Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಗುರುವಾರ, 13 ಫೆಬ್ರವರಿ 2020 (09:03 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ದೂರ ಸಂಚಾರದಿಂದ ಕಾರ್ಯಪ್ರಾಪ್ತಿಯಾಗಲಿದೆ. ಆದರೆ ಮಾನಸಿಕವಾಗಿ ಯಾವುದೇ ಕೆಲಸದಲ್ಲೂ ಸಂತೃಪ್ತಿ ಸಿಗದು. ಹಣಕಾಸಿನ ವ್ಯವಸ್ಥೆಗೆ ಪರದಾಡಬೇಕಾಗುತ್ತದೆ. ಮಕ್ಕಳ ಭವಿಷ್ಯಕ್ಕೆ ಯೋಜನೆ ರೂಪಿಸುವಿರಿ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ವೃಷಭ: ಸಾಂಸಾರಿಕವಾಗಿ ಕಡಿದು ಹೋದ ಸಂಬಂಧಗಳು ಮತ್ತೆ ಬೆಸೆಯಲಿವೆ. ಸಾಂಸಾರಿಕ ಸುಖ ಅನುಭವಿಸುವಿರಿ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮದ ಅಗತ್ಯವಿದೆ. ವ್ಯಾಪಾರ ವ್ಯವಹಾರದಲ್ಲಿ ಅಡೆತಡೆಗಳು ನಿವಾರಣೆಯಾಗಲಿವೆ. ದೇವತಾ ಪ್ರಾರ್ಥನೆ ಮರೆಯದಿರಿ.

ಮಿಥುನ: ವೈವಾಹಿಕ ಜೀವನದ ಸುಖ ಅನುಭವಿಸಿದರೂ ಮಕ್ಕಳ ವಿಚಾರದಲ್ಲಿ ಬೇಸರ ಉಂಟಾಗಬಹುದು. ವೃತ್ತಿರಂಗದಲ್ಲಿ ಕೈಗೆ ಸಿಕ್ಕ ತುತ್ತು ಬಾಯಿಗೆ ಬರದ ಸ್ಥಿತಿಯಾಗಬಹುದು. ಆದರೆ ಆರ್ಥಿಕವಾಗಿ ಧನಾಗಮನಕ್ಕೆ ಕೊರತೆಯಾಗದು. ಕಿರು ಸಂಚಾರ ಮಾಡುವಿರಿ.

ಕರ್ಕಟಕ: ನಿಮ್ಮ ಸಮಸ್ಯೆಗಳಿಗೆ ನೀವೇ ಪರಿಹಾರ ಕಂಡುಕೊಳ್ಳಬೇಕಾಗುತ್ತದೆ. ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ಸಹಕಾರ ಸಿಗದೇ ಹೋದೀತು. ವೈಯಕ್ತಿಕ ಆರೋಗ್ಯದ ಬಗ್ಗೆ ಕಾಳಜಿವಹಿಸುವುದು ಸೂಕ್ತ. ವಿವಾಹ ಪ್ರಸ್ತಾಪಗಳು ಬರಲಿದ್ದು, ಸೂಕ್ತ ಸಂಬಂಧಕ್ಕೆ ಕಾಯುವುದು ಉತ್ತಮ.

ಸಿಂಹ: ಸಾಮಾಜಿಕ ಕೆಲಸಗಳಲ್ಲಿ ಆಸಕ್ತಿ ಬರಲಿದ್ದು, ಊರಿಗೆ ಉಪಕಾರಿ ಎನಿಸಿಕೊಳ್ಳುವಿರಿ. ರಾಜಕೀಯ ಕ್ಷೇತ್ರದಲ್ಲಿರುವವರಿಗೆ ಸ್ಥಾನ ಪಲ್ಲಟ ಭೀತಿ ಎದುರಾಗಲಿದೆ. ಪ್ರೇಮ ಸಂಬಂಧಗಳು ಯಶಸ್ವಿಯಾಗುವುದು. ಉದ್ದೇಶಿತ ಕಾರ್ಯಗಳನ್ನು ದಿಡೀರ್ ಆಗಿ ಬದಲಾಯಿಸಬೇಕಾಗುತ್ತದೆ.

ಕನ್ಯಾ: ವಿದ್ಯಾರ್ಥಿಗಳಿಗೆ ಹೊಸ ವಿಚಾರಗಳನ್ನು ಕಲಿಯುವ ಆಸಕ್ತಿ ಬೆಳೆಯಲಿದೆ. ಪಾಲಿಗೆ ಬಂದ ಅವಕಾಶಗಳನ್ನು ಬಳಸಿಕೊಳ್ಳಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಆರ್ಥಿಕವಾಗಿ ದುಂದು ವೆಚ್ಚಗಳಿಗೆ ಕಡಿವಾಣ ಹಾಕಿ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿಯಿದೆ.

