Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಗುರುವಾರ, 20 ಫೆಬ್ರವರಿ 2020 (09:04 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಸಹೋದರರ ನಡುವೆ ಕ್ಷುಲ್ಲುಕ ವಿಚಾರಕ್ಕೆ ಮನಸ್ತಾಪ ಉಂಟಾಗಬಹುದು. ತಾಳ್ಮೆಯಿಂದ ನಿಭಾಯಿಸಿ. ನ್ಯಾಯಾಲಯದ ಕಲಾಪಗಳಲ್ಲಿ ಜಯ ಸಿಗಲಿದೆ. ಬಂಧು ಮಿತ್ರರ ಸಹಕಾರ ಸಿಗುವುದು. ಸಂಗಾತಿಯ ಆರೋಗ್ಯದಲ್ಲಿ ಏರುಪೇರಾಗಬಹುದು.

ವೃಷಭ: ಶೀತ ಸಂಬಂಧೀ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆ ಕಾಡಲಿದೆ. ಉದ್ಯೋಗ ರಂಗದಲ್ಲಿ ಎಷ್ಟೇ ಅಡೆತಡೆಗಳಿದ್ದರೂ ನಿಮ್ಮ ಕಾರ್ಯಸಾಧನೆಯನ್ನು ತಡೆಯಲು ಯಾರಿಂದಲೂ ಸಾಧ‍್ಯವಿಲ್ಲ. ಇಷ್ಟಮಿತ್ರರೊಂದಿಗೆ ಪ್ರವಾಸ ಮಾಡುವಿರಿ. ವಿದ್ಯಾರ್ಥಿಗಳಿಗೆ ಮುನ್ನಡೆ ಸಿಗಲಿದೆ.

ಮಿಥುನ: ವಿದ್ಯಾರ್ಥಿಗಳಿಗೆ ಶೈಕ್ಷಣಿಕ ರಂಗದಲ್ಲಿ ಸಂತಸದ ವಾರ್ತೆ ಸಿಗಲಿದೆ. ಉದ್ಯೋಗದಲ್ಲಿ ಮುಂಬಡ್ತಿ ಯೋಗವಿದೆ. ಅವಿವಾಹಿತ ಶೀಘ್ರ ಕಂಕಣ ಬಲ ಕೂಡಿಬರಲಿದೆ. ಬಹುದಿನಗಳ ಬೇಡಿಕೆ ಈಡೇರಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.

ಕರ್ಕಟಕ: ಬಂಧು ವರ್ಗದವರಿಂದ ಚಾಡಿ ಮಾತು ಕೇಳಿಬಂದೀತು. ರಾಜಕೀಯ ರಂಗದಲ್ಲಿರುವವರಿಗೆ ಹಿನ್ನಡೆ ಉಂಟಾಗಬಹುದು. ಸಂಗಾತಿಯ ಆರೋಗ್ಯದಲ್ಲಿ ಏರುಪೇರಾಗಬಹುದು. ಕಾರ್ಯನಿಮಿತ್ತ ಕಿರು ಸಂಚಾರ ಮಾಡಬೇಕಾಗುತ್ತದೆ.

ಸಿಂಹ: ಕಳೆದುಹೋದ ವಸ್ತುಗಳು ಮರಳಿ ಕೈ ಸೇರಲಿವೆ. ಉದ್ಯೋಗದಲ್ಲಿ ಬದಲಾವಣೆಗೆ ಮನಸ್ಸು ಬಯಸುವುದು. ವ್ಯಾಪಾರ, ವ್ಯವಹಾರಗಳಲ್ಲಿ ಮುನ್ನಡೆ ಸಿಗಲಿದೆ. ಹಿರಿಯರಿಗೆ ತೀರ್ಥ ಯಾತ್ರೆಗೆ ಸಿದ್ದತೆ ನಡೆಸಲಿದ್ದಾರೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ.

ಕನ್ಯಾ: ಕಫ, ಶೀತ ಬಾಧೆಯಿಂದ ದೇಹ ಹೈರಾಣಾಗುವುದು. ಸಂಗಾತಿಯ ಮನದಾಸೆ ಪೂರೈಸಬೇಕಾಗುತ್ತದೆ. ಆಸ್ತಿ ವಿಚಾರವಾಗಿ ಕುಟುಂಬ ಸದಸ್ಯರಲ್ಲಿ ಭಿನ್ನಾಭಿಪ್ರಾಯ ಮೂಡಬಹುದು. ವಾಹನ ಖರೀದಿಗಾಗಿ ಮಾಡಿದ ಸಾಲ ತೀರಿಸುವ ತಲೆನೋವು ಎದುರಾಗುವುದು. ಎಚ್ಚರಿಕೆಯಿಂದಿರಿ.

