Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಮಂಗಳವಾರ, 11 ಫೆಬ್ರವರಿ 2020 (09:01 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

 
ಮೇಷ: ವೃತ್ತಿರಂಗದಲ್ಲಿ ಬರುವ ಹೊಸ ಸವಾಲುಗಳಿಗೆ ಸಿದ್ಧರಾಗಬೇಕಾಗುತ್ತದೆ. ಮೇಲಧಿಕಾರಿಗಳ ಅಸಹಕಾರ ನಿಮ್ಮ ಸಹನೆ ಪರೀಕ್ಷೆ ಮಾಡಲಿದೆ. ಸಂಗಾತಿಯ ಕೆಲವೊಂದು ನಿರ್ಧಾರಗಳು ನಿಮಗೆ ಹಿಡಿಸದೇ ಹೋಗಬಹುದು. ಆದರೂ ಸಂಯಮದಿಂದ ನಡೆದುಕೊಳ್ಳುವುದು ಮುಖ್ಯ.

ವೃಷಭ: ನಿರುದ್ಯೋಗಿಗಳಿಗೆ ಉದ್ಯೋಗ ಸಂದರ್ಶನ ನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ. ಹಳೆಯ ಬಾಕಿಗಳು ಪಾವತಿಯಾಗಲಿವೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ಆದರೆ ನಿಮ್ಮ ದುಡುಕು ಮಾತಿನಿಂದ ಸ್ನೇಹ ಕಳೆದುಕೊಳ್ಳಬೇಕಾದೀತು.

ಮಿಥುನ: ದೈವ ಬಲವಿಲ್ಲದೇ ಕೈ ಹಿಡಿದ ಕೆಲಸಗಳು ಅರ್ಧಕ್ಕೇ ನಿಲ್ಲಲಿವೆ. ಇದರಿಂದ ಮನಸ್ಸಿಗೆ ಬೇಸರವಾಗಬಹುದು. ಶತ್ರುಬಾಧೆ ಕಾಡಲಿದೆ. ತಾಳ್ಮೆಯಿಂದ ವ್ಯವಹರಿಸುವುದು ಮುಖ್ಯ. ಹಿರಿಯರ ಸಲಹೆಗೆ ಕಿವಿಗೊಡಿ. ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ.

ಕರ್ಕಟಕ: ವಿದ್ಯಾರ್ಥಿಗಳಿಗೆ ಶೈಕ್ಷಣಿಕ ರಂಗದಲ್ಲಿ ಪ್ರಗತಿ, ಉತ್ತಮ ಫಲಿತಾಂಶ ಕಂಡುಬರಲಿದೆ. ಯೋಗ್ಯ ವಯಸ್ಕರಿಗೆ ವಿವಾಹ ಪ್ರಸ್ತಾಪಗಳು ಬರಲಿವೆ. ಮಿತ್ರರಿಂದ ಸಹಕಾರ ಸಿಗಲಿದೆ. ಅನಿರೀಕ್ಷಿತವಾಗಿ ಸಿಗುವ ವ್ಯಕ್ತಿಗಳಿಂದ ಅನುಕೂಲವಾಗಲಿದೆ. ಬಂಧು ಜನರ ಚಾಡಿ ಮಾತುಗಳಿಗೆ ಕಿವಿಗೊಡಬೇಡಿ.

ಸಿಂಹ: ಕೊಡು ಕೊಳ್ಳುವಿಕೆ ವ್ಯವಹಾರದಲ್ಲಿ ಲಾಭವಿರಲಿದೆ. ಮನೆಯಲ್ಲಿ ಸಮಾಧಾನಕರ ವಾತಾವರಣವಿರಲಿದ್ದು, ಮಕ್ಕಳಿಂದ ಸಂತಸದ ವಾರ್ತೆ ಆಲಿಸುವಿರಿ. ಆರ್ಥಿಕ ಸ್ಥಿತಿ ಸುಧಾರಿಸಲಿದೆ. ಸ್ತ್ರೀಯರಿಗೆ ಚಿನ್ನಾಭರಣ ಖರೀದಿ ಯೋಗವಿದೆ. ನಿರುದ್ಯೋಗಿಗಳಿಗೆ ಉದ್ಯೋಗಕ್ಕಾಗಿ ಅಲೆದಾಟ ತಪ್ಪದು.

ಕನ್ಯಾ: ಮಹಿಳೆಯರಿಂದ ತೊಂದರೆಗಳು ಎದುರಾಗಬಹುದು. ನಿಮ್ಮ ಸ್ವಾಭಿಮಾನ ಸಂಗಾತಿಯ ಅಸಹನೆಗೆ ಕಾರಣವಾಗಬಹುದು. ದೂರ ಸಂಚಾರದಿಂದ ದೇಹಾಯಾಸವಾಗಬಹುದು. ಆರ್ಥಿಕವಾಗಿ ನಾನಾ ರೀತಿಯ ಖರ್ಚು ವೆಚ್ಚಗಳು ಕಂಡುಬರಲಿವೆ.

ತುಲಾ: ಸಣ್ಣ ಪುಟ್ಟ ವಿಚಾರಕ್ಕೆ ಕೋಪಗೊಂಡು ಇತರರ ಮೇಲೆ ಕೂಗಾಡುವುದನ್ನು ಬಿಡಿ. ಇದರಿಂದ ಸಂಬಂಧ ಹಾಳಾಗುವುದು ಖಂಡಿತಾ. ಹಿರಿಯರಿಂದ ಉಡುಗೊರೆ ಸ್ವೀಕರಿಸಲು ಸಿದ್ಧರಾಗಿ. ಕೀಲು ನೋವಿನ ಸಮಸ್ಯೆ ಕಾಡಬಹುದು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಶ್ಚಿಕ: ನಿಮ್ಮ ದೇಹಾರೋಗ್ಯದಲ್ಲಿ ಇದುವರೆಗೆ ಇದ್ದ ಸಮಸ್ಯೆಗಳು ಹಂತ ಹಂತವಾಗಿ ಚೇತರಿಕೆ ಇರಲಿದೆ. ಮನೆಯಲ್ಲಿ ಶುಭ ಕಾರ್ಯಗಳಿಗೆ ಸಿದ್ಧತೆ ನಡೆಸಬೇಕಾಗುತ್ತದೆ. ವಾಹನ, ಭೂಮಿ ಖರೀದಿಯ ಯೋಗವಿದೆ. ಪಾಲಿಗೆ ಬಂದ ಅವಕಾಶವನ್ನು ಬಳಸಿಕೊಳ್ಳಿ.

ಧನು: ಇನ್ನೊಬ್ಬರ ಕಷ್ಟಕ್ಕೆ ಸ್ಪಂದಿಸಲು ಹೋಗಿ ಅಪಾಯ ಮೈಮೇಲೆಳೆದುಕೊಳ್ಳಬೇಡಿ. ಸಕಾಲದಲ್ಲಿ ಸಂಗಾತಿಯಿಂದ ಬರವ ಸಲಹೆಗಳು ಉಪಯೋಗಕ್ಕೆ ಬರಲಿವೆ. ಧಾರ್ಮಿಕ ಕಾರ್ಯದಲ್ಲಿ ಭಾಗಿಯಾಗುವಿರಿ. ವ್ಯವಹಾರದಲ್ಲಿ ಲಾಭ ಪಡೆಯಬಹುದು, ಆದರೆ ನಯವಂಚಕರ ಬಗ್ಗೆ ಎಚ್ಚರ.

ಮಕರ: ನಿಮ್ಮ ರಹಸ್ಯಗಳು ಇಂದು ಮನೆಯವರೆದುರು ಬಹಿರಂಗವಾಗಲಿದೆ. ಅರ್ಧಕ್ಕೆ ನಿಂತ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ನಿಮ್ಮ ಕ್ರಿಯಾಶೀಲತೆಯನ್ನು ಪ್ರಕಟಿಸಲು ಇದುವೇ ಸಕಾಲ. ದೂರ ಸಂಚಾರದಲ್ಲಿ ಹೆಚ್ಚಿನ ಜಾಗ್ರತೆ ಅಗತ್ಯ.

ಕುಂಭ: ಉದರ ಸಂಬಂಧೀ ಆರೋಗ್ಯ ಸಮಸ್ಯೆಗಳು ಕಂಡುಬರಲಿದೆ. ಆಸ್ಪತ್ರೆಗೆ ಅಲೆದಾಟ ತಪ್ಪದು. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಏಕಾಗ್ರತೆಯ ಕೊರತೆ ಅನುಭವಕ್ಕೆ ಬರಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ಮೀನ: ಆರ್ಥಿಕವಾಗಿ ಸಕಾಲದಲ್ಲಿ ಧನಾಗಮನವಾಗುವುದರಿಂದ ಸಂಭಾವ್ಯ ಸಮಸ್ಯೆಗಳಿಂದ ಪಾರಾಗುವಿರಿ. ಮಹಿಳಾ ಸಂಗಾತಿಯಿಂದ ಒಳಿತಾಗಲಿದೆ. ದುಂದು ವೆಚ್ಚಗಳಿಗೆ ಕಡಿವಾಣ ಹಾಕುವುದು ಒಳಿತು. ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರಯತ್ನ ಬಲ ಬೇಕಾಗಿದೆ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments