Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶನಿವಾರ, 22 ಫೆಬ್ರವರಿ 2020 (08:39 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ವೃತ್ತಿರಂಗದಲ್ಲಿ ಹಲವು ಅಡೆತಡೆಗಳಿದ್ದರೂ ಅದನ್ನು ಯಶಸ್ವಿಯಾಗಿ ನಿಭಾಯಿಸುವಿರಿ. ಬಾಕಿ ಹಣ ಬಾರದೇ ಚಿಂತೆಯಗಬಹುದು. ಆರೋಗ್ಯದ ಸಮಸ್ಯೆಯಿಂದ ದೇಹ ಹೈರಾಣಾಗಲಿದೆ. ಸಣ್ಣ ಪುಟ್ಟ ವಿಚಾರಗಳಿಗೆ ಕೋಪಗೊಳ್ಳುವುದನ್ನು ಬಿಡಿ. ತಾಳ್ಮೆಯಿರಲಿ.

ವೃಷಭ: ಕಾರ್ಯಕ್ಷೇತ್ರದಲ್ಲಿ ಗುರಿಯೇ ಮುಖ್ಯವಾಗಿರಲಿ. ಬೇರೆ ವಿಚಾರಗಳಿಗೆ ತಲೆಕೆಡಿಸಿಕೊಳ‍್ಳುವುದನ್ನು ಬಿಡಿ. ರಾಜಕೀಯ ವರ್ಗದವರಿಗೆ ಯಶಸ್ಸು ಪ್ರಾಪ್ತಿಯಾಗಲಿದೆ. ಸಾಂಸಾರಿಕವಾಗಿ ಕೌಟುಂಬಿಕ ಸಮಸ್ಯೆಗಳನ್ನು ನಿವಾರಿಸಲು ಮುಂದಾಗುವಿರಿ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

ಮಿಥುನ: ಸಾಮಾಜಿಕವಾಗಿ ನಿಮ್ಮ ಬುದ್ಧಿವಂತಿಕೆಯಿಂದ ಉನ್ನತ ಸ್ಥಾನ ಮಾನಕ್ಕೇರಬಹುದು. ಮಕ್ಕಳಿಂದ ಉಪಯುಕ್ತ ವಿಚಾರಗಳನ್ನು ತಿಳಿದುಕೊಳ್ಳುವಿರಿ. ಅನಿರೀಕ್ಷಿತವಾಗಿ ಧನಾಗಮನವಾಗಲಿರುವುದರಿಂದ ಸಮಸ್ಯೆಗಳು ನಿವಾರಣೆಯಾಗಲಿವೆ.

ಕರ್ಕಟಕ: ಸಾಂಸಾರಿಕವಾಗಿ ಪತ್ನಿ-ಮಕ್ಕಳೊಂದಿಗೆ ಉತ್ತಮ ಸಮಯ ಕಳೆಯುವಿರಿ. ನಿಮ್ಮ ಕೆಲಸಗಳಿಗೆ ಕುಟುಂಬದವರ ಬೆಂಬಲ ಸಿಗಲಿದೆ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಫಲ ಸಿಗುವುದು. ನಿರುದ್ಯೋಗಿಗಳು ತಾತ್ಕಾಲಿಕ ಉದ್ಯೋಗಕ್ಕೆ ತೃಪ್ತಿಪಟ್ಟುಕೊಳ್ಳಬೇಕಾದೀತು.

ಸಿಂಹ: ಮಹಿಳೆಯರಿಗೆ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ಅಲೆದಾಡಬೇಕಾದೀತು. ವೈಯಕ್ತಿಕ ಸಮಸ್ಯೆಗಳ ನಿವಾರಣೆಗೆ ಸ್ನೇಹಿತರ ಸಹಾಯ ಪಡೆಯುವಿರಿ. ಸಂಗಾತಿಯ ಮನೋಕಾಮನೆಗಳನ್ನು ಪೂರೈಸುವಿರಿ. ಆರ್ಥಿಕವಾಗಿ ನಾನಾ ಮೂಲಗಳಿಂದ ಧನಾಗಮನವಾಗಲಿದೆ.

ಕನ್ಯಾ: ಕಾರ್ಯಕ್ಷೇತ್ರದಲ್ಲಿ ವಿಘ‍್ನಗಳು ತೋರಿಬಂದು ಕೈಗೊಂಡ ಕೆಲಸಗಳು ಅರ್ಧಕ್ಕೇ ನಿಲ್ಲಲಿವೆ. ಹಿತಶತ್ರುಗಳ ಕಾಟದಿಂದಾಗಿ ಮಾನಸಿಕ ನೆಮ್ಮದಿಗೆ ಭಂಗವಾದೀತು. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಜಯ ನಿಮ್ಮದಾಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ತುಲಾ: ವ್ಯಾಪಾರ, ವ್ಯವಹಾರದಲ್ಲಿ ಹೂಡಿಕೆ ಮಾಡಲು ಇದು ಸಕಾಲ. ಸಾಂಸಾರಿಕವಾಗಿ ಸಂಗಾತಿಯ ಸಲಹೆ ಸಕಾಲಕ್ಕೆ ಸಿಗುವುದರಿಂದ ಸಮಸ್ಯೆಗಳಿಂದ ಪಾರಾಗುವಿರಿ. ಹಿರಿಯರಿಗೆ ಆಧ‍್ಯಾತ್ಮದ ಕಡೆಗೆ ಒಲವು ಮೂಡಲಿದೆ. ಕಿರು ಸಂಚಾರ ಮಾಡಬೇಕಾಗಬಹುದು.

ವೃಶ್ಚಿಕ: ಮಾನಸಿಕವಾಗಿ ಕಾಡುವ ಗೊಂದಲಗಳಿಗೆ ನೀವೇ ಕಡಿವಾಣ ಹಾಕಿಕೊಳ್ಳಬೇಕು. ಹೊಸ ಚಿಂತನೆಗಳು ಮೂಡಿಬಂದು ಕಾರ್ಯರೂಪಕ್ಕೆ ತರುವಿರಿ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ.

ಧನು: ಉದ್ಯೋಗಸ್ಥರು ಬದಲಾವಣೆಗೆ ಮನಸ್ಸು ಮಾಡುವರು. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗ ಸಿಗಲಿದೆ. ಆರ್ಥಿಕವಾಗಿ ಆದಾಯದಷ್ಟೇ ಖರ್ಚೂ ಇರುವುದು. ಅರ್ಧಕ್ಕೇ ನಿಂತ ಕೆಲಸಗಳಿಗೆ ಚಾಲನೆ ನೀಡುವಿರಿ. ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು.

ಮಕರ: ಸಾಂಸಾರಿಕವಾಗಿ ನಿಮ್ಮ ಕೆಲವೊಂದು ನಿರ್ಧಾರಗಳು ಮನೆಯ ಇತರ ಸದಸ್ಯರಿಗೆ ಇಷ್ಟವಾಗದೇ ಭಿನ್ನಾಭಿಪ್ರಾಯಗಳು ಬರಬಹುದು. ಸಂಭಾಳಿಸಿಕೊಂಡು ಹೋಗಬೇಕಾಗುತ್ತದೆ. ಉದ್ಯೋಗದಲ್ಲಿ ಮುನ್ನಡೆ ದೊರೆಯಲಿದೆ.

ಕುಂಭ: ಆರ್ಥಿಕವಾಗಿ ಪೈಸೆ ಪೈಸೆಗೂ ಲೆಕ್ಕ ಹಾಕಿ ಖರ್ಚು ಮಾಡಬೇಕಾಗುತ್ತದೆ. ಮುಂದೆ ಬರುವ ಸಮಸ್ಯೆಗಳಿಗೆ ಇಂದೇ ಸಿದ್ಧರಾಗಿ. ನಿರುದ್ಯೋಗಿಗಳಿಗೆ ಅನಿಶ್ಚಿತತೆ ಕಾಡಲಿದೆ. ವಿವಾಹ ಪ್ರಯತ್ನಗಳಿಗೆ ಮುನ್ನಡೆ ಸಿಗಲಿದೆ. ನೂತನ ದಂಪತಿಗಳು ಸಂತೋಷದ ಕ್ಷಣ ಕಳೆಯುವರು.

ಮೀನ: ನಿಮ್ಮ ನಾಲಿಗೆ ಚಪಲಕ್ಕೆ ಕಡಿವಾಣ ಹಾಕದೇ ಇದ್ದರೆ ಉದರ ಸಂಬಂಧೀ ಆರೋಗ್ಯ ಸಮಸ್ಯೆ ಖಂಡಿತಾ. ವೃತ್ತಿರಂಗದಲ್ಲಿ ಹಿತಶತ್ರುಗಳ ಪೀಡೆ ಕಡಿಮೆಯಾಗುವುದು. ಸಂಗಾತಿಯ ಬೇಡಿಕೆ ಇಕ್ಕಟ್ಟಿಗೆ ಸಿಲುಕಿಸಲಿದೆ. ಪ್ರಯತ್ನಕ್ಕೆ ತಕ್ಕ ಫಲ ಸಿಗುವುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Ram Navami 2025: ಈ ವಿಶೇಷ ದಿನದಂದು ಹೀಗೇ ಮಾಡಿದ್ರೆ ಫಲ ನಿಶ್ಚಿತ

Shani Mantra: ಶನಿ ರಕ್ಷಾಸ್ತವಃ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ತಪ್ಪದೇ ಇಂದು ಓದಿ

Ram Navami 2025: ದಿನಾಂಕ, ಶುಭ ಮುಹೂರ್ತ ಇಲ್ಲಿದೆ

Saraswathi Mantra: ವಿದ್ಯೆ ತಲೆಗೆ ಹತ್ತಬೇಕೆಂದರೆ ಸರಸ್ವತಿಯ ಈ ಸ್ತೋತ್ರ ಓದಿ

Krishna Mantra: ಶ್ರೀಕೃಷ್ಣಾಷ್ಟಕಂ ಪ್ರತಿನಿತ್ಯ ಓದಿ: ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments