ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಮಂಗಳವಾರ, 4 ಫೆಬ್ರವರಿ 2020 (09:03 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ವ್ಯಾಪಾರ ವ್ಯವಹಾರದಲ್ಲಿ ಬಿಡುವಿಲ್ಲದ ಕಾರ್ಯದೊತ್ತಡದಿಂದಾಗಿ ಮನಸ್ಸಿಗೆ ಕಿರಿ ಕಿರಿಯಾಗಬಹುದು. ಮೇಲ್ವರ್ಗದ ಅಧಿಕಾರಿಗಳಿಗೆ ಉನ್ನತ ಹುದ್ದೆಯ ಸ್ಥಾನ ಮಾನ ಸಿಗಲಿದೆ. ಧರ್ಮಕಾರ್ಯಗಳಿಗೆ ಧನವಿನಿಯೋಗ ಮಾಡಬೇಕಾಗುತ್ತದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಷಭ: ಸಾಂಸಾರಿಕವಾಗಿ ನೆಮ್ಮದಿಗೆ ಭಂಗವಾಗುವ ಘಟನೆಗಳು ನಡೆಯಲಿವೆ. ಹಣಕಾಸಿನ ಅಡಚಣೆ ಕಂಡುಬಂದರೂ ಕಷ್ಟ ಕಾಲದಲ್ಲಿ ಸ್ನೇಹಿತರ ಸಹಾಯ ಒದಗಿಬರಲಿದೆ. ವಿದ್ಯಾರ್ಥಿಗಳು ಅಭ್ಯಾಸದ ಕಡೆಗೆ ಹೆಚ್ಚಿನ ಗಮನ ಕೊಡಬೇಕಾಗುತ್ತದೆ. ದಿನದಂತ್ಯಕ್ಕೆ ಶುಭ ಸುದ್ದಿ.

ಮಿಥುನ: ವಾಹನ ಸಂಚಾರ ಮಾಡುವಾಗ ಅಪಘಾತವಾಗದಂತೆ ಎಚ್ಚರಿಕೆ ವಹಿಸುವುದು ಸೂಕ್ತ. ನಿರುದ್ಯೋಗಿಗಳು ಪಾಲಿಗೆ ಬಂದ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ವ್ಯಾಪಾರ, ವ್ಯವಹಾರದಲ್ಲಿ ಚೇತರಿಕೆ ಕಂಡುಬರಲಿದೆ.

ಕರ್ಕಟಕ: ಯಾವುದೇ ಕೆಲಸ ಆರಂಭಿಸುವ ಮೊದಲು ಗುರು ಹಿರಿಯರ ಸಲಹೆ ಸೂಚನೆಗೆ ಕಿವಿಗೊಡಿ. ಆಸ್ತಿ ವಿವಾದಗಳು ಬಗೆಹರಿಯಲಿವೆ. ಆರ್ಥಿಕವಾಗಿ ಖರ್ಚು ವೆಚ್ಚಗಳು ಬಂದರೂ ಹಣಕಾಸಿನ ಹರಿವಿಗೆ ತೊಂದರೆಯಾಗದು. ಸಂಗಾತಿಯೊಂದಿಗೆ ಉತ್ತಮ ಸಮಯ ಕಳೆಯುವಿರಿ.

ಸಿಂಹ: ಸಾಂಸಾರಿಕವಾಗಿ ಇದುವರೆಗೆ ಇದ್ದ ಕಷ್ಟಗಳು ದೂರವಾಗಿ ಉತ್ತಮ ಫಲಗಳು ಗೋಚರವಾಗಲಿದೆ. ದೈವಾನುಗ್ರಹದಿಂದ ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ವೃತ್ತಿರಂಗದಲ್ಲಿ ಮುಂಬಡ್ತಿ ಯೋಗವಿದೆ. ವಿದ್ಯಾರ್ಥಿಗಳಿಗೆ ಮುನ್ನಡೆ ಸಿಗಲಿದೆ.

ಕನ್ಯಾ: ನಿರ್ಧಾರಗಳನ್ನು ಕೈಗೊಳ್ಳುವಾಗ ಮಾನಸಿಕವಾಗಿ ಗೊಂದಲ, ಧ್ವಂದ್ವ ಮನಸ್ಥಿತಿ ಕಾಡಲಿದೆ. ಸಂಗಾತಿಯ ಸಲಹೆಗೆ ಕಿವಿಗೊಡುವುದು ಉತ್ತಮ. ಸ್ವಯಂಕೃತ ಅಪರಾಧಕ್ಕೆ ಪಶ್ಚಾತ್ತಾಪ ಪಡಬೇಕಾದೀತು. ದುಡುಕಿನ ವರ್ತನೆ ಬೇಡ. ದೇವರ ದರ್ಶನದಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ.

ತುಲಾ: ಅನವಶ್ಯಕ ಖರ್ಚುಗಳಿಗೆ ಕಡಿವಾಣ ಹಾಕುವುದು ಉತ್ತಮ. ವ್ಯಾಪಾರಿ ವರ್ಗದವರಿಗೆ ಲಾಭವಿಲ್ಲದಿದ್ದರೂ ನಷ್ಟವಾಗದು. ಹಿತಶತ್ರುಗಳ ಬಗ್ಗೆ ಎಚ್ಚರಿಕೆಯಿಂದಿರುವುದು ಉತ್ತಮ. ವಿದ್ಯಾರ್ಥಿಗಳ ಏಕಾಗ್ರತೆಗೆ ಭಂಗ ಬರಲಿದೆ. ತಾಳ್ಮೆಯಿಂದಿರಿ.

ವೃಶ್ಚಿಕ: ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ನಡೆಸಲಿದ್ದೀರಿ. ಅವಿವಾಹಿತ ಸೋದರಿಯ ವಿವಾಹ ಪ್ರಸ್ತಾಪಕ್ಕೆ ಮುನ್ನಡೆ ಸಿಗುವುದು. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ನೂತನ ಕೆಲಸ ಕಾರ್ಯಗಳಿಗೆ ವಿಘ್ನಗಳು ಎದುರಾದರೂ ಅಂತಿಮ ಜಯ ನಿಮ್ಮದೇ.

ಧನು: ವೃತ್ತಿರಂಗದಲ್ಲಿ ನಿಮ್ಮ ಪ್ರಯತ್ನಬಲಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಸಾಂಸಾರಿಕವಾಗಿ ಸಂಗಾತಿಯೊಂದಿಗೆ ಹೊಂದಾಣಿಕೆಯಿಂದ ನಡೆದುಕೊಳ್ಳಬೇಕಾಗುತ್ತದೆ. ನಿರುದ್ಯೋಗಿಗಳಿಗೆ ಹಲವು ಉದ್ಯೋಗಾವಕಾಶಗಳು ದೊರೆಯಲಿವೆ. ಜಾಣ್ಮೆಯಿಂದ ಬಳಸಿಕೊಳ್ಳಿ.

ಮಕರ: ಅರ್ಧಕ್ಕೇ ನಿಂತ ಕೆಲಸಗಳಿಗೆ ಚಾಲನೆ ನೀಡುವಿರಿ. ಆರ್ಥಿಕವಾಗಿ ಆದಾಯ ದ್ವಿಗುಣವಾಗಲಿದೆ. ಆಸ್ತಿ, ಮನೆ ಖರೀದಿಗೆ ಇದು ಸಕಾಲ. ಕಾರ್ಯಕ್ಷೇತ್ರದಲ್ಲಿ ನಿಮ್ಮ ಕ್ರಿಯಾಶೀಲತೆಗೆ ಮೆಚ್ಚುಗೆ ವ್ಯಕ್ತವಾಗಲಿದೆ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಬೇಕಾಗುತ್ತದೆ.

ಕುಂಭ: ನಿರುದ್ಯೋಗಿಗಳಿಗೆ ಉದ್ಯೋಗ ಸಂಬಂಧವಾಗಿ ದೂರ ಸಂಚಾರ ಮಾಡಬೇಕಾಗಬಹುದು. ಆರೋಗ್ಯದಲ್ಲಿ ಸಣ್ಣ ಪುಟ್ಟ ಏರುಪೇರಾಗಬಹುದು. ಆರ್ಥಿಕವಾಗಿ ಖರ್ಚು ವೆಚ್ಚದ ಬಗ್ಗೆ ನಿಗಾ ಇರಲಿ. ಸಾಂಸಾರಿಕವಾಗಿ ಸಂಗಾತಿಯೊಂದಿಗೆ ಉತ್ತಮ ಸಮಯ ಕಳೆಯುವಿರಿ.

ಮೀನ: ಮಾತಿನ ಮೇಲೆ ನಿಗಾ ಇರಲಿ. ಮಾತಿನಲ್ಲೇ ಮರುಳು ಮಾಡುವವರ ಬಗ್ಗೆ ಎಚ್ಚರ. ಕೋಪದ ಕೈಗೆ ಬುದ್ಧಿ ಕೊಡಬೇಡಿ. ವಿದ್ಯಾರ್ಥಿಗಳಲ್ಲಿ ಉತ್ಸಾಹ ಕಂಡುಬರಲಿದೆ. ಸಾಂಸಾರಿಕವಾಗಿ ನೆಮ್ಮದಿಗೆ ಭಂಗವಿರದು. ಆದರೆ ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಂಗಳವಾರ ದುರ್ಗಾದೇವಿಯ ಈ ಸ್ತೋತ್ರ ಓದಿ

ಸೋಮವಾರ ಶಿವ ಆರತಿ ಸ್ತೋತ್ರವನ್ನು ಓದಿ

ಸೂರ್ಯ ಮಂಡಲ ಸ್ತೋತ್ರಂ ಕನ್ನಡದಲ್ಲಿ ಇಲ್ಲಿದೆ

ಶನಿ ಅಷ್ಟೋತ್ತರ ಶತನಾಮ ಸ್ತೋತ್ರ ತಪ್ಪದೇ ಓದಿ

ಮಹೇಂದ್ರ ಕೃತ ಶ್ರೀ ಮನಸಾ ದೇವಿ ಸ್ತೋತ್ರಂ

ಮುಂದಿನ ಸುದ್ದಿ
Show comments