Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಭಾನುವಾರ, 23 ಫೆಬ್ರವರಿ 2020 (08:54 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಮಹಿಳೆಯರಿಗೆ ಗೃಹ ಕೃತ್ಯದಲ್ಲಿ ಅಧಿಕ ಓಡಾಟ ನಡೆಸಬೇಕಾಗಬಹುದು. ಆರೋಗ್ಯದ ಮೇಲೆ ಕಾಳಜಿಯಿರಲಿ. ಮನೆಗೆ ಅನಿರೀಕ್ಷಿತವಾಗಿ ನೆಂಟರಿಷ್ಟರ ಆಗಮನವಾಗಲಿದೆ. ಆರ್ಥಿಕವಾಗಿ ಧನ ವಿನಿಯೋಗ ಹೆಚ್ಚಾಗಲಿದೆ. ಮಕ್ಕಳ ವಿಚಾರದಲ್ಲಿ ಪ್ರಮುಖ ನಿರ್ಧಾರ ಕೈಗೊಳ್ಳುವಿರಿ.

ವೃಷಭ: ಕೌಟುಂಬಿಕ ಸಮಸ್ಯೆಗಳಿಗೆ ಹಿರಿಯರ ಸಲಹೆ ಪಡೆದು ಪರಿಹಾರ ಕಂಡುಕೊಳ್ಳುವಿರಿ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗುವಿರಿ. ಅನಿರೀಕ್ಷಿತ ಖರ್ಚು ವೆಚ್ಚಗಳು ಬರಲಿವೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ನಡೆಸಬೇಕಾಗುತ್ತದೆ. ದೇವರ ಪ್ರಾರ್ಥನೆ ಮಾಡಿ.

ಮಿಥುನ: ಎಷ್ಟೋ ದಿನದಿಂದ ಅಂದುಕೊಂಡಿದ್ದ ಯೋಜನೆಗಳನ್ನು ಇಂದು ಪೂರ್ತಿ ಮಾಡುವಿರಿ. ವಾಹನ, ಭೂಮಿ ಖರೀದಿಗೆ ಇದು ಸಕಾಲ. ಆದರೆ ಅಪರಿಚಿತರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿ ಬರಲಿದೆ.

ಕರ್ಕಟಕ: ಶಾರೀರಕವಾಗಿ ಸೌಖ್ಯವಿದ್ದರೂ ಮಾನಸಿಕವಾಗಿ ಹಲವು ವಿಚಾರಗಳಲ್ಲಿ ಗೊಂದಲ ಕಾಡಲಿದೆ. ಸಂಗಾತಿಯ ಸಲಹೆಗೆ ಕಿವಿಗೊಡುವುದು ಸೂಕ್ತ. ನೂತನ ದಂಪತಿಗಳಲ್ಲಿ ಹೊಂದಾಣಿಕೆಯ ಕೊರತೆ ಕಂಡುಬರಲಿದೆ. ಕೃಷಿಕರಿಗೆ ವೃತ್ತಿಯಲ್ಲಿ ವಿಘ‍್ನಗಳು ನಿವಾರಣೆಯಾಗಲಿವೆ.

ಸಿಂಹ: ಅಧಿಕ ಲಾಭ ತರುವ ಯೋಜನೆಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಹಿರಿಯರಿಂದ ಉಡುಗೊರೆ ನಿರೀಕ್ಷಿಸಬಹುದು. ದಾಯಾದಿ ಕಲಹಗಳು ನಿವಾರಣೆಯಾಗಲಿವೆ. ಸ್ವ ವ್ಯಾಪಾರಿಗಳಿಗೆ ಉನ್ನತಿಯ ಯೋಗವಿದೆ. ಆರ್ಥಿಕವಾಗಿ ಹಣಕಾಸಿಗೆ ತೊಂದರೆಯಾಗದು.

ಕನ್ಯಾ: ಕೌಟುಂಬಿಕವಾಗಿ ಸಂತಸದ ದಿನವಿದು. ಪತ್ನಿ-ಮಕ್ಕಳೊಂದಿಗೆ ಇಷ್ಟಭೋಜನ, ಕಿರು ಪ್ರವಾಸ ಮಾಡುವಿರಿ. ಉದ್ಯೋಗದ ಚಿಂತೆ ಆಗಾಗ ಕಾಡಲಿದೆ. ಬಾಕಿ ಹಣ ಸಂದಾಯವಾಗಲಿದ್ದು, ಆರ್ಥಿಕವಾಗಿ ಉನ್ನತಿಯಿರಲಿದೆ. ದೇವರ ಪ್ರಾರ್ಥನೆ ಮಾಡಿದರೆ ಶುಭವಾಗುವುದು.

ತುಲಾ: ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆಬರುವುದು. ಹಿರಿಯರಿಗೆ ಆರೋಗ್ಯದಲ್ಲಿ ಏರುಪೇರಾಗಬಹುದು. ಅವಿವಾಹಿತರ ವಿವಾಹ ಪ್ರಯತ್ನಕ್ಕೆ ನೂರೆಂಟು ವಿಘ‍್ನಗಳು ಎದುರಾಗಲಿವೆ. ಕುಲದೇವರ ಪ್ರಾರ್ಥಿಸಿದರೆ ಉತ್ತಮ.

ವೃಶ್ಚಿಕ: ಮಹಿಳೆಯರಿಗೆ ಚಿನ್ನಾಭರಣ ಖರೀದಿಯಿಂದ ಲಾಭವಾಗಲಿದೆ. ಕೊಡು ಕೊಳ್ಳುವ ವ್ಯಾಪಾರಗಳಿಂದ ಲಾಭ ಸಿಗುವುದು. ಹೊಸ ಮಿತ್ರರನ್ನು ಸಂಪಾದಿಸಲಿದ್ದೀರಿ. ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ನಡೆಸಲಿದ್ದೀರಿ. ಕಿರು ಸಂಚಾರದಿಂಧ ಕಾರ್ಯಪ್ರಾಪ್ತಿಯಾಗುವುದು.

ಧನು: ಹಲವು ಅಭಿಪ್ರಾಯಗಳನ್ನು ಜಾರಿಗೊಳಿಸಲು ಹೋಗಿ ಕೈ ಸುಟ್ಟುಕೊಳ್ಳಬೇಡಿ. ವಿನಾಕಾರಣ ನಿಮ್ಮ ವಿಚಾರದಲ್ಲಿ ಮೂಗು ತೂರಿಸುವವರ ಬಗ್ಗೆ ಎಚ್ಚರಿಕೆಯಿಂದಿರಿ. ಬಯಸಿದ ವಸ್ತುಗಳು ಕೈಗೆಟುಕಲಿವೆ. ಸಂಗಾತಿಯ ಮನಸ್ಸಿಗೆ ಇಷ್ಟವಾಗುವಂತೆ ನಡೆದುಕೊಳ್ಳಲಿದ್ದೀರಿ.

ಮಕರ: ಸಾಂಸಾರಿಕವಾಗಿ ಮನೆಯಲ್ಲಿ ಮಹಿಳೆಯರೊಳಗೆ ಭಿನ್ನಾಭಿಪ್ರಾಯಗಳು ಕಂಡುಬರಬಹುದು. ಎಚ್ಚರಿಕೆಯಿಂದ ನಿಭಾಯಿಸಿ. ಸೂಕ್ತ ಸಮಯದಲ್ಲಿ ಮಿತ್ರರ ಸಹಕಾರ ದೊರೆಯುವುದರಿಂದ ಸಂಭಾವ್ಯ ತೊಂದರೆಯಿಂದ ಪಾರಾಗುವಿರಿ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

ಕುಂಭ: ಅಧಿಕ ಧನಲಾಭ ತರುವ ಯೋಜನೆಗಳಿಗೆ ಕೈ ಹಾಕಲು ಹೋಗಿ ವಂಚನೆಗೊಳಗಾಗಲಿದ್ದೀರಿ. ಸಂಯಮದಿಂದ ವರ್ತಿಸುವುದು ಮುಖ್ಯ. ಮಕ್ಕಳ ವಿಚಾರದಲ್ಲಿ ಸಂತಸವಿರಲಿದೆ. ವ್ಯವಹಾರದಲ್ಲಿ ಎಚ್ಚರ. ನೂತನ ದಂಪತಿಗಳಿಗೆ ಸಂತಾನ ಫಲ ಸೂಚನೆ ಸಿಗುವುದು.

ಮೀನ: ಕಾರ್ಮಿಕ ವರ್ಗದವರಿಗೆ ಉದ್ಯೋಗದಲ್ಲಿ ಉನ್ನತಿಯ ಯೋಗವಿದೆ. ಮನೆಯಲ್ಲಿ ಶುಭ ಕಾರ್ಯಗಳು ನೆರವೇರಲಿವೆ. ಬಂಧು ಮಿತ್ರರ ಭೇಟಿಯಿಂದ ಮನಸ್ಸಿಗೆ ಖುಷಿಯಾಗುವುದು. ಧಾರ್ಮಿಕ ಕಾರ್ಯಗಳಿಗೆ ಧನವಿನಿಯೋಗ ಮಾಡಲಿದ್ದೀರಿ. ಆರೋಗ್ಯದಲ್ಲಿ ಸುಧಾರಣೆಯಾಗುವುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Karnataka Rains: ಇಂದಿನ ಹವಾಮಾನ ವರದಿಯಂತೆ ಈ ಜಿಲ್ಲೆಯವರಿಗೆ ಎಚ್ಚರಿಕೆ ಅಗತ್ಯ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

Durga mantra: ದುರ್ಗಾ ದೇವಿಯ ಈ ಸ್ತೋತ್ರ ಓದಿದರೆ ಸೋಲಿನ ಭಯವಿರಲ್ಲ

ಮುಂದಿನ ಸುದ್ದಿ
Show comments