಅಡಿಕೊಳ್ಳಲು ಹೊಸ ದಾರಿಗಳು ಗೋಚರವಾಗಲಿದೆ.

ತುಲಾ: ವ್ಯಾಪಾರ, ವ್ಯವಹಾರ ನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ. ಆರ್ಥಿಕವಾಗಿ ಹಣಕಾಸಿನ ಮುಗ್ಗಟ್ಟುಗಳು ಎದುರಾಗಬಹುದು. ಹಿತಮಿತವಾಗಿ ಖರ್ಚು ಮಾಡಿ. ಕಟ್ಟಡ ಕಾಮಗಾರಿ ಉದ್ಯೋಗಿಗಳಿಗೆ ಮುನ್ನಡೆಯಿರಲಿದೆ. ದಾಯಾದಿ ಕಲಹಗಳ ಅಂತ್ಯಕ್ಕೆ ಪ್ರಯತ್ನ ನಡೆಸುವಿರಿ.

ವೃಶ್ಚಿಕ: ವೃತ್ತಿರಂಗದಲ್ಲಿ ನಿಮ್ಮ ಕೆಲಸಗಳು ವಿಳಂಬಗತಿಯಲ್ಲಿ ಸಾಗಬಹುದು. ಆದರೆ ನಿರಾಸೆ ಬೇಕಾಗಿಲ್ಲ. ಆರ್ಥಿಕವಾಗಿ ಹಣಕಾಸಿನ ತೊಂದರೆಗಳು ನಿವಾರಣೆಯಾಗಲಿವೆ. ಮನೆಯಲ್ಲಿ ಶುಭ ಮಂಗಲ ಕಾರ್ಯಗಳನ್ನು ನಡೆಸಲು ಸಿದ್ಧತೆ ನಡೆಸಲಿದ್ದೀರಿ.

ಧನು: ಮಾನಸಿಕವಾಗಿ ಬೇಡದ ವಿಚಾರಗಳಿಗೆ ಚಿಂತೆ ಮಾಡುತ್ತಾ ದೈಹಿಕ ಆರೋಗ್ಯದ ಬಗ್ಗೆ ಉಪೇಕ್ಷೆ ಮಾಡಬೇಡಿ. ವಿನಾಕಾರಣ ಬೇರೆಯವರ ವಿಚಾರದಲ್ಲಿ ಮೂಗು ತೂರಿಸಲು ಹೋಗಬೇಡಿ. ಬಂಧು ಮಿತ್ರರ ಭೇಟಿ ಮನಸ್ಸಿಗೆ ಖುಷಿ ಕೊಡಲಿದೆ.

ಮಕರ: ಉದ್ಯೋಗ ಕ್ಷೇತ್ರದಲ್ಲಿ ಇದುವರೆಗೆ ನೀವು ಬಯಸಿದಂತಹ ಉತ್ತಮ ಸ್ಥಾನ ಮಾನ ಸಿಗಲಿದೆ. ಸಹೋದ್ಯೋಗಿಗಳ ಸಹಕಾರ ಸಿಗಲಿದೆ. ಸಾಹಿತ್ಯ ಕ್ಷೇತ್ರದಲ್ಲಿರುವವರು ಕೀರ್ತಿ ಸಂಪಾದಿಸಲಿದ್ದಾರೆ. ದೈವಾನುಕೂಲದಿಂದ ಇಂದು ನಿಮ್ಮ ಅದೃಷ್ಟದ ಬಾಗಿಲು ತೆರೆಯಲಿದೆ.

ಕುಂಭ: ಅನಿರೀಕ್ಷಿತವಾಗಿ ಎದುರಾಗುವ ವ್ಯಕ್ತಿಗಳು ಮೇಲ್ನೋಟಕ್ಕೆ ನಿಮಗೆ ಸಹಾಯ ಮಾಡುತ್ತಾರೆ ಎನಿಸಿದರೂ ಅವರಿಂದ ನಷ್ಟ ಅನುಭವಿಸಬೇಕಾದೀತು. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ. ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿವಹಿಸಿ. ಪತ್ನಿಯೊಡನೆ ಹೊಂದಾಣಿಕೆಯಿಂದಿರಿ.

ಮೀನ: ಉದ್ಯೋಗ ಕ್ಷೇತ್ರದಲ್ಲಿ ನೀವು ಬಯಸಿದ ಫಲಿತಾಂಶ ಸಿಗದೇ ಬೇಸರವಾಗಬಹುದು. ಅಂದುಕೊಂಡ ಕೆಲಸಗಳಲ್ಲಿ ವಿಘ್ನಗಳು ಎದುರಾಗಲಿವೆ. ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಪ್ರಗತಿ ಸಿಗುವುದು. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮನೆಯ ಆವರಣದಲ್ಲಿ ಶಮಿ ವೃಕ್ಷವಿದ್ದರೆ ಈ ಎಲ್ಲಾ ಫಲ ನಿಮ್ಮದಾಗಲಿದೆ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments