Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಮಂಗಳವಾರ, 18 ಫೆಬ್ರವರಿ 2020 (08:59 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ವ್ಯಾವಹಾರಿಕ ಕ್ಷೇತ್ರದಲ್ಲಿ ಕೈಗೆ ಬಂದ ತುತ್ತು ಬಾಯಿಗೆ ಬರದ ಪರಿಸ್ಥಿತಿ ಎದುರಾಗಲಿದೆ. ಹೆಚ್ಚಿನ ಧನಲಾಭಕ್ಕೆ ನಾನಾ ಮಾರ್ಗಗಳನ್ನು ಹುಡುಕುವಿರಿ. ದೂರ ಸಂಚಾರಕ್ಕೆ ಸಿದ್ಧತೆ ನಡೆಸುವಿರಿ. ಮಕ್ಕಳ ಮನೋಭಿಲಾಷೆ ಪೂರೈಸಬೇಕಾಗುತ್ತದೆ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ವೃಷಭ: ಉದ್ಯೋಗದಲ್ಲಿ ಬಡ್ತಿ, ವೇತನ ಹೆಚ್ಚಳ ಸಾಧ‍್ಯತೆಯಿದೆ. ಸಹೋದ್ಯೋಗಿಗಳ ಸಹಕಾರ ಸಿಗಲಿದೆ. ವ್ಯಾಪಾರಿಗಳಿಗೆ ಸಣ್ಣ ಮಟ್ಟಿನ ಲಾಭ ಕಂಡುಬರಲಿದೆ. ಸಾಂಸಾರಿಕವಾಗಿ ಕೆಲವೊಂದು ಹೊಸ ಜವಾಬ್ಧಾರಿಗಳಿಗೆ ಸಿದ್ಧರಾಗಬೇಕಾಗುತ್ತದೆ. ದೇವರ ಪ್ರಾರ್ಥನೆ ಮಾಡಿ.

ಮಿಥುನ: ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆ ಬರದೇ ನಿರಾಸೆಯಾಗಬಹುದು. ಸ್ವಯಂ ವೃತ್ತಿಯವರಿಗೆ ಲಾಭದಾಯಕ ದಿನಗಳಿವು. ಕೌಟುಂಬಿಕವಾಗಿ ಸಂಗಾತಿಯ ಮಾತಿಗೆ ಕಿವಿಗೊಡಬೇಕಾಗುತ್ತದೆ. ಕಿರು ಸಂಚಾರ ಮಾಡುವಿರಿ.

ಕರ್ಕಟಕ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಕ್ರಿಯಾಶೀಲತೆ ಪ್ರಕಟಿಸಲು ಸಕಾಲ. ಮೇಲಧಿಕಾರಿಗಳಿಂದ ಪ್ರಶಂಸೆಗೊಳಗಾಗುವಿರಿ. ಶೈಕ್ಷಣಿಕ ರಂಗದಲ್ಲಿರುವವರಿಗೆ ಬಯಸಿ ಫಲಿತಾಂಶ ಸಿಗಲಿದೆ. ಆದರೆ ನಿಮ್ಮ ದುಡುಕು ವರ್ತನೆಗೆ ಕೊಂಚ ಕಡಿವಾಣ ಹಾಕುವುದು ಉತ್ತಮ.

ಸಿಂಹ: ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ರಾಜಕೀಯ ರಂಗದಲ್ಲಿರುವವರಿಗೆ ಹೆಸರು ಗಳಿಸಲು ಸಂದರ್ಭ ಒದಗಿಬರಲಿದೆ. ಅವಿವಾಹಿತರಿಗೆ ಶೀಘ‍್ರ ಕಂಕಣ ಬಲ ಕೂಡಿಬರುವುದು. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಏಕಾಗ್ರತೆಯ ಕೊರತೆ ಉಂಟಾಗಬಹುದು.

ಕನ್ಯಾ: ಸಾಲಬಾಧೆಗಳಿಂದ ಮುಕ್ತಿ ಕಾಣುವಿರಿ. ಆರ್ಥಿಕವಾಗಿ ಹಂತ ಹಂತವಾಗಿ ಚೇತರಿಕೆ ಕಂಡುಬರಲಿದೆ. ಪ್ರೀತಿ ಪಾತ್ರರೊಂದಿಗೆ ಹೆಚ್ಚಿನ ಸಮಯ ಕಳೆಯುವಿರಿ. ಕೃಷಿಕರಿಗೆ ಕೆಲಸದಲ್ಲಿ ಅಡ್ಡಿ ಆತಂಕಗಳು ಬರಬಹುದು. ತಾಳ್ಮೆಯಿಂದ ನಿಭಾಯಿಸಿ.

ತುಲಾ: ಉದ್ಯೋಗದಲ್ಲಿ ಬರುವ ಅಡೆತಡೆಗಳ ನಿವಾರಣೆಗೆ ಮಿತ್ರರ ಸಹಾಯ ಪಡೆಯುವಿರಿ. ಹೊಸ ಯೋಜನೆಗಳಿಗೆ ಕೈ ಹಾಕಲು ಕೆಲವು ದಿನ ಕಾಯುವುದು ಉತ್ತಮ. ಸಂಗಾತಿಯ ದೇಹಾರೋಗ್ಯದಲ್ಲಿ ಏರುಪೇರಾಗಬಹುದು, ಕಾಳಜಿ ವಹಿಸಿ.

ವೃಶ್ಚಿಕ: ಹಿರಿಯರಿಂದ ಬಂದ ಬಳವಳಿಗಳು ನಷ್ಟವಾಗುವ ಭೀತಿ ಎದುರಾಗಲಿದೆ. ಮಾನಸಿಕವಾಗಿ ನಿರ್ಧಾರ ಕೈಗೊಳ್ಳುವಾಗ ಗೊಂದಲ ಕಾಡಬಹುದು. ಧಾರ್ಮಿಕ ಕ್ಷೇತ್ರಗಳಿಗೆ ಸಂದರ್ಶನ ನೀಡುವುದರಿಂದ ಮನಸ್ಸಿಗೆ ನೆಮ್ಮದಿಯಾಗುವುದು. ದಿನದಂತ್ಯಕ್ಕೆ ಅನಿರೀಕ್ಷಿತ ಬೆಳವಣಿಗೆ ನಡೆಯಲಿದೆ.

ಧನು: ಕೂಡಿಟ್ಟ ಹಣ ಕಷ್ಟ ಕಾಲದಲ್ಲಿ ಬಳಸಲಾಗದೇ ಅಸಹಾಯಕತೆ ಅನುಭವಿಸಲಿದ್ದೀರಿ. ಆಸ್ತಿ ವಿವಾದಗಳ ಬಗೆಹರಿಸಲು ಕೋರ್ಟು ಕಚೇರಿಗಾಗಿ ಅಲೆದಾಡಬೇಕಾದೀತು. ನಿರುದ್ಯೋಗಿಗಳಿಗೆ ಸೂಕ್ತ ಉದ್ಯೋಗ ಸಿಗಲಿದೆ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ಸಿಗುವುದು.

ಮಕರ: ನೂತನ ದಂಪತಿಗಳಿಗೆ ಮಧುಚಂದ್ರ ಭಾಗ್ಯವಿದೆ. ಸಂತಾನಾಪೇಕ್ಷಿತ ದಂಪತಿಗಳು ದೇವರ ಮೊರೆ ಹೋಗುವರು. ಮಹಿಳೆಯರಿಗೆ ಚಿನ್ನಾಭರಣ ಖರೀದಿಯಿಂದ ಲಾಭವಾಗಲಿದೆ. ಉದ್ಯೋಗದಲ್ಲಿ ಮಾಡದ ತಪ್ಪಿಗೆ ಬೈಸಿಕೊಳ್ಳಬೇಕಾದೀತು. ಎಚ್ಚರಿಕೆಯಿರಲಿ.

ಕುಂಭ: ಕುಟುಂಬ ಕಲಹಗಳು ಪರಿಹಾರವಾಗಲಿದೆ. ಸಹೋದರಿಯ ಮದುವೆ ಸಂಬಂಧ ಓಡಾಟ ನಡೆಸಬೇಕಾಗುತ್ತದೆ. ಬಂಧು ಮಿತ್ರರ ಚಾಡಿ ಮಾತಿನಿಂದ ಮನಸ್ಸಿಗೆ ಬೇಸರವಾಗಬಹುದು. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ. ಆರ್ಥಿಕವಾಗಿ ಖರ್ಚು ವೆಚ್ಚದ ಬಗ್ಗೆ ನಿಗಾ ಇರಲಿ.

ಮೀನ: ಅಪರಿಚಿತರೊಂದಿಗೆ ವ್ಯವಹರಿಸುವಾಗ ಎಚ್ಚರ. ವ್ಯವಹಾರದಲ್ಲಿ ನಯವಂಚಕರಿಂದ ವಂಚನೆಗೊಳಗಾಗುವ ಭೀತಿಯಿದೆ. ಸರಕಾರಿ ಉದ್ಯೋಗಿಗಳಿಗೆ ಉದ್ಯೋಗದಲ್ಲಿ ಬಡ್ತಿ ಸಿಗುವ ಯೋಗವಿದೆ. ಕೌಟುಂಬಿಕವಾಗಿ ಸಂಗಾತಿಯೊಂದಿಗೆ ಭಿನ್ನಾಭಿಪ್ರಾಯಗಳಾಗದಂತೆ ಎಚ್ಚರ ವಹಿಸಿ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments