Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಸೋಮವಾರ, 3 ಫೆಬ್ರವರಿ 2020 (08:46 IST)
ಬೆಂಗಳೂರು: ದ್ವಾದಶ ರಾಶಿಗಳ ಇಂದಿನ ಫಲಾಫಲಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.


ಮೇಷ: ಅಧಿಕ ಓಡಾಟಕ್ಕೆ ಕಡಿವಾಣ ಹಾಕುವುದು ಉತ್ತಮ. ಉದ್ಯೋಗ ಕ್ಷೇತ್ರದಲ್ಲಿ ಜವಾಬ್ಧಾರಿ ಹೆಚ್ಚಲಿದೆ. ಎಚ್ಚರಿಕೆಯಿಂದ ಹೆಜ್ಜೆಯಿಡಬೇಕು. ದೈವಾನುಗ್ರಹದಿಂದ ಅನಿರೀಕ್ಷಿತ ಅಪಘಾತಗಳು ತಪ್ಪಿ ಹೋಗಲಿವೆ. ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.

ವೃಷಭ: ಹಣಕಾಸು ವಿಚಾರದಲ್ಲಿ ಎಚ್ಚರಿಕೆಯಿಂದ ವ್ಯವಹರಿಸಿ. ವ್ಯಾಪಾರ, ವ್ಯವಹಾರದಲ್ಲಿ ಉತ್ತಮ ಲಾಭ ಕಂಡುಬರಲಿದೆ. ಹೊಸ ಯೋಜನೆಗಳು ತಲೆಯಲ್ಲಿ ಮೂಡಿಬರಲಿವೆ. ಉದ್ಯೋಗ ಕ್ಷೇತ್ರದಲ್ಲಿ ತಾಳ್ಮೆಯಿಂದಿದ್ದಷ್ಟೂ ಉತ್ತಮ. ಧಾರ್ಮಿಕವಾಗಿ ಭಯ ಭಕ್ತಿ ಮೂಡಲಿದೆ.

ಮಿಥುನ: ವೃತ್ತಿರಂಗದಲ್ಲಿ ಅನಿರೀಕ್ಷಿತವಾಗಿ ಬೇರೆಡೆಗೆ ವರ್ಗಾವಣೆಯಾಗುವ ಸಾಧ್ಯತೆಯಿದೆ. ಸಂಗಾತಿಯ ದುಂದುವೆಚ್ಚಕ್ಕೆ ಕಡಿವಾಣ ಹಾಕುವ ಅಗತ್ಯವಿದೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಕೊಂಚ ಹಿನ್ನಡೆಯುಂಟಾಗಬಹುದು. ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸಿ.

ಕರ್ಕಟಕ: ಕಾರ್ಯನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ. ಬಂಧು ಮಿತ್ರರ ಭೇಟಿ ಮಾಡುವುದರಿಂದ ಮನಸ್ಸಿಗೆ ಸಂತಸವಾಗಲಿದೆ. ವಾಹನ ಖರೀದಿ ಯೋಜನೆಗೆ ಚಾಲನೆ ನೀಡಬಹುದು. ಇಷ್ಟಮಿತ್ರರೊಂದಿಗೆ ಪ್ರವಾಸ, ಭೋಜನ ಸಾಧ‍್ಯತೆಯಿದೆ.

ಸಿಂಹ: ಶುಭ ಮಂಗಲ ಕಾರ್ಯಗಳಿಗೆ ಹಲವು ಅಡ್ಡಿ ಆತಂಕಗಳು ಬಂದರೂ ಅಂತಿಮವಾಗಿ ಸುಗಮವಾಗಿ ನಡೆಯಲಿದೆ. ಹಿರಿಯರ ಆಶೀರ್ವಾದ ನಿಮ್ಮ ಮೇಲಿರಲಿದೆ. ಸಾಂಸಾರಿಕವಾಗಿ ಗೃಹಿಣಿಯರಿಗೆ ಮಾನಸಿಕ ಚಿಂತೆ ಕಾಡಲಿದೆ. ಹೊಸ ಮಿತ್ರರ ಭೇಟಿಯಾಗುವಿರಿ.

ಕನ್ಯಾ: ಹಣಕಾಸಿನ ವಿಚಾರದಲ್ಲಿ ಕೊಂಚ ಅಡೆತಡೆಗಳು ಬಂದರೂ ಕಾರ್ಯರಂಗದಲ್ಲಿ ಮುನ್ನಡೆಗೆ ತೊಂದರೆಯಾಗದು. ಹೊಸ ಬಂಡವಾಳ ಹೂಡಿಕೆಗೆ ಕೆಲವು ಸಮಯ ಕಾಯುವುದು ಉತ್ತಮ. ನಿಮ್ಮ ಕ್ರಿಯಾಶೀಲತೆಗೆ ಕೆಲಸ ಕೊಡಿ. ವಿದ್ಯಾರ್ಥಿಗಳಿಗೆ ಕಠಿಣ ಅಭ್ಯಾಸ ಅಗತ್ಯ.

ತುಲಾ: ಉದ್ಯೋಗಿಗಳಿಗೆ ಸ್ಥಾನಪಲ್ಲಟ ಭೀತಿಯಿದೆ. ಧನಾದಾಯಕ್ಕೆ ಹಲವು ಮೂಲಗಳ ಹುಡುಕಾಟ ನಡೆಸುವಿರಿ. ಸಾಲಗಾರರಿಂದ ಮುಕ್ತಿ ಸಿಗಲಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ನಡೆಸುವಿರಿ. ಮಾನಸಿಕವಾಗಿ ಉದ್ವೇಗಕ್ಕೊಳಗಾಗಬೇಡಿ.

ವೃಶ್ಚಿಕ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರುವ ಘಟನೆಗಳು ನಡೆದೀತು. ಕುಟುಂಬದ ಸದಸ್ಯರ ನಡುವೆ ಭಿನ್ನಾಭಿಪ್ರಾಯ ಮೂಡಿಬರಬಹುದು. ತಾಳ್ಮೆಯಿಂದ ವ್ಯವಹರಿಸಿ. ನೆರೆಹೊರೆಯವರೊಂದಿಗೆ ವಾಗ್ವಾದಕ್ಕಿಳಿಯಬೇಡಿ. ದೇವತಾ ಪ್ರಾರ್ಥನೆ ಮಾಡಿ.

ಧನು: ಹೊಸ ವ್ಯವಹಾರ, ವ್ಯಾಪಾರ ನಿರೀಕ್ಷಿತ ಮಟ್ಟದಲ್ಲಿಲ್ಲದಿದ್ದರೂ ನಷ್ಟವಂತೂ ಆಗದು. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡುವಿರಿ. ಗೃಹಿಣಿಯರಿಗೆ ಚಿನ್ನಾಭರಣ ಖರೀದಿ ಯೋಗವಿದೆ. ಸಾಂಸಾರಿಕವಾಗಿ ಬರುವ ಸಮಸ್ಯೆಗಳಿಗೆ ಹಿರಿಯರ ಸಲಹೆ ಪಡೆಯಿರಿ.

ಮಕರ: ಬಂಢ ಧೈರ್ಯದಿಂದ ಕೈ ಹಾಕಿದ ಕೆಲಸಗಳು ಅದೃಷ್ಟವಶಾತ್ ಯಶಸ್ವಿಯಾಗಲಿವೆ. ವಿದ್ಯಾರ್ಥಿಗಳಿಗೆ ಅಭ್ಯಾಸ ನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ. ದಿನದಂತ್ಯಕ್ಕೆ ಶುಭ ಸುದ್ದಿ.

ಕುಂಭ: ಮಿತ್ರರ ಪ್ರೇರಣೆಯಿಂದ ಹೊಸ ಯೋಜನೆಗಳು ಕಾರ್ಯಗತವಾಗಲಿದೆ. ಸರಕಾರಿ ವೃತ್ತಿಯವರಿಗೆ ಅಪವಾದದ ಭೀತಿಯಿದೆ. ಸಾಮಾಜಿಕವಾಗಿ ನಿಮ್ಮ ಕೆಲಸಗಳಿಗೆ ಪ್ರಶಂಸೆ ವ್ಯಕ್ತವಾಗಲಿದೆ. ಮಕ್ಕಳ ವಿದ್ಯಾಭ್ಯಾಸದ ಕಡೆಗೆ ಗಮನಕೊಡಬೇಕಾಗುತ್ತದೆ.

ಮೀನ: ಕುಟುಂಬ ವರ್ಗದವರಿಗೆ ಅನಾರೋಗ್ಯದ ಭೀತಿ ಎದುರಾಗಲಿದೆ. ಕಾರ್ಯರಂಗದಲ್ಲಿ ಶತ್ರುಬಾಧೆ ಕಂಡುಬರಲಿದೆ. ವೃತ್ತಿ ಬದಲಾವಣೆಗೆ ಮನಸ್ಸು ಮಾಡುವಿರಿ. ರಾಜಕೀಯ ಕ್ಷೇತ್ರದಲ್ಲಿರುವವರಿಗೆ ಪ್ರಯಾಸಕರ ದಿನ. ಶಿಕ್ಷಣ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಮುನ್ನಡೆಯಿರಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬೆಲ್ಲದಿಂದ ಹೀಗೆ ಮಾಡಿ ಮಾಟಮಂತ್ರಗಳಿಂದ ಮುಕ್ತಿ ಹೊಂದಬಹುದು