Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶನಿವಾರ, 8 ಫೆಬ್ರವರಿ 2020 (08:51 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.
 


ಮೇಷ: ಸಾಂಸಾರಿಕವಾಗಿ ಬರುವ ಸಮಸ್ಯೆಗಳು, ಭಿನ್ನಾಭಿಪ್ರಾಯಗಳ ಪರಿಹಾರಕ್ಕೆ ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿದರೆ ಒಳಿತು. ಉದ್ಯೋಗ ಕ್ಷೇತ್ರದಲ್ಲಿ ಸೂಕ್ತ ಸ್ಥಾನ ಮಾನ ಪಡೆಯಲು ಪರದಾಡಬೇಕಾದೀತು. ತಾಳ್ಮೆಯಿಂದಿರಿ. ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು.

ವೃಷಭ: ವಿದ್ಯಾರ್ಥಿಗಳಿಗೆ ಒಡನಾಡಿಗಳೊಂದಿಗೆ ಪ್ರವಾಸ ಮಾಡುವ ಯೋಗವಿದೆ. ಸಂತಸದ ಕ್ಷಣ ಕಳೆಯಲಿದ್ದೀರಿ. ಮನೆಗೆ ಬರುವ ಅನಿರೀಕ್ಷಿತ ನೆಂಟರಿಂದ ಸಂಭ್ರಮದ ವಾತಾವರಣವಿರಲಿದೆ. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗ ಲಾಭವಾಗಲಿದೆ.

ಮಿಥುನ: ಸನ್ಮಿತ್ರರ ಸಂಗದಿಂದ ಎಲ್ಲವೂ ಒಳಿತಾಗುವುದು. ಬಯಸದೇ ಬರುವ ಭಾಗ್ಯವನ್ನು ಎರಡೂ ಕೈಗಳಿಂದ ಸ್ವೀಕರಿಸಿ. ಅವಿವಾಹಿತರಿಗೆ ಕಂಕಣ ಭಾಗ್ಯ ಒದಗಿಬರಲಿದೆ. ಉದ್ಯೋಗಾರ್ಥಿಗಳಿಗೆ ಅಡ್ಡಿ ಆತಂಕಗಳಿದ್ದೇ ಇರುತ್ತದೆ. ಕುಲದೇವರ ಪ್ರಾರ್ಥನೆಯಿಂದ ಒಳಿತಾಗುವುದು.

ಕರ್ಕಟಕ: ಮನೆಯಲ್ಲಿ ಶುಭ ಮಂಗಲ ಕಾರ್ಯ ನಡೆಸಲು ಚಿಂತನೆ ನಡೆಸುವಿರಿ. ಮಹಿಳಾ ಉದ್ಯೋಗಿಗಳಿಗೆ ಉದ್ಯೋಗದಲ್ಲಿ ಬಡ್ತಿ ಯೋಗವಿದೆ. ಪ್ರೇಮಿಗಳ ನಡುವೆ ಸಣ್ಣ ಪುಟ್ಟ ವಿಚಾರದಲ್ಲಿ ಭಿನ್ನಾಭಿಪ್ರಾಯಗಳು ಮೂಡಬಹುದು. ಆರ್ಥಿಕ ವಿಚಾರದಲ್ಲಿ ಹೆಚ್ಚಿನ ಜಾಗ್ರತೆಯಿರಲಿ.

ಸಿಂಹ: ಅಧಿಕಾರಿ ವರ್ಗದವರಿಗೆ ತಮ್ಮ ಖುರ್ಚಿ ಉಳಿಸಿಕೊಳ್ಳುವ ಚಿಂತೆ ಕಾಡಲಿದೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ಆದರೆ ದುಂದು ವೆಚ್ಚಗಳಿಗೆ ಕಡಿವಾಣ ಹಾಕುವುದು ಒಳಿತು. ಸಾರ್ವಜನಿಕವಾಗಿ ನಿಮ್ಮ ಕೆಲಸಗಳಿಗೆ ಮನ್ನಣೆ ಸಿಗಲಿದೆ.

ಕನ್ಯಾ: ಆರ್ಥಿಕವಾಗಿ ಹಣಕಾಸಿನ ಅಡಚಣೆ ಮಾನಸಿಕ ಚಿಂತೆಗೆ ಕಾರಣವಾಗಬಹುದು. ಮಕ್ಕಳ ಆಸೆ ಪೂರೈಸಲಾಗದೇ ಬೇಸರವಾಗಲಿದೆ. ನಿರುದ್ಯೋಗಿಗಳಿಗೆ ಸ್ವಲ್ಪದರಲ್ಲೇ ಉತ್ತಮ ಅವಕಾಶಗಳು ತಪ್ಪಿ ಹೋಗಿ ಬೇಸರವಾಗಬಹುದು. ಎಲ್ಲದಕ್ಕೂ ಪ್ರಯತ್ನಬಲ ಮುಖ್ಯ.

ತುಲಾ: ವೃತ್ತಿರಂಗದಲ್ಲಿ ಸಣ್ಣ ಪುಟ್ಟ ತೊಡಕುಗಳಿದ್ದರೂ ನಿಮ್ಮ ಮುನ್ನಡೆಯನ್ನು ಯಾರಿಗೂ ತಡೆಯಲಾಗದು. ಹೊಸ ವ್ಯವಹಾರಗಳಿಗೆ ಕೈ ಹಾಕುವಿರಿ. ಅನವಶ್ಯಕವಾಗಿ ಮಾನಸಿಕ ಉದ್ವೇಗಕ್ಕೊಳಗಾಗಬೇಡಿ. ವಾಹನ ಖರೀದಿಯಿಂದ ಲಾಭವಾಗಲಿದೆ.

ವೃಶ್ಚಿಕ: ಮನೆಯಲ್ಲಿ ಶುಭ ಮಂಗಲ ಕಾರ್ಯಗಳ ಸಿದ್ಧತೆ ಧನವ್ಯಯ ಮಾಡಬೇಕಾಗುತ್ತದೆ. ಸಂಗಾತಿಯೊಂದಿಗೆ ಹೊಂದಾಣಿಕೆಯಿಂದ ನಡೆದುಕೊಳ್ಳಿ. ಆರ್ಥಿಕವಾಗಿ ಹಣಕಾಸಿಗೆ ತೊಂದರೆಯಿರದು. ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಧನು: ಎಷ್ಟೇ ಕಷ್ಟಗಳು ಎದುರಾದರೂ ನಿಮ್ಮ ಪ್ರಯತ್ನಬಲದಿಂದಲೇ ಯಶಸ್ಸು ಸಾಧಿಸಬಹುದು. ಬೇರೆಯವರು ಹೇಳುವ ಚಾಡಿಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ಅನಿರೀಕ್ಷಿತವಾಗಿ ಧನಾಗಮನವಾಗಲಿದೆ. ವಿದ್ಯಾರ್ಥಿಗಳು ಅಭ್ಯಾಸದ ಕಡೆಗೆ ಹೆಚ್ಚು ಗಮನಕೊಡಬೇಕು.

ಮಕರ: ಅನಿರೀಕ್ಷಿತವಾಗಿ ಕೇಳಿಬರುವ ಶುಭ ವಾರ್ತೆಯಿಂದ ಮನೆಯಲ್ಲಿ ಸಂತಸವಿರಲಿದೆ. ನೂತನ ದಂಪತಿಗಳಲ್ಲಿ ಸಂತಾನ ಫಲ ಸೂಚನೆ ಸಿಗಲಿದೆ. ವೃತ್ತಿರಂಗದಲ್ಲಿ ನಿಮ್ಮ ಕಾರ್ಯಸಾಧನೆ ಸುಗಮವಾಗಲಿದೆ. ಹಿರಿಯರ ಸಲಹೆಗಳು ಉಪಯೋಗಕ್ಕೆ ಬರಲಿವೆ.

ಕುಂಭ: ಅಧಿಕ ಕಾರ್ಯದೊತ್ತಡ, ಓಡಾಟದಿಂದಾಗಿ ದೇಹಾಯಾಸವಾಗಬಹುದು. ಆರೋಗ್ಯದ ಬಗ್ಗೆ ಕಾಳಜಿಯಿರಲಿ. ವೃತ್ತಿರಂಗದಲ್ಲಿ ಏಕಾಗ್ರತೆಯ ಕೊರತೆ ಕಂಡುಬರಬಹುದು. ಸ್ವಯಂ ವೃತ್ತಿಯವರಿಗೆ ಆರ್ಥಿಕ ಲಾಭವಾಗಲಿದೆ. ದುಂದು ವೆಚ್ಚಗಳಿಗೆ ಕಡಿವಾಣ ಹಾಕಿ.

ಮೀನ: ನಿಮ್ಮ ಪ್ರೀತಿ ಪಾತ್ರರು ಅನವಶ್ಯಕವಾಗಿ ನಿಮ್ಮ ಮೇಲೆ ತಪ್ಪು ಕಲ್ಪನೆ ಮಾಡಿಕೊಳ್ಳುವಂತಾದೀತು. ದುಡುಕಿ ಮಾತನಾಡಲು ಹೋಗಬೇಡಿ. ಹಿರಿಯರಿಗೆ ತೀರ್ಥ ಯಾತ್ರೆ ಮಾಡುವ ಯೋಗವಿದೆ. ಆರ್ಥಿಕವಾಗಿ ಧನಾರ್ಜನೆಗೆ ನಾನಾ ಮೂಲ ಕಂಡುಕೊಳ್ಳುವಿರಿ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಗಂಡ-ಹೆಂಡತಿ ಸಂಬಂಧ ಚೆನ್ನಾಗಿರಬೇಕೆಂದರೆ ಬೆಡ್ ರೂಂನಲ್ಲಿ ಈ ಚಿತ್ರ ಹಾಕಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments