Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಮಂಗಳವಾರ, 25 ಫೆಬ್ರವರಿ 2020 (09:01 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಉದ್ಯೋಗದಲ್ಲಿ ಮೇಲಧಿಕಾರಿಗಳ ಕಿರಿ ಕಿರಿ ಅಸಹನೆ ಉಂಟು ಮಾಡಲಿದೆ. ವ್ಯವಹಾರದಲ್ಲಿ ಮುನ್ನಡೆ ತೋರಿಬಂದರೂ ಶತ್ರುಪೀಡೆ ಚಿಂತೆಗೆ ಕಾರಣವಾಗಲಿದೆ. ಆರೋಗ್ಯದಲ್ಲಿ ಕೊಂಚ ಸುಧಾರಣೆ ಕಂಡುಬರಲಿದೆ. ಮಿತ್ರರ ಭೇಟಿ ಸಂಭವ.

ವೃಷಭ: ಅಧಿಕ ಧನಲಾಭ ತರುವ ಯೋಜನೆಗಳಿಗೆ ಕೈಹಾಕುವಿರಿ. ಆರ್ಥಿಕವಾಗಿ ಅನಗತ್ಯ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕಬೇಕಿದೆ. ಸಂಗಾತಿಯ ಮನದಾಸೆ ಪೂರೈಸುವಿರಿ. ನೂತನ ದಂಪತಿಗಳಲ್ಲಿ ಸಾಮರಸ್ಯದ ಕೊರತೆ ಕಂಡುಬರಬಹುದು. ತಾಳ್ಮೆಯಿರಲಿ.

ಮಿಥುನ: ವ್ಯಾಪಾರ ವಹಿವಾಟಿನಲ್ಲಿ ಲಾಭ ಬರುವುದರಿಂದ ಹಣಕಾಸಿನ ಹರಿವಿಗೆ ತೊಂದರೆಯಿರದು. ಆಸ್ತಿ ವಿವಾದಗಳಿಗೆ ಹಿರಿಯರ ಮಧ್ಯಸ್ಥಿಕೆಗೆ ಬೆಲೆ ಕೊಡಿ. ಸರಕಾರಿ ಉದ್ಯೋಗಿಗಳಿಗೆ ಉದ್ಯೋಗದಲ್ಲಿ ಬಡ್ತಿ ಯೋಗವಿದೆ. ಕಾರ್ಯ ನಿಮಿತ್ತ ಕಿರು ಸಂಚಾರ ಮಾಡಬೇಕಾಗುತ್ತದೆ.

ಕರ್ಕಟಕ: ಆಪ್ತ ಮಿತ್ರರೊಂದಿಗೆ ಉತ್ತಮ ಸಮಯ ಕಳೆಯುವಿರಿ. ಉದ್ಯೋಗದಲ್ಲಿ ಬರುವ ಸಮಸ್ಯೆಗಳಿಗೆ ಕ್ರಿಯಾಶೀಲತೆಯಿಂದ ಪರಿಹಾರ ಕಂಡುಕೊಳ್ಳುವಿರಿ. ವಿದ್ಯಾರ್ಥಿಗಳಲ್ಲಿ ಏಕಾಗ್ರತೆಯ ಕೊರತೆ ಕಂಡುಬರಲಿದೆ. ದೇವತಾ ಪ್ರಾರ್ಥನೆ ಮಾಡಿ.

ಸಿಂಹ: ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ಪ್ರೀತಿ ಪಾತ್ರರೊಂದಿಗೆ ಇಷ್ಟ ಭೋಜನ, ಉತ್ತಮ ಸಮಯ ಕಳೆಯುವಿರಿ. ಅವಿವಾಹಿತರ ವಿವಾಹ ಪ್ರಯತ್ನಗಳು ಸಫಲವಾಗಲಿದೆ. ಧಾರ್ಮಿಕ ಕ್ಷೇತ್ರಗಳ ಸಂದರ್ಶನ ಯೋಗವಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕನ್ಯಾ: ಶೈಕ್ಷಣಿಕ ರಂಗದಲ್ಲಿರುವವರಿಗೆ ಉನ್ನತ ಸ್ಥಾನ ಮಾನದ ಯೋಗವಿದೆ. ಕೃಷಿಕರಿಗೆ ವ್ಯವಹಾರದಲ್ಲಿ ಹಿನ್ನಡೆಯಾಗಬಹುದು. ಆರ್ಥಿಕವಾಗಿ ಬಾಕಿ ಹಣ ಸಂದಾಯವಾಗಲಿದೆ. ಆದರೆ ನೆರೆಹೊರೆಯವರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ.

ತುಲಾ: ನೀವು ಅತಿಯಾಗಿ ನಂಬಿದ್ದವರಿಂದಲೇ ವಿಶ್ವಾಸ ದ್ರೋಹವಾಗಬಹುದು. ಎಚ್ಚರಿಕೆಯಿಂದ ಹೆಜ್ಜೆಯಿಡಿ. ಮನೆಗೆ ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನವಾಗಲಿದೆ. ವ್ಯವಹಾರದಲ್ಲಿ ಕೊಂಚ ಹಿನ್ನಡೆಯಾದರೂ ನಷ್ಟವಾಗದು. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

ವೃಶ್ಚಿಕ: ಅಂದುಕೊಂಡ ಕೆಲಸ ಕಾರ್ಯಗಳನ್ನು ಪೂರೈಸಲು ನಾನಾ ವಿಘ್ನಗಳು ಎದುರಾಗಬಹುದು. ಕುಲದೇವರ ಪ್ರಾರ್ಥನೆ ನಡೆಸಿ ಮುಂದುವರಿಯಿರಿ. ಮನೆಯಲ್ಲಿ ಶುಭ ಮಂಗಲ ಕಾರ್ಯ ನಡೆಸಲು ಸಿದ್ಧತೆ ನಡೆಸಲಿದ್ದೀರಿ. ಹಿರಿಯರಿಂದ ಬಂದ ಬಳವಳಿಯನ್ನು ಸಂರಕ್ಷಿಸಬೇಕಾದ ಹೊಣೆಗಾರಿಕೆಯಿರಲಿದೆ.

ಧನು: ಕೌಟುಂಬಿಕವಾಗಿ ನಿಮ್ಮ ಜವಾಬ್ಧಾರಿಗಳು ಹೆಚ್ಚಲಿದ್ದು, ಅತಿಥಿಗಳ ಆಗಮನಕ್ಕೆ ಸಿದ್ಧರಾಗಿ. ಮಹಿಳೆಯರಿಗೆ ಉದ್ಯೋಗದಲ್ಲಿ ಮುನ್ನಡೆಯಿರಲಿದೆ. ಮಕ್ಕಳ ಆರೋಗ್ಯ ಚಿಂತೆಗೀಡುಮಾಡಬಹುದು. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.

ಮಕರ: ಗೃಹೋಪಯೋಗಿ ವಸ್ತುಗಳ ಖರೀದಿಗಾಗಿ ಅಧಿಕ ಧನವ್ಯಯವಾಗಲಿದೆ. ಪ್ರೀತಿ ಪಾತ್ರರ ಭಾವನೆಗಳಿಗೆ ಬೆಲೆ ಕೊಡಿ. ಕುಟುಂಬದಲ್ಲಿ ಹಿರಿಯರ ಮಾತಿಗೆ ಬೆಲೆಕೊಡಬೇಕಾಗುತ್ತದೆ. ವ್ಯವಹಾರದಲ್ಲಿ ನಯವಂಚಕರ ಬಗ್ಗೆ ಎಚ್ಚರಿಕೆಯಿಂದಿರಿ. ದೇವತಾ ಕಾರ್ಯದಲ್ಲಿ ಭಾಗಿಯಾಗುವಿರಿ.

ಕುಂಭ: ಹೊಸ ಉದ್ಯೋಗಕ್ಕೆ ಪ್ರಯತ್ನಪಡುತ್ತಿದ್ದರೆ ಬಯಸಿದ ಉದ್ಯೋಗ ಸಿಗದೇ ನಿರಾಶೆಯಾಗಬಹುದು. ಕೆಲವು ಸಮಯ ತಾಳ್ಮೆಯಿರಲಿ. ಗೃಹ ಸಂಬಂಧೀ ಕೆಲಸಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ವ್ಯವಹಾರದಲ್ಲಿ ಶತ್ರುಭಯವಿರುವುದು. ದೇವತಾ ಪ್ರಾರ್ಥನೆ ಮಾಡಿ.

ಮೀನ: ಬೇಡದ ವಿಚಾರಕ್ಕೆ ತಲೆಕೆಡಿಸಿಕೊಂಡು ಮಾನಸಿಕ ಆರೋಗ್ಯ ಹಾಳು ಮಾಡಿಕೊಳ್ಳಬೇಡಿ. ನಾಲಿಗೆ ಚಪಲಕ್ಕೆ ಕಡಿವಾಣ ಹಾಕುವುದು ಅಗತ್ಯ. ಪ್ರೀತಿ ಪಾತ್ರರಿಂದ ಅಮೂಲ್ಯವಾದ ಉಡುಗೊರೆ ಸಿಗಲಿದೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