Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಗುರುವಾರ, 6 ಫೆಬ್ರವರಿ 2020 (08:58 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಉದ್ಯೋಗ ಕ್ಷೇತ್ರದಲ್ಲಿ ನಿಮಗೆ ಅಗತ್ಯವಾದ ಬಿಡುವು ಪಡೆಯಲು ಮೇಲಧಿಕಾರಿಗಳೊಂದಿಗೆ ಹಗ್ಗ ಜಗ್ಗಾಟವಾಡಬೇಕಾಗುತ್ತದೆ. ದೇಹಾರೋಗ್ಯದಲ್ಲಿ ಹೊಸ ಸಮಸ್ಯೆಗಳು ನಿಮ್ಮ ಚಿಂತೆ ಹೆಚ್ಚಿಸಲಿವೆ. ಆರ್ಥಿಕವಾಗಿ ಆದಾಯಕ್ಕೆ ಕೊರತೆಯಿರದು.

ವೃಷಭ: ಅವಿವಾಹಿತರಿಗೆ ಶೀಘ್ರ ಮಾಂಗಲ್ಯ ಭಾಗ್ಯ ಒದಗಿಬರಲಿದೆ. ಸಾಂಸಾರಿಕವಾಗಿ ಸಂಗಾತಿಯೊಂದಿಗೆ ಹೊಂದಾಣಿಕೆ ನಡೆಸಬೇಕಾಗುತ್ತದೆ. ವೃತ್ತಿರಂಗದಲ್ಲಿ ಸಹೋದ್ಯೋಗಿಗಳ ಸಹಕಾರ ಸಿಗಲಿದೆ. ಕೃಷಿಕರಿಗೆ ಹಿನ್ನಡೆಯ ಅನುಭವವಾಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಿಥುನ: ಇಂದಿನ ದಿನ ನಿಮಗೆ ಸಾಧಾರಣವಾಗಿದ್ದು, ವೃತ್ತಿರಂಗದಲ್ಲಿ ಮೇಲ್ವರ್ಗಕ್ಕೆ ಬಡ್ತಿ ಹೊಂದಲು ಹೆಣಗಾಡಬೇಕಾಗುತ್ತದೆ. ಆರ್ಥಿಕವಾಗಿ ಹಳೇ ಬಾಕಿ ಸಂದಾಯವಾಗಲಿದೆ. ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು. ಕಾರ್ಯನಿಮಿತ್ತ ಕಿರು ಸಂಚಾರ ಮಾಡಬೇಕಾಗುತ್ತದೆ.

ಕರ್ಕಟಕ: ಯಾವುದೇ ವಿಚಾರಗಳಲ್ಲಿ ನಿರ್ಧಾರ ತೆಗೆದುಕೊಳ್ಳುವ ಮೊದಲು ಸರಿಯಾಗಿ ಪರಾಮರ್ಶಿಸುವುದು ಒಳಿತು. ಆರ್ಥಿಕವಾಗಿ ಹಣದ ವಿಚಾರದಲ್ಲಿ ವ್ಯವಹಾರ ನಡೆಸುವಾಗ ಎಚ್ಚರಿಕೆಯಿಂದಿರಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ.

ಸಿಂಹ: ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಹಲವು ಅವಕಾಶಗಳು ದೊರೆಯಲಿವೆ. ಆದರೆ ನಯವಂಚಕರ ನಯವಾದ ಮಾತಿಗೆ ಮರುಳಾಗಬೇಡಿ. ವಾಹನ ಖರೀದಿಗೆ ಇದು ಸಕಾಲ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶಗಳು ಸಿಗಲಿವೆ.

ಕನ್ಯಾ: ಯೋಗ್ಯ ವಯಸ್ಕರಿಗೆ ಬರುವ ಸಂಬಂಧಗಳು ಸ್ವಲ್ಪದರಲ್ಲೇ ಕೈ ತಪ್ಪಿ ನಿರಾಸೆಯಾಗಬಹುದು. ಬಂಧು ಮಿತ್ರರ ಚಾಡಿ ಮಾತುಗಳಿಗೆ ಮನಸ್ಸಿಗೆ ಬೇಸರವಾಗಲಿದೆ. ಆರ್ಥಿಕವಾಗಿ ಹಣಕಾಸಿನ ಮುಗ್ಗಟ್ಟುಗಳು ಎದುರಾಗಬಹುದು. ನ್ಯಾಯಾಲಯ ಕೆಲಸಗಳಲ್ಲಿ ಮುನ್ನಡೆ ಸಿಗಲಿದೆ.

ತುಲಾ: ವ್ಯಾಪಾರ, ವ್ಯವಹಾರಗಳು ನಿರೀಕ್ಷಿತ ಮಟ್ಟದಲ್ಲಿ ಲಾಭ ತಂದುಕೊಡದೇ ನಿರಾಸೆಯಾಗಬಹುದು. ಆದರೆ ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ. ಹೊಸದಾಗಿ ಭೇಟಿಯಾಗುವ ಜನರಿಂದ ಸಹಾಯ ಸಿಗಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ.

ವೃಶ್ಚಿಕ: ಹಂತ ಹಂತವಾಗಿ ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆ ಕಂಡುಬರಲಿದ್ದು, ವ್ಯವಹಾರಗಳಿಂದ ಲಾಭ ಕೈಗೆ ಬರಲಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ನಡೆಸುವಿರಿ. ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ಹೆಚ್ಚಲಿದೆ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

ಧನು: ಬಹಳ ದಿನಗಳಿಂದ ಕಾಯುತ್ತಿದ್ದ ಶುಭ ಸುದ್ದಿ ಇಂದು ಕೇಳಿಬರಲಿದೆ. ವೃತ್ತಿರಂಗದಲ್ಲಿ ಉತ್ತಮ ಅವಕಾಶಗಳು ಒದಗಿಬರಲಿವೆ. ಮನೆಯವರೊಂದಿಗೆ ಸಂತೋಷದ ಕ್ಷಣ ಕಳೆಯುವಿರಿ. ಸಾಂಸಾರಿಕವಾಗಿ ಸಂಗಾತಿಯ ಸಲಹೆ ಉಪಯೋಗಕ್ಕೆ ಬರುವುದು.

ಮಕರ: ರಾಜಕೀಯ ರಂಗದಲ್ಲಿರುವವರಿಗೆ ಸ್ಥಾನ ಮಾನದಲ್ಲಿ ಹಿನ್ನಡೆಯಾಗಬಹುದು. ಸರಕಾರಿ ಉದ್ಯೋಗಿಗಳಿಗೆ ಸ್ಥಾನ ಪಲ್ಲಟವಾಗಲಿದೆ. ಹಿರಿಯರಿಗೆ ಧಾರ್ಮಿಕ ಕ್ಷೇತ್ರಗಳ ಸಂದರ್ಶನ ಯೋಗವಿದೆ. ಅನಿರೀಕ್ಷಿತವಾಗಿ ಧನಾಗಮನವಾಗಲಿದ್ದು, ಅಂದುಕೊಂಡ ಕೆಲಸಗಳು ನೆರವೇರಲಿದೆ.

ಕುಂಭ: ಸಾಮಾಜಿಕವಾಗಿ ನಿಮ್ಮ ಕೆಲಸಗಳಿಗೆ ಜನಮನ್ನಣೆ ಸಿಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಕ್ರಿಯಾಶೀಲತೆ ಉಪಯೋಗಿಸಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವಿರಿ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಮೀನ: ಆಪ್ತರೊಡನೆ ಮಾತನಾಡಿ ಮನಸ್ಸಿನಲ್ಲಿ ಕೊರೆಯುತ್ತಿರುವ ವಿಚಾರಗಳಿಗೆ ಪರಿಹಾರ ಕಂಡುಕೊಳ್ಳುವಿರಿ. ನಿಮ್ಮ ಕಾರ್ಯಸಾಧನೆಗೆ ನಾನಾ ರೀತಿಯಲ್ಲಿ ಅಡ್ಡಿ ಆತಂಕಗಳು ಎದುರಾಗಬಹುದು. ಕಷ್ಟದ ಸಮಯದಲ್ಲಿ ಮಿತ್ರರ ಸಹಕಾರ ದೊರೆಯಲಿದೆ.ಚಿಂತೆ ಬೇಡ.

Share this Story:

Follow Webdunia kannada

ಮುಂದಿನ ಸುದ್ದಿ

ಆರ್ಥಿಕ ಅಭಿವೃದ್ಧಿ ಹೊಂದಲು ಹೀಗೆ ಮಾಡಿ