ತುಲಾ: ವೃತ್ತಿರಂಗದಲ್ಲಿ ಬರುವ ಸಮಸ್ಯೆಗಳನ್ನು ಸಂಗಾತಿಯ ಸಲಹೆಯಿಂದ ಪರಿಹಾರ ಮಾಡುವಿರಿ. ಆಸ್ತಿ ವಿಚಾರಗಳಲ್ಲಿ ದಾಯಾದಿಗಳೊಂದಿಗಿನ ಕಲಹ ಅಂತ್ಯವಾಗಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ. ಹಿರಿಯರಿಗೆ ಪುಣ್ಯ ಕ್ಷೇತ್ರದ ಸಂದರ್ಶನ ಯೋಗವಿದೆ.

ವೃಶ್ಚಿಕ: ಹಳೆಯ ಮಿತ್ರರ ಭೇಟಿಯಿಂದ ಮನಸ್ಸಿಗೆ ಸಂತಸವಾಗಲಿದೆ. ಉದ್ದೇಶಿತ ಕೆಲಸಗಳನ್ನು ಸುಗಮವಾಗಿ ನೆರವೇರಿಸುವಿರಿ. ವ್ಯಾಪಾರ, ವಹಿವಾಟುಗಳು ಕೈ ಹಿಡಿಯಲಿವೆ. ಸಂಗಾತಿಗೆ ಉಡುಗೊರೆ ನೀಡಿ ಖುಷಿಪಡಿಸಲಿದ್ದೀರಿ. ಆರೋಗ್ಯದ ಬಗ್ಗೆ ಎಚ್ಚರ.

ಧನು: ದುಡುಕು, ಮಾತು ವರ್ತನೆಯಿಂದ ಕಾರ್ಯ ಹಾಳು ಎಂಬುದನ್ನು ಮರೆಯಬೇಡಿ. ಹೊಸ ಮಿತ್ರರ ಸಂಪಾದನೆ ಮಾಡಲಿದ್ದೀರಿ. ಯಾವುದೇ ಕೆಲಸ ಮಾಡುವ ಮೊದಲು ಹಿರಿಯರ ಸಲಹೆಗಳಿಗೆ ಮನ್ನಣೆ ಕೊಡಿ. ವಿದ್ಯಾರ್ಥಿಗಳಿಗೆ ಸತ್ವ ಪರೀಕ್ಷೆ ಕಾಲವಿದು.

ಮಕರ: ಸಾಂಸಾರಿಕವಾಗಿ ಬರುವ ಖರ್ಚು ವೆಚ್ಚಗಳನ್ನು ಸರಿದೂಗಿಸುವ ತಲೆನೋವು ಎದುರಾಗಲಿದೆ. ಧನಾರ್ಜನೆಗೆ ನಾನಾ ಮಾರ್ಗಗಳನ್ನು ಹುಡುಕಲಿದ್ದೀರಿ. ಭೂ ವಿವಾದಗಳು ಬಗೆಹರಿಯಲಿವೆ. ಸರಕಾರಿ ಉದ್ಯೋಗಿಗಳಿಗೆ ಮುನ್ನಡೆಯಿರಲಿದೆ. ಕುಲದೇವರ ಪ್ರಾರ್ಥನೆಯಿಂದ ಶುಭವಾಗುವುದು.

ಕುಂಭ: ಮಹಿಳಾ ಉದ್ಯೋಗಿಗಳಿಗೆ ಉದ್ಯೋಗದಲ್ಲಿ ಉನ್ನತ ಸ್ಥಾನ ಮಾನದ ಯೋಗವಿದೆ. ಕೌಟುಂಬಿಕವಾಗಿ ಇತರ ಸದಸ್ಯರ ಅಭಿಪ್ರಾಯಗಳಿಗೆ ಬೆಲೆಕೊಡಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಪ್ರಯತ್ನಕ್ಕೆ ತಕ್ಕ ಫಲ ಸಿಗುವುದು. ದುರ್ಜನರ ಸಂಗದಿಂದ ದೂರವಿರುವುದು ಉತ್ತಮ.

ಮೀನ: ನಯವಾಗಿ ಮಾತನಾಡಿ ಕೆಲಸ ಮಾಡಿಸಿಕೊಳ್ಳುವವರ ಬಗ್ಗೆ ಎಚ್ಚರ. ವ್ಯವಹಾರದಲ್ಲಿ ಇನ್ನೊಬ್ಬರು ಮೂಗು ತೂರಿಸುವುದರಿಂದ ಕಿರಿ ಕಿರಿಯಾಗಬಹುದು. ಆದರೆ ಹಣಕಾಸಿನ ಮುಗ್ಗಟ್ಟುಗಳು ದೂರವಾಗಿ ಅಂದುಕೊಂಡ ಕೆಲಸ ನೆರವೇರಿಸುವಿರಿ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments