Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಭಾನುವಾರ, 2 ಫೆಬ್ರವರಿ 2020 (08:44 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಅವಿವಾಹಿತರಿಗೆ ನಿರೀಕ್ಷಿತ ರೀತಿಯಲ್ಲಿ ಕಂಕಣ ಬಲ ಕೂಡಿಬರಲಿದೆ. ಧಾರ್ಮಿಕ ಕ್ಷೇತ್ರಗಳ ಸಂದರ್ಶನದಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಪ್ರೀತಿ ಪಾತ್ರರ ಭೇಟಿಯಾಗುವಿರಿ. ಕಾರ್ಯಕ್ಷೇತ್ರದಲ್ಲಿ ಅಧಿಕ ಓಡಾಟದಿಂದ ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ.

ವೃಷಭ: ಕಾರ್ಯಕ್ಷೇತ್ರದಲ್ಲಿ ಅಡೆತಡೆಗಳು ತೋರಿಬಂದರೂ ಅಂತಿಮ ಜಯ ನಿಮ್ಮದಾಗುವುದು. ಉದ್ದೇಶಿತ ಕೆಲಸಗಳನ್ನು ಈಡೇರಿಸುವಿರಿ. ಸಂಗಾತಿಯ ದೇಹಾರೋಗ್ಯದ ಕಡೆಗೆ ಕಾಳಜಿಯಿರಲಿ. ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ನಡೆಸುವಿರಿ.

ಮಿಥುನ: ಕೌಟುಂಬಿಕವಾಗಿ ನೆಮ್ಮದಿಯ ದಿನ ನಿಮ್ಮದಾಗಲಿದೆ. ಸಂಗಾತಿಯ ಮನದಾಸೆ ಪೂರೈಸುವಿರಿ. ಆದರೆ ಆರ್ಥಿಕವಾಗಿ ಖರ್ಚು ವೆಚ್ಚಗಳ ಬಗ್ಗೆ ನಿಗಾ ಇರಲಿ. ಅನಿರೀಕ್ಷಿತವಾಗಿ ಹಳೆಯ ಮಿತ್ರರ ಭೇಟಿಯಾಗುವಿರಿ. ಕಾರ್ಯನಿಮಿತ್ತ ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಕರ್ಕಟಕ: ನಿರುದ್ಯೋಗಿಗಳಿಗೆ ಉದ್ಯೋಗ ಸಂದರ್ಶನಕ್ಕೆ ಕರೆ ಬರುವುದು. ಆಕಸ್ಮಿಕವಾಗಿ ಧನಲಾಭವಾಗಲಿದ್ದು, ಅಂದುಕೊಂಡ ಕಾರ್ಯ ನೆರವೇರಿಸುವಿರಿ. ವಾಹನ ಸಂಚಾರದಲ್ಲಿ ಹೆಚ್ಚಿನ ಜಾಗ್ರತೆ ಅಗತ್ಯ. ಕ್ರೀಡಾ ಕ್ಷೇತ್ರದಲ್ಲಿರುವವರಿಗೆ ಯಶಸ್ಸು ಸಿಗಲಿದೆ.

ಸಿಂಹ: ಯೋಜಿತ ಕೆಲಸಗಳಿಗೆ ಚಾಲನೆ ಸಿಕ್ಕಿ ಉತ್ತಮ ಫಲ ನಿರೀಕ್ಷಿಸಬಹುದು. ಸಾಂಸಾರಿಕವಾಗಿ ಹೊಸ ಯೋಜನೆಗಳಿಗೆ ಕೈ ಹಾಕುವಿರಿ. ಮಕ್ಕಳ ವಿದ್ಯಾಭ್ಯಾಸದ ಕಡೆಗೆ ಗಮನಹರಿಸಬೇಕಾಗುತ್ತದೆ. ಬಂಧು ಮಿತ್ರರ ಆಗಮನವಾಗಲಿದೆ. ದಿನದಂತ್ಯಕ್ಕೆ ಶುಭ ಸುದ್ದಿ.

ಕನ್ಯಾ: ಇಂದು ನೀವು ಯಾರೊಂದಿಗೇ ಆದರೂ ಹಣಕಾಸಿನ ವ್ಯವಹಾರ ಮಾಡುವಾಗ ಎಚ್ಚರಿಕೆಯಿಂದಿರಬೇಕು. ಸಾಲ ಕೊಟ್ಟರೆ ಮರಳಿ ಬಾರದು. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗ ಸಿಗದೇ ನಿರಾಶೆಯಾಗಬಹುದು. ವಾಹನಾಪಘಾತದ ಭಯವಿದೆ.

ತುಲಾ: ರಾಜಕೀಯ ಕ್ಷೇತ್ರದಲ್ಲಿರುವವರು ಉತ್ತಮ ಸ್ಥಾನ ಮಾನ ಪಡೆದು ಅಭಿವೃದ್ಧಿ ಹೊಂದಲಿದ್ದಾರೆ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ನಿರುದ್ಯೋಗಿಗಳು ಸ್ವ ಉದ್ಯೋಗದ ಕಡೆಗೆ ಮನಸ್ಸು ಮಾಡುವರು. ಧಾರ್ಮಿಕ ಕಾರ್ಯಗಳಿಗೆ ಧನವಿನಿಯೋಗ ಮಾಡುವಿರಿ.

ವೃಶ್ಚಿಕ: ವೃತ್ತಿರಂಗದಲ್ಲಿ ಬೇಡದ ಅಪವಾದಕ್ಕೆ ಗುರಿಯಾಗುವಿರಿ. ಮಹಿಳೆಯರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ಆಸ್ತಿ ವಿವಾದಗಳಿಗೆ ಹಿರಿಯರ ಮಧ್ಯಸ್ಥಿಕೆ ಸೂಕ್ತ. ಆರ್ಥಿಕವಾಗಿ ಹಣಕಾಸಿಗೆ ತೊಂದರೆಯಾಗದು. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.

ಧನು: ವಿದ್ಯಾರ್ಥಿಗಳಿಗೆ ಪ್ರಯತ್ನಬಲಕ್ಕೆ ತಕ್ಕ ಯಶಸ್ಸು ಸಿಗಲಿದೆ. ದೇಹಾರೋಗ್ಯದಲ್ಲಿ ಇದುವರೆಗೆ ಇದ್ದ ಸಮಸ್ಯೆಗಳು ನಿಧಾನವಾಗಿ ಪರಿಹಾರವಾಗಲಿದೆ. ಸಂಗಾತಿಯ ಮಾತಿಗೆ ಕಿವಿಗೊಡಿ. ದೂರ ಸಂಚಾರ ಮಾಡಬೇಕಾಗುತ್ತದೆ. ದೇವತಾ ಪ್ರಾರ್ಥನೆ ಮಾಡಿ.

ಮಕರ: ವೃತ್ತಿರಂಗದಲ್ಲಿ ಅಭಿವೃದ್ಧಿ ಅನುಭವಕ್ಕೆ ಬರುವುದು. ಹಣಕಾಸಿನ ಸ್ಥಿತಿಯಲ್ಲಿ ಸುಧಾರಣೆ ಕಂಡುಬರಲಿದ್ದು, ಹೊಸ ವ್ಯವಹಾರಗಳಲ್ಲಿ ಹೂಡಿಕೆ ಮಾಡುವಿರಿ. ಯೋಗ್ಯ ವಯಸ್ಕರಿಗೆ ಶೀಘ್ರ ವಿವಾಹ ಭಾಗ್ಯವಿದೆ. ಅನಿರೀಕ್ಷಿತ ಅತಿಥಿಗಳ ಆಗಮನವಾಗಲಿದೆ.

ಕುಂಭ: ಹಿರಿಯರಿಂದ ಬಳವಳಿ ನಷ್ಟವಾಗುವ ಭೀತಿ ಕಾಡಲಿದೆ. ಮಾನಸಿಕವಾಗಿ ಗಟ್ಟಿಯಾಗಬೇಕಾದ ಸಮಯವಿದು. ಮಕ್ಕಳಿಂದ ಸಂತಸದ ವಾರ್ತೆ ಕೇಳಿಬರಲಿದೆ. ಶುಭ ಮಂಗಲ ಕಾರ್ಯಗಳಲ್ಲಿ ಭಾಗಿಯಾಗುವಿರಿ. ವಿದ್ಯಾರ್ಥಿಗಳಿಗೆ ಪ್ರಗತಿ ಕಂಡುಬರಲಿದೆ.

ಮೀನ: ಹಂತ ಹಂತವಾಗಿ ನಿಮ್ಮ ವೃತ್ತಿರಂಗದಲ್ಲಿ ಅಭಿವೃದ್ಧಿ ತೋರಿಬರಲಿದ್ದು, ಸಾಲಗಾರರಿಂದ ಮುಕ್ತಿ ಸಿಗಲಿದೆ. ಆದರೆ ದುಡುಕು ಮಾತು, ವರ್ತನೆಗೆ ಕಡಿವಾಣ ಹಾಕಬೇಕಿದೆ. ಸಂಗಾತಿಯೊಂದಿಗೆ ಹೊಂದಾಣಿಕೆಯಿರಲಿ. ನೂತನ ದಂಪತಿಗೆ ಸಂತಾನ ಫಲ ಸೂಚನೆ ಸಿಗಲಿದೆ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments