Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಸೋಮವಾರ, 3 ಫೆಬ್ರವರಿ 2020 (08:46 IST)
ಬೆಂಗಳೂರು: ದ್ವಾದಶ ರಾಶಿಗಳ ಇಂದಿನ ಫಲಾಫಲಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.


ಮೇಷ: ಅಧಿಕ ಓಡಾಟಕ್ಕೆ ಕಡಿವಾಣ ಹಾಕುವುದು ಉತ್ತಮ. ಉದ್ಯೋಗ ಕ್ಷೇತ್ರದಲ್ಲಿ ಜವಾಬ್ಧಾರಿ ಹೆಚ್ಚಲಿದೆ. ಎಚ್ಚರಿಕೆಯಿಂದ ಹೆಜ್ಜೆಯಿಡಬೇಕು. ದೈವಾನುಗ್ರಹದಿಂದ ಅನಿರೀಕ್ಷಿತ ಅಪಘಾತಗಳು ತಪ್ಪಿ ಹೋಗಲಿವೆ. ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.

ವೃಷಭ: ಹಣಕಾಸು ವಿಚಾರದಲ್ಲಿ ಎಚ್ಚರಿಕೆಯಿಂದ ವ್ಯವಹರಿಸಿ. ವ್ಯಾಪಾರ, ವ್ಯವಹಾರದಲ್ಲಿ ಉತ್ತಮ ಲಾಭ ಕಂಡುಬರಲಿದೆ. ಹೊಸ ಯೋಜನೆಗಳು ತಲೆಯಲ್ಲಿ ಮೂಡಿಬರಲಿವೆ. ಉದ್ಯೋಗ ಕ್ಷೇತ್ರದಲ್ಲಿ ತಾಳ್ಮೆಯಿಂದಿದ್ದಷ್ಟೂ ಉತ್ತಮ. ಧಾರ್ಮಿಕವಾಗಿ ಭಯ ಭಕ್ತಿ ಮೂಡಲಿದೆ.

ಮಿಥುನ: ವೃತ್ತಿರಂಗದಲ್ಲಿ ಅನಿರೀಕ್ಷಿತವಾಗಿ ಬೇರೆಡೆಗೆ ವರ್ಗಾವಣೆಯಾಗುವ ಸಾಧ್ಯತೆಯಿದೆ. ಸಂಗಾತಿಯ ದುಂದುವೆಚ್ಚಕ್ಕೆ ಕಡಿವಾಣ ಹಾಕುವ ಅಗತ್ಯವಿದೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಕೊಂಚ ಹಿನ್ನಡೆಯುಂಟಾಗಬಹುದು. ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸಿ.

ಕರ್ಕಟಕ: ಕಾರ್ಯನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ. ಬಂಧು ಮಿತ್ರರ ಭೇಟಿ ಮಾಡುವುದರಿಂದ ಮನಸ್ಸಿಗೆ ಸಂತಸವಾಗಲಿದೆ. ವಾಹನ ಖರೀದಿ ಯೋಜನೆಗೆ ಚಾಲನೆ ನೀಡಬಹುದು. ಇಷ್ಟಮಿತ್ರರೊಂದಿಗೆ ಪ್ರವಾಸ, ಭೋಜನ ಸಾಧ‍್ಯತೆಯಿದೆ.

ಸಿಂಹ: ಶುಭ ಮಂಗಲ ಕಾರ್ಯಗಳಿಗೆ ಹಲವು ಅಡ್ಡಿ ಆತಂಕಗಳು ಬಂದರೂ ಅಂತಿಮವಾಗಿ ಸುಗಮವಾಗಿ ನಡೆಯಲಿದೆ. ಹಿರಿಯರ ಆಶೀರ್ವಾದ ನಿಮ್ಮ ಮೇಲಿರಲಿದೆ. ಸಾಂಸಾರಿಕವಾಗಿ ಗೃಹಿಣಿಯರಿಗೆ ಮಾನಸಿಕ ಚಿಂತೆ ಕಾಡಲಿದೆ. ಹೊಸ ಮಿತ್ರರ ಭೇಟಿಯಾಗುವಿರಿ.

ಕನ್ಯಾ: ಹಣಕಾಸಿನ ವಿಚಾರದಲ್ಲಿ ಕೊಂಚ ಅಡೆತಡೆಗಳು ಬಂದರೂ ಕಾರ್ಯರಂಗದಲ್ಲಿ ಮುನ್ನಡೆಗೆ ತೊಂದರೆಯಾಗದು. ಹೊಸ ಬಂಡವಾಳ ಹೂಡಿಕೆಗೆ ಕೆಲವು ಸಮಯ ಕಾಯುವುದು ಉತ್ತಮ. ನಿಮ್ಮ ಕ್ರಿಯಾಶೀಲತೆಗೆ ಕೆಲಸ ಕೊಡಿ. ವಿದ್ಯಾರ್ಥಿಗಳಿಗೆ ಕಠಿಣ ಅಭ್ಯಾಸ ಅಗತ್ಯ.

ತುಲಾ: ಉದ್ಯೋಗಿಗಳಿಗೆ ಸ್ಥಾನಪಲ್ಲಟ ಭೀತಿಯಿದೆ. ಧನಾದಾಯಕ್ಕೆ ಹಲವು ಮೂಲಗಳ ಹುಡುಕಾಟ ನಡೆಸುವಿರಿ. ಸಾಲಗಾರರಿಂದ ಮುಕ್ತಿ ಸಿಗಲಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ನಡೆಸುವಿರಿ. ಮಾನಸಿಕವಾಗಿ ಉದ್ವೇಗಕ್ಕೊಳಗಾಗಬೇಡಿ.

ವೃಶ್ಚಿಕ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರುವ ಘಟನೆಗಳು ನಡೆದೀತು. ಕುಟುಂಬದ ಸದಸ್ಯರ ನಡುವೆ ಭಿನ್ನಾಭಿಪ್ರಾಯ ಮೂಡಿಬರಬಹುದು. ತಾಳ್ಮೆಯಿಂದ ವ್ಯವಹರಿಸಿ. ನೆರೆಹೊರೆಯವರೊಂದಿಗೆ ವಾಗ್ವಾದಕ್ಕಿಳಿಯಬೇಡಿ. ದೇವತಾ ಪ್ರಾರ್ಥನೆ ಮಾಡಿ.

ಧನು: ಹೊಸ ವ್ಯವಹಾರ, ವ್ಯಾಪಾರ ನಿರೀಕ್ಷಿತ ಮಟ್ಟದಲ್ಲಿಲ್ಲದಿದ್ದರೂ ನಷ್ಟವಂತೂ ಆಗದು. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡುವಿರಿ. ಗೃಹಿಣಿಯರಿಗೆ ಚಿನ್ನಾಭರಣ ಖರೀದಿ ಯೋಗವಿದೆ. ಸಾಂಸಾರಿಕವಾಗಿ ಬರುವ ಸಮಸ್ಯೆಗಳಿಗೆ ಹಿರಿಯರ ಸಲಹೆ ಪಡೆಯಿರಿ.

ಮಕರ: ಬಂಢ ಧೈರ್ಯದಿಂದ ಕೈ ಹಾಕಿದ ಕೆಲಸಗಳು ಅದೃಷ್ಟವಶಾತ್ ಯಶಸ್ವಿಯಾಗಲಿವೆ. ವಿದ್ಯಾರ್ಥಿಗಳಿಗೆ ಅಭ್ಯಾಸ ನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ. ದಿನದಂತ್ಯಕ್ಕೆ ಶುಭ ಸುದ್ದಿ.

ಕುಂಭ: ಮಿತ್ರರ ಪ್ರೇರಣೆಯಿಂದ ಹೊಸ ಯೋಜನೆಗಳು ಕಾರ್ಯಗತವಾಗಲಿದೆ. ಸರಕಾರಿ ವೃತ್ತಿಯವರಿಗೆ ಅಪವಾದದ ಭೀತಿಯಿದೆ. ಸಾಮಾಜಿಕವಾಗಿ ನಿಮ್ಮ ಕೆಲಸಗಳಿಗೆ ಪ್ರಶಂಸೆ ವ್ಯಕ್ತವಾಗಲಿದೆ. ಮಕ್ಕಳ ವಿದ್ಯಾಭ್ಯಾಸದ ಕಡೆಗೆ ಗಮನಕೊಡಬೇಕಾಗುತ್ತದೆ.

ಮೀನ: ಕುಟುಂಬ ವರ್ಗದವರಿಗೆ ಅನಾರೋಗ್ಯದ ಭೀತಿ ಎದುರಾಗಲಿದೆ. ಕಾರ್ಯರಂಗದಲ್ಲಿ ಶತ್ರುಬಾಧೆ ಕಂಡುಬರಲಿದೆ. ವೃತ್ತಿ ಬದಲಾವಣೆಗೆ ಮನಸ್ಸು ಮಾಡುವಿರಿ. ರಾಜಕೀಯ ಕ್ಷೇತ್ರದಲ್ಲಿರುವವರಿಗೆ ಪ್ರಯಾಸಕರ ದಿನ. ಶಿಕ್ಷಣ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಮುನ್ನಡೆಯಿರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Hanuman Chalisa: ಹನುಮಾನ್ ಚಾಲೀಸಾ ಕನ್ನಡದಲ್ಲಿ: ಇಂದು ತಪ್ಪದೇ ಓದಿ

Lakshmi Mantra: ಶುಕ್ರವಾರದಂದು ತಪ್ಪದೇ ಲಕ್ಷ್ಮೀ ದೇವಿಯ ಈ ಮಂತ್ರವನ್ನು ಜಪಿಸಿ

Mahavishnu Mantra: ಗುರುವಾರ ಮಹಾವಿಷ್ಣುವಿನ ಈ ಸ್ತೋತ್ರವನ್ನು ತಪ್ಪದೇ ಓದಿ

Ganesha Mantra: ಜೀವನದಲ್ಲಿ ಸಂಕಷ್ಟಗಳು ಎದುರಾದಾಗ ಗಣೇಶನ ಈ ಸ್ತೋತ್ರ ಓದಿ

Devi Mantra: ಮಂಗಳವಾರ ತಪ್ಪದೇ ಈ ದೇವಿ ಮಂತ್ರವನ್ನು ಓದಿ

ಮುಂದಿನ ಸುದ್ದಿ
Show comments