ತುಲಾ: ದೈಹಿಕ ಆರೋಗ್ಯದಲ್ಲಿ ಸುಧಾರಣೆಯಾಗಿದ್ದರೂ, ಮಾನಸಿಕವಾಗಿ ಋಣಾತ್ಮಕ ಚಿಂತೆಗಳು ಕಾಡಿ ಕೆಲಸದಲ್ಲಿ ನಿರುತ್ಸಾಹ ಕಂಡುಬರಲಿದೆ. ಕೂಡಿಟ್ಟ ಹಣ ಖರ್ಚಾಗುವ ಚಿಂತೆಯಾಗಲಿದೆ. ನೆರೆಹೊರೆಯವರೊಂದಿಗೆ ಎಚ್ಚರಿಕೆಯಿಂದ ವ್ಯವಹರಿಸಿ.

ವೃಶ್ಚಿಕ: ಅಂದುಕೊಂಡ ಯೋಜನೆಗಳನ್ನು ಪೂರ್ತಿ ಮಾಡಲು ಸಾಕಷ್ಟು ವಿಘ್ನಗಳು ಎದುರಾಗಲಿವೆ. ದೇವತಾ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿಯಾಗಲಿದೆ. ಮಹಿಳೆಯರಿಗೆ ಉದ್ಯೋಗದಲ್ಲಿ ಮುನ್ನಡೆ ಸಿಗಲಿದೆ. ಆರ್ಥಿಕವಾಗಿ ಆದಾಯಕ್ಕೆ ಮೀರಿ ಖರ್ಚಾಗಲಿದೆ. ಹಿಡಿತವಿರಲಿ.

ಧನು: ನೆರೆಹೊರೆಯವರಲ್ಲಿ ಮನಸ್ತಾಪಗಳಾಗದಂತೆ ಎಚ್ಚರಿಕೆ ವಹಿಸಿ. ದುಡುಕು ಮಾತಿನಿಂದ ಸಂಬಂಧ ಹಾಳು ಮಾಡಿಕೊಳ್ಳಬೇಡಿ. ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರಲಿದೆ. ಅಧಿಕಾರಿ ವರ್ಗದವರಿಗೆ ಮುಂಬಡ್ತಿ ಯೋಗವಿದೆ.

ಮಕರ: ವ್ಯಾಪಾರಿ ವರ್ಗದವರಿಗೆ ಉತ್ತಮ ಲಾಭ ಸಿಗಲಿದೆ. ನಿರುದ್ಯೋಗಿಗಳಿಗೆ ಉದ್ಯೋಗ ನಿಮಿತ್ತ ದೂರ ಸಂಚಾರ ಮಾಡಬೇಕಾಗಬಹುದು. ಕ್ರೀಡಾ ರಂಗದಲ್ಲಿರುವವರಿಗೆ ಉನ್ನತ ಸ್ಥಾನದ ಯೋಗವಿದೆ. ನೂತನ ದಂಪತಿಗಳಲ್ಲಿ ಮಧುಚಂದ್ರ ಭಾಗ್ಯವಿದೆ.

ಕುಂಭ: ದಾಂಪತ್ಯದಲ್ಲಿ ಸಣ್ಣ ಪುಟ್ಟ ವಿಚಾರಕ್ಕೆ ಭಿನ್ನಾಭಿಪ್ರಾಯಗಳು ಮನಸ್ಸಿಗೆ ಬೇಸರವಾಗಲಿದೆ. ಮಕ್ಕಳಿಂದ ಸಂತಸದ ವಾರ್ತೆ ಕೇಳಿಬರುವುದು. ಹಿರಿಯರಿಗೆ ಆರೋಗ್ಯದಲ್ಲಿ ಏರುಪೇರಾಗುವುದು. ಆರ್ಥಿಕವಾಗಿ ಆದಾಯಕ್ಕೆ ಕೊರತೆಯಿರದು, ಆದರೆ ಖರ್ಚು ವೆಚ್ಚಗಳಿಗೆ ಕಡಿವಾಣವಿರಲಿ.

ಮೀನ: ಮಕ್ಕಳ ಭವಿಷ್ಯದ ಬಗ್ಗೆ ಚಿಂತೆಯಾಗುವುದು. ವಿವಾಹದ ಪ್ರಯತ್ನದಲ್ಲಿ ಮುನ್ನಡೆ ಸಿಗಲಿದೆ.  ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ನಡೆಸುವಿರಿ. ವಾಹನ ಖರೀದಿಗೆ ಇದು ಸಕಾಲ. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗ ಸಿಗುವುದು.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments