Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಭಾನುವಾರ, 9 ಫೆಬ್ರವರಿ 2020 (09:07 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

 
ಮೇಷ: ಹೊಸ ಉದ್ಯೋಗಕ್ಕಾಗಿ ಅಲೆದಾಟ ತಪ್ಪದು. ಸಾಕಷ್ಟು ಅಡೆತಡೆಗಳು ಎದುರಾಗಲಿವೆ. ಗೃಹ ಸಂಬಂಧೀ ಕೆಲಸಗಳಿಗೆ ಕೈ ಹಾಕಲಿದ್ದೀರಿ. ಸಂಗಾತಿಯೊಂದಿಗೆ ಮನಸ್ತಾಪವಾಗದಂತೆ ಎಚ್ಚರಿಕೆ ವಹಿಸಿ. ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ.

ವೃಷಭ: ವೃತ್ತಿರಂಗದಲ್ಲಿ ಇಂದೂ ಬಿಡುವಿಲ್ಲದ ದುಡಿತದಿಂದ ದೇಹಾಯಾಸವಾಗಲಿದೆ. ಪ್ರೀತಿ ಪಾತ್ರರ ಭೇಟಿಯಿಂದ ಮನಸ್ಸಿಗೆ ಸಂತಸವಾಗಲಿದೆ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ನಾಲಿಗೆ ಚಪಲಕ್ಕೆ ಕಡಿವಾಣ ಹಾಕದಿದ್ದರೆ ಅನಾರೋಗ್ಯ ಖಂಡಿತಾ.

ಮಿಥುನ: ಸಂಸಾರದಲ್ಲಿ ಸಾಮರಸ್ಯವಿರಲಿದೆ. ಮಕ್ಕಳಿಂದ ಸಂತಸದ ವಾರ್ತೆ ನಿರೀಕ್ಷಿಸಬಹುದು. ವಾಹನ ಖರೀದಿಯಿಂದ ಲಾಭವಾಗಲಿದೆ. ಕ್ರಯ ವಿಕ್ರಯ ವ್ಯವಹಾರದಲ್ಲಿ ಲಾಭ ಕಂಡುಕೊಳ್ಳುವಿರಿ. ಆರ್ಥಿಕ ಅಡಚಣೆಯಿರದು. ಕಾರ್ಯನಿಮಿತ್ತ ಕಿರು ಸಂಚಾರ ಮಾಡಬೇಕಾಗುತ್ತದೆ.

ಕರ್ಕಟಕ: ಇಷ್ಟ ಮಿತ್ರರೊಂದಿಗೆ ಪ್ರವಾಸ, ಭೋಜನ ಮನಸ್ಸಿಗೆ ಖುಷಿಯಾಗಲಿದೆ. ಆದರೆ ಖರ್ಚು ವೆಚ್ಚದ ಬಗ್ಗೆ ನಿಗಾ ಇರಲಿ. ಮನೆಯಲ್ಲಿ ಶುಭ ಮಂಗಲ ಕಾರ್ಯ ನಡೆಯಲಿದೆ. ನೆರೆಹೊರೆಯವರೊಂದಿಗೆ ವ್ಯವಹರಿಸುವಾಗ ಎಚ್ಚರ. ಯಾರಿಗೂ ಸಾಲ ಕೊಡಲು ಹೋಗಬೇಡಿ.

ಸಿಂಹ: ಅಂದುಕೊಂಡ ಕೆಲಸ ಕಾರ್ಯಗಳನ್ನು ಪೂರ್ತಿ ಮಾಡಲು ಅಡ್ಡಿ, ಆತಂಕಗಳು ಎದುರಾಗಬಹುದು. ಕುಲದೇವರ ಪ್ರಾರ್ಥನೆ ನಡೆಸಿ ಮುನ್ನಡೆಯಿರಿ. ಹಳೆಯ ಸಂಬಂಧಗಳು ಮತ್ತೆ ಬೆಸೆಯಲಿವೆ. ಹಿರಿಯರ ತೀರ್ಥಯಾತ್ರೆಗೆ ಸಿದ್ಧತೆ ನಡೆಸುವಿರಿ.

ಕನ್ಯಾ: ನಿರುದ್ಯೋಗಿಗಳಿಗೆ ಉದ್ಯೋಗ ಸಂದರ್ಶನ ಕರೆ ಬರಲಿದ್ದು, ದೂರದ ಊರಿಗೆ ಪ್ರಯಾಣ ಮಾಡಬೇಕಾದೀತು. ಮಾನಸಿಕವಾಗಿ ಹಲವು ಆಲೋಚನೆಗಳು ಓಡಾಡಲಿದ್ದು, ಒಂದು ರೀತಿಯ ಆಲಸ್ಯತನ ಕಾಡಬಹುದು. ಸಂಗಾತಿಯ ಸಲಹೆಗೆ ಕಿವಿಗೊಡಿ.

ತುಲಾ: ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಏಕಾಗ್ರತೆಯಿರದು. ನಿರುದ್ಯೋಗಿಗಳು ಪಾಲಿಗೆ ಬಂದ ಅವಕಾಶಗಳನ್ನು ಬಳಸಿಕೊಳ್ಳಬೇಕು. ಇಷ್ಟದೇವರ ದೇವಾಲಯ ಸಂದರ್ಶನ ಮಾಡುವಿರಿ. ಅನಗತ್ಯ ದುಂದು ವೆಚ್ಚಗಳಿಗೆ ಕಡಿವಾಣ ಹಾಕುವುದು ಒಳಿತು.

ವೃಶ್ಚಿಕ: ಪಾಲು ಬಂಡವಾಳ ವ್ಯವಹಾರದಿಂದ ಲಾಭವಾಗಲಿದೆ. ಕೃಷಿಕರಿಗೆ ವೃತ್ತಿಯಲ್ಲಿ ಅಡೆತಡೆಗಳು ತೋರಿಬಂದೀತು. ನೀರಿಗಾಗಿ ನೆರೆಮನೆಯವರೊಡನೆ ಕಲಹವಾಗಬಹುದು. ಸಂಯಮದಿಂದ ವರ್ತಿಸಿ. ಮಕ್ಕಳ ಭವಿಷ್ಯಕ್ಕಾಗಿ ಯೋಜನೆ ರೂಪಿಸುವಿರಿ.

ಧನು: ಶುಭ ಮಂಗಲ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ. ಅಧಿಕ ಓಡಾಟದಿಂದ ದೇಹಾಯಾಸವಾಗಬಹುದು. ಹಿರಿಯರ ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕಾಗುತ್ತದೆ. ಗೃಹೋಪಯೋಗಿ ವಸ್ತುಗಳ ಖರೀದಿಗಾಗಿ ಧನವ್ಯಯವಾಗಲಿದೆ. ದಿನದಂತ್ಯಕ್ಕೆ ಅಚ್ಚರಿಯ ವಾರ್ತೆಯಿದೆ.

ಮಕರ: ಮಕ್ಕಳ ವಿಚಾರವಾಗಿ ಸಂಗಾತಿಯೊಂದಿಗೆ ಮನಸ್ತಾಪಗಳು ಬರಬಹುದು. ಭಿನ್ನಾಭಿಪ್ರಾಯಗಳನ್ನು ಬಗೆಹರಿಸಲು ಹಿರಿಯರ ಸಲಹೆ ಪಡೆಯುವುದು ಉತ್ತಮ. ಮಹಿಳೆಯರಿಗೆ ಚಿನ್ನಾಭರಣ ಖರೀದಿ ಯೋಗವಿದೆ. ಮನೆಗೆ ಅನಿರೀಕ್ಷಿತ ಬಂಧುಗಳ ಆಗಮನವಾಗಲಿದೆ.

ಕುಂಭ: ಅರ್ಧಕ್ಕೇ ನಿಂತ ಕೆಲಸಗಳಿಗೆ ಚಾಲನೆ ನೀಡುವಿರಿ. ಕಷ್ಟದ ಸಮಯದಲ್ಲಿ ಮಿತ್ರರ ಸಹಕಾರ ದೊರೆಯಲಿದೆ. ಹಿರಿಯರಿಗೆ ಪುಣ್ಯ ಕ್ಷೇತ್ರಗಳ ಸಂದರ್ಶನ ಯೋಗವಿದೆ. ಮನೆಯಲ್ಲಿ ಕಳ್ಳತನದ ಭೀತಿಯಿದ್ದು, ಎಚ್ಚರ. ವಾತ ಸಂಬಂಧೀ ಆರೋಗ್ಯ ಸಮಸ್ಯೆ ಕಾಡಬಹುದು.

ಮೀನ: ಇಂದಿನ ದಿನ ನಿಮಗೆ ಶುಭದಾಯಕವಾಗಿದ್ದು, ದೈವಾನುಕೂಲದಿಂದ ಅಂದುಕೊಂಡ ಕೆಲಸಗಳನ್ನು ಸುಗಮವಾಗಿ ನೆರವೇರಿಸಲಿದ್ದೀರಿ. ಆರ್ಥಿಕವಾಗಿ ಹಣಕಾಸಿನ ಸಮಸ್ಯೆಗಳು ನಿವಾರಣೆಯಾಗಲಿದ್ದು ಸಾಲಬಾಧೆಯಿಂದ ಮುಕ್ತರಾಗುವಿರಿ. ಹೆಚ್ಚಿನ ಶುಭ ಫಲಗಳಿಗೆ ದೇವತಾ ಪ್ರಾರ್ಥನೆ ಮಾಡಿ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